ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ; ಕಿಡಿಗೇಡಿಗಳ ಬಂಧನಕ್ಕೆ ಖಾಕಿ ಬಲೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಕಿಡುಗೇಡಿಗಳು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಕೃತ್ಯದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಕೃತ್ಯವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಆದೇಶಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹಿಂದೂ ಸಂಘಟನೆಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

ಚಾಮರಾಜಪೇಟೆಯಲ್ಲಿ ಮಾದಕ ವಸ್ತು ದಂಧೆ; ಪ್ರತಿಪಕ್ಷ ನಾಯಕರ ಆಕ್ರೋಶ

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು. ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ…

Traumatic Brain Injury (TBI): ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ. 2021 ರಲ್ಲಿ US ಮರಣ ದತ್ತಾಂಶವನ್ನು ಆಧರಿಸಿದ ಅಧ್ಯಯನವು ವಯಸ್ಸಾದ ವಯಸ್ಕರು, ಪುರುಷರು ಮತ್ತು ಕೆಲವು ಜನಾಂಗೀಯ ಮತ್ತು ಜನಾಂಗೀಯ ಗುಂಪುಗಳ ಮೇಲೆ ಆಘಾತಕಾರಿ ಮಿದುಳಿನ ಗಾಯಗಳ (TBI) ಅಸಮಾನ ಪರಿಣಾಮವನ್ನು ಬಹಿರಂಗಪಡಿಸಿದೆ. ಪೀರ್-ರಿವ್ಯೂಡ್ ಜರ್ನಲ್ ಬ್ರೈನ್ ಇಂಜುರಿಯಲ್ಲಿ ಪ್ರಕಟವಾದ ಸಂಶೋಧನೆಗಳು, ಆತ್ಮಹತ್ಯೆಗಳು ಟಿಬಿಐ-ಸಂಬಂಧಿತ ಸಾವುಗಳಿಗೆ ಸಾಮಾನ್ಯ ಕಾರಣವಾಗಿ ಉಳಿದಿವೆ ಎಂದು ಸೂಚಿಸುತ್ತವೆ. ಇದರ ನಂತರ ಉದ್ದೇಶಪೂರ್ವಕವಲ್ಲದ ಬೀಳುವಿಕೆಗಳು ಸಂಭವಿಸಿದವು ಮತ್ತು ನಿರ್ದಿಷ್ಟ ಗುಂಪುಗಳು ಈ ದುರಂತಗಳಿಂದ ಅಸಮಾನವಾಗಿ ಪರಿಣಾಮ ಬೀರುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಪುರುಷರು ಟಿಬಿಐನಿಂದ ಸಾಯುವ ಸಾಧ್ಯತೆ ಹೆಚ್ಚು ಎಂದು ಕಂಡುಬಂದಿದೆ – ಮಹಿಳೆಯರ ದರಕ್ಕಿಂತ ಮೂರು ಪಟ್ಟು ಹೆಚ್ಚು (30.5 vs 9.4). ಪುರುಷರ ಜೊತೆಗೆ, ವಯಸ್ಸಾದ…

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡ? ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲ!

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ…

ಕನ್ನಡ, ತೆಲುಗಿನಲ್ಲಿ ಪ್ರಜ್ವಲ್ ದೇವರಾಜ್ ‘ರಾಕ್ಷಸ’

ನಟ ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಶಿವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜೊತೆಗೆ ತೆಲುಗು ಆವೃತ್ತಿಯೂ ಬಿಡುಗಡೆಯಾಗಲಿದೆ. ಫೆಬ್ರುವರಿ 26 ರಂದು ಕನ್ನಡದ ಜೊತೆಗೆ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ವಿತರಕ ಎಂವಿಆರ್ ಕೃಷ್ಣ ಅವರು ಆಂಧ್ರ ಪ್ರದೇಶದಲ್ಲಿ ಈ ಸಿನಿಮಾ ವಿತರಣೆಗೆ ಮುಂದಾಗಿದ್ದಾರೆ. ಹಾರರ್ ಚಿತ್ರ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಗೌಡ, ದೀಪು, ಮತ್ತು ಮಾನಸ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀಧರ್, ಅರುಣ್ ರಾಥೋಡ, ಗೌತಮ್, ಸೋಮಶೇಖರ್ ಸಹಿತ ಹಲವರ ಅಭಿನಯ ಗಮನಸೆಳೆದಿದೆ.

ಕೆಐಎಡಿಬಿ ಕರ್ಮಕಾಂಡಕ್ಕೆ ರೋಚಕತೆ ತುಂಬಿದ CRF; ಹಂದಿಗುಂದ ಎತ್ತಂಗಡಿಗೆ ಆಗ್ರಹ

ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ‘ಪೇ ಸಿಎಂ ಸೇ ಸಿಎಂ’ ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ‘ಹಂದಿಗುಂದ ಪ್ರಕರಣ’ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ. ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ ಮಾಡಿರುವ ಹಾಗೂ ಪರಿಹಾರ ಹಂಚಿಕೆಯಲ್ಲಿನ ಅಕ್ರಮಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಈ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ…

ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

ನವದೆಹಲಿ: ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಶಾಶ್ವತ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ‘X’ ನಲ್ಲಿ ಪೋಸ್ಟ್‌ ಹಾಕಿರುವ ನರೇಂದ್ರ ಮೋದಿ, ‘ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತಾ. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದ ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಲೇ ಇದ್ದಾರೆ. ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಅವರ ದೃಷ್ಟಿಕೋನವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ’ ಎಂದಿದ್ದಾರೆ. <blockquote class=”twitter-tweet” data-media-max-width=”560″> <p dir=”ltr” lang=”en”>Paying homage to Swami Vivekananda on his Jayanti. An eternal inspiration for youth, he continues to ignite passion and purpose in young minds. We are committed to fulfilling his vision of a strong and developed…

ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಡಿಕೆಶಿಗೆ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಎಲ್ಲರ ಪರವಾಗಿ ನ್ಯಾಯಾಧೀಶರಾಗಿರಬೇಕಿರುವ ಡಿ.ಕೆ.ಶಿವಕುಮಾರ್ ಅವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ. ಡಿಕೆಶಿ ಅಂದರೆ ‘ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್’ ಎಂದು ಸಿ.ಟಿ.ರವಿ ಲೇವಡಿ ವ್ಯಂಗ್ಯವಾಡಿದ್ದಾರೆ. ‘ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿ ಇದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ’ ಎಂದು ಸಿ.ಟಿ.ರವಿ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಸಭಾಪತಿಗಳ ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂoಡಾಗಳನ್ನೂ, ಜೊತೆಗಾರರನ್ನು ಎತ್ತಿಕಟ್ಟಿ, ಶಾಸಕಾಂಗದ ದೇಗುಲವಾದ “ಸುವರ್ಣ ಸೌಧದಲ್ಲಿ” ನನ್ನ ಮೇಲೆ…

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ ‘X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ. ಸಿ.ಟಿ.ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ…

ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, ‘ಸಿಖಂದರ್’ ಚಿತ್ರದ ಶೂಟಿಂಗ್’ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.