ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ. ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ.…