RSSಗೆ ನಿಷೇಧ? ಪ್ರಿಯಾಂಕ್ ಪ್ರತಿಪಾದನೆಗೆ ವಿಜಯೇಂದ್ರ ಪ್ರಹಾರ

ಬೆಂಗಳೂರು: ‘ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?’ ಎಂದು ಆರೆಸ್ಸೆಸ್ ಬ್ಯಾನ್ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ ಮಹಾನ್ ದೇಶಭಕ್ತರ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪ್ರಖರ ಸತ್ಯವನ್ನು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹತಾಶೆಯ ಮನಸ್ಸಿನ ಬಾಗಿಲ ಕಿಂಡಿಯಿಂದ ಇಣುಕಿ ನೋಡಲಿ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಾನ್ ವೃಕ್ಷ, ಈ ವೃಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ. RSSನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿ ದಿಕ್ಕು ಕಾಣದಂತೆ ಧೂಳಿಪಟವಾಗಿವೆ ಎಂದು ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಗೆ ನೆನಪಿಸಿದರು. ಈ ಸಾಲಿಗೆ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದಲೇ…

ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

ಹೈದರಾಬಾದ್‌: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕಂಪನಿಯ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸ್ಥಳದಲ್ಲೇ ಸಾವನ್ನಪಿದರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದ ಹಿನ್ನೆಲೆ ಇದಾಗಿದ್ದು, ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಪಡೆ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು. ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.