ನವದೆಹಲಿ: ವಿಮಾನಗಳಲ್ಲಿ ಬಾಂಬ್ ಬೆದರಿಕೆಯ ಪ್ರಕರಣಗಳ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಕುರಿತು 8 ಎಫ್ಐಆರ್ಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ವಿವಿಧ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Year: 2024
ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಆರೋಪ; ಅಧಿಕಾರಿಗಳ ಅಮಾನತು
ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿನ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರು ಪ್ರಸ್ತಾಪವಾಗಿದೆ. ಅವರು ಸೋಮಶೇಖರ್ ಅವರ ಸೂಚನೆ ಮೇರೆಗೆ, ದೇವಾಲಯದಿಂದ 25,000 ರೂ.ಗಳನ್ನು ದೇವಾಲಯದ ಸ್ವಚ್ಛತೆ ಕಾರ್ಯ, ಬೀಗದ ಕೀಲಿ ರಿಪೇರಿ ಮತ್ತು ಹಬ್ಬದ ಖರೀದಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಟಿ.ಎನ್. ಮಂಜುಳ ಮತ್ತು ಗಿರೀಶ್ ರವರನ್ನು ಮುಜರಾಯಿ ಇಲಾಖೆ ಆಯುಕ್ತ ಡಾ.ವೆಂಕಟೇಶ್ ಅವರು ಮುಜರಾಯಿ ಸಚಿವರ ನಿರ್ದೇಶನದಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 ಮತ್ತು 2002ರ…
ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು
ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್ಪಿಸಿ ಕಲಂ 321 ರಲ್ಲಿ…
182 ಕೋಮು ದ್ವೇಷದ ಕೇಸ್ ವಾಪಸ್ ಪಡೆದಿದ್ದ ಬಿಜೆಪಿ; PFI ಮೇಲಿನ ಕೇಸ್ ವಾಪಸ್ ಪಡೆದಿದ್ದೂ BJP; ರಾಮಲಿಂಗಾ ರೆಡ್ಡಿ
ಬೆಂಗಳೂರು: ಗಲಭೆ ಹಾಗೂ ರೈತ ರ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸುವತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರ ನೀಡಿದ್ದಾರೆ. 182 ಕೋಮು ದ್ವೇಷದ ಪ್ರಕರಣಗಳನ್ನು ವಾಪಸ್ ಪಡೆದಿದ್ದ ಬಿಜೆಪಿ PFI ಮೇಲಿನ ಕೇಸ್ ವಾಪಸ್ ಪಡೆದಿತ್ತು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ. ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ…
ರೈತರನ್ನು ಅಪಮಾನಿಸಿದರೇ ಸಚಿವ ಕೃಷ್ಣ ಭೈರೇಗೌಡ? ‘ಇವರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ’ ಎಂದ ಅಶೋಕ್
ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ‘ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಹೇಳಿದ್ದಾರೆ. ಜಿಎಸ್ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ…
‘ಮುಡಾ’ ಅರ್ಕಾವತಿ ಕಂಟಕ; ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ದೂರು
ಬೆಂಗಳೂರು: ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ನಿತ್ಯ ಒಂದಿಲ್ಲೊಂದು ಸಂಕಟ ಎದುರಾಗುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಅರ್ಕಾವತಿ ಬಡಾವಣೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿವೇಶನದಾರರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ನಿವೇಶನದ ಮಾಲೀಕರಾದ ಎಂ.ಎಸ್.ಶಿವಲಿಂಗಪ್ಪ, ಎಂ.ಚಂದ್ರಶೇಖರನ್, ಕೆ.ರಾಮಚಂದ್ರಯ್ಯ ಮತ್ತು ಡಾ.ವೆಂಕಟಕೃಷ್ಣಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
KSRTCಗೆ ‘ಶಕ್ತಿ’ ತುಂಬಿದ ಸರ್ಕಾರ.. ಸಂಸ್ಥಾಪನಾ ದಿನಾಚರಣೆಯಲ್ಲೂ ಹಲವು ಯೋಜನೆಗಳು ಸಾಕಾರ..
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಂಸ್ಥಾಪನಾ ದಿನಾಚರಣೆ ಬುಧವಾರ (ಅಕ್ಟೋಬರ್16) ನಡೆಯಲಿದೆ. ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯ ಯಶೋಗಾಥೆ ನಂತರ ನಡೆಯುತ್ತಿರುವ ಸಂಸ್ಥಾಪನಾ ದಿನಾಚರಣೆಯು ಹಲವು ಜನಪ್ರಿಯ ಯೋಜನೆಗಳ ಜಾರಿಗೂ ಮುನ್ನುಡಿ ಬರೆಯಲಿದೆ. ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ರ ಆವರಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ (ವಾಸು) ಉಪಸ್ಥಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಕೆಎಸ್ಸಾರ್ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ನಿಗಮದ ನಿರ್ದೇಶಕರಾದ ಡಾ. ನಂದಿನಿದೇವಿ ಕೆ., ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಸುಕುಮಾರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ಅನೇಕ ಯೋಜನೆಗಳನ್ನು ಅನಾವಣ ಮಾಡಲಾಗುವುದು ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮಗಳು: ಮೊದಲ ಬಾರಿಗೆ…
ಎಸಿಪಿಐ & ಮಂಗಳೂರು ವಿವಿ ಕ್ರೈಸ್ತ ವಿದ್ಯಾ ಪೀಠದ ವತಿಯಿಂದ 47 ನೇ ವಾರ್ಷಿಕ ಸಂಶೋಧನಾ ಸಮ್ಮೇಳನ
ಮಂಗಳೂರು: ಭಾರತೀಯ ಕ್ರೈಸ್ತ ತತ್ತ್ವಶಾಸ್ತ್ರೀಯ ಚಿಂತಕರ ಒಕ್ಕೂಟ (ಎಸಿಪಿಐ) ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕ್ರೈಸ್ತ ವಿದ್ಯಾ ಪೀಠದ (ಸಿಐಸಿ) ಸಹಯೋಗದಲ್ಲಿ, ಅಕ್ಟೋಬರ್ 19-21, ರವರೆಗೆ ಮಂಗಳೂರಿನ ಜೆಪ್ಪು ಸಂತ ಜೋಸೆಫರ ಇಂಟರ್ ಡಯಾಸಿಸನ್ ಸೆಮಿನರಿಯಲ್ಲಿ 47ನೇ ವಾರ್ಷಿಕ ತತ್ವಶಾಸ್ತ್ರ ಸಂಶೋಧನಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದ ವಿಷಯ: “ಭರವಸೆ: ಬಹು ಆಯಾಮಗಳೊಂದಿಗೆ ತತ್ತ್ವಶಾಸ್ತ್ರೀಯ ವಿಶ್ಲೇಷಣೆ.” ಈ ವಿಷಯವು 2025 ರಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿರುವ ಜ್ಯೂಬಿಲಿ ವರ್ಷದ “ಭರವಸೆಯ ಯಾತ್ರಿಕರು” ಎಂಬ ಧ್ಯೇಯವಾಕ್ಯಕ್ಕೆ ಪೂರಕವಾಗಿದೆ ಎಂದು ವಂಗಳೂರು ವಿವಿ ಸ್ಥಳೀಯ ಸಂಯೋಜಕ ಡಾ.ಐವನ್ ಡಿಸೋಜ ಮಾಹಿತಿ ಒದಗಿಸಿದ್ದಾರೆ. ಜಗತ್ತಿನಲ್ಲಿನ ಸಂಘರ್ಷಗಳು, ಅಸಹಿಷ್ಣುತೆ, ಪರಿಸರ ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯ ಮತ್ತು ಇತರ ಜಾಗತಿಕ ಸವಾಲುಗಳಿಂದ ನಲುಗಿದ ಇಂದಿನ ದಿನಗಳಲ್ಲಿ ಈ ಸಮ್ಮೇಳನವು ಭರವಸೆಯ ತಾತ್ತ್ವಿಕ ಮೌಲ್ಯಗಳನ್ನು ಮರುಪರಿಶೀಲಿಸಿ ಭವಿಷ್ಯದ ಉತ್ತಮ ಸಮಾಜವನ್ನು ಕಟ್ಟುವ ಕುರಿತು ಚಿಂತನೆ ನಡೆಸಲಿದೆ. ಮೂರು…
ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ
ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು RSSನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ…
ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..
ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು. 2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ. ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ…
