ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ. ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಆರೋಪವನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ನಾಯಕರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ನಡುವೆ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಮನೆ ಹಂಚಿಕೆ ಮಾಡಲು ಹಣ ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವುದಾದರೂ ದಾಖಲೆ ಇದೆಯೇ? ಹಣಕ್ಕೆ ಬೇಡಿಕೆ ಇಟ್ಟವರು ಯಾರು ಎಂದು ಬಿ.ಆರ್. ಪಾಟೀಲ್ ನನಗೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಲಂಚ ಪಡೆದವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ,…