ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Month: November 2025
ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಯೋಚನೆ ಸದ್ಯಕ್ಕಿಲ್ಲ; ಸಿದ್ದರಾಮಯ್ಯ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದವರು ಸ್ಪಷ್ಟಪಡಿಸಿದರು.
ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷ ‘ಧರ್ಮಧ್ವಜ’;
ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು. “आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025 ಮಧ್ಯಾಹ್ನ 12 ಗಂಟೆಯ…
ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ; 10 ಕಡೆ ದಾಳಿ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್…
ಬಿಜೆಪಿಯಲ್ಲಿ ಸಿಎಂ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಹೇಳಿದ್ದರು; ಪ್ರಿಯಾಂಕ್ ಖರ್ಗೆ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ?…
JJM ಯೋಜನೆಯಲ್ಲೂ ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ; ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು ಎಂದಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು ₹35,698,58 ಕೋಟಿ ಖರ್ಚು ಮಾಡಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರ ಖರ್ಚು ಮಾಡಿರುವುದು ₹24,598,45 ಕೋಟಿ. ಇದುವರೆಗೂ ಕೇಂದ್ರ ಸರ್ಕಾರ ಕೊಟ್ಟಿರುವುದು ₹11, 786, 63 ಕೋಟಿ ಮಾತ್ರ. ಪ್ರಸಕ್ತ ಸಾಲಿನವರೆಗೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಬೇಕಾದ ಮೊತ್ತ ₹13,004,63 ಕೋಟಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ಕರ್ನಾಟಕದೆಡೆಗಿನ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ ಸಾಲಿನಲ್ಲಿ JJM ಯೋಜನೆಗಾಗಿ ₹3,804,41 ಕೋಟಿಯನ್ನು ಕರ್ನಾಟಕಕ್ಕೆ ಹಂಚಿಕೆ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ
ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಸೂರ್ಯಕಾಂತ್ ಅವರು ಹಿಂದಿಯಲ್ಲಿ ದೇವರ ಹೆಸರಿನಿಂದ ಪ್ರಮಾಣವಚನ ಪಠಿಸಿದರು. ಸಮಾರಂಭದಲ್ಲಿಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಹಾಜರಿದ್ದರು. ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ಕೂಡ ಸಮಾರಂಭಕ್ಕೆ ಹಾಜರಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅಧಿಕಾರಾವಧಿ ಸುಮಾರು 14 ತಿಂಗಳು. ಅವರು ಫೆಬ್ರವರಿ 9, 2027 ರಂದು ನಿವೃತ್ತಿಗೊಳ್ಳಲಿದ್ದಾರೆ. ಇತ್ತೀಚೆಗೆ ಸಿಜೆಐ ಪೀಠವನ್ನು ಖಾಲಿ ಮಾಡಿರುವ ಭೂಷಣ್ ಆರ್. ಗವಾಯಿ ಅವರು ಅಕ್ಟೋಬರ್ 30ರಂದು ತಮ್ಮ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ಅವರನ್ನು ಶಿಫಾರಸು…
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.
ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು
ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಭಾರೀ ಮಾರಣಹೋಮವೇ ನಡೆದಿದ್ದು ಜೊತೆಗೆ ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ, ಅಕ್ಟೋಬರ್ ನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದಿತ್ತು. ಆದರೆ ಭಯೋತ್ಪಾದಕ” ದಾಳಿಯ ಪರಿಣಾಮವಾಗಿ ತಾನು ವೈಮಾನಿಕ ದಾಳಿ ಮಾಡಬೇಕಾಯಿತು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.
ಭೂಸ್ವಾಧೀನ ಲೋಪಗಳ ಬಗ್ಗೆ ತನಿಖೆ: ಸರ್ಕಾರದಿಂದ ಕಠಿಣ ಕ್ರಮದ ಸೂಚನೆ
ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಳೆದ ಹಲವು ವರ್ಷಗಳಿಂದ ಬೇಜವಾಬ್ದಾರಿಯಾಗಿ ನಡೆಸಲಾದ ಕಾನೂನು ಕ್ರಮಗಳು, ನಿರ್ಲಕ್ಷ್ಯ ಮತ್ತು ಅನಿಶ್ಚಿತತೆಯಿಂದ ಸರ್ಕಾರಕ್ಕೆ ಸುಮಾರು ₹5 ಲಕ್ಷ ಕೋಟಿ ರೂ.ಗಳಷ್ಟು ನಷ್ಟ ಉಂಟಾಗುವ ಆತಂಕವಿದೆ,” ಎಂದು ಎಚ್ಚರಿಸಿದರು. “ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು. ಪ್ರಕರಣಗಳನ್ನು ತಪ್ಪಾಗಿ ವಹಿಸಿದ ವಕೀಲರನ್ನು ಕೂಡ ತೆಗೆದುಹಾಕಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಕುರಿತು ಈಗಾಗಲೇ ವಿಶೇಷ ಪರಿಶೀಲನಾ ತಂಡ ಕಾರ್ಯಾರಂಭ ಮಾಡಿಕೊಂಡಿದ್ದು, 10–15 ದಿನಗಳೊಳಗೆ ಪ್ರಾಥಮಿಕ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಅವಶ್ಯಕತೆ ಕಂಡುಬಂದಲ್ಲಿ ವಿಶೇಷ ತನಿಖಾ…
