ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ…
Day: December 11, 2025
“77 ವರ್ಷಗಳ ನಂತರವೂ ದಲಿತರಿಗೆ ನ್ಯಾಯ ತಲುಪಿಲ್ಲ”
ದಲಿತರ ಮೇಲಿನ ದೌರ್ಜನ್ಯಗಳ ಖಂಡನೆ: ಸಂಘಟನೆಗಳ ಒಕ್ಕೂಟದಿಂದ ಬೃಹತ್ ತಮಟೆ ಚಳುವಳಿ ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ದಲಿತರ ಮೇಲಿನ ಅನ್ಯಾಯ, ದೌರ್ಜನ್ಯ ಹೆಚ್ಚುತ್ತಿರುವುದನ್ನು ಖಂಡಿಸಿ, ಹಲವಾರು ದಲಿತ ಸಂಘಟನೆಗಳ ಒಕ್ಕೂಟ ಫ್ರೀಡಂ ಪಾರ್ಕ್ನಲ್ಲಿ ಶನಿವಾರ ಬೃಹತ್ ತಮಟೆ ಚಳುವಳಿಯನ್ನು ನಡೆಸಿತು. ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ಜೈ ಮಾದಿಗರ ಬೌದ್ಧಿಕ ವೇದಿಕೆ ಹಾಗೂ ಜೈಭೀಮ್ ದಲಿತ ಭೂ ರಕ್ಷಣಾ ವೇದಿಕೆಗಳು, ತಮ್ಮ ಸಂಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಬಿ.ಆರ್. ಮುನಿರಾಜರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ವಿವಿಧ ಇಲಾಖೆಗಳು ದಲಿತರ ವಿರುದ್ಧ ತೋರಿಸುತ್ತಿರುವ ‘ವ್ಯವಸ್ಥಿತ ಅನ್ಯಾಯ’ಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಿದವು. ಖಾಸಗಿವಾಗಿ, ಕಂದಾಯ ಇಲಾಖೆಯ ಭೂದಾಖಲೆಗಳ ಉಪ ನಿರ್ದೇಶಕರಾದ ಸುಜಯ್ ಕುಮಾರ್, ಶ್ರೀನಿವಾಸ್ ಮತ್ತು ಭಾನುಪ್ರಕಾಶ್ ವಿರುದ್ಧ “ದಲಿತ ವಿರೋಧಿ ನಿಲುವು ಮತ್ತು ಅಕ್ರಮ” ಆರೋಪಿಸಿ, ಅವರನ್ನು ಅಮಾನತು…
ರೌಡಿಶೀಟರ್ ಗಳನ್ನು ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ…
