ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಮುಂಬೈ: ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. ‘ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ’ ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ – ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ. ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. ‘ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ…

‘ಶಕ್ತಿ’ ಗ್ಯಾರೆಂಟಿಯಷ್ಟೇ ಅಲ್ಲ, 2,000 ಹೊಸ ಬಸ್‌ಗಳ ಮೂಲಕ KSRTCಗೆ ಮತ್ತಷ್ಟು ಶಕ್ತಿ; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು. ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು…

ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment! Shri Rajeev Chandrashekhar ji took charge as the new state president of @BJP4Keralam. A new era of politics of development begins! Under the leadership of @NarendraModi ji and @RajeevRC_X ji, BJP is poised to write new chapters in shaping Kerala’s future. pic.twitter.com/NleURsEbln — Anoop Antony Joseph (@AnoopKaippalli) March 24, 2025 ತಿರುವನಂತಪುರದಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ಪ್ರಹ್ಲಾದ್ ಜೋಶಿ ಅವರು ರಾಜೀವ್‌ ಚಂದ್ರಶೇಖರ್‌ ಆಯ್ಕೆಯನ್ನು ಪ್ರಕಟಿಸಿದರು. ರಾಜೀವ್ ಚಂದ್ರಶೇಖರ್ ಅವರೊಬ್ಬರೇ ಭಾನುವಾರ ನಾಮಪತ್ರ ಸಲ್ಲಿಸಿದ್ದು…

ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

ಬೆಂಗಳೂರು: ಹನಿಟ್ರ್ಯಾಪ್‌‌ ಅವಾಂತರದ ಬೆನ್ನಲ್ಲೇ ಇದೀಗ ರಾಜ್ಯ ರಾಜಕಾರಣವನ್ನು ಫೋನ್ ಕದ್ದಾಲಿಕೆ ಗುಮ್ಮಾ ಕಾಡತೊಡಗಿದೆ. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು‌. ಸಚಿವ ರಾಜಣ್ಣ ಹಾಗೂ ಅವರ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್‌ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ ಎಂದರು. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕೆಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದವರು ಹೇಳಿದರು.

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

ಬೆಂಗಳೂರು: ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್‌.ಎಲ್‌.ಧರ್ಮೇಗೌಡ…

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ

ಯಾದಗಿರಿ:: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಜನಪ್ರತಿನಿಧಿಗಳ ಮೇಲೆ ಹನಿಟ್ರ್ಯಾಪ್ ವಿಚಾರವಾಗಿ ಯಾದಗಿರಿ‌ ಜಿಲ್ಲೆಯ ಮಹಲ್ ರೋಜಾದಲ್ಲಿ ವೈದ್ಯಕೀ‌ಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿಕೆ‌ ನೀಡಿದರು. ಹನಿಟ್ರ್ಯಾಪ್ ಆಗಿದೆ, ಹೇಗೆ, ಏನು ಎನ್ನುವುದು ಎಲ್ಲಾ ವಿಚಾರ ತನಿಖೆ ಆದ್ಮೇಲೆ ಗೊತ್ತಾಗುತ್ತದೆ. ಯಾರ್ಯಾರು ಸಚಿವರು, ಶಾಸಕರು ಅವರವರ ವಿಡಿಯೋ ರಿಲೀಸ್ ಆಗಬಾರದು ಎಂದು ಹೈಕೋರ್ಟ್ ಸ್ಟೇ ತಂದಿದ್ದಾರೆ ಅವರಿಗೆ ಕೇಳಬೇಕು ಎಂದರು. ಬಿಜೆಪಿಯವರಿಗೆ ಸಿಬಿಐ ತನಿಖೆ ಮುಕ್ತ ಅವಕಾಶವಿತ್ತು, ಆದರೆ ಅವರ ಅವಧಿಯಲ್ಲಿ ಯಾವುದೇ ತನಿಖೆ ಆಗಿಲ್ಲ, ಯಾವುದನ್ನೂ ಸಿಬಿಐ ತನಿಖೆಗೆ ಕೊಟ್ಟಿಲ್ಲ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ…