ಬೆಂಗಳೂರು: ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಧಮ್ಕಿ ಹಾಕಿದ್ದಾರೆ ಎನ್ನಲಾದ ಘಟನೆ ಬಗ್ಗೆ ಬಿಜೆಪಿ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಕಾಂಗ್ರೆಸ್ ಶಾಸಕರಿಗೆ ಬೇರೆ ಆದಾಯವಿಲ್ಲ. ಆದ್ದರಿಂದ ವರ್ಗಾವಣೆ, ಮರಳು ಮಾಫಿಯಾ ಮೂಲಕ ಹಣ ಸಂಪಾದಿಸುತ್ತಿದ್ದಾರೆ. ಭದ್ರಾವತಿಯಲ್ಲೂ ಇಂಥದ್ದೇ ಘಟನೆ ನಡೆದಿದೆ ಎಂದಿದ್ದಾರೆ. ಬೇರೆ ಜಿಲ್ಲೆಗಳಲ್ಲೂ ಅಧಿಕಾರಿಗಳಿಗೆ ಕಾಂಗ್ರೆಸ್ ಶಾಸಕರಿಂದ ಬೆದರಿಕೆ ಇದೆ. ಮಂಡ್ಯ, ಬೀದರ್, ಯಾದಗಿರಿ ಮೊದಲಾದ ಕಡೆ ಮರಳು ಮಾಫಿಯಾ ನಡೆಯುತ್ತಿದೆ. ಭದ್ರಾವತಿಯ ಮಹಿಳಾ ಅಧಿಕಾರಿ ರೆಕಾರ್ಡ್ ಮಾಡಿಕೊಂಡು ಧೈರ್ಯವಾಗಿ ಹೇಳಿದ್ದಾರೆ. ಉಳಿದ ಜಿಲ್ಲೆಗಳ ಅಧಿಕಾರಿಗಳು ವರ್ಗಾವಣೆ ಭಯದಿಂದ ಸುಮ್ಮನಾಗಿದ್ದಾರೆ ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನ್ನು ಉಲ್ಲಂಘಿಸಿ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಅಲ್ಲಿನ ವ್ಯವಸ್ಥೆಗೆ ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಖರ್ಗೆಯವರದ್ದು ನಿಜವಾದ ಕಾಂಗ್ರೆಸ್ಸಾ ಅಥವಾ ಡಿ.ಕೆ.ಶಿವಕುಮಾರ್…
Month: February 2025
ಕೇಂದ್ರ ಸರ್ಕಾರ ನಿಗದಿಪಡಿಸದಂತೆ ಮೆಟ್ರೋ ದರ ಏರಿಕೆ: ಸಿಎಂ ಸ್ಪಷ್ಟನೆ
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಜನತೆಯ ಮುಂದಿತ್ತಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ್ಥಾನದಲ್ಲಿ ಜನ ಕೂರಿಸಿರುವ ರಾಜ್ಯ ಬಿಜೆಪಿ ನಾಯಕರು ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು…
ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಮೂವರು ಯುವಕರ ಸಾವು
ಹಾವೇರಿ: ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೈಕ್ ಸವಾರರಾದ ಶಶಿಕುಮಾರ್ ಉಪ್ಪಾರ, ದರ್ಶನ್ ಮತ್ತು ಆಕಾಶ್ ಬಿರಾದಾರ ಎಂದು ಗುರುತಿಸಲಾಗಿದೆ. ಮೈಲಾರ ಜಾತ್ರೆಗೆ ಈ ಯುವಕರು ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಎತ್ತಿನಬಂಡಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಾಣೆಬೆನ್ನೂರು ಗ್ರಾಮೀಣ ಠಾಣೆಯ ಪೊಲೀಸರು ಪರಿಶೆಲನೆ ನಡೆಸಿದ್ದಾರೆ.
ಭಾರತದ ವೈಮಾನಿಕ ಶಕ್ತಿ ಅನಾವರಣ; ಏರೋ ಇಂಡಿಯಾ 2025 ವೈಶಿಷ್ಟ್ಯಗಳು ಹೀಗಿವೆ
ಬೆಂಗಳೂರು: ಉದ್ಯಾನ ನಗರಿಯ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯುತ್ತಿರುವ ಐದು ದಿನಗಳ ಏರೋ ಇಂಡಿಯಾ 2025 ಪ್ರದರ್ಶನದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತನ್ನ ಲಘು ಉಪಯುಕ್ತ ಹೆಲಿಕಾಪ್ಟರ್, ಫೈಟರ್ ಜೆಟ್ ಮತ್ತು ತರಬೇತಿ ವಿಮಾನಗಳನ್ನು ಪ್ರದರ್ಶಿಸುತ್ತಿದೆ. “HAL ‘ಇನ್ನೋವೇಟ್. ಕೊಲಾಬರೇಟ್. ಲೀಡ್’ ಎಂಬ ಥೀಮ್ ಅನ್ನು ಕೇಂದ್ರೀಕರಿಸಿ ಏರೋ ಇಂಡಿಯಾ 2025 ರಲ್ಲಿ ತನ್ನ ಸ್ಥಳೀಯ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳನ್ನು ಪ್ರದರ್ಶಿಸಲಿದೆ” ಎಂದು HAL ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಿ ಕೆ ಸುನಿಲ್ ಹೇಳಿದ್ದಾರೆ. HAL ನ ಒಳಾಂಗಣ ಪೆವಿಲಿಯನ್ (HAL-E) ನಲ್ಲಿ LUH, ಹಿಂದೂಸ್ತಾನ್ ಟರ್ಬೊ ಟ್ರೈನರ್ (HTT)-40 ಸಿಮ್ಯುಲೇಟರ್, LCA Mk1A ಫೈಟರ್, LCA Mk1 ಟ್ರೈನರ್, ಹಿಂದೂಸ್ತಾನ್ ಜೆಟ್ ಟ್ರೈನರ್ (HJT)-36, HTT-40, LCH ಮತ್ತು ALH Mk IV ನ ಸ್ಕೇಲ್ಡ್ ಮಾದರಿಗಳು ಪ್ರಮುಖ ಆಕರ್ಷಣೆಯಾಗಿರುತ್ತವೆ ಎಂದು ಕಂಪನಿಯ…
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣ; ನಾಲ್ವರು ಡೈರಿ ಪ್ರಮುಖರ ಬಂಧನ
ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ತಿರುಮಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖರ ಬಂಧನವಾಗಿದೆ. ಭಾನುವಾರ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ. ಲಡ್ಡು ಪ್ರಸಾದ ಪ್ರಕರಣ ಕುರಿತಂತೆ ತನಿಖೆ ಕೈಗೊಂಡಿರುವ ಸಿಬಿಐ ಹೈದರಾಬಾದ್ ವಿಭಾಗದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ. ಈ ಆರೋಪಿಗಳು ವಿವಿಧ ಡೈರಿಗಳ ಪ್ರಮುಖರೆಂದು ಹೇಳಲಾಗುತ್ತಿದೆ.
ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ
ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!’ ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ.
ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆ: ರಾಜನಾಥ್ ಸಿಂಗ್
ಬೆಂಗಳೂರು: ಏರೋ ಇಂಡಿಯಾ ನಮ್ಮ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ವೈಜ್ಞಾನಿಕ ಮನೋಧರ್ಮ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸರ್ಕಾರದ ಬಲವಾದ ಮತ್ತು ಸ್ವಾವಲಂಬಿ ಭಾರತದ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಏರೋ ಇಂಡಿಯಾದ 15 ನೇ ಆವೃತ್ತಿಯ ಮುನ್ನಾದಿನ, ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆಯಾಗಿದೆ. ಇದು ಭಾರತದ ರಕ್ಷಣಾ ಸನ್ನದ್ಧತೆಗೆ ನಿರ್ಣಾಯಕ ಮಾತ್ರವಲ್ಲ, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಮ್ಮ ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಜಾಗತಿಕ ಪಾಲುದಾರಿಕೆಗಳನ್ನು ರೂಪಿಸುತ್ತದೆ. ಎಂದರು. ಆರ್ಡನೆನ್ಸ್ ಫ್ಯಾಕ್ಟರಿ ಮಂಡಳಿಯ ಕಾರ್ಪೊರೇಟೀಕರಣದ ನಂತರ, ಹೊಸದಾಗಿ ರೂಪುಗೊಂಡ ಕಂಪನಿಗಳು ರಕ್ಷಣಾ ಉತ್ಪಾದನೆಯಲ್ಲಿ ಅಸಾಧಾರಣವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು…
ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ
ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 26 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಈಗಾಗಲೇ ದೇಶಾದ್ಯಂತ ಮತ್ತು ಅದರಾಚೆಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ.ಈ ಇಬ್ಬರೂ ನಾಯಕರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ಭವ್ಯವಾದ ಆಧ್ಯಾತ್ಮಿಕ ಸಭೆಗಾಗಿ ಮಾಡಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು. ತಮ್ಮ ಈ ಅಪೂರ್ವ ಕ್ಷಣ ಬಗ್ಗೆ ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್, ‘ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ. ಇಲ್ಲಿ ನೆರೆದಿರುವ ಕೋಟ್ಯಂತರ ಭಕ್ತರಿಗೆ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಸಂಘಟಕರು ಅದ್ಭುತ ಕೆಲಸ ಮಾಡಿದ್ದಾರೆ. ನನ್ನ ಕುಟುಂಬ ಮತ್ತು ನಾನು ಪವಿತ್ರ ಸ್ನಾನ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ’…
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಅವರು ರಾಜೀನಾಮೆ
ವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಲನುಭವಿಸಿದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಅತಿಶಿ ಅವರು ರಾಜೀನಾಮೆ ನೀಡಿದ್ದಾರೆ. ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಅತಿಶಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ ಅತಿಶಿ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಅವರ ಪಕ್ಷ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಫೆಬ್ರುವರಿ 5 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ಸಾಧನೆ ಮಾಡಿದೆ.
ಛತ್ತೀಸ್ಗಢದಲ್ಲಿ ಎನ್ಕೌಂಟರ್: ಭದ್ರತಾಪಡೆ ಗುಂಡಿಗೆ 31 ನಕ್ಸಲರು ಬಲಿ
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರ ಹತ್ಯೆಯಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿವೆ. ಆ ವೇಳೆ ಎನ್ಕೌಂಟರ್ನಲ್ಲಿ 31 ನಕ್ಸಲರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯೂ ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.