ಸ್ಮಾರ್ಟ್ ಮೀಟರ್ ಹಗರಣ: ಇಂಧನ ಸಚಿವರ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣದ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ವಜಾಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, ಸ್ಮಾರ್ಟ್ ಮೀಟರ್ ಹಗರಣದಲ್ಲಿ 15,000 ಕೋಟಿ ರೂ.ಗಳಿದ್ದು, ಅದು ಸಣ್ಣ ಮೊತ್ತವಲ್ಲ ಎಂದು ಆರೋಪಿಸಿದರು. “ಸ್ಮಾರ್ಟ್ ಮೀಟರ್ ಹಗರಣದ ಬಗ್ಗೆ ಪಿಸಿಆರ್ ದಾಖಲಾಗಿರುವುದರಿಂದ ಸಚಿವ ಜಾರ್ಜ್ ರಾಜೀನಾಮೆ ನೀಡುತ್ತೀರಾ? ನೀವು (ಜಾರ್ಜ್) ಕಾನೂನನ್ನು ಗೌರವಿಸುವುದಾಗಿ ಹೇಳಿಕೊಂಡರೆ, ತಕ್ಷಣ ರಾಜೀನಾಮೆ ನೀಡಿ,” ಎಂದು ಅವರು ಹೇಳಿದರು. ವಿಧಾನಸಭೆಯಲ್ಲಿ ಈ ವಿಷಯವನ್ನು ಹೆಚ್ಚು ಬಲವಾಗಿ ಪ್ರಸ್ತಾಪಿಸುವ ಬಗ್ಗೆ ಬಿಜೆಪಿ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತದೆ ಎಂದು ಅವರು ತಿಳಿಸಿದರು. “ಈ ಭ್ರಷ್ಟಾಚಾರ ಹಗರಣವು ಸಿದ್ದರಾಮಯ್ಯ ಅವರ ಇಮೇಜ್‌ಗೆ ಮತ್ತಷ್ಟು ಹಾನಿ ಮಾಡಿದೆ ಅಥವಾ ಕಳಂಕ ತಂದಿದೆ. ಇದು ಅಪಾರ ಪ್ರಮಾಣದ ಹಣವನ್ನು ಒಳಗೊಂಡಿದ್ದರೂ,…

ವರ್ಗಾವಣೆಗಾಗಿ ಅಧಿಕಾರಿಗಳ ನಕಲಿ ಸಹಿ; KSRTC ನೌಕರ ಅಮಾನತು

ಬೆಂಗಳೂರು: ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಬ್ಬರನ್ನು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಆಡಳಿತ ಮಂಡಳಿ ಅಮಾನತು ಮಾಡಿದೆ. ನಿಗಮದ‌ ಸಿಬ್ಬಂದಿಯೊಬ್ಬರು ನಕಲಿ ಸಹಿ‌ ಮಾಡಿ ವಂಚನೆ ಮಾಡಿರುವ ವಿಷಯವು ಸಾರಿಗೆ ಹಾಗೂ ಮುಜರಾಯಿ ಸಚಿವರ ಗಮನಕ್ಕೆ ಬಂದ ಕೂಡಲೇ ವಿಚಾರಣೆ ನಡೆಸಲು ಸೂಚಿಸಿ ಸೂಕ್ತ ಶಿಸ್ತಿನ ಕ್ರಮ ತೆಗದುಕೊಳ್ಳಲು ನಿರ್ದೇಶಿಸಿದ್ದು, ಅದರಂತೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಯಲ್ಲಿ ಇಂದು ಸದರಿಯವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. KSRTC ಕೇಂದ್ರ ಕಚೇರಿಯ ಲೆಕ್ಕಪತ್ರ ವಿಭಾಗದ ಕಿ-ಸ-ಕಂ-ಡಾ-ಎ-ಆಪರೇಟರ್ ರಿಚರ್ಡ್ ಜೆಎಂಬವರು, ಸಂಸ್ಥೆಯ ಸಿಬ್ಬಂದಿಯಾದ ನಾಗರಾಜಪ್ಪ, ಸಹಾಯಕ ಕುಶಲಕರ್ಮಿ, ಶಿವಮೊಗ್ಗ ಘಟಕ ರವರನ್ನು ಅವರ ಕೋರಿಕೆಯಂತೆ ದಾವಣಗೆರೆ ವಿಭಾಗಕ್ಕೆ ವರ್ಗಾವಣೆ ಮಾಡಿಸುವುದಾಗಿ ನಂಬಿಸಿ ಅವರಿಂದ, ವಜಾಗೊಂಡ ಚಾಲಕರಾದ ನಾಗರಾಜ ಎನ್.ಎ ರವರನ್ನು ಪುನರ್ ನೇಮಕ ಮಾಡಿಸುವುದಾಗಿ ಮತ್ತು ಅವರ ಸ್ನೇಹಿತ ಕುಂದಾಪುರ…

ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ; ಬೆಳ್ಳಿ ಪ್ರತಿ ಕೆಜಿಗೆ ದಾಖಲೆಯ ₹1.15 ಲಕ್ಷ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ವಿದ್ಯಮಾನಗಳ ನಡುವೆಯೂ ದೇಶೀಯವಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಬುಧವಾರ ಹೊಸ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿವೆ. 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1 ಲಕ್ಷ ರೂಪಾಯಿ ಗಡಿಯನ್ನು ದಾಟಿದೆ. ಬೆಳ್ಳಿ ದರವೂ ಪ್ರತಿ ಕೆಜಿಗೆ ದಾಖಲೆಯ ₹1.15 ಲಕ್ಷ ದಾಟಿದೆ. ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ (IBJA) ಬಿಡುಗಡೆ ಮಾಡಿರುವ ದರಪಟ್ಟಿಯ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ ಮಂಗಳವಾರದ ₹99,508ರಿಂದ ₹1,00,533ಕ್ಕೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರವೂ ₹91,149ರಿಂದ ₹92,088ಕ್ಕೆ ಏರಿಕೆಯಾಗಿದ್ದು, 18 ಕ್ಯಾರೆಟ್ ಚಿನ್ನದ ದರ ₹74,631ರಿಂದ ₹75,400ಕ್ಕೆ ಜಿಗಿದಿದೆ. ಒಂದೇ ದಿನದಲ್ಲಿ ಬೆಳ್ಳಿ ದರ ₹1,357ರಷ್ಟು ಏರಿಕೆಯಾಗಿದ್ದು, ಮಂಗಳವಾರದ ₹1,14,493ರಿಂದ ₹1,15,850ಕ್ಕೆ ತಲುಪಿದೆ. ಈ ವರ್ಷ ಜನವರಿಯಿಂದ ಈವರೆಗೂ ಬೆಳ್ಳಿ ದರ ಶೇ.34ರಷ್ಟು ಏರಿಕೆಯಾಗಿದೆ. ಜನವರಿಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ₹86,055…

ಸೆ.22ರಿಂದ ರಾಜ್ಯದಲ್ಲಿ ಹೊಸ ಜಾತಿ ಜನಗಣತಿ; 15 ದಿನಗಳಲ್ಲಿ ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ನೂತನ ಜಾತಿ ಜನಗಣತಿ ಕಾರ್ಯವನ್ನು ಕೈಗೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರೊಳಗೆ ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. “ಸಮೀಕ್ಷೆಯು ವೈಜ್ಞಾನಿಕ, ಪಾರದರ್ಶಕವಾಗಿರಬೇಕು. ಪ್ರಶ್ನೆಗಳ ಅಂತಿಮ ಆಯ್ಕೆಗೆ ತಜ್ಞರ ಸಮಿತಿಯ ಸಲಹೆ ಪಡೆಯಬೇಕು. ಈ ಬಾರಿ 1.65 ಲಕ್ಷ ಗಣತಿದಾರರ ಅಗತ್ಯವಿದ್ದು, ಶಿಕ್ಷಕರ ಜೊತೆಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗುವುದು,” ಎಂದು ಸಿಎಂ ಸಭೆಯಲ್ಲಿ ಸೂಚಿಸಿದರು. ಅಕ್ಟೋಬರ್ ಅಂತ್ಯದೊಳಗೆ ಸಮೀಕ್ಷೆಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆಯಿದ್ದು, ತರಬೇತಿ ಸೇರಿದಂತೆ ಎಲ್ಲ ಪೂರ್ವಸಿದ್ಧತೆಗಳನ್ನು ತಕ್ಷಣ ಆರಂಭಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ನೀಡಿದ ಪ್ರಸ್ತಾವನೆಯನ್ವಯ, ಈ ಬಾರಿ ರಾಜ್ಯದ ಎಲ್ಲ…

4 ವರ್ಷಗಳಲ್ಲಿ 1,90,333 ಕೋ.ರೂ. ಮೊತ್ತದ 237 ರೈಲ್ವೆ ಯೋಜನೆಗಳಿಗೆ ಕೇಂದ್ರ ಅಸ್ತು

ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಮತ್ತು ಪ್ರಸ್ತುತ ಹಣಕಾಸು ವರ್ಷದಲ್ಲಿ (FY26) ಇಲ್ಲಿಯವರೆಗೆ ಭಾರತೀಯ ರೈಲ್ವೆಯಾದ್ಯಂತ ಒಟ್ಟು 9,703 ಕಿ.ಮೀ ಉದ್ದದ ಒಟ್ಟು 237 ಯೋಜನೆಗಳಿಗೆ (40 ಹೊಸ ಮಾರ್ಗಗಳು, 17 ಗೇಜ್ ಪರಿವರ್ತನೆ ಮತ್ತು 180 ದ್ವಿಗುಣಗೊಳಿಸುವಿಕೆ) ಸುಮಾರು 1,90,333 ಕೋಟಿ ರೂ. ವೆಚ್ಚವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಮೂರು ವರ್ಷಗಳಲ್ಲಿ (2022-23, 2023-24, 2024-25) ಮತ್ತು ಪ್ರಸ್ತುತ ಹಣಕಾಸು ವರ್ಷ 26 ರಲ್ಲಿ, ಭಾರತೀಯ ರೈಲ್ವೆಯಾದ್ಯಂತ ಒಟ್ಟು 61,462 ಕಿ.ಮೀ ಉದ್ದದ 892 ಸಮೀಕ್ಷೆಗಳನ್ನು (267 ಹೊಸ ಮಾರ್ಗಗಳು, 11 ಗೇಜ್ ಪರಿವರ್ತನೆ ಮತ್ತು 614 ದ್ವಿಗುಣಗೊಳಿಸುವಿಕೆ) ಮಂಜೂರು ಮಾಡಲಾಗಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಲೋಕಸಭೆಗೆ ಬುಧವಾರ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 2009-2014 ರಿಂದ, ಒಟ್ಟು ಹಳಿಗಳು 7,599 ಕಿ.ಮೀ (ದಿನಕ್ಕೆ 4.2 ಕಿ.ಮೀ)…

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ನAತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್‌ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ. ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್‌ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್‌ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್‌ಗೆ ವಿಸ್ತರಿಸಲಾಗಿದೆ. ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ…

ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬುಧವಾರ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಸಚಿವರು ಪರಿಶೀಲನೆ ನಡೆಸಿದರು. ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ನಿರ್ಧರಿಸಿದರು. ಈ ಕೇಂದ್ರವು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಪೂರ್ಣ ಆರೋಗ್ಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಸಂಸ್ಥೆಗಳ ಸಮೂಹವನ್ನು ಒಳಗೊಂಡಿರುತ್ತದೆ.…

ಸಣ್ಣ ವ್ಯಾಪಾರಿಗಳಿಗೆ ನೀಡಿದ್ದ ಜಿಎಸ್‌ಟಿ ನೋಟಿಸ್ ತಕ್ಷಣ ಹಿಂಪಡೆಯಬೇಕು; ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಖಜಾನೆ ತುಂಬಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ನೀಡಿರುವುದು ಆತಂಕಕರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನಕ್ಕೆ ಬರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು. ಅದೇನೂ ತೀವ್ರವಾಗಿ ವ್ಯಾಪಾರಿಗಳಿಗೆ ನೋಟಿಸ್‌ಗಳ ರೂಪದಲ್ಲಿ ಸ್ಪಷ್ಟವಾಗುತ್ತಿದೆ” ಎಂದರು. ಸಣ್ಣ ವ್ಯಾಪಾರಿಗಳ ಮೇಲೂ ತೆರಿಗೆ ಹೊರೆ ಬೀಳುತ್ತಿದೆ ಎಂದು ದೂರಿ, ಹಾಲು, ಮೊಸರು ಮಾರಾಟ ಮಾಡುವವರಿಗೂ ನೋಟಿಸ್ ನೀಡಿರುವುದನ್ನು ಖಂಡಿಸಿದ ಅವರು, “ಮೂರು ಜಿಎಸ್‌ಟಿ ಸ್ಲ್ಯಾಬ್‌ಗಳಿದ್ದರೂ ಎಲ್ಲರಿಗೂ ಶೇಕಡಾ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಇದು ನಿರ್ದಾಕ್ಷಿಣ್ಯ ಕ್ರಮ” ಎಂದರು. ಈ ನೋಟಿಸ್‌ಗಳನ್ನು ಪರಿಶೀಲಿಸದೆಯೇ ನೀಡಲಾಗುತ್ತಿದ್ದು, ಇದೀಗ ವ್ಯಾಪಾರಿಗಳ ಮೇಲೆ ಹಣದ ಒತ್ತಡ ತಂದಿರುವುದಾಗಿ ಅವರು…

ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಬಾಕಿ ಮನ್ನಾ; ಸಿಎಂ ಘೋಷಣೆ

ಬೆಂಗಳೂರು: ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ… pic.twitter.com/Yz1fLU8FAW — CM of Karnataka (@CMofKarnataka) July 23, 2025 ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್ ಕುರಿತು ಗೊಂದಲ ಇದೆ. ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ…

ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಬೆಂಗಳೂರು: ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು. ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಉತ್ಪಾದನಾ ವ್ಯವಸ್ಥೆಗಳು (ಬಿಎಂಎಸ್) ಅನ್ನು ಜಾರಿಗೆ ತರುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಕರ್ನಾಟಕವು 272 ಸರ್ಕಾರಿ, 192 ಅನುದಾನಿತ ಮತ್ತು 853 ಖಾಸಗಿ ಐಟಿಐಗಳನ್ನು ಹೊಂದಿದ್ದರೂ, ಹೆಚ್ಚಿನ ಪ್ರಮಾಣದ ಪದವೀಧರರು ಇನ್ನೂ ಉದ್ಯೋಗ ಹುಡುಕುತ್ತಿದ್ದಾರೆ. ಇಂತಹ ಸಹಯೋಗಗಳ ಉದ್ಯೋಗ ಸಮಸ್ಯೆ ನಿವಾರಿಸಬಹುದು ಎಂದು ಡಾ. ಪಾಟೀಲ್ ಗಮನ ಸೆಳೆದರು.…