ಜಲಂಧರ್: ಇತ್ತೀಚೆಗೆ ಬಿಡುಗಡೆಯಾದ ಸನ್ನಿ ಡಿಯೋಲ್ ನಟನೆಯ ಬಾಲಿವುಡ್ ಚಿತ್ರ ‘ಜಾತ್’ ವಿವಾದಕ್ಕೆ ಕಾರಣವಾಗಿದ್ದು, ಜಲಂಧರ್ನ ಸದರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ನಲ್ಲಿ ಸನ್ನಿ, ರಣದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್, ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ನಿರ್ಮಾಪಕ ನವೀನ್ ಮಲಿನೇನಿ ಅವರ ಹೆಸರುಗಳಿವೆ ಎನ್ನಲಾಗಿದೆ. ಚಿತ್ರದ ಕೆಲವು ದೃಶ್ಯಗಳ ಚಿತ್ರಣವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು ಅಧಿಕಾರಿಗಳ ಬಲವಾದ ಪ್ರತಿಕ್ರಿಯೆಗೆ ಕಾರಣವಾಗಿದೆ. ಚಿತ್ರದಲ್ಲಿ ಲಾರ್ಡ್ ಜೀಸಸ್ ಕ್ರೈಸ್ಟ್ ಒಳಗೊಂಡ ದೃಶ್ಯದೊಂದಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಜಲಂಧರ್ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಡಿಸಿಪಿ ಪ್ರಧಾನ ಕಚೇರಿಯ ಸುಖ್ವಿಂದರ್ ಸಿಂಗ್ ಅವರು ಪ್ರಕರಣದ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಜಲಂಧರ್ನ ಫೋಲ್ರಿವಾಲ್ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಸದಸ್ಯ ಗೋಲ್ಗೋಥಾ ಗೋಲ್ಡ್ ದೂರು ದಾಖಲಿಸಿದ್ದಾರೆ.…
Day: April 18, 2025
ಮೇ 1 ರಿಂದ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲ್ಲ; ಕೇಂದ್ರದ ಸ್ಪಷ್ಟನೆ
ನವದೆಹಲಿ: ಮೇ 1 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಬದಲಾವಣೆಯಾಗಲಿದೆ ಎಂಬ ಮಾಧ್ಯಮಗಳ ವರದಿ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸ್ಪಷ್ಟನೆ ನೀಡಿದೆ. ಮೇ 1, 2025 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ಅನ್ನು ಜಾರಿಗೆ ತರುವ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಥವಾ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಚಿವಾಲಯ ತಿಳಿಸಿದೆ. ಟೋಲ್ ಪ್ಲಾಜಾಗಳ ಮೂಲಕ ವಾಹನಗಳ ಸುಗಮ, ತಡೆರಹಿತ ಚಲನೆಯನ್ನು ಸಕ್ರಿಯಗೊಳಿಸಲು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ‘ANPR-FASTag-ಆಧಾರಿತ ತಡೆ-ಕಡಿಮೆ ಟೋಲಿಂಗ್ ವ್ಯವಸ್ಥೆ’ಯನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಈ ಮುಂದುವರಿದ ಟೋಲಿಂಗ್ ವ್ಯವಸ್ಥೆಯು,…
ದೀರ್ಘಕಾಲದ ನೋವಿನಿಂತ ‘ಖಿನ್ನತೆ’ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು..!
ನವದೆಹಲಿ: ದೀರ್ಘಕಾಲದ ನೋವಿನಿಂದ ಬಳಲುತ್ತಿರುವ ಜನರು – ಅಥವಾ ಕನಿಷ್ಠ ಮೂರು ತಿಂಗಳವರೆಗೆ ಇರುವ ನೋವಿನಿಂದ ಬಳಲುತ್ತಿರುವವರು – ಖಿನ್ನತೆಯನ್ನು ಅನುಭವಿಸುವ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು ಎಂದು ಅಧ್ಯಯನವೊಂದು ತಿಳಿಸಿದೆ. ವಿಶ್ವಾದ್ಯಂತ ಸುಮಾರು ಶೇಕಡಾ 30 ರಷ್ಟು ಜನರು ಕಡಿಮೆ ಬೆನ್ನು ನೋವು ಮತ್ತು ಮೈಗ್ರೇನ್ನಂತಹ ದೀರ್ಘಕಾಲದ ನೋವಿನ ಸ್ಥಿತಿಯಿಂದ ಬಳಲುತ್ತಿದ್ದಾರೆ ಮತ್ತು ಈ ರೋಗಿಗಳಲ್ಲಿ ಮೂವರಲ್ಲಿ ಒಬ್ಬರು ಸಹ ಅಸ್ತಿತ್ವದಲ್ಲಿರುವ ನೋವಿನ ಸ್ಥಿತಿಗಳನ್ನು ವರದಿ ಮಾಡುತ್ತಾರೆ. ಸೈನ್ಸ್ ಅಡ್ವಾನ್ಸಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ದೇಹದ ಬಹು ಭಾಗಗಳಲ್ಲಿ ದೀರ್ಘಕಾಲದ ನೋವು ಒಂದೇ ಸ್ಥಳದಲ್ಲಿ ನೋವು ಅನುಭವಿಸುವುದಕ್ಕಿಂತ ಖಿನ್ನತೆಯ ಹೆಚ್ಚಿನ ಅಪಾಯಕ್ಕೆ ಸಂಬಂಧಿಸಿದೆ ಎಂದು ತೋರಿಸುತ್ತದೆ. “ನೋವು ಕೇವಲ ದೈಹಿಕವಲ್ಲ” ಎಂದು ಯೇಲ್ ಸ್ಕೂಲ್ ಆಫ್ ಮೆಡಿಸಿನ್ (YSM) ನ ರೇಡಿಯಾಲಜಿ ಮತ್ತು ಬಯೋಮೆಡಿಕಲ್ ಇಮೇಜಿಂಗ್ನ ಅಸೋಸಿಯೇಟ್ ಪ್ರೊಫೆಸರ್ ಡಸ್ಟಿನ್ ಸ್ಕೈನೋಸ್ಟ್ ಹೇಳಿದ್ದಾರೆ. “ನಮ್ಮ ಅಧ್ಯಯನವು…
ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ. ಸಿಎಂ @siddaramaiah ಅವರೆ,… pic.twitter.com/9dliDqSFNm — BJP Karnataka (@BJP4Karnataka) April 18,…
ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ
ರಾಯಚೂರು: ರಾಯಚೂರು ಜಿಲ್ಲೆಯ ಅಮರಪುರ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ 28 ವರ್ಷದ ನಾಗರಾಜ್, 38 ವರ್ಷದ ಸೋಮು, 36 ವರ್ಷದ ನಾಗಭೂಷಣ್ ಮತ್ತು 38 ವರ್ಷದ ಮುರಳಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮೃತರು ಸರಕು ವಾಹನದಲ್ಲಿ ಕುರಿ ಜಾತ್ರೆಗೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಕಡೆಗೆ ಪ್ರಯಾಣಿಸುತ್ತಿದ್ದರು. ಅತಿ ವೇಗದ ಚಾಲನೆಯಿಂದಾಗಿ, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಪ್ಯಾರಪೆಟ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮವಾಗಿ, ಸರಕು ವಾಹನದ ಮುಂಭಾಗದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಾಲಕ ಆನಂದ್ ಗಂಭೀರ ಗಾಯಗೊಂಡಿದ್ದು, ಅವರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗಾಯಾಳು ಶಹಾಪುರ ಪಟ್ಟಣದ ಜಾತ್ರೆಯಿಂದ ಕುರಿಗಳನ್ನು ಖರೀದಿಸಲು ಹೋಗುತ್ತಿದ್ದೆವು ಎಂದು ಪೊಲೀಸರಿಗೆ…
ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ, ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸುವಂತೆ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಈ ಘಟನೆ ತಮ್ಮ ಜಿಲ್ಲೆಯಲ್ಲಿ ನಡೆದಿರುವುದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.
ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪರೀಕ್ಷಾ ಅಕ್ರಮ ತಡೆಯಲಾಗದ ಸರ್ಕಾರ ಪರೀಕ್ಷಾರ್ಥಿಗಳ ತಾಳಿ, ಸರ, ಆಭರಣಗಳನ್ನೂ ತೆಗೆಸುತ್ತಿತ್ತು. ಇದೀಗ ಜನಿವಾರಕ್ಕೆ ಕೈ ಹಾಕಿದೆ ಎಂಬ ಆಕ್ರೋಶ ವ್ಯಕತವಾಗಿದೆ. ಸಿಸಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಬರೆಯುವಾಗ ಜನಿವಾರ, ತಾಳಿ ಮೂಲಕ ಅಕ್ರಮ ನಡೆಯಲು ಸಾಧ್ಯವಿಲ್ಲ. ಆದರೂ ಹಿಂದೂ ಸಂಸ್ಕೃತಿ ಮೇಲೆ ಸವಾರಿ ಮಾಡುವ ಉದ್ದೇಶದಿಂದಲೇ ಈ ರೀತಿಯ ಕ್ರಮ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ನಡುವೆ ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಪ್ರಕರಣ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.…
ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ
ಬೆಲ್ಮೋಪನ್: ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನದ ಮತ್ತೊಂದು ಹೈಡ್ರಾಮಾ ನಡೆದಿದೆ. ಅಮೆರಿಕದ ಬೆಲೀಜ್ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಬೆಲೀಜ್ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಚಾಕು ತೋರಿಸಿ, ಕೆಲವರ ಮೇಲೆ ಹಲ್ಲೆ ನಡೆಸಿ ಸಣ್ಣ ಟ್ರಾಫಿಕ್ ಏರ್ ವಿಮಾನವನ್ನು ಅಪಹರಿಸಲು ಯತ್ನಿಸಿದ್ದಾನೆ. ಆ ವೇಳೆ, ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಆ ಕಿಡಿಗೇಡಿಯ ಮೇಲೆ ಗುಂಡು ಹಾರಿಸಿದ್ದಾನೆ. ಆಗಂತುಕನನ್ನು ಸುಮಾರು 49 ವರ್ಷ ವಯಸ್ಸಿನ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಗಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿ, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು…