ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ ಎಂದರು. ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ…
Day: September 11, 2025
ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ
ಒರೆಮ್ (ಉತಾಹ್): ಅಮೆರಿಕದಲ್ಲಿ ಯುವ ರಿಪಬ್ಲಿಕನ್ರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಪ್ರದಾಯವಾದಿ ಕಾರ್ಯಕರ್ತ ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಚಾರ್ಲಿ ಕಿರ್ಕ್ (31) ಆಗಂತುಕರ ಗುಂಡಿಗೆ ಬಲಿಯಾಗಿದ್ದಾರೆ. ಭಾರತೀಯ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಉತಾಹ್ನ ಒರೆಮ್ನ ಕಾಲೇಜೊಂದರ ಕಾರ್ಯಕ್ರಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ. ಈ ಘಟನೆ ಅಮೆರಿಕದಲ್ಲಿ ಆತಂಕ ಸೃಷ್ಟಿಸಿದೆ. ಪದೇಪದೆ ಇಂತಹ ದಾಳಿ ನಡೆಯುತ್ತಿರುವುದು ದುರದೃಷ್ಟಕರ ಎಂದು ನಾಯಕರು ಹೇಳಿದ್ದಾರೆ. “ಇದು ನಮ್ಮ ರಾಜ್ಯಕ್ಕೂ ರಾಷ್ಟ್ರಕ್ಕೂ ಕಪ್ಪು ದಿನ. ನಿಜಕ್ಕೂ ರಾಜಕೀಯ ದುರುದ್ದೇಶಪೂರಿತ ಹತ್ಯೆ” ಎಂದು ಉತಾಹ್ ಗವರ್ನರ್ ಸ್ಪೆನ್ಸರ್ ಕಾಕ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ. ಆರಂಭದಲ್ಲಿ ಒಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು FBI ನಿರ್ದೇಶಕ ಕಾಶ್ ಪಟೇಲ್ ತಿಳಿಸಿದ್ದಾರೆ. ಆದರೆ ವಿಚಾರಣೆ ನಂತರ ಅವರನ್ನು ಬಿಡುಗಡೆ…
