ಮೈಸೂರು: ಅಕ್ಟೋಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು. ಎಸ್.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ…
Day: July 28, 2025
ಡ್ರಗ್ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?
ಮೈಸೂರು: ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು. ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ. ಇದೇ ಸಿದ್ದರಾಮಯ್ಯನವರ ಕೊಡುಗೆ ಎಂದರು.
ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ…