ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಾಗಾಗಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ನಂಜೇಗೌಡರ ಪ್ರಯತ್ನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸದೇ, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ…
Month: October 2025
ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ಕ್ಕಾಗಿ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟವಾಗಿದೆ. ಪಕ್ಷವು ಸ್ಪರ್ಧಿಸಲಿರುವ 101 ಸ್ಥಾನಗಳಲ್ಲಿ 71 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಉಳಿದ 30 ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಪಟ್ಟಿಯಲ್ಲಿ ಮಾಜಿ ಸಚಿವರು ಮಂಗಲ್ ಪಾಂಡೆ, ರೇಣು ದೇವಿ ಮತ್ತು ತಾರಕೇಶ್ವರ ಪ್ರಸಾದ್ ಸಿಂಗ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಪ್ರಸ್ತುತ ವಿಧಾನಸಭಾಧ್ಯಕ್ಷ ನಂದ ಕಿಶೋರ್ ಯಾದವ್ ಅವರಿಗೆ ಟಿಕೆಟ್ ನೀಡದಿರುವುದು ಗಮನಾರ್ಹವಾಗಿದೆ. 243 ಸದಸ್ಯರ ಬಿಹಾರ ವಿಧಾನಸಭೆಗಾಗಿ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು…
ಕಾರ್ಕಳದ ಮಾಜಿ ಶಾಸಕಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ವಿಧಿವಶ
ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹ ಬಾರ್ಕೂರು ಬಳಿ ಪತ್ತೆಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ಬಳಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಹೆಬ್ರಿ ತಾಲ್ಲೂಕಿನ ನಿವಾಸಿಯಾಗಿರುವ ಸುದೀಪ್ ಅವರು, ಬಾರ್ಕೂರು ರೈಲು ಮಾರ್ಗದ ಬಳಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುದೀಪ್ ಅವರ ತಂದೆ ಹೆಚ್. ಗೋಪಾಲ ಭಂಡಾರಿ ಅವರು 1999ರಲ್ಲಿ ಮತ್ತು ನಂತರ 2008ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಪ್ರಾಮಾಣಿಕತೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಹೆಸರುವಾಸಿಯಾಗಿದ್ದರು.
ದೀಪಾವಳಿ ಹಬ್ಬದ ಪ್ರಯುಕ್ತ 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ KSRTC
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ ನಡುವೆ ದೀಪಾವಳಿ ಸಂಭ್ರಮಿಸಲು ಊರುಗಳಿಗೆ ತೆರಳುವ ಮಂದಿಗೆ ಅನುಕೂಲವಾಗುವಂತೆ ನಿಗಮವು ಈ ಹೆಚ್ಚುವರಿ ಬಸ್ ಸೌಕರ್ಯ ಮಾಡಿದೆ. ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ನೆಲೆಸಿರುವ ಮಂದಿ ದೀಪಗಳ ಹಬ್ಬದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಪ್ರತೀವರ್ಷದಂತೆ ಈಬಾರಿಯೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 22.10.2025 ಹಾಗೂ…
ಮತದಾರರ ಪಟ್ಟಿ ಅಕ್ರಮ ಆರೋಪ; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ದೇಶದಾದ್ಯಂತ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಪ್ರಕರಣವನ್ನು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿ, ಅರ್ಜಿದಾರರು ಈ ವಿಷಯವನ್ನು ಭಾರತ ಚುನಾವಣಾ ಆಯೋಗ (ಇಸಿಐ)ದ ಮುಂದೆ ಎತ್ತಿಕೊಳ್ಳುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು, ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಈಗಾಗಲೇ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರೂ, ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಾದಿಸಿದರು. ಆದರೆ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ಅಗತ್ಯವಿಲ್ಲ ಎಂದು ತೀರ್ಮಾನಿಸಿ, ಅರ್ಜಿದಾರರು ಕಾನೂನಿನಡಿ ಲಭ್ಯವಿರುವ ಮಾರ್ಗಗಳನ್ನು ಅನುಸರಿಸಬಹುದು ಎಂದು ತಿಳಿಸಿತು. ಈ ಪಿಐಎಲ್ನಲ್ಲಿ “ಒಬ್ಬ ವ್ಯಕ್ತಿ, ಒಂದು ಮತ” ಎಂಬ ಸಂವಿಧಾನಿಕ ತತ್ವವನ್ನು ಕಾಯ್ದುಕೊಳ್ಳಲು ತುರ್ತು ನ್ಯಾಯಾಂಗ ಹಸ್ತಕ್ಷೇಪ ಅಗತ್ಯವಿದೆ ಎಂದು ವಾದಿಸಲಾಗಿತ್ತು. ಅರ್ಜಿಯ…
ಮಾಜಿ ಪ್ರಧಾನಿ ದೇವೇಗೌಡರು ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಅವರು ಅಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಈಗ ಗಮನಾರ್ಹ ಸುಧಾರಣೆ ಕಂಡುಬಂದಿದೆ. ವೈದ್ಯರ ಸಲಹೆಯ ಮೇರೆಗೆ ಅವರಿಗೆ ಆಸ್ಪತ್ರೆಯಿಂದ ಬಿಡುಗಡೆ ನೀಡಲಾಗಿದ್ದು, ಅವರು ನೇರವಾಗಿ ತಮ್ಮ ಪದ್ಮನಾಭನಗರ ನಿವಾಸಕ್ಕೆ ಆಗಮಿಸಿದ್ದಾರೆ. ವೈದ್ಯರ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಮುಂದಿನ ಕೆಲವು ದಿನಗಳು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.
ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು!
ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ, ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ ಎಂದು ಅಶೋಕ್ ಗಮನ ಸೆಳೆದಿದ್ದಾರೆ. ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಸಿಎಂಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅಶೋಕ್, ‘ಆರ್ ಎಸ್ಎಸ್ ನಿಷೇಧ ಮಾಡುವ ಗೀಳು ಬಿಡಿ.…
ಮೊದಲ ತ್ರೈಮಾಸಿಕದಲ್ಲಿ ದೇಶದ ಚಿಲ್ಲರೆ ಪಾವತಿಗಳಲ್ಲಿ 99.8% ಡಿಜಿಟಲ್ ವ್ಯವಹಾರಗಳು
ನವದೆಹಲಿ: ದೇಶದ ಚಿಲ್ಲರೆ ಪಾವತಿಗಳಲ್ಲಿ ಡಿಜಿಟಲ್ ವಹಿವಾಟುಗಳು ಹೊಸ ಮೈಲುಗಲ್ಲು ಮುಟ್ಟಿವೆ. 2026ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ, ಒಟ್ಟು ಚಿಲ್ಲರೆ ಪಾವತಿಗಳಲ್ಲಿ ಡಿಜಿಟಲ್ ಪಾವತಿಗಳು 99.8 ಪ್ರತಿಶತದಷ್ಟು ಪಾಲು ಪಡೆದಿವೆ ಎಂದು ಕೇರ್ಎಡ್ಜ್ ಅನಾಲಿಟಿಕ್ಸ್ ಮತ್ತು ಅಡ್ವೈಸರಿ ಸಂಸ್ಥೆಯ ಹೊಸ ವರದಿ ತಿಳಿಸಿದೆ. ನೀತಿ ಉತ್ತೇಜನ, ಬಲವಾದ ತಾಂತ್ರಿಕ ಮೂಲಸೌಕರ್ಯ ಮತ್ತು ಫಿನ್ಟೆಕ್ ಕ್ಷೇತ್ರದ ನುಗ್ಗುವಿಕೆಗಳಿಂದ ಕಾಗದ ಆಧಾರಿತ ಸಾಧನಗಳಾದ ಚೆಕ್ಗಳ ಬಳಕೆ ಬಹುತೇಕ ನಿಂತುಹೋಗಿದೆ ಎಂದು ವರದಿ ಹೇಳಿದೆ. ಏಕೀಕೃತ ಪಾವತಿ ಇಂಟರ್ಫೇಸ್ (UPI), ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (AePS), ತಕ್ಷಣದ ಪಾವತಿ ಸೇವೆ (IMPS) ಮುಂತಾದ ವೇದಿಕೆಗಳು ಈ ಬದಲಾವಣೆಗೆ ಪ್ರಮುಖ ಚಾಲಕರಾಗಿದ್ದು, 2026ರ ಮೊದಲ ತ್ರೈಮಾಸಿಕದ ಅಂಕಿಅಂಶಗಳ ಪ್ರಕಾರ ಪಾವತಿ ಮೌಲ್ಯದ 92.6 ಪ್ರತಿಶತ ಮತ್ತು ವಹಿವಾಟಿನ ಪ್ರಮಾಣದ 99.8 ಪ್ರತಿಶತವನ್ನು ಹೊಂದಿವೆ. ಕೇರ್ಎಡ್ಜ್ ವರದಿಯ ಪ್ರಕಾರ, “ಮಾರ್ಚ್ 2021ರಲ್ಲಿ…
ಮುಂಗಾರು ಬೆಳೆ ಹಾನಿ ಪರಿಹಾರ 10 ದಿನಗಳಲ್ಲಿ ಬಿಡುಗಡೆ
ಬೆಂಗಳೂರು: ನೈಋತ್ಯ ಮುಂಗಾರು ಮಳೆಯಿಂದ ರಾಜ್ಯದ ಒಟ್ಟು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ರಾಜ್ಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ, 10 ದಿನಗಳಲ್ಲಿ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇತ್ತೀಚೆಗೆ ಹಾನಿಗೊಂಡ 7.24 ಲಕ್ಷ ಹೆಕ್ಟೇರ್ ಬೆಳೆಗಳಿಗೆ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, 10 ದಿನಗಳೊಳಗೆ ಈ ಪ್ರದೇಶಗಳಿಗೂ ಪರಿಹಾರ ಪಾವತಿ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ. “ರಾಜ್ಯ ಸರ್ಕಾರ ಸಂಪೂರ್ಣ ಪಾರದರ್ಶಕತೆಯೊಂದಿಗೆ, ಆಧಾರ್ ಜೋಡಣೆ ಇರುವ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪಾವತಿ ಮಾಡುತ್ತಿದೆ. ಅತಿವೃಷ್ಠಿ ಹಾಗೂ ಪ್ರವಾಹದಿಂದ ಹಾನಿಗೊಂಡ ಪ್ರದೇಶಗಳಿಗೆ ಸುಮಾರು 2,000 ಕೋಟಿ ರೂ. ಪಾವತಿಗೆ ಪ್ರಕ್ರಿಯೆ ಆರಂಭವಾಗಿದೆ. 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ,” ಎಂದು ಅವರು ಹೇಳಿದರು. 2025ರ ನೈಋತ್ಯ ಮುಂಗಾರದಲ್ಲಿ ಸೆಪ್ಟೆಂಬರ್ ಮೊದಲ ವಾರದ ಭಾರೀ ಮಳೆಯಿಂದ 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ…