ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರ

ತಿರುವನಂತಪುರಂ: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಆದರೆ ಸ್ಥಿರವಾಗಿದೆ ಎಂದು ಕಾರ್ಡಿನಲ್ ತಿಳಿಸಿದ್ದಾರೆ. ಹೆಸರು ಬಹಿರಂಗಪಡಿಸಲು ಇಚ್ಛಿಸದ ಭಾರತೀಯ ಕಾರ್ಡಿನಲ್ ಒಬ್ಬರು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದು, ಪೋಪ್ ಅವರು ಹಾಗೆಯೇ ಇದ್ದಾರೆ ಮತ್ತು ವಿಷಯಗಳು ಹಾಗೆಯೇ ಉಳಿದಿವೆ, ಮುಂದಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿಕೊಂಡಿದ್ದಾರೆ. “ಪೋಪ್ ರಾಜೀನಾಮೆ ನೀಡಲು ನಿರ್ಧರಿಸಿದರೆ, ಅವರ ಪೂರ್ವವರ್ತಿ ಪೋಪ್ ಬೆನೆಡಿಕ್ಟ್ XVI 2013 ರಲ್ಲಿ ಮಾಡಿದಂತೆ, ಎಲ್ಲಾ ಕಾರ್ಡಿನಲ್‌ಗಳ ಸಭೆಯನ್ನು ಕರೆಯಲಾಗುತ್ತದೆ ಮತ್ತು ನಿವೃತ್ತಿ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ. ಇದು ಸಾಮಾನ್ಯ ರೂಢಿ ಎಂದು ನಾನು ಹೇಳಿದಾಗಲೂ, ಸಭೆಯಿಲ್ಲದೆಯೂ ಸಹ ಇದು ಸಂಭವಿಸಬಹುದು” ಎಂದು ಕಾರ್ಡಿನಲ್ ಅವ್ರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. “ಇಲ್ಲಿಯವರೆಗೆ ಅಂತಹ ಯಾವುದೇ ಸಭೆಯನ್ನು ಕರೆಯಲಾಗಿಲ್ಲ” ಎಂದು ಅವರು ತಿಳಿಸಿದ್ದಾರೆ. ಭಾರತದಲ್ಲಿ, ಪ್ರಸ್ತುತ ನಾಲ್ಕು ಕಾರ್ಡಿನಲ್‌ಗಳಿದ್ದಾರೆ. ಭಾರತದಲ್ಲಿರುವ ನಾಲ್ಕು ಕಾರ್ಡಿನಲ್‌ಗಳಲ್ಲಿ,…

ಶಿವರಾತ್ರಿ ದಿನದಂದು ಸರಣಿ ದುರ್ಘಟನೆ: ಗೋದಾವರಿಯಲ್ಲಿ ಐವರು ಜಲಸಮಾಧಿ

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಬುಧವಾರ ಐದು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೂವರು ಯುವಕರ ಶವಗಳು ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. ಶಿವರಾತ್ರಿಯ ರಾಜಾ ದಿನದ ಹಿನ್ನೆಲೆಯಲ್ಲಿ 20 ವರ್ಷದೊಳಗಿನ 11 ವಿದ್ಯಾರ್ಥಿಗಳ ಗುಂಪು ಮುಂಜಾನೆ ನದಿಗೆ ಸ್ನಾನಕ್ಕೆ ಹೋಗಿದ್ದಾಗ ಜಿಲ್ಲೆಯ ತಲ್ಲಪುಡಿ ಮಂಡಲದ ತಡಿಪುಡಿಯಲ್ಲಿ ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಪರಸ್ಪರ ಉಳಿಸಲು ಪ್ರಯತ್ನಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಐದು ಮಂದಿ ಮುಳುಗಿ ಸಾವನ್ನಪ್ಪಿದರು. ಆರು ಮಂದಿ ಈಜಿ ದಡಸೇರಿದ್ದಾರೆ. ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿರುವ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡರು.

ಕರೂರ್ ಬಳಿ ಭೀಕರ ಅಪಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ ಐವರ ಸಾವು

ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕಾರು ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ (TNSTC) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ತಂಜಾವೂರು ಜಿಲ್ಲೆಯ ಒರಥನಾಡು ಬಳಿಯ ಒಕ್ಕನಾಡು ಕೀಲಾಯೂರ್‌ನಲ್ಲಿರುವ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಕಾರು ಪುದುಕ್ಕೊಟ್ಟೈ ಜಿಲ್ಲೆಯ ಅರಂತಂಗಿಯಿಂದ ತಿರುಚ್ಚಿ ಮೂಲಕ ತಿರುಪ್ಪೂರಿಗೆ ಹೋಗುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕೊಯಮತ್ತೂರಿನ ಸುಗುಣಪುರಂ ಪೂರ್ವದ ಗಾಂಧಿ ನಗರದ ನಿವಾಸಿ ಎಸ್. ಸೆಲ್ವರಾಜ್ (50), ಅವರ ಪತ್ನಿ ಎಸ್. ಕಲಯರಸಿ (45), ಅವರ ಮಗಳು ಎಸ್. ಅಕಲ್ಯ (25), ಮಗ ಎಸ್. ಅರುಣ್ (22) ಮತ್ತು ಈರೋಡ್ ಜಿಲ್ಲೆಯ ವಿಲ್ಲರಸನ್‌ಪಟ್ಟಿ ನಿವಾಸಿ ಕಾರು ಚಾಲಕ ವಿಷ್ಣು (24) ಎಂದು ಗುರುತಿಸಲಾಗಿದೆ.

‘ಶಕ್ತಿ’ ಯಶೋಗಾಥೆ: 400 ಕೋಟಿ ಬಾರಿ ಮಹಿಳೆಯರ ಉಚಿತ ಪ್ರಯಾಣ

ಬೆಂಗಳೂರು: ಶಕ್ತಿ ಯೋಜನೆಯು ಕರುನಾಡಿನಲ್ಲಿ ಶಕ್ತಿ ಸಂಚಾರವನ್ನೇ ಸೃಷ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಶಕ್ತಿ’ ಗ್ಯಾರೆಂಟಿ ಯೋಜನೆಯ ಯಶಸ್ಸಿನ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಸಿದ್ದರಾಮಯ್ಯ ಅವರು ಪೋಸ್ಟ್ ಹಾಕಿದ್ದಾರೆ. ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ ಎಂದವರು ಬರೆದುಕೊಂಡಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ನಂತರದಿಂದ 400 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದು ಸ್ವಾವಲಂಬಿ ಬದುಕಿನೆಡೆಗೆ ಮುಂದಡಿಯಿಟ್ಟಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ರೂ.9,803 ಕೋಟಿ ಆಗಿದ್ದು, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ ಎಂದವರು…

ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ; ರಾಜ್ಯಕ್ಕೆ ಕೇಂದ್ರದ ಭರವಸೆ

ಬೆಂಗಳೂರು: ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭಾರಿ ಹಾಗೂ ಮಧ್ಯಮ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. – @DKShivakumar pic.twitter.com/yPgqOHXRu0 — Karnataka Congress (@INCKarnataka) February 26, 2025 ಜಲಾಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಡಿಕೆಶಿ, ನಮ್ಮ ನೀರಾವರಿ ಯೋಜನೆಗಳ ಕುರಿತ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಟ್ಟಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.…

ಕ್ರಿಪ್ಟೊ ಕರೆನ್ಸಿ ಹಗರಣ: ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

ನವದೆಹಲಿ: ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ಸಿಬಿಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಮಂಗಳವಾರ ಸಂಜೆಯವರೆಗೂ ಹಲವೆಡೆ ಶೋಧ ನಡೆದಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಕೈಗೊಂಡಿದೆ. ಬಹುಕೋಟಿ ರೂಪಾಯಿ ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ ‘ಅಪ್ಪು’ ರೀ- ರೀಲಿಸ್ ಆಗಲಿದೆ. ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಅಪ್ಪು’ ಚಿತ್ರವನ್ನು PRK Productions ಮರು ಬಿಡುಗಡೆ ಮಾಡುವ ಕುರಿತು ಪಿಆರ್ ಕೆ ಪ್ರೊಢಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣ ‘X’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Misunderstanding ಬೇಡ! 💞 Get ready to relieve the magic. #Appu returns to theaters in honor of Dr. Puneeth Rajkumar’s 50th birthday. ▶️ In Cinemas on 14th March 2025 A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q — Ashwini Puneeth Rajkumar (@Ashwini_PRK) February 26, 2025

ಕೇಂದ್ರದ ಭಾಷಾ ನೀತಿಗೆ ಆಕ್ಷೇಪ: ಬಿಜೆಪಿಗೆ ನಟಿ ರಂಜನಾ ಗುಡ್ ಬೈ..!

ಚೆನ್ನೈ: ತಮಿಳುನಾಡು ಬಿಜೆಪಿಯಲ್ಲಿ ಬೆಳವಣಿಗೆಯಾಗಿದೆ. ಬಿಜೆಪಿ ಪಕ್ಷವನ್ನು ತೊರೆಯಲು ತಮಿಳು ನಟಿ ರಂಜನಾ ನಾಚಿಯಾರ್ ನಿರ್ಧರಿಸಿದ್ದಾರೆ. ಪಕ್ಷದ ಭಾಷಾ ನೀತಿ ಮತ್ತು ರಾಜ್ಯವನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ, ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ವಿವಾದಾತ್ಮಕ ತ್ರಿಭಾಷಾ ನೀತಿಯನ್ನು ಹೇರಿದ್ದು ಮತ್ತು ತಮಿಳುನಾಡನ್ನು ನಿರ್ಲಕ್ಷಿಸಿದೆ ಎಂದು ಭಾವಿಸಲಾಗಿದೆ ಎಂದು ಅವರು ಬೇಸರ ಹೊರಹಾಕಿದ್ದಾರೆ. <blockquote class=”twitter-tweet” data-media-max-width=”560″><p lang=”en” dir=”ltr”><a href=”https://twitter.com/hashtag/WATCH?src=hash&amp;ref_src=twsrc%5Etfw”>#WATCH</a> | Chennai, Tamil Nadu: On her resignation from BJP over 3-language policy under NEP (National Education Policy, actor Ranjana Nachiyar says, &quot; My reason for resignation…our children, they are not well versed even in Tamil so why do you have to…

ಮುಡಾ ಹಗರಣ: ಲೋಕಾಯುಕ್ತದ ಆತುರದ ನಡೆ ಯಾಕೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರರು ಭಾಗಿಯಾಗಿದ್ದಾರೆನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದ ಲೋಕಾಯುಕ್ತ ತನಿಖೆಯು ತನಿಖೆಯ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಲೋಕಾಯುಕ್ತವು “B ರಿಪೋರ್ಟ್” ಸಲ್ಲಿಸುವ ಮೂಲಕ ತನಿಖೆಯನ್ನು ಹಠಾತ್ತನೆ ಮುಕ್ತಾಯಗೊಳಿಸುವ ಮೊದಲು ಸಿದ್ದರಾಮಯ್ಯ ಅವರಿಗೆ ಕೇವಲ 30 ಪ್ರಶ್ನೆಗಳನ್ನು ಕೇಳಲಾಗಿತ್ತು ಎನ್ನಲಾಗುತ್ತಿದೆ. ಈ ತ್ವರಿತ ತೀರ್ಮಾನವು ಅನೇಕ ಅನುಮಾನಗಳನ್ನು ಹುಟ್ಟುಹಾಕಿವೆ ಎಂದು ತಜ್ಞರು ಹೇಳುತ್ತಿದ್ದಾರೆ. ಕಳವಳಕಾರಿ ಸಂಗತಿಯೆಂದರೆ ಲೋಕಾಯುಕ್ತವು ಜಾರಿ ನಿರ್ದೇಶನಾಲಯದ (ED) ನಿರ್ಣಾಯಕ ನಡೆಯನ್ನು ‘ಕಡೆಗಣಿಸಿದೆ’. ಈ ಹಗರಣ ಆರೋಪದಲ್ಲಿ ED ಅನೇಕರ ವಿಚಾರಣೆಗೆ ಸಿದ್ಧತೆ ನಡೆಸಿರುವ ವಿಚಾರ ಅದಾಗಲೇ ಬಹಿರಂಗವಾಗಿದ್ದರೂ ಈ ಗಂಭೀರತೆ ಬಗ್ಗೆ ಲೋಕಾಯುಕ್ತ ಪೊಲೀಸರು ಗಮನಹರಿಸದೇ ತನಿಖೆ ಪೂರ್ಣಗೊಳಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡುವ ಆತುರದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆಯೇ ಎಂಬ ಅನುಮಾನ ಪ್ರತಿಪಕ್ಷಗಳದ್ದು.

ತಿರುವನಂತಪುರಂ:: ನಾಲ್ವರನ್ನು ಹತ್ಯೆ ಮಾಡಿ ಹಂತಕ ಪೊಲೀಸರಿಗೆ ಶರಣು

ತಿರುವನಂತಪುರಂ: ಆಘಾತಕಾರಿ ಘಟನೆಯೊಂದರಲ್ಲಿ, ರಾಜಧಾನಿ ಉಪನಗರದಲ್ಲಿ ಅಫ್ಸಾನ್ ಎಂಬ ಯುವಕ ಸೋಮವಾರ ಸಂಜೆ ಐವರನ್ನು ಕೊಲೆಮಾಡಿದ್ದಾನೆ. ಈ ಭೀಕರ ಕೃತ್ಯದ ನಂತರ, ಆರೋಪಿ ಆಟೋ ರಿಕ್ಷಾ ತೆಗೆದುಕೊಂಡು ಪೊಲೀಸರ ಮುಂದೆ ಶರಣಾಗಿ, ವಿಷ ಸೇವಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ತಕ್ಷಣ ಆತನನ್ನುವಶಕ್ಕೆ ಪಡೆದಿದ್ದಾರೆ. ಕೊಲೆಯಾದವರಲ್ಲಿ ಅಫ್ಸಾನ್‌ನ 13 ವರ್ಷದ ಸಹೋದರ, ಆತನ 19 ವರ್ಷದ ಗೆಳತಿ, ಅಜ್ಜಿ, ಸೋದರತ್ತೆ, ಮತ್ತು ಆಕೆಯ ಪತಿ ಲತೀಫ್ ಅವರನ್ನು ಕೊಲೆ ಮಾಡಲಾಗಿದೆ.