ಬೆಂಗಳೂರು: ಚಿತ್ರದುರ್ಗ ನಗರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಭಾರೀ ದಾಳಿಯಲ್ಲಿ ಅಕ್ರಮ ಆನ್ಲೈನ್–ಆಫ್ಲೈನ್ ಬೆಟ್ಟಿಂಗ್ ಜಾಲ ಬಯಲಾಗಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ರಾಜಸ್ಥಾನ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಇಡಿ ಪ್ರಕಟಣೆಯ ಪ್ರಕಾರ, ಚಿತ್ರದುರ್ಗ ಜಿಲ್ಲೆಯಲ್ಲಿ ಆರು, ಬೆಂಗಳೂರಿನಲ್ಲಿ 10, ಹುಬ್ಬಳ್ಳಿಯಲ್ಲಿ ಒಂದು, ಮುಂಬೈನಲ್ಲಿ ಎರಡು, ಜೋಧ್ಪುರದಲ್ಲಿ ಮೂರು ಹಾಗೂ ಗೋವಾದಲ್ಲಿ ಎಂಟು ಆವರಣಗಳ ಮೇಲೆ ದಾಳಿ ನಡೆದಿದೆ. ಗೋವಾದ ಐದು ಕ್ಯಾಸಿನೊಗಳು — ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊ — ಕೂಡಾ ಶೋಧಕ್ಕೆ ಒಳಪಟ್ಟಿವೆ. ಆನ್ಲೈನ್ ಸೈಟ್ಗಳ ಮೂಲಕ ಬೆಟ್ಟಿಂಗ್ ತನಿಖೆಯಲ್ಲಿ ಶಾಸಕರೇ King567, Raja567, Puppy’s003 ಮತ್ತು Rathna Gaming ಎಂಬ…
Month: August 2025
ಶಾಂತಿಪಾಲನೆಯಲ್ಲಿ ಭಾರತವೇ ಭಾರತ ಅಗ್ರೇಸರ
ನವದೆಹಲಿ: “ಶಾಂತಿ ಎಂದರೆ ಕೇವಲ ಯುದ್ಧದ ಅನುಪಸ್ಥಿತಿ ಅಲ್ಲ, ಅದು ಘನತೆ, ಸಮಾನತೆ ಮತ್ತು ಹಂಚಿಕೆಯ ಉದ್ದೇಶದ ವಿಜಯ. ಆ ವಿಜಯದಲ್ಲಿ ಮಹಿಳೆಯರು ಮುನ್ನಡೆಸಬೇಕು” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಿಸಿದರು. ನವದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ಆಗಸ್ಟ್ 18ರಿಂದ 29ರವರೆಗೆ ನಡೆದ ವಿಶ್ವಸಂಸ್ಥೆಯ ಮಹಿಳಾ ಮಿಲಿಟರಿ ಅಧಿಕಾರಿಗಳ ಕೋರ್ಸ್ (UNWMOC-2025) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಭಾರತ ಸೇರಿದಂತೆ 15 ರಾಷ್ಟ್ರಗಳ ಮಹಿಳಾ ಮಿಲಿಟರಿ ಅಧಿಕಾರಿಗಳು ಪಾಲ್ಗೊಂಡಿದ್ದರು. ಸೌತ್ ಬ್ಲಾಕ್ನಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆದ್ದೇಶಿಸಿ ಮಾತನಾಡಿದ ಸಿಂಗ್, “ನೀವು ಬದಲಾವಣೆಯ ಪಥದರ್ಶಕರು. ನಿಮ್ಮ ಸಮರ್ಪಣೆ ಜಾಗತಿಕ ಭದ್ರತೆಯ ರಚನೆಯನ್ನು ಬಲಪಡಿಸುತ್ತದೆ. ಭಾರತವು ನಿಮ್ಮ ಕೊಡುಗೆಯನ್ನು ಹೆಮ್ಮೆಪಡುವುದರೊಂದಿಗೆ ನಿಮ್ಮ ಪ್ರಯಾಣಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಹೇಳಿದರು. ಮಹಿಳಾ ಶಾಂತಿಪಾಲಕರು ಸಂಘರ್ಷ ಪ್ರದೇಶಗಳಲ್ಲಿ ವಿಶಿಷ್ಟ ದೃಷ್ಟಿಕೋನ ತರುತ್ತಾರೆ, ವಿಶೇಷವಾಗಿ ಸ್ಥಳೀಯ ಸಮುದಾಯಗಳಲ್ಲಿ ವಿಶ್ವಾಸ ನಿರ್ಮಾಣದಲ್ಲಿ ಅವರ ಪಾತ್ರ…
ಜೈಲಿನಲ್ಲಿರುವ ಸಚಿವರು ಹುದ್ದೆ ಉಳಿಸಿಕೊಳ್ಳಲು ಸಾಧ್ಯವಿಲ್ಲ: ಮೋದಿ
ಕೋಲ್ಕತ್ತಾ: ಭ್ರಷ್ಟಾಚಾರದ ಆರೋಪದಡಿ ಜೈಲಿನಲ್ಲಿರುವ ಸಚಿವರು ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ಅವರು, “ಅಂತಹ ಕಾನೂನನ್ನು ತರಲು ಸರ್ಕಾರ ನಿರ್ಧರಿಸಿದಾಗ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಸೇರಿ ‘ಇಂಡಿಯಾ ಬ್ಲಾಕ್’ ವಿರೋಧಿಸುತ್ತವೆ. ಭ್ರಷ್ಟ ನಾಯಕರು ಶಿಕ್ಷೆಗೆ ಗುರಿಯಾಗಬಾರದೆಂದು ಅವರು ಕೋಪಗೊಂಡಿದ್ದಾರೆ” ಎಂದು ಹೇಳಿದರು. ಕೋಲ್ಕತ್ತಾ ಸಮೀಪದ ಡಮ್ ಡಮ್ ಸೆಂಟ್ರಲ್ ಜೈಲು ಮೈದಾನದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಟಿಎಂಸಿಯ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಹಾಗೂ ಪಡಿತರ ಹಗರಣದಲ್ಲಿ ಬಂಧಿತರಾದ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಉಲ್ಲೇಖಿಸಿದರು. “ಮನೆಗಳಿಂದ ಕೋಟಿ ಕೋಟಿ ರೂಪಾಯಿ ನಗದು ವಶವಾಗಿದ್ದರೂ ಅವರು ಹುದ್ದೆ ತ್ಯಜಿಸಲು ನಿರಾಕರಿಸಿದರು. ಇಂಥವರನ್ನು ಹುದ್ದೆಯಲ್ಲಿ ಮುಂದುವರಿಸಲು ಬಿಡಬೇಕೇ ಅಥವಾ ಜೈಲಿನಲ್ಲೇ ಇರಿಸಬೇಕೇ?” ಎಂದು ಪ್ರಶ್ನಿಸಿದರು. ಮಮತಾ ಬ್ಯಾನರ್ಜಿ ನೇತೃತ್ವದ…
ದೆಹಲಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿದ್ಧತೆ
ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಜೋರಾಗಿದೆ. ಕಲೆ, ಸಂಸ್ಕೃತಿ ಮತ್ತು ಭಾಷಾ ಸಚಿವ ಕಪಿಲ್ ಮಿಶ್ರಾ ಅವರು ಶುಕ್ರವಾರ ನಗರದಲ್ಲಿನ ಸಾಂಸ್ಕೃತಿಕ ಕೇಂದ್ರಗಳು ಮತ್ತು ಆಧುನಿಕ ಸಿನಿಮಾ ಮಂದಿರಗಳನ್ನು ಉತ್ಸವದ ಪ್ರದರ್ಶನ ಸ್ಥಳಗಳಾಗಿ ಗುರುತಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಸಭೆಯಲ್ಲಿ ಮಾತನಾಡಿದ ಮಿಶ್ರಾ, “ದೆಹಲಿಯ ವೈವಿಧ್ಯತೆ ಮತ್ತು ಪರಂಪರೆಯನ್ನು ಜಗತ್ತಿನ ಮುಂದೆ ತೋರಿಸಲು ನಗರಾದ್ಯಂತ ಭವ್ಯ ಸ್ಥಳಗಳಲ್ಲಿ ಉತ್ಸವವನ್ನು ಆಯೋಜಿಸುವುದರ ಕುರಿತು ಚರ್ಚಿಸಲಾಗಿದೆ. ಉತ್ಸವದಲ್ಲಿ ವಿಶೇಷವಾಗಿ ಚಿತ್ರಗಳನ್ನು ಪ್ರದರ್ಶಿಸುವ ‘ಪಾಲುದಾರ ದೇಶ’ವನ್ನೂ ಸೇರಿಸಬೇಕೆಂದು ನಾವು ತೀರ್ಮಾನಿಸಿದ್ದೇವೆ” ಎಂದು ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಯುವ ಪ್ರತಿಭೆಗೆ ಅವಕಾಶ ದೆಹಲಿಯ ಶಾಲೆಗಳು, ಕಾಲೇಜುಗಳು ಮತ್ತು ಚಿತ್ರರಂಗ ಸಂಬಂಧಿತ ಸಂಸ್ಥೆಗಳು ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. “ಹೊಸ ಪ್ರತಿಭೆಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಮತ್ತು ಅನುಭವ ಪಡೆಯುವ ಅವಕಾಶ ಸಿಗಲಿದೆ” ಎಂದು…
ಪದಚ್ಯುತ ಮಸೂದೆ; ವಿರೋಧ ಪಕ್ಷ ಏಕೆ ಹೆದರುತ್ತಿದೆ ಎಂದ ಮೋದಿ
ನವದೆಹಲಿ: ಗಂಭೀರ ಆರೋಪಗಳಡಿ ಸತತ 30 ದಿನಗಳ ಕಾಲ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ವಿರೋಧ ಪಕ್ಷಗಳು ಹೊರ ಹಾಕಿರುವ ಟೀಕೆಗಳನ್ನು ಅವರು ತಿರಸ್ಕರಿಸಿದ್ದಾರೆ. ಬಿಹಾರದ ಗಯಾದಲ್ಲಿ ಶುಕ್ರವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿರೋಧ ಪಕ್ಷದ ನಾಯಕರು ಈ ಮಸೂದೆಗಳಿಗೆ ಏಕೆ ಹೆದರುತ್ತಾರೆ ಎಂಬುದು ಜನತೆಗೆ ತಿಳಿದಿದೆ” ಎಂದರು. ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಎನ್ಡಿಎ ಸರ್ಕಾರ ಈ ಮಸೂದೆಗಳನ್ನು ತಂದಿದೆ, ಇದರಲ್ಲಿ ದೇಶದ ಪ್ರಧಾನಿಯೂ ಸೇರಿದ್ದಾರೆ. “ಮುಖ್ಯಮಂತ್ರಿಗಳು, ಸಚಿವರು ಹಾಗೂ ಪ್ರಧಾನಿ ಬಂಧಿತರಾದರೆ 30 ದಿನಗಳಲ್ಲಿ ಜಾಮೀನು ಪಡೆಯಬೇಕು. ಇಲ್ಲದಿದ್ದರೆ 31ನೇ ದಿನ ರಾಜೀನಾಮೆ ನೀಡಲೇಬೇಕು” ಎಂದು ಅವರು ಸ್ಪಷ್ಟಪಡಿಸಿದರು. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಉಲ್ಲೇಖಿಸಿ, “ಜೈಲಿನಿಂದಲೇ ಫೈಲ್ಗಳಿಗೆ ಸಹಿ ಹಾಕಿ, ಸರ್ಕಾರಿ ಆದೇಶ ಹೊರಡಿಸಲಾಗುತ್ತಿದೆ.…
ಸಂಸತ್ ಭವನ ನುಗ್ಗಲು ಯತ್ನಿಸಿದ ಅನಾಮಿಕನ ಸೆರೆ
ನವದೆಹಲಿ: ದೇಶದ ಅತೀ ಭದ್ರಿತ ಪ್ರದೇಶವೆಂದು ಪರಿಗಣಿಸಲ್ಪಡುವ ಸಂಸತ್ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ ದೊಡ್ಡ ಭದ್ರತಾ ಉಲ್ಲಂಘನೆ ನಡೆದಿದೆ. ರೈಲ್ಭವನ ಕಡೆಯಿಂದ ಮರ ಹತ್ತಿ ಗೋಡೆ ದಾಟಿದ ವ್ಯಕ್ತಿಯೊಬ್ಬರು ಹೊಸ ಸಂಸತ್ ಕಟ್ಟಡದ ಗರುಡ ಗೇಟ್ವರೆಗೆ ತಲುಪಿದ್ದಾರೆ. ಬೆಳಿಗ್ಗೆ 6.30ರ ಸುಮಾರಿಗೆ ನಡೆದ ಈ ಘಟನೆ ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ತಕ್ಷಣವೇ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನ ಗುರುತು, ಉದ್ದೇಶ ಹಾಗೂ ಬಹುಹಂತದ ಭದ್ರತೆಯನ್ನು ಹೇಗೆ ದಾಟಿದರು ಎಂಬುದರ ಕುರಿತು ವಿಚಾರಣೆ ಮುಂದುವರಿದಿದೆ. ಘಟನೆಯ ಸಂಪೂರ್ಣ ಅನುಕ್ರಮವನ್ನು ತಿಳಿದುಕೊಳ್ಳಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಸತ್ತಿನ ಮಳೆಗಾಲದ ಅಧಿವೇಶನ ಮುಗಿದ ಕೇವಲ ಒಂದು ದಿನದ ನಂತರ ನಡೆದಿದೆ. ಜುಲೈ 21ರಂದು ಪ್ರಾರಂಭವಾದ ಅಧಿವೇಶನ 21 ಕಾರ್ಯದಿನಗಳ ಬಳಿಕ ಗುರುವಾರ ಅಂತ್ಯಗೊಂಡಿತ್ತು. ಇಂತಹ ಘಟನೆಗಳ ಹಿಂದೆ ಉದಾಹರಣೆಗಳೂ ಇವೆ. ಕಳೆದ…
ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ
ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯ. ಈ ವಿಚಾರದಲ್ಲಿ ರಾಜ್ಯದ ನ್ಯಾಯಾಂಗ ಕ್ಷೇತ್ರದ ಪರಿಣಿತರು ಇಟ್ಟಿರುವ ಹೆಜ್ಜೆ ಗಮನಸೆಳೆದಿದೆ. ಈ ಸಂಬಂಧ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮನೋರಾಜ್ ರಾಜೀವ್ ನೇತೃತ್ವದಲ್ಲಿ ಮಂಗಳೂರಿನ ವಕೀಲರ ತಂಡವು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಿ, ಮಸಾಜ್ ಹಾಗೂ ಸ್ಪಾ…
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ
ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…
ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.
ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…
ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ಗಳನ್ನು ಅಳವಡಿಸಲು ಸರ್ಕಾರ ಟೆಂಡರ್
ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿ 39 ಹೊಸ ಗೇಟ್ಗಳನ್ನು ಅಳವಡಿಸಲು ಸರ್ಕಾರ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈಗಾಗಲೇ 6 ಗೇಟ್ಗಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರಡಿ ಪ್ರಸ್ತಾಪವಾದ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, “ಜಲಾಶಯ ಬೋರ್ಡ್ 1633 ಅಡಿ ಬದಲಿಗೆ 1626 ಅಡಿ ಮಟ್ಟದಲ್ಲಿ ನೀರು ಸಂಗ್ರಹಿಸಲು ಸೂಚಿಸಿದೆ. ತಾಂತ್ರಿಕ ತೊಂದರೆಯಿಂದಾಗಿ ಈ ಬಾರಿ ರೈತರಿಗೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ” ಎಂದರು. ರೈತರ ಹಿತವನ್ನು ಕಾಪಾಡುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದ ಡಿ.ಕೆ.ಶಿವಕುಮಾರ್, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದಾಗಿ ತಿಳಿಸಿದರು. ಜೊತೆಗೆ, ದುರಸ್ತಿ ಕಾಮಗಾರಿಗಳು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.