ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ ಡಿ.ಕೆ.ಶಿ. ಪ್ರತಿಕ್ರಿಯಿಸಿದರು. ಸಂಪುಟ ವಿಸ್ತರಣೆಯ ಬಗ್ಗೆ ಪತ್ರಕರ್ತರು ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ಡಿಕೆಶಿ ತಿಳಿಸಿದರು.

KPCC ಅಧ್ಯಕ್ಷರ ಆಯ್ಕೆ; ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕಾರಣ ನಡೆಯಲ್ಲ ಎಂದ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕೀಯ ನಡೆಯುವುದಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ.…

ಮಹಿಳೆಯನ್ನು ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಅಧಿಕಾರಿ; ವೀಡಿಯೋ ವೈರಲ್

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಪೊಲೀಸರು ಮಹಿಳೆಯೊಬ್ಬಳ ಕೂದಲು ಹಿಡಿದು ಎಳೆದೊಯ್ದ ಆರೋಪ ಭಾರೀ ವಿವಾದವನ್ನು ಸೃಷ್ಟಿಸಿದೆ. ತಮ್ಕುಹಿರಾಜ್ ಸಮೀಪ ಬೇಡುಪರ್ ಮುಸ್ತಕಿಲ್ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧ ಗುಂಪುಗಳ ನಡುವೆ ವಿವಾದ ಉಂಟಾಗಿದೆ. ಕುಟುಂಬಗಳ ನಡುವಿನ ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯೊಬ್ಬಳನ್ನು ಕೂದಲು ಹಿಡಿದು ಎಳೆದೊಯ್ದಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಅಧಿಕಾರಿ ಇದ್ದರೂ ಕೂಡ ಪುರುಷ ಪೊಲೀಸ್ ಅಧಿಕಾರಿಯು ಮಹಿಳೆಯನ್ನು ಈ ರೀತಿ ಎಳೆದೊಯ್ದ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. कुशीनगर पुलिस की कार्यशैली पर उठे गंभीर सवाल स्टे के बावजूद भी विवादित जमीन पर निर्माण कराने का आरोप पुलिस पर जबरिया निर्माण कराने का आरोप तरयासुजान थाने के बेदूपार एतमाली…

ನಾಡಿನ ಹಿತಕ್ಕಾಗಿ ಈ ಯುವಕರದ್ದು ಸದ್ದಿಲ್ಲದೆ ಸೇವಾ ಕಾರ್ಯ; ಬೆಳ್ತಂಗಡಿ ‘ವೀರ ಕೇಸರಿ’ ಯುವಕರಿಂದ ‘8ನೇ ಆಸರೆ ಮನೆ’ ಕೊಡುಗೆ

ಮಂಗಳೂರು: ನಾಡಿನ ಒಲಿತಿಗಾಗಿ ಒಂದಿಲ್ಲೊಂದು ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯ ‘ವೀರ ಕೇಸರಿ’ ಯುವಕರು ಕೈಗೊಂಡಿರುವ ‘ಆಸರೆ ಕಾರ್ಯಕ್ರಮ ಗಮನಸೆಳೆದಿದೆ. ‘ವೀರಕೇಸರಿ ಬೆಳ್ತಂಗಡಿ’ ಸಂಘಟನೆ ನಿರ್ಗತಿಕರಿಗಾಗಿ ಮನೆಗಳನ್ನು ನಿರ್ಮಿಸಿಕೊಡುತ್ತಿದ್ದು, ಇದೀಗ ಈ ಸೇವಾಯೋಜನೆ ದ್ವಿ ಶತಕ ತಲುಪಿದೆ. ವೈದಿಕ ಕೈಂಕರ್ಯಗಳೊಂದಿಗೆ ನಡೆದ 200ನೇ ಸೇವಾಯೋಜನೆಯಾದ 8ನೇ ಆಸರೆ ಮನೆಯ ಭೂಮಿಪೂಜಾ ಕಾರ್ಯಕ್ರಮವು ಗಮನಸೆಳೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಂತರಬೈಲು ಪಾದೆಮೇಲಿನಲ್ಲಿ ನವೆಂಬರ್ 25ರಂದು ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀನಿರಂಜನಿ ಮಾಯಾಪುರಿ ಹರಿದ್ವಾರ್‌ನ ಪಂಚಾಯಿತಿ ಅಖಾಡದ ನಾಗಸಾಧು ತಪೋನಿಧಿ ಬಾಬಾ ಶ್ರೀ ವಿಠ್ಠಲ್ ಗಿರಿ ಜಿ ಮಹಾರಾಜ್ ಅವರು ಭೂಮಿ ಪೂಜೆ ನೆರವೇರಿಸಿದರು. ‘ವೀರ ಕೇಸರಿ’ ಬಳಗದ ಯುವಕರೇ ಖರ್ಚಿನ ಹಣ ಪೇರಿಸಿ ಈ ಯೋಜನೆ ಸಾಕಾರಗೊಳಿಸುತ್ತಿರುವ ಮೂಲಕ ನಾಡಿಗೆ ಶಕ್ತಿಯಾಗಿ ಗುರುತಾಗಿದ್ದಾರೆ. ಇದರ ಜೊತೆಯಲ್ಲೇ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳ ಸದಸ್ಯರಿಗೆ…

KSRTC ಅಂತರ ನಿಗಮ ವರ್ಗಾವಣೆ; 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಪ್ರಕಟಿಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ KSRTC ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತು. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು ಸಾರಿಗೆ ಸಚಿವರು ಸಾಮಾಜಿಕ ಜಾಲತಾಣ…

ಕಮಲ ಕಿತ್ತಾಟ ಮರೆಮಾಚಲು ‘ಕೈ’ಯತ್ತ ಬೊಟ್ಟು: ಉಗ್ರಪ್ಪ ಬಾಣ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ರಾಜ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ. ತಮ್ಮ ಪಕ್ಷದಲ್ಲೇ ಕಿತ್ತಾಟ, ಹುಳುಕುಗಳು ಇಡೀ ರಾಜ್ಯಕ್ಕೆ ಕಾಣುತ್ತಿದ್ದರು ಸುಖಾಸುಮ್ಮನೆ ಮುಡಾ ಹಾಗೂ ವಕ್ಫ್ ವಿಚಾರವನ್ನು ಪದೇ ಪದೇ ಎತ್ತುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ಆಕ್ರೋಶ ಹೊರಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಉಪಸ್ಥಿತಿಯಲ್ಲಿ ಜಂಟಿ ಜಂಟಿಮಾಧ್ಯಮ ಗೋಷ್ಠಿ ನಡೆಸಿದ ವಿ.ಎಸ್ ಉಗ್ರಪ್ಪ, ರಾಜ್ಯದಲ್ಲಿ ಯಡಿಯೂರಪ್ಪ ಹಾಗು ಬಸವರಾಜ್ ಬೊಮ್ಮಾಯಿ ಕಾಲದಲ್ಲಿ ಸುಮಾರು 2000 ನೋಟೀಸ್ ನೀಡಲಾಗಿತ್ತು . ಆದರೆ ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ 1500 ನೋಟೀಸ್ ನೀಡಲಾಗಿದೆ. ಇಷ್ಟೆಲ್ಲ ತಪ್ಪುಗಳು ತಮಲ್ಲೇ ಇದ್ದರು, ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ಕಿತ್ತಾಟವಿದ್ದರೂ…

ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಆರೋಪ; ಪ್ರಕರಣ ದಾಖಲು

ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟಿ ದೀಪಿಕಾ ದಾಸ್ ತಾಯಿ ಪದ್ಮಲತಾ ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು, ತುಮಕೂರು ರಸ್ತೆಯ ಅಪಾರ್ಟ್ ಮೆಂಟ್‌ನಲ್ಲಿ ವಾಸವಾಗಿದ್ದಾರೆ, 8 ತಿಂಗಳ ಹಿಂದೆ ಮಗಳು ದೀಪಿಕಾ ದಾಸ್ ದೀಪಕ್ ಕುಮಾರ್ ಜೊತೆ ಮದುವೆಯಾಗಿದ್ದು, ಒಂದು ತಿಂಗಳ ಆಕೆಯ ಅಳಿಯ ಮಗಳು ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಕಳೆದ 7 ತಿಂಗಳಿಂದ ವ್ಯಕ್ತಿಯೊಬ್ಬ ಪದ್ಮಲತಾಗೆ ಯಶವಂತ್ ಎಂಬ ವ್ಯಕ್ತಿ ಪೋನ್ ಮಾಡಿ ನಿಮ್ಮ ಅಳಿಯ ದೀಪಕ್ ಕುಮಾರ್ ಜೈಲಿಗೆ ಹೋಗಿ ಬಂದಿದ್ದಾನೆ, ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡಿ ಮೋಸ ಮಾಡಿದ್ದಾನೆಂದು ಹೇಳುತ್ತಿದ್ದಾರೆಂತೆ. ಕೆಲವು ದಿನಗಳ ನಂತರ ದೀಪಿಕಾ ದಾಸ್ ಗೂ ಪೋನ್ ನಿಮ್ಮ ಗಂಡನ…

ಸಂಸತ್ ಸದಸ್ಯೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಮಾಣವಚನ

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸತ್ ಸದನ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಿಯಾಂಕಾ ಅವರು ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು. ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ. Congress General Secretary Smt. @priyankagandhi ji takes the oath as a Member of Parliament from…

ಯೋಗೇಶ್ವರ್ ಗೆದ್ದಿದ್ದಲ್ಲ, ಸ್ವಪಕ್ಷೀಯರೂ, ದೋಸ್ತಿ ನಾಯಕರೇ ‘ನಿಖಿಲ್’ರನ್ನು ಸೋಲಿಸಿದ್ದು?

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಸೋಲಿಗೆ ಬಿಜೆಪಿ-ಜೆಡಿಎಸ್ ನಾಯಕರೇ ಕಾರಣವೇ? ಇಂಥದ್ದೊಂದು ಚರ್ಚೆ ಆರಂಭವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಆರೆಸ್ಸೆಸ್ ವಿರುದ್ದ ಹಿಗ್ಗಾಮುಗ್ಗ ಬೈಯ್ಯುತ್ತಿದ್ದ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಲೋಕಸಭಾ ಚುನಾವಣೆಯಲ್ಲಿ ಅದೇ ಬಿಜೆಪಿ ಜೊತೆ ದೋಸ್ತಿ ಮಾಡಿಕೊಂಡಿದ್ದಾರೆ. ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲದೊಂದಿಗೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿದ್ದಾರೆ‌. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ವಿಧಾನಸಭೆ ಪ್ರವೇಶಿಸುತ್ತಿದ್ದರು. ಆದರೆ ತಮ್ಮ ಪಕ್ಷದವರೇ ಕೈಕೊಟ್ಟರೇ ಅಥವಾ ದೋಸ್ತಿ ಪಕ್ಷದವರು ಅಡ್ಡಗಾಲು ಹಾಕಿದರೋ ಗೊತ್ತಿಲ್ಲ. ಜೆಡಿಎಸ್ ಪಕ್ಷಕ್ಕೆ ಮಾತ್ರ ಹೀನಾಯ ಸೋಲಾಗಿದೆ. ಜೆಡಿಎಸ್ ನಾಯಕ ಜಿ.ಟಿ‌.ದೇವೇಗೌಡ ಸಹಿತ ಅನೇಕ ಮುಖಂಡರು ನಿಖಿಲ್ ಪರ ಪ್ರಚಾರದಿಂದ ದೂರ ಉಳಿದಿದ್ದರು. ಬಿಜೆಪಿ ನಾಯಕರೂ ಅಷ್ಟೊಂದು ಉತ್ಸಾಹದಿಂದ ಪ್ರಚಾರ ಕೈಗೊಂಡಿಲ್ಲ ಎಂಬುದು ಹೆಚ್ಡಿಕೆ ಆಪ್ತರ ಅಸಮಾಧಾನದ ಮಾತುಗಳು. ಡಿಕೆಶಿ ಬಾಂಬ್..! ಈ…

‘ರಿಸಲ್ಟ್ ಕ್ಲೀನ್‌ ಚಿಟ್‌ ಅಲ್ಲ; ಸಿಎಂ ವಿರುದ್ದದ ಲೂಟಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ’

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್‌ ಚಿಟ್‌ ಎನ್ನುತ್ತಿದ್ದಾರೆ. ಇದು ಕ್ಲೀನ್‌ ಚಿಟ್‌ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ ಎಂದರು. ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್‌ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್‌ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದು ವಿಿಶ್ಲೇಷಿಸಿದರು. ಚುನಾವಣಾ ಫಲಿತಾಂಶವನ್ನು ಕ್ಲೀನ್‌ ಚಿಟ್‌ ಎನ್ನಲಾಗುವುದಿಲ್ಲ. ಕ್ಲೀನ್‌ ಚಿಟ್ ‌ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ…