ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ ಸೋಲುಂಡಿರುವ RCB ಇದೀಗ ನಾಲ್ಕು ಪಂದ್ಯಗಲ್ಲಷ್ಟೇ ಗೆಲುವು ಸಾಧಿಸಿದ್ದು ಪ್ಲೇಆಫ್ಗೇರುವ ಸಾಧ್ಯತೆಗಳಿವೆಯೇ ಎಂಬ ಚಿಂತೆ ಅಭಿಮಾನಿಗಳನ್ನು ಕಾಡತೊಡಗಿದೆ. ಈ ಬಾರಿಯ ಐಪಿಎಲ್ ಸೆಣಸಾಟದ ಮೊದಲಾರ್ಧ ಪೂರ್ಣಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇನ್ನು ಮುಂದೆ ದ್ವಿತೀಯಾರ್ಧವನ್ನು ಕ್ರಮಿಸಲಿದೆ. ಶುಕ್ರವಾರ ತನ್ನ ವಿರುದ್ಧ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ತಿಂಗಳ 20 ರಂದು ದ್ವಿತೀಯಾರ್ಧವನ್ನು ಆರಂಭಿಸಲಿದೆ. ಆರ್ಸಿಬಿ ತಂಡಕ್ಕೆ ದ್ವಿತೀಯಾರ್ಧದಲ್ಲಿ 7 ಪಂದ್ಯಗಳ ಸವಾಲು ಇದ್ದು ಪ್ಲೇಆಫ್ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 8 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡ ಈ ದ್ವಿತೀಯಾರ್ಧದಲ್ಲಿ 4 ಪಂದ್ಯಗಳನ್ನು…
Month: April 2025
ಕಾಂಗೋ ಗಣರಾಜ್ಯದಲ್ಲಿದೋಣಿ ದುರಂತ: 148 ಮಂದಿ ಸಾವು
ಕಾಂಗೋ: ಕಾಂಗೋ ಗಣರಾಜ್ಯದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 148 ಕ್ಕೆ ಏರಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ದೇಶದ ವಾಯುವ್ಯದಲ್ಲಿರುವ ಕಾಂಗೋ ನದಿಯಲ್ಲಿ ಮಂಗಳವಾರ ಬೆಂಕಿ ಹೊತ್ತಿಕೊಂಡ ನಂತರ ದೋಣಿ ಮಗುಚಿ ಬಿದ್ದು ದುರಂತಕ್ಕೀಡಾಗಿದೆ. ಆ ದೋಣಿಯಲ್ಲಿ ಸುಮಾರು 500 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಪ್ರಯಾಣಿಕ ದೋಣಿಯಲ್ಲಿ ಒಬ್ಬ ವ್ಯಕ್ತಿ ಅಡುಗೆ ಮಾಡುತ್ತಿದ್ದಾಗ ಕಾಣಿಸಿಕೊಂಡ ಬೆಂಕಿ ದೈತ್ಯ ದೋಣಿಯನ್ನು ಆವರಿಸಿಕೊಂಡಿತು ಎನ್ನಲಾಗಿದೆ. ಆ ವೇಳೆ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರು ನೀರಿಗೆ ಹಾರಿದ್ದಾರೆ. ಆದರೆ ಈಜಲು ಸಾಧ್ಯವಾಗದೆ ಜಲಸಮಾಧಿಯಾಗಿದ್ದಾರೆ. ಎಂಬಂಡಕ ಪಟ್ಟಣದ ಬಳಿ ಮೋಟಾರು ಚಾಲಿತ ಮರದ ದೋಣಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಲವನ್ನು ರಕ್ಷಿಸಿದೆ.
ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ
ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಶೂಟೌಟ್ ನಡೆದ್ದಾರೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಮಧ್ಯರಾತ್ರಿ ರಿಕ್ಕಿ ರೈ ತೆರಳುತ್ತಿದ್ದ ಕಾರಿನ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದ್ದು, ಈ ಘಟನೆಯಲ್ಲಿ ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಗುಲಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿದೇಶದಲ್ಲಿದ್ದ ರಿಕ್ಕಿ…
ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯ ಮಳೆಯಿಂದಾಗಿ ವಿಳಂಬವಾಯಿತು. ತಡವಾಗಿ ಆರಂಭವಾದ ಪಂದ್ಯವನ್ನು 14 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದು ಕೊಂಡಿತು. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಓವರುಗಳಲ್ಲಿ 9 ವಿಕೆಟ್ಗೆ 95 ರನ್ ಗಳಿಸಿತು. 26 ಎಸೆತಗಳಲ್ಲಿ 50 ರನ್ ಗಳಿಸಿದ ಡೇವಿಡ್ ಅರ್ಧಶತಕ ಬಾರಿಸಿ ಆರ್ಸಿಬಿ ತಂಡವನ್ನು 95 ರನ್ ಮೊತ್ತಕ್ಕೆ ಕೊಂಡೊಯ್ದರು. 96 ರನ್ ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 13 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಭಾರಿಸಿತು.…
‘ಜಾತ್’ ಸಿನಿಮಾ ವಿವಾದ: ನಟ ಸನ್ನಿ ಡಿಯೋಲ್ ಸೇರಿ ಹಲವರ ವಿರುದ್ಧ ಎಫ್ಐಆರ್
ಜಲಂಧರ್: ಇತ್ತೀಚೆಗೆ ಬಿಡುಗಡೆಯಾದ ಸನ್ನಿ ಡಿಯೋಲ್ ನಟನೆಯ ಬಾಲಿವುಡ್ ಚಿತ್ರ ‘ಜಾತ್’ ವಿವಾದಕ್ಕೆ ಕಾರಣವಾಗಿದ್ದು, ಜಲಂಧರ್ನ ಸದರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ನಲ್ಲಿ ಸನ್ನಿ, ರಣದೀಪ್ ಹೂಡಾ, ವಿನೀತ್ ಕುಮಾರ್ ಸಿಂಗ್, ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ನಿರ್ಮಾಪಕ ನವೀನ್ ಮಲಿನೇನಿ ಅವರ ಹೆಸರುಗಳಿವೆ ಎನ್ನಲಾಗಿದೆ. ಚಿತ್ರದ ಕೆಲವು ದೃಶ್ಯಗಳ ಚಿತ್ರಣವು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದು ಅಧಿಕಾರಿಗಳ ಬಲವಾದ ಪ್ರತಿಕ್ರಿಯೆಗೆ ಕಾರಣವಾಗಿದೆ. ಚಿತ್ರದಲ್ಲಿ ಲಾರ್ಡ್ ಜೀಸಸ್ ಕ್ರೈಸ್ಟ್ ಒಳಗೊಂಡ ದೃಶ್ಯದೊಂದಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಜಲಂಧರ್ನ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಡಿಸಿಪಿ ಪ್ರಧಾನ ಕಚೇರಿಯ ಸುಖ್ವಿಂದರ್ ಸಿಂಗ್ ಅವರು ಪ್ರಕರಣದ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಜಲಂಧರ್ನ ಫೋಲ್ರಿವಾಲ್ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಸದಸ್ಯ ಗೋಲ್ಗೋಥಾ ಗೋಲ್ಡ್ ದೂರು ದಾಖಲಿಸಿದ್ದಾರೆ.…
ಮೇ 1 ರಿಂದ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲ್ಲ; ಕೇಂದ್ರದ ಸ್ಪಷ್ಟನೆ
ನವದೆಹಲಿ: ಮೇ 1 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಬದಲಾವಣೆಯಾಗಲಿದೆ ಎಂಬ ಮಾಧ್ಯಮಗಳ ವರದಿ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸ್ಪಷ್ಟನೆ ನೀಡಿದೆ. ಮೇ 1, 2025 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ಅನ್ನು ಜಾರಿಗೆ ತರುವ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಥವಾ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಚಿವಾಲಯ ತಿಳಿಸಿದೆ. ಟೋಲ್ ಪ್ಲಾಜಾಗಳ ಮೂಲಕ ವಾಹನಗಳ ಸುಗಮ, ತಡೆರಹಿತ ಚಲನೆಯನ್ನು ಸಕ್ರಿಯಗೊಳಿಸಲು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ‘ANPR-FASTag-ಆಧಾರಿತ ತಡೆ-ಕಡಿಮೆ ಟೋಲಿಂಗ್ ವ್ಯವಸ್ಥೆ’ಯನ್ನು ಆಯ್ದ ಟೋಲ್ ಪ್ಲಾಜಾಗಳಲ್ಲಿ ಜಾರಿಗೆ ತರಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಈ ಮುಂದುವರಿದ ಟೋಲಿಂಗ್ ವ್ಯವಸ್ಥೆಯು,…
ದೀರ್ಘಕಾಲದ ನೋವಿನಿಂತ ‘ಖಿನ್ನತೆ’ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು..!
ನವದೆಹಲಿ: ದೀರ್ಘಕಾಲದ ನೋವಿನಿಂದ ಬಳಲುತ್ತಿರುವ ಜನರು – ಅಥವಾ ಕನಿಷ್ಠ ಮೂರು ತಿಂಗಳವರೆಗೆ ಇರುವ ನೋವಿನಿಂದ ಬಳಲುತ್ತಿರುವವರು – ಖಿನ್ನತೆಯನ್ನು ಅನುಭವಿಸುವ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು ಎಂದು ಅಧ್ಯಯನವೊಂದು ತಿಳಿಸಿದೆ. ವಿಶ್ವಾದ್ಯಂತ ಸುಮಾರು ಶೇಕಡಾ 30 ರಷ್ಟು ಜನರು ಕಡಿಮೆ ಬೆನ್ನು ನೋವು ಮತ್ತು ಮೈಗ್ರೇನ್ನಂತಹ ದೀರ್ಘಕಾಲದ ನೋವಿನ ಸ್ಥಿತಿಯಿಂದ ಬಳಲುತ್ತಿದ್ದಾರೆ ಮತ್ತು ಈ ರೋಗಿಗಳಲ್ಲಿ ಮೂವರಲ್ಲಿ ಒಬ್ಬರು ಸಹ ಅಸ್ತಿತ್ವದಲ್ಲಿರುವ ನೋವಿನ ಸ್ಥಿತಿಗಳನ್ನು ವರದಿ ಮಾಡುತ್ತಾರೆ. ಸೈನ್ಸ್ ಅಡ್ವಾನ್ಸಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು ದೇಹದ ಬಹು ಭಾಗಗಳಲ್ಲಿ ದೀರ್ಘಕಾಲದ ನೋವು ಒಂದೇ ಸ್ಥಳದಲ್ಲಿ ನೋವು ಅನುಭವಿಸುವುದಕ್ಕಿಂತ ಖಿನ್ನತೆಯ ಹೆಚ್ಚಿನ ಅಪಾಯಕ್ಕೆ ಸಂಬಂಧಿಸಿದೆ ಎಂದು ತೋರಿಸುತ್ತದೆ. “ನೋವು ಕೇವಲ ದೈಹಿಕವಲ್ಲ” ಎಂದು ಯೇಲ್ ಸ್ಕೂಲ್ ಆಫ್ ಮೆಡಿಸಿನ್ (YSM) ನ ರೇಡಿಯಾಲಜಿ ಮತ್ತು ಬಯೋಮೆಡಿಕಲ್ ಇಮೇಜಿಂಗ್ನ ಅಸೋಸಿಯೇಟ್ ಪ್ರೊಫೆಸರ್ ಡಸ್ಟಿನ್ ಸ್ಕೈನೋಸ್ಟ್ ಹೇಳಿದ್ದಾರೆ. “ನಮ್ಮ ಅಧ್ಯಯನವು…
ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ. ಸಿಎಂ @siddaramaiah ಅವರೆ,… pic.twitter.com/9dliDqSFNm — BJP Karnataka (@BJP4Karnataka) April 18,…
ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ
ರಾಯಚೂರು: ರಾಯಚೂರು ಜಿಲ್ಲೆಯ ಅಮರಪುರ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ 28 ವರ್ಷದ ನಾಗರಾಜ್, 38 ವರ್ಷದ ಸೋಮು, 36 ವರ್ಷದ ನಾಗಭೂಷಣ್ ಮತ್ತು 38 ವರ್ಷದ ಮುರಳಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಮೃತರು ಸರಕು ವಾಹನದಲ್ಲಿ ಕುರಿ ಜಾತ್ರೆಗೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಕಡೆಗೆ ಪ್ರಯಾಣಿಸುತ್ತಿದ್ದರು. ಅತಿ ವೇಗದ ಚಾಲನೆಯಿಂದಾಗಿ, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಪ್ಯಾರಪೆಟ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮವಾಗಿ, ಸರಕು ವಾಹನದ ಮುಂಭಾಗದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಾಲಕ ಆನಂದ್ ಗಂಭೀರ ಗಾಯಗೊಂಡಿದ್ದು, ಅವರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗಾಯಾಳು ಶಹಾಪುರ ಪಟ್ಟಣದ ಜಾತ್ರೆಯಿಂದ ಕುರಿಗಳನ್ನು ಖರೀದಿಸಲು ಹೋಗುತ್ತಿದ್ದೆವು ಎಂದು ಪೊಲೀಸರಿಗೆ…
ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ, ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸುವಂತೆ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಈ ಘಟನೆ ತಮ್ಮ ಜಿಲ್ಲೆಯಲ್ಲಿ ನಡೆದಿರುವುದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.
