ಮುಂಬೈ: ನಟ ಯಶ್ ‘ರಾಮಾಯಣ’ ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಮೊದಾಲದವರೂ ನಟಿಸುತ್ತಿದ್ದಾರೆ. ತಿವಾರಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಭಾರತದಲ್ಲಿ ನಡೆಯುತ್ತಿದೆ. ನಟ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಮತ್ತು ನಟಿ ಸಾಯಿ ಪಲ್ಲವಿ ಸೀತಾದೇವಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ರಣಬೀರ್ ಮತ್ತು ಪಲ್ಲವಿ ಚಿತ್ರದ ಕೆಲವು ಭಾಗಗಳನ್ನು ಮುಂಬೈನಲ್ಲಿ ಚಿತ್ರೀಕರಿಸಿದ್ದಾರೆ. ಮತ್ತು ಈಗ, ಚಿತ್ರದ ನಿರ್ಮಾಪಕರೂ ಆಗಿರುವ ಯಶ್ ಮುಂಬೈನಲ್ಲಿ ತಮ್ಮ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಫೆಬ್ರವರಿ 21 ರಂದು ಯಶ್ ರಾಮಾಯಣಕ್ಕಾಗಿ ತಮ್ಮ ಭಾಗಗಳ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಶೂಟಿಂಗ್ ಭಾಗವು ಯುದ್ಧದ ಸನ್ನಿವೇಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ತಂಡವು ಮುಂಬೈನ ಅಕ್ಸಾ ಬೀಚ್ನಲ್ಲಿ ಕೆಲವು ನಿರ್ಣಾಯಕ ಯುದ್ಧ ದೃಶ್ಯಗಳನ್ನು ಚಿತ್ರೀಕರಿಸಲಿದೆ ಎಂದು ಮೂಲಗಳು.…
Month: February 2025
ಫೆಬ್ರವರಿ 23 ರಿಂದ 25: ಪ್ರಧಾನಿ ಮೋದಿಯಿಂದ ಮೂರು ರಾಜ್ಯ ಪರ್ಯಟನೆ
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25 ರವರೆಗೆ ಮೂರು ದಿನಗಳ ಕಾಲ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ – ಮೂರು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23 ಮತ್ತು 24 ರಂದು ರಾಜಧಾನಿ ಭೋಪಾಲ್ ಮೋದಿ ಅವರನ್ನು ಆತಿಥ್ಯ ವಹಿಸಲಿದೆ. ತಮ್ಮ ಪ್ರವಾಸದ ಸಮಯದಲ್ಲಿ ಅವರು ಹೂಡಿಕೆದಾರರು, ಬಡವರು ಮತ್ತು ರೈತರನ್ನು ಒಳಗೊಂಡ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರು ಫೆಬ್ರವರಿ 23 ರಂದು ಮಧ್ಯಪ್ರದೇಶದ ಛತ್ತರ್ಪುರ್ ಜಿಲ್ಲೆಯ ಗರ್ಹಾ ಎಂಬ ವಿಲಕ್ಷಣ ಗ್ರಾಮಕ್ಕೆ ಮೊದಲು ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಅದೇ ದಿನ ಮಧ್ಯಾಹ್ನ 2 ಗಂಟೆಗೆ ಬಾಗೇಶ್ವರ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಅಡಿಪಾಯ ಹಾಕಲಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ತಜ್ಞ ವೈದ್ಯರನ್ನು ಹೊಂದಿರುವ ಈ ಕ್ಯಾನ್ಸರ್ ಆಸ್ಪತ್ರೆಯು 200 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು,…
ಮತ್ತೆ ಮೂರು ಮಸೂದೆಗಳು ವಾಪಸ್: ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮತ್ತಷ್ಟು ಮಸೂದೆಗಳನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಿಸಲಾಗಿದ್ದ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಮೂರು ಮಸೂದೆಗಳನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ಮಸೂದೆ-2024 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ತಿದ್ದುಪಡಿ ಉದ್ದೇಶದಿಂದ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.
ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…
ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ
ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ ಆವರಿಸಿದೆ. ಮುಜರಾಯಿ ಇಲಾಖೆಯಿಂದ ಮತ್ತೊಂದು ಐತಿಹಾಸಿಕ ಆದೇಶ ವಾಗಿದ್ದು, ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿಗೆ ಕರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು…
ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಕಲ್ಬುರ್ಗಿಗೆ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ
ಕಲಬುರಗಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಕಲ್ಬುರ್ಗಿಗೆ ಭೇಟಿ ನೀಡಲಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಬಂಧ ಹಲವಾರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸದ್ಯವೇ ಚಾಲನೆ ನೀಡಲಿದ್ದಾರೆ. ಈ ಸಂವಂಧ ಅವರು ಕಲ್ಬುರ್ಗಿ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳ ಇತರೆ ಆರೋಗ್ಯ ಇಲಾಖೆಗಳ ಯೋಜನೆಗಳಿಗೂ ಕೂಡ ಕಲ್ಬುರ್ಗಿಯಲ್ಲಿಯೇ ಶಂಕುಸ್ಥಾಪನೆ ನೇರವೇಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಇತರೆ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…
ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ
ಕಲಬುರಗಿ: ಸೇಡಂ ತಾಲೂಕಿನ ಸಿಮೆಂಟ್ ಕಾರ್ಖಾನೆಯ ಅಂಗಳದಲ್ಲಿ ನಡೆದಿದೆ ಎನ್ನಲಾಗಿರುವ ಅಮಾನವೀಯ ಘಟನೆ ದುರದೃಷ್ಟಕರ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಶರಣ್ ಪ್ರಕಾಶ್ ಆರ್. ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೃತ ಕಾರ್ಮಿಕನನ್ನು ಆತನ ಜೊತೆಯಲ್ಲೇ ಕೆಲಸ ಮಾಡುವ ಇತರೆ ಕಾರ್ಮಿಕರು ಪ್ರಾಣಿಗಳಂತೆ ಹೊತ್ತೈದಿರುವ ಘಟನೆ ಅಮಾನವೀಯ. ಈ ಕುರಿತು ತನಿಖೆ ನಡೆಸಲು ಈಗಾಗಲೇ ಸೂಚನೆಯನ್ನು ನೀಡಲಾಗಿದೆ.. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಆರು ಜನರನ್ನು ಪೊಲೀಸರು ಬಂಧಿಸಲಾಗಿದೆ ಎಂದರು. ಅದಲ್ಲದೆ ಸೇಡಂ ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ರೈಲ್ವೆ ಟ್ರ್ಯಾಕ್ ನಿಂದಾಗಿ ಅಂಬುಲೆನ್ಸ್ ನಲ್ಲಿ ಚಿಕಿತ್ಸೆಗೆ ಹೋಗುತ್ತಿದ್ದ ವ್ಯಕ್ತಿ ಅವರು ಮಾರ್ಗಮದ ಸಾವನ್ನಪ್ಪಿದ ಘಟನೆಗೆ ಹಿನ್ನೆಲೆಯಲ್ಲಿ ಕೂಡಲೇ ಶಿಫ್ಟ್ ಮಾಡುವಂತೆ ಈಗಾಗಲೇ ರೈಲ್ವೆ ಇಲಾಖೆಗೆ ತಿಳಿಸಲಾಗಿದೆ. ರೈಲ್ವೆ ಇಲಾಖೆ ಗಂಭೀರತೆಯನ್ನು ಅರಿತಿದೆ.…
ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ
ವಾಷಿಂಗ್ಟನ್: ವಿಶ್ವದ ಪ್ರಭಾವಿ ತನಿಖಾ ಸಂಸ್ಥೆಯಾಗಿರುವ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI), ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ ಗೊಂಡಿದ್ದಾರೆ. ಕಶ್ಯಪ್ ಪಟೇಲ್ ಎಂದೂ ಗುರುತಾಗಿರುವ ಕಾಶ್ ಪಟೇಲ್ ಅವರನ್ನು ಸೆನೆಟ್ ಆಯ್ಕೆ ಮಾಡಿದೆ. BREAKING VIDEO: Kash Patel CONFIRMED 51 To 47 As FBI Director! Now The Veteran Intelligence Officer Can Go On The Offensive & Defend Trump From The Deep State's Criminal Agenda » WATCH/SHARE THE LIVE X STREAM HERE:https://t.co/7NYWKPuERO pic.twitter.com/zCeJ2VYT7Q — Alex Jones (@RealAlexJones) February 20, 2025 ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರಾಗಿ ಗುರುತಿಸಿಕೊಂಡಿರುವ ಕಾಶ್ ಪಟೇಲ್(ಕಶ್ಯಪ್ ಪಟೇಲ್) ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್ಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ…
ಭಾರತದಲ್ಲಿ ಮತದಾನ ಪ್ರಮಾಣವ ಹೆಚ್ಚಿಸಲು USAID: ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ
ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ US ಏಜೆನ್ಸಿಯ ಬೆಂಬಲದ ಕುರಿತ ಮಾಹಿತಿ ಬಹಿರಂಗಪಡಿಸುವಂತೆ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ನಲ್ಲಿ ಹಾಕಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “USAID ಇತ್ತೀಚಿನ ದಿನಗಳಲ್ಲಿ ಬಹಳ ಸುದ್ದಿಯಲ್ಲಿದೆ. ಈ ಕುರಿತ ಅಮೆರಿಕ ಅಧ್ಯಕ್ಷರ ಹೇಳಿಕೆಗಳು ಅಸಂಬದ್ಧವಾಗಿವೆ’ ಎನ್ನಲಾಗುತ್ತಿದೆ. ಆದರೂ ದಶಕಗಳಲ್ಲಿ ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ USAID ನೀಡಿರುವ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.