ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಇಂದು ಪೊಲೀಸ್ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿಯಲ್ಲಿ ಪೊಲೀಸ್ ಮಾಹಿತಿದಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

ವಿಜಯಪುರ: ವಿಜಯಪುರ ಜಿಲ್ಲೆ ಮನಗೂಳಿ ಬಳಿ ಬಸ್ಸು-ಕಾರು- ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತ ಸಂಭವಿಸಿದೆ. ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಗೂ ಅಪ್ಪಳಿಸಿದೆ. ಈ ಅಪಘಾತದಲ್ಲಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತೆಲಂಗಾಣ ಮೂಲದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಣಿಕಂಠನ್, ಪತ್ನಿ ಪವಿತ್ರ, ಪುತ್ರ ಅಭಿರಾಮ್, ಪುತ್ರಿ ಜ್ಯೋತ್ಸ್ನಾ, ವಿಜಯಪುರ ಮೂಲದ ಚಾಲಕ ವಿಕಾಸ್ ಮಕಾನಿ ಮತ್ತು ಬಸ್ ಚಾಲಕ ಬಸವರಾಜ ರಾಠೋರ್ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಶ್ರೀ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಉಪಸ್ಥಿತಿಯಲ್ಲಿ ಈ ಕೈಂಕರ್ಯ ನೆರವೇರಿದೆ. ಶಿಲಾನ್ಯಾಸ ಕೈಂಕರ್ಯದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಪೂಜಾರಿ, ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಹರಿಕೃಷ್ಣ ಬಂಟ್ವಾಳ್ ಹಾಗೂ ಅನೇಕ ಧಾರ್ಮಿಕ ಪ್ರಮುಖರು ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮರಾಜ್ ಆರ್.ಪೂಜಾರಿ, ಧರ್ಮದ ನಡೆಯ ಮೂಲಕವಷ್ಟೇ ಧರ್ಮ ಉಳಿಯಬಹುದು. ಧರ್ಮ ಉಳಿದಲ್ಲಿ ಮಾತ್ರ ನಾವು ಉಳಿಯುವೆವು ಎಂದರು. ಜಾತಿಯ ವೈಷಮ್ಯ ಬಿಟ್ಟು ಎಲ್ಲರೂ…

ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ.…

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು…

‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

ಚೆನ್ನೈ: ‘ಪ್ರೇಮ ದೇಶಪು ಯುವರಾಣಿ’ ಮತ್ತು ‘ಲೀಗಲಿ ವೀರ್’ ನಂತಹ ತೆಲುಗು ಚಿತ್ರಗಳಲ್ಲಿ ನಟಿಸಿ ಹೆಸರುವಾಸಿಯಾದ ನಟಿ ಪ್ರಿಯಾಂಕಾ ರೇವ್ರಿ, ಈಗ ನಟ ಆರ್ಯವರ್ಧನ್ ಅವರೊಂದಿಗೆ ‘ಯಾರಿಗೆ ಬೇಕು ಈ ಲೋಕ’ ಚಿತ್ರದಲ್ಲಿ ಕನ್ನಡಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ, ಚಿತ್ರದ ನಿರ್ಮಾಪಕರು ಟೀಸರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಮತ್ತು ಚಲನಚಿತ್ರ ಪ್ರೇಮಿಗಳ ಸಂತೋಷಕ್ಕೆ ಕಾರಣವಾಗಿದೆ. ಚಿತ್ರದ ಟೀಸರ್ ಬಿಡುಗಡೆಯೊಂದಿಗೆ, ಪ್ರಿಯಾಂಕಾ ರೇವ್ರಿ ಚಿತ್ರ ಮತ್ತು ಅದರಲ್ಲಿನ ಅವರ ಪಾತ್ರದ ಬಗ್ಗೆ ಮಾತನಾಡಿದರು. ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, ‘ಇದು ಒಂದು ಉತ್ತಮ ಅನುಭವವಾಗಿತ್ತು. ನನಗೆ ಉಪಭಾಷೆಗಳು ತುಂಬಾ ಇಷ್ಟವಾಯಿತು, ವಿಶೇಷವಾಗಿ ಅವು ಅನೇಕ ಸಂಸ್ಕೃತ ಪದಗಳನ್ನು ಒಳಗೊಂಡಿರುವುದರಿಂದ. ಸಂಸ್ಕೃತಿ ಮತ್ತು ಭಾಷೆ ನನಗೆ ಹೊಸದಾಗಿತ್ತು, ಆದರೆ ಅದು ಅದನ್ನು ಇನ್ನಷ್ಟು ರೋಮಾಂಚನಗೊಳಿಸಿತು. ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಮತ್ತು ಅದು ಒಂದು…

ಒಂದೆಡೆ ‘ಸಾಧನಾ ಸಮಾವೇಶ’ಕ್ಕೆ ತಯಾರಿ.. ಇನ್ನೊಂದೆಡೆ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ‘ಸಾಧನಾ ಸಮಾವೇಶ’ಕ್ಕೆ ತಯಾರಿ ನಡೆದಿರುವಾಗಲೇ ಪ್ರತಿಪಕ್ಷ ಬಿಜೆಪಿ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸೋಮವಾರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ವಕ್ತಾರ ಪ್ರಕಾಶ್ ಶೇಷಾರಾಘವಾಚಾರ್, ಎಸ್‌ಸಿ ಮೋರ್ಚಾ ಕಚೇರಿ ಕಾರ್ಯದರ್ಶಿ ಜಿ. ಪ್ರಶಾಂತ್ ಮತ್ತು ಪಕ್ಷದ ನಾಯಕ ಸಿ. ಮುನಿಕೃಷ್ಣ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ನಾಯಕ ಅಶ್ವಥ್ ನಾರಾಯಣ್, ಕಳೆದ ಎರಡು ವರ್ಷಗಳ ಸಾಧನೆಗಳನ್ನು ಪ್ರದರ್ಶಿಸಲು ಕಾಂಗ್ರೆಸ್ ಸರ್ಕಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ “ಸಾಧನೆ ಚಿತ್ರ”ದ ಟ್ರೇಲರ್ ಈಗಾಗಲೇ ಬೆಂಗಳೂರಿನಲ್ಲಿ ಭಾರೀ ಮಳೆಯ ರೂಪದಲ್ಲಿ ಬಿಡುಗಡೆಯಾಗಿದೆ ಮತ್ತು ಪೂರ್ಣ…

ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ನಾಗರಿಕರು ಭಯಭೀತರಾಗಬೇಡಿ ಎಂದು ಮನವಿ ಮಾಡಿದೆ, ವಿಶೇಷವಾಗಿ ಗಂಭೀರ ಕಾಯಿಲೆಗಳ ಹಿನ್ನೆಲೆಯಲ್ಲಿ. ಸಿಂಧುದುರ್ಗ ಮತ್ತು ಡೊಂಬಿವ್ಲಿಯ ಇಬ್ಬರು ಮಹಿಳೆಯರು ಭಾನುವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬಹು ಗಂಭೀರ ಕಾಯಿಲೆಗಳಿಂದ (ಹೈಪೋಕಾಲ್ಸೆಮಿಕ್ ರೋಗಗ್ರಸ್ತವಾಗುವಿಕೆಗಳೊಂದಿಗೆ ನೆಫ್ರೋಟಿಕ್ ಸಿಂಡ್ರೋಮ್, ಕ್ಯಾನ್ಸರ್) ಸಾವನ್ನಪ್ಪಿದ ನಂತರ ಈ ಸಲಹೆಯನ್ನು ನೀಡಲಾಗಿದೆ. ಅವರು ಕೋವಿಡ್-19 ಕಾರಣದಿಂದಾಗಿ ಸಾವನ್ನಪ್ಪಿಲ್ಲ ಎಂದು ಬಿಎಂಸಿ ಸ್ಪಷ್ಟಪಡಿಸಿದೆ. “ಕೋವಿಡ್-19 ಅನ್ನು ಈಗ ಸ್ಥಳೀಯ ಮತ್ತು ನಡೆಯುತ್ತಿರುವ ಆರೋಗ್ಯ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಸಮುದಾಯ ಮಟ್ಟದಲ್ಲಿ ವೈರಸ್ ಸ್ಥಾಪಿತವಾಗಿರುವುದರಿಂದ, ಕೋವಿಡ್-19 ಪ್ರಕರಣಗಳು ಈಗ ವಿರಳವಾಗಿವೆ ಮತ್ತು ಬಹಳ ಅಪರೂಪ” ಎಂದು ಬಿಎಂಸಿ ಹೇಳಿದೆ. ಇತ್ತೀಚಿನ ದಿನಗಳಲ್ಲಿ, ಸಿಂಗಾಪುರ, ಹಾಂಗ್ ಕಾಂಗ್, ಪೂರ್ವ ಏಷ್ಯಾ ಮತ್ತು ಇತರ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅದು ಹೇಳಿದೆ. ಕೋವಿಡ್-19 ಹರಡುವಿಕೆಯನ್ನು ನಿಯಂತ್ರಣದಲ್ಲಿಡಲು…

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. They can’t clear waterlogged roads or fallen trees after a single downpour, but they want to dig tunnels costing ₹48,000 crore to “solve” Bengaluru’s traffic? Maybe the tunnel’s real purpose is to serve as a water reservoir. pic.twitter.com/yNQRHgWeF6 — P C Mohan (@PCMohanMP) May 19, 2025 ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ…

ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ ಸುರಿದ ಭಾರೀ ಮಳೆಗೆ ಹಲವು ಜೀವಗಳು ಬಲಿಯಾಗಿವೆ. Just one normal rain and our Bengaluru turns into a swimming pool but our Karnataka government is more interested in tunnel roads, dismantling BBMP, and Tumkur Metro extensions instead of fixing these issues. What a pathetic/lazy government we have 😒🙏 pic.twitter.com/izMqc2DhhU — Virat👑Rocky✨️ (@Virat_Rocky18) May 18, 2025 ಸೋಮವಾರ ಬಿಟಿಎಂ ಲೇಔಟ್ ಸಮೀಪದ ಎನ್.ಎಸ್.ಪಾಳ್ಯದಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​’ನಲ್ಲಿ ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್…