ಬೆಂಗಳೂರು: ವಿಶ್ವ ಹಿಂದೂ ಪರಿಷದ್ ಕರ್ನಾಟಕ ರಾಜ್ಯದ ಸಂತ ಸಮಾವೇಶ ವನ್ನೂ ದಿನಾಂಕ : 23-11-2024 ರ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ ಬೆಂಗಳೂರಿನ ವಾಣಿ ವಿಲಾಸ ರೋಡ್ ವಿವಿ ಪುರಂ ವಾಸವಿ ಕನ್ವೆನ್ಷನ್ ಹಾಲ್ ನಲ್ಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದಿಂದ ಪೂಜ್ಯ ನಿರ್ಮಲಾನಂದ ಸ್ವಾಮೀಜಿ ಯವರು ಆದಿಚುಂಚನಗಿರಿ ಮಠ, ಪೂಜ್ಯ ಪೇಜಾವರ ಶ್ರೀಗಳು ಉಡುಪಿ, ಪೂಜ್ಯ ಮಾದರ ಚೆನ್ನಯ್ಯ ಸ್ವಾಮೀಜಿ ಚಿತ್ರದುರ್ಗ, ಪೂಜ್ಯ ವಚನಾನಂದ ಸ್ವಾಮಿಜೀ ಹರಿಹರ, ಪೂಜ್ಯ ಬಸವಲಿಂಗ ಸ್ವಾಮಿಜೀ ಜ್ಞಾನಯೋಗಾಶ್ರಮ ಬಿಜಾಪುರ , ಪೂಜ್ಯ ವಿಶ್ವಪ್ರಿಯ ಸ್ವಾಮೀಜಿ ಅದಮಾರು ಮಠ, ಸಹಿತ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷದ್ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವಸ್ಥಾನಗಳನ್ನು ಸರ್ಕಾರದ ಅಧೀನತೆಯಿಂದ ಹಿಂದೂಗಳ ಸ್ವಾಯತ್ತತೆ ನೀಡುವುದರ ಬಗ್ಗೆ ಹಾಗೂ…
Month: November 2024
ದೇವನಹಳ್ಳಿ: ಹಳೇ ದ್ವೇಷದ ಹಿನ್ನೆಲೆ ಸೆಕ್ಯುರಿಟಿ ಗಾರ್ಡ್ ಬರ್ಬರ ಕೊಲೆ
ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಬರ್ಭರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಮೃತ ವ್ಯಕ್ತಿ. ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ರೀತಿ ಕಳೆದ ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಗೋವಿಂದ್ ಗ್ಯಾಂಗ್ ಗುರುವಾತ ರಾತ್ರಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದವನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ನಂತರ ಆರೋಪಿಗಳಾದ ಗೋವಿಂದರಾಜು, ತಿಮ್ಮರಾಜು, ಮನೋಜ, ಮಂಜುನಾಥ್ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿರುವ ವಿಶ್ವನಾಥಪುರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
5.8 ಕೋಟಿ ಕಾರ್ಡ್ ರದ್ದು ಖಂಡಿಸಿ ಕೇಂದ್ರದ ವಿರುದ್ದ ಪ್ರತಿಭಟಿಸುತ್ತೀರ? ಬಿಜೆಪಿ ನಾಯಕರಿಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ಕೇಂದ್ರ ಸರ್ಕಾರವು 5.8 ಕೋಟಿ ಕಾರ್ಡ್ ರದ್ದು ಮಾಡಲು ಹೊರಟಿರುವ ಬಗ್ಗೆ ಬಿಜೆಪಿ ನಾಯಕರು ಚಕಾರ ಎತ್ತುತ್ತಿಲ್ಲ ಆದರೆ ರಾಜ್ಯದಲ್ಲಿ BPL ರದ್ದಾಗಲ್ಲ ಎಂದು ಸಿಎಂ ಹೇಳಿದರೂ ಹೋರಾಟ ನಡೆಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ನಡೆ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಕಟು ಟೀಕೆ ಮಾಡಿರುವ ರಾಮಲಿಂಗಾ ರೆಡ್ಡಿ, ಬಿಜೆಪಿಯವರು ಜನರನ್ನು ದಾರಿತಪ್ಪಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಹೊಂದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹಾಗೂ ಮಾನ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ ರದ್ದು ಮಾಡಲಾಗುತ್ತದೆ. ಇಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿಯವರಿಗೆ ವಿಷಯಾಂತರ ಮಾಡಿ ಜನರನ್ನು…
ರೈತರ ಜಮೀನಿಗೆ ವಕ್ಫ್ ಮಂಡಳಿ ಕನ್ನ; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ರೈತರ ಜಮೀನಿಗೆ ವಕ್ಫ್ ಮಂಡಳಿ ಕನ್ನ ಹಾಕಿರುವ ಬೆಳವಣಿಗೆ ಬಗ್ಗೆ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಅನೇಕ ನಾಯಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ಆಗ್ರಹಿಸಿದರು.
ನ.26ರಂದು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತರ ಪ್ರತಿಭಟನೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ದಕ್ಷಿಣ ರಾಜ್ಯಗಳಲ್ಲಿ 26 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರ ಮೌನ ದರಣಿ ನಡೆಸಲಾಗುವುದು ಎಂದು ರೈತ ನಾಯಕರು ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ, ಕೇಂದ್ರ ಸರ್ಕಾರ ಸಮಸ್ಯೆಗೆ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳದಿದ್ದರೆ ದೇಶಾದ್ಯಂತ ರೈತರು ಬೀದಿಗಿಳಿಯ ಬೇಕಾಗುತ್ತದೆ. ಎರಡು ದಿನ ಕಾದು ನೋಡುತ್ತೇವೆ ಎಂದರು. ದೆಹಲಿಯ ಕನೂರಿ ಬಾರ್ಡರ್.ಶಂಬು ಬಾರ್ಡರ್ ಗಳಲಿ.ರೈತರ ಹೂರಾಟ ಗಂಬೀರ ಸ್ವರೂಪ ಪಡೆಯುತಿದೆ. ಸಂಸತ್ ಆದೀವೆಶನ ಆರಂಬವಾಗುತಿರುವ ಹಿನ್ನೆಲೆಯಲ್ಲಿ ನವಂಬರ್ 26 ರಿಂದ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ಧಲೇವಾಲ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವಲ್ಲಿಯೆ ಕೆಂದ್ರ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು. ಕುರುಬೂರು ಎಚ್ಚರಿಕೆ: ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ…
ವಕ್ಫ್ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: BJP ಆಗ್ರಹ
ಬೆಂಗಳೂರು: ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ* ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್ಬಾಗ್ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು. ಬೌರಿಂಗ್ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ…
ಬೆಂಗಳೂರಿನಲ್ಲಿ ರೌಡಿಗಳ ಪುಂಡಾಟ; ಹೆಣ್ಣೂರು ಪೊಲೀಸ್, ನಗರ ವರಿಷ್ಠರಿಗೆ ಕೋರ್ಟ್ ಸಮನ್ಸ್
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ವ್ಯಕ್ತಿಯ ಕೌಟುಂಬಿಕ ವ್ಯಾಜ್ಯದ ನಡುವೆ ಕೆಲವು ರೌಡಿಗಳು ಸಜಿ ಜೋಸೆಫ್ ಎಂಬವರ ಜಮೀನಿಗೆ ನುಗ್ಗಿ ದಾಂದಲೆ ನಡೆಸಿದ್ದ ಘಟನೆ ಭಾರೀ ಸುದ್ದಿಯಾಗಿತ್ತು. ತಾವು ಸಚಿವ ಭೈರತಿ ಸುರೇಶ್ ಸಹಚರರೆಂದು ಹೇಳಿ ಸ್ಥಳೀಯ ರೌಡಿಗಳು ಜಮೀನು ಬಿಟ್ಟುಕೊಡುವಂತೆ ಜೀವಬೆದರಿಕೆಯೊಡ್ಡಿದ್ದರು. ಅಷ್ಟೇ ಅಲ್ಲ, ಕೆಲವು ವ್ಯಕ್ತಿಗಳನ್ನು ಹಾಗೂ ನಿಷೇಧಿತ ನಾಯಿಯನ್ನೂ ಸ್ಥಳದಲ್ಲಿ ನಿಯೋಜಿಸಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಸಜಿ ಜೋಸೆಫ್ ಆರೋಪಿಸಿದ್ದರು. ರೌಡಿಗಳ ಜೊತೆ ಸ್ಥಳೀಯ ಪೊಲೀಸರೂ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೆದರಿಸಿದ್ದರು ಎಂದು ಜೋಸೆಫ್ ಆರೋಪಿಸಿದ್ದರು. ಈ ಸಂಬಂಧ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು…
ಉಕ್ರೇನ್ ಮೇಲೆ ರಷ್ಯಾ ಪ್ರಬಲ ಕ್ಷಿಪಣಿ ದಾಳಿ; 10ಕ್ಕೂ ಹೆಚ್ಚು ಮಂದಿ ಸಾವು
ಸಮ್ಮಿ: ಉಕ್ರೇನ್ ಮೇಲೆ ರಷ್ಯಾ ಸೇನೆ ಮತ್ತೆ ದಾಳಿ ನಡೆಸಿದೆ. ರಷ್ಯಾ ಕೈಗೊಂಡ ಕ್ಷಿಪಣಿ ದಾಳಿಯಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಪ್ರಬಲ ಖಂಡಾಂತರ ಕ್ಷಿಪಣಿಯನ್ನು ಉಕ್ರೇನ್ ರಷ್ಯಾ ಉಡಾವಣೆ ಮಾಡಿದೆ. ಉಕ್ರೇನ್ನ ಉತ್ತರ ಭಾಗದ ಸಮ್ಮಿ ಎಂಬಲ್ಲಿ ಜನವಸತಿ ಪ್ರದೇಶದ ಮೇಲೆ ಈ ದಾಳಿ ನಡೆದಿದ್ದು 15ಕ್ಕೂ ಹೆಚ್ಚು ಕಟ್ಟಡಗಳು ಧ್ವಂಸವಾಗಿವೆ. ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯತ್ತ ರೈತರ ಚಿತ್ತ; ಮತ್ತೊಮ್ಮೆ ಬೃಹತ್ ಪ್ರತಿಭಟನೆಗೆ ನಿರ್ಧಾರ
ಚಂಡೀಗಢ: ಕೇಂದ್ರ ಸರ್ಕಾರದ ವಿರುದ್ಧ ರೈತರು ಮತ್ತೆ ರಣಕಹಳೆ ಮೊಳಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡಲು ಆಗ್ರಹಿಸಿ ದೆಹಲಿ ಚಲೋ ಘೋಷಿಸಿದ್ದಾರೆ. ಎಂಎಸ್ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿರುವ ರೈತರು ಡಿಸೆಂಬರ್ 6 ರಂದು ದೆಹಲಿ ಚಲೋ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನಾಯಕರು ಘೋಷಿಸಿದ್ದಾರೆ ಚಂಡೀಗಢದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ದೆಹಲಿಯಲ್ಲಿ ಬೃಹತ್ ರ್ಯಾಲಿ ನಡೆಸಲಾಗುತ್ತದೆ ಎಂದು ರೈತ ನಾಯಕರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಮೇಲೆ ಕಲ್ಲು ತೂರಾಟ
ನಾಗ್ಪುರ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ (ಎಸ್ಪಿ) ನಾಯಕ ಅನಿಲ್ ದೇಶ್ಮುಖ್ ಅವರ ಕಾರಿನ ಮೇಲೆ ದುಷ್ಕರ್ಮಿಗಖು ಕಲ್ಲು ತೂರಾಟ ನಡೆಸಿರುವ ಘಟನೆ ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ದೇಶಮುಖ್ ಅವರಿಗೆ ಗಂಭೀರ ಗಾಯಗಳಾಗಿವೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ದೇಶಮುಖ್ ಅವರು, ಅಲ್ಲಿಂದ ಕಟೋಲ್ಗೆ ನಿರ್ಗಮಿಸಿದರು. ಅದಾಗಲೇ ಅಪರಿಚಿತರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. राज्यात कायदा सुव्यवस्थेचे तीन तेरा वाजले आहेत. लोकशाहीचे धिंडवडे उडवले जात आहेत. याचे उदाहरण आज निवडणुकीच्या सांगता सभेवरून घरी परतताना राज्याचे माजी गृहमंत्री तसेच राष्ट्रवादी काँग्रेस पक्ष शरदचंद्र पवार पक्षाचे नेते अनिल…