ಬೆಂಗಳೂರು: “ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿ.ಆರ್ ಸುದರ್ಶನ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ವರದಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕೆಲ ನಾಯಕರ ದೆಹಲಿ ಭೇಟಿಯಿಂದ ಸಿಎಂ ಬದಲಾವಣೆ ವದಂತಿ ಮೂಡುತ್ತಿರುವ ಬಗ್ಗೆ ಕೇಳಿದಾಗ, “ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಮ್ಮ ರಾಜ್ಯದವರು ಎಐಸಿಸಿ ಅಧ್ಯಕ್ಷರಾಗಿದ್ದು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ” ಎಂದರು.. ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆಯೇ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ತಿಳಿಸಿದರು. ನೀವು ದೆಹಲಿಗೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ, “ಸಧ್ಯಕ್ಕೆ ನಾನು ದೆಹಲಿಗೆ ಹೋಗುವ…
Year: 2024
ಮಹಾ ಸಚಿವಾಲಯ ಕಟ್ಟಡ 3ನೇ ಮಹಡಿಯಿಂದ ಜಿಗಿದ ಡೆಪ್ಯುಟಿ ಸ್ಪೀಕರ್.. ವೀಡಿಯೋ ವೈರಲ್
ಮುಂಬೈ: ಮಹಾರಾಷ್ಟ್ರ ಸರ್ಕಾರದ ಆಡಳಿತ ಶಕ್ತಿಕೇಂದ್ರ ಮಂತ್ರಾಲಯ ಇಂದು ಕೋಲಾಹಲದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು ಮಂತ್ರಾಲಯ ಕಟ್ಟಡದಿಂದ ಮೂರನೇ ಮಹಡಿಯಿಂದ ಜಿಗಿದ ಪ್ರಸಂಗ ಆತಂಕ ಸೃಷ್ಟಿಸಿತು. Maharashtra state assembly deputy speaker & DCM Ajit Pawar led NCP factions MLA Narhari Zirwal & other ST reserved seats elected MLAs breached police security & jumped at the safety net at Mantralaya in protest against state govt for not recruiting tribal youths under PESA act. pic.twitter.com/6kHwp8PGIv — Sudhir Suryawanshi (@ss_suryawanshi) October 4, 2024 ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ…
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ; ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣ ಬಹಿರಂಗಪಡಿಸಲು ಎಎಪಿ ಒತ್ತಾಯ
ಬೆಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಜಜಗದೀಶ್ ವಿ.ಸದಂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಪ್ ನಾಯಕ ಜಜಗದೀಶ್ ವಿ.ಸದಂ, ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರಿಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. ಆಗಿದೆ. 2014ರಲ್ಲಿ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು. ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಇದುವರೆಗೆ…
ಹೆಚ್ಡಿಕೆ ವಿರುದ್ದ ಎಫ್ಐಆರ್; ನಿಷ್ಪಕ್ಷಪಾತ ತನಿಖೆ ಬಗ್ಗೆ ಕಮೀಷನರ್ ಭರವಸೆ
ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ದ ದಾಖಲಾಗಿರುವ ಪ್ರಕರಣ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದಿದ್ದಾರೆ.
2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ
ಬೆಂಗಳೂರು: ಜನಪ್ರಿಯ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ ಆಯೋಜಿತವಾಗಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಈ ವೈಮಾನಿಕ ಪ್ರದರ್ಶನ ಏರ್ಪಾಡಾಗಿದ್ದು ಸಿದ್ದತೆಗಳು ಸಾಗಿವೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಕರಾವಳಿ: ಮೇಲ್ಮನೆ ಚುನಾವಣೆಗೆ ಒಟ್ಟು ನಾಲ್ವರ ನಾಮಪತ್ರ
ಮಂಗಳೂರು: ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಉಪಚುನಾವಣಾ ಅಖಾಡ ರಂಗೇರಿದೆ. ಈ ವರೆಗೂ ಬಿಜೆಪಿ ಪ್ರತಿನಿಧಿಸುತ್ತಿದ್ದ ಸ್ಥಾನಕ್ಕೆ ಉಪಚುನಾವಣೆ ಏರ್ಪಟ್ಟಿದ್ದು, ಐವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಿಶೋರ್ ಬಿ.ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್ ಎಸ್. ಮತ್ತು ಮುಹಮ್ಮದ್ ರಿಯಾಝ್ (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ)ನಾಮಪತ್ರ ಸಲ್ಲಿಸಿದ್ದಾರೆ. ಐವರು ಅಭ್ಯರ್ಥಿಗಳಿಂದ ಎಂಟು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಶುಕ್ರವಾರ (ಅಕ್ಟೋಬರ್ 4) ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 7 ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಜಿಗಣಿ ಬಳಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೀಣ್ಯದಲ್ಲಿ ನಕಲಿ ಗುರುತಿನ ಚೀಟಿ ಹೊಂದಿ, ಬೆಂಗಳೂರಿನಲ್ಲಿ ನೆಲೆಸಿದ್ದ ಪತಿ, ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು” ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ.
ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್ಐ.ಆರ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ರಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.
‘ನಾನು ತಪ್ಪಿತಸ್ಥನಲ್ಲ’: ನ್ಯಾಯಾಲಯಕ್ಕಿಂತ ಕಾಂಗ್ರೆಸ್ ಪಕ್ಷ ದೊಡ್ಡದೇ? ಎಂದು ಅಶೋಕ್ ಪ್ರಶ್ನೆ
ಬೆಂಗಳೂರು: ‘ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ತಮ್ಮ ಮೇಲಿನ ಆರೋಪ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅಶೋಕ್, ಕಾಂಗ್ರೆಸ್ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್ನ ಕೇಂದ್ರ ಸರ್ಕಾರವೇ…
