NIT ರೂರ್ಕೆಲಾದ ಹೊಸ ಬಯೋಸೆನ್ಸರ್: ಸ್ತನ ಕ್ಯಾನ್ಸರ್ ಸುಳಿವು ಸುಲಭ

ರೂರ್ಕೆಲಾ: ಸಂಕೀರ್ಣ ಅಥವಾ ದುಬಾರಿ ಪ್ರಯೋಗಾಲಯ ಕಾರ್ಯವಿಧಾನಗಳ ಅಗತ್ಯವಿಲ್ಲದೆ ಸ್ತನ ಕ್ಯಾನ್ಸರ್ ಕೋಶಗಳನ್ನು ಗುರುತಿಸಬಲ್ಲ ಒಂದು ನವೀನ ಅರೆವಾಹಕ ಸಾಧನ ಆಧಾರಿತ ಬಯೋಸೆನ್ಸರ್ ಅನ್ನು ರೂರ್ಕೆಲಾದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (NIT) ಸಂಶೋಧಕರು ವಿನ್ಯಾಸಗೊಳಿಸಿದ್ದಾರೆ. ‘TFET’ (ಸುರಂಗ ಕ್ಷೇತ್ರ ಪರಿಣಾಮ ಟ್ರಾನ್ಸಿಸ್ಟರ್) ಸಾಧನವು TCAD (ತಂತ್ರಜ್ಞಾನ ಕಂಪ್ಯೂಟರ್-ಸಹಾಯದ ವಿನ್ಯಾಸ) ಸಿಮ್ಯುಲೇಶನ್ ಫಲಿತಾಂಶಗಳನ್ನು ಆಧರಿಸಿದೆ, ಇದು ಸ್ತನ ಕ್ಯಾನ್ಸರ್ ಕೋಶಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡುತ್ತದೆ. FET ಗಳನ್ನು ಸಾಮಾನ್ಯವಾಗಿ ಎಲೆಕ್ಟ್ರಾನಿಕ್ಸ್‌ನಲ್ಲಿ ಬಳಸಲಾಗುತ್ತದೆ, ಆದರೆ ಇಲ್ಲಿ ಅವುಗಳನ್ನು ಜೈವಿಕ ವಸ್ತುಗಳ ಸೂಕ್ಷ್ಮ ಪತ್ತೆಕಾರಕವಾಗಿ ಕಾರ್ಯನಿರ್ವಹಿಸಲು ಅಳವಡಿಸಲಾಗಿದೆ. ಅನೇಕ ಸಾಂಪ್ರದಾಯಿಕ ಪರೀಕ್ಷೆಗಳಿಗಿಂತ ಭಿನ್ನವಾಗಿ, ಈ ಬಯೋಸೆನ್ಸರ್ ಕೆಲಸ ಮಾಡಲು ಯಾವುದೇ ಹೆಚ್ಚುವರಿ ರಾಸಾಯನಿಕಗಳು ಅಥವಾ ಲೇಬಲ್‌ಗಳ ಅಗತ್ಯವಿಲ್ಲ. ಇದು ಅವುಗಳನ್ನು ಪತ್ತೆಹಚ್ಚಲು ಕ್ಯಾನ್ಸರ್ ಕೋಶಗಳ ಭೌತಿಕ ಗುಣಲಕ್ಷಣಗಳನ್ನು ಬಳಸುತ್ತದೆ. ಹೆಚ್ಚು ನೀರನ್ನು ಹಿಡಿದಿಟ್ಟುಕೊಳ್ಳುವ ಮತ್ತು ಆರೋಗ್ಯಕರ ಅಂಗಾಂಶಗಳಿಗಿಂತ ದಟ್ಟವಾಗಿರುವ ಕ್ಯಾನ್ಸರ್ ಸ್ತನ…

ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಮೊದಲ ನಿರ್ದೇಶಕ ರಾಘವೇಂದ್ರ ರಾವ್ ಗಾರು ಅವರ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯನ್ನು ನೀಡಿ ಅಚ್ಚರಿಗೊಳಿಸಿದರು. ‘ಪುಷ್ಪ’ ನಟ ತಮ್ಮ ಕಚೇರಿಯ ಪ್ರವೇಶದ್ವಾರದಲ್ಲಿ ಚಲನಚಿತ್ರ ನಿರ್ಮಾಪಕರ ಛಾಯಾಚಿತ್ರವನ್ನು ‘ನನ್ನ ಮೊದಲ ನಿರ್ದೇಶಕ’ ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು. ಅಷ್ಟೇ ಅಲ್ಲ, ರಾಘವೇಂದ್ರ ರಾವ್ ಗಾರು ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಾಗ, ಎಎ ವರ್ಷಗಳಲ್ಲಿ ಚಲನಚಿತ್ರ ನಿರ್ಮಾಪಕರೊಂದಿಗೆ ತೆರೆಮರೆಯಲ್ಲಿ ಒಂದೆರಡು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. “ನನ್ನ ಗುರು ಜಿ ರಾಘವೇಂದ್ರ ರಾವ್ ಗಾರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು! ನನ್ನ ಮೊದಲ ನಿರ್ದೇಶಕ. ನನ್ನನ್ನು ಚಲನಚಿತ್ರಗಳಿಗೆ ಪರಿಚಯಿಸಿದ ವ್ಯಕ್ತಿ. ಶಾಶ್ವತವಾಗಿ ಧನ್ಯವಾದಗಳು,” ಹುಟ್ಟುಹಬ್ಬದ ಶುಭಾಶಯವಾಗಿ ಬರೆದುಕೊಂಡಿದ್ದರು. ರಾಘವೇಂದ್ರ ರಾವ್ ಗಾರು 2003 ರಲ್ಲಿ ತಮ್ಮ ಚೊಚ್ಚಲ ಚಿತ್ರ “ಗಂಗೋತ್ರಿ”ಯಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ಕೆಲಸ ಮಾಡಿದರು. ಈ ಚಿತ್ರವು ಇಬ್ಬರು ಬಾಲ್ಯದ ಸ್ನೇಹಿತರು ಪ್ರೇಮಿಗಳಾಗಿ ಬದಲಾದ…

‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

ಬೆಂಗಳೂರು: ‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿವಿಮಾತು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಯಾವುದೇ ಪಕ್ಷವಾದರೂ ಎಲ್ಲೆಯನ್ನು ಮೀರಿ ಭಾಷೆಯನ್ನು ಬಳಸಿ ಟೀಕೆ ಮಾಡುವ ಸಂಪ್ರದಾಯ ನಮ್ಮ‌ ರಾಜ್ಯದಲ್ಲಿ ಇಲ್ಲ. ಆದರೆ ಕಳೆದ ಐದಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಟೀಕೆ ಮಾಡಿದರೆ ರಾತ್ರೋರಾತ್ರಿ ನಾಯಕರಾಗಬಹುದು ಎಂದು ತರಬೇತಿ ಪಡೆಯುತ್ತಿದ್ದಾರೆ. ಈ ತರಬೇತಿಯನ್ನು ಕೇಶವ ಕೃಪಾ, ಬೈಠಕ್ ಹೀಗೆ ಎಲ್ಲಿ ನೀಡಲಾಗುತ್ತಿದೆ ಎಂದು ಸಂಘ- ಪರಿವಾರದವರೇ ಹೇಳಬೇಕು ಎಂದು ಪ್ರತಿಪಾದಿಸಿದರು. ಸದಾ ವತ್ಸಲೇ ಮಾತೃಭೂಮಿ ಎಂದು ರಾಜಕೀಯ ಮಾಡುತ್ತಿದ್ದವರು ಈಗ ಸದಾ ಬೈಯುವುದೇ ರಾಜಕೀಯ ಎಂದುಕೊಂಡಿದ್ದಾರೆ. ಇದಲ್ಲೆ ಛಲವಾದಿ ನಾರಾಯಣಸ್ವಾಮಿ ಅವರೇ ಉದಾಹರಣೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ…

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಶ್ರೀ ಸಾಧು ಕೋಕಿಲ ಹಾಗೂ ಶ್ರೀ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ…

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತೆಲುಗು ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಎರಡು ವರ್ಷ 2 ದಿನಕ್ಕೆ ತಮ್ಮನ್ನಾ ಜೊತೆ ಬರೋಬ್ಬರಿ 6.20 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡ ನಟ ನಟಿಯರನ್ನೇ ಆಯ್ಕೆ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ. ಇದೇ ವೇಳೆ, ತಮ್ಮನ್ನಾ ಆಯ್ಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವರನ್ನೇ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಪ್ರಶ್ನಿಸಿರುವ ನಾರಾಯಣ ಗೌಡ, ಮೈಸೂರು ಸ್ಯಾಂಡಲ್ ಸೋಪ್…

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ. ಕರ್ನಾಟಕದ ಭ್ರಷ್ಟ @INCKarnataka ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ!! ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ, ಡಾಂಬರ್‌ ರಸ್ತೆಯನ್ನು ಸಾರ್ವಜನಿಕರು ಮಡಚುತ್ತಿದ್ದಾರೆ. ಸಿದ್ದರಾಮಯ್ಯ ಅವರೆ, ನಿಮ್ಮ ಸರ್ಕಾರ 80 ಪರ್ಸೆಂಟ್‌ ಕಮಿಷನ್… pic.twitter.com/wLj9TJFuWB — BJP Karnataka (@BJP4Karnataka) May 21, 2025 ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ ಎಂದು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ…

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್ರಭುತ್ವವೂ ಇಲ್ಲ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದ ಸಂವಿಧಾನಕ್ಕೆ ಗೌರವವೂ…

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

ಬೆಂಗಳೂರು: ‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ‘ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ ಎಂದವರು ಬಿಜೆಪಿ ನಾಯಕರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ, PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ‘ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದಾರೆ. ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ…

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.