ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 17ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶರತ್ತುಗಳಿಗೆ ಒಳಪಟ್ಟು 2025–26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ. ಆದೇಶದಂತೆ, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳ ವರ್ಗಾವಣೆ ನಿರ್ಧಾರವನ್ನು ಸಂಬಂಧಿತ ಇಲಾಖಾ ಸಚಿವರಿಗೆ, ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆ ಆಯ್ಕೆ ಅಧಿಕಾರವನ್ನು ನೇಮಕಾತಿ ಪ್ರಾಧಿಕಾರಗಳಿಗೆ ನೀಡಲಾಗಿರುವ ಅವಧಿಯನ್ನೂ ಜೂನ್ 30ರವರೆಗೆ ವಿಸ್ತರಿಸಲಾಗಿದೆ.
Day: June 18, 2025
ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ
ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 224 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 1,257 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ. 💔🇮🇷 Israel bombed Iran’s top news station HQ yesterday. 🚀🇮🇱 Iran responded by bombing the script-writing HQ of all Western mainstream media outlets: Mossad HQ & IDF Unit 8200.#IranIsrael #IranJustDoIt #Israel #IsraelIranConflict #IsraelTerroristState pic.twitter.com/56VzeXNrYi — Rebel_Warriors (@Rebel_Warriors) June 17, 2025 ಈ ಘಟನೆಗೆ ಸಂಬಂಧಿಸಿ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಸ್ಪಂದನೆ ನೀಡಿದ್ದು, ಇಸ್ರೇಲ್ ಈ ದಾಳಿಯ ಮೂಲಕ ಇರಾನ್ನ…
‘ನೀಟ್ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು. ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ…
ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ
ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರನ್ನು ತಮ್ಮದೇ ಶೈಲಿಯಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ, ಅಲ್ಲಿ ನಿತ್ಯವೂ ಜನ ಸಾಯುತ್ತಿದ್ದರೆ, ಬಿಜೆಪಿ ಆಡಳಿತವಿರುವ… pic.twitter.com/nDI8QIipFZ — Siddaramaiah (@siddaramaiah) June 17, 2025 ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು…