ಕೇರಳ: ಬಿಜೆಪಿ ಅಭ್ಯರ್ಥಿ, ಕೇರಳದ ಮೊದಲ ಮಹಿಳಾ ಡಿಜಿಪಿ ಶ್ರೀಲೇಖಾ ಜಯಭೇರಿ

ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆ ಅಧಿಕಾರ ವಶಪಡಿಸಿಕೊಳ್ಳುವ ಪೈಪೋಟಿಯಲ್ಲಿ ಬಿಜೆಪಿ ತನ್ನ ಸ್ಥಿತಿಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ತಿರುವನಂತಪುರಂ ಕಾರ್ಪೊರೇಷನ್ ನಿಯಂತ್ರಣಕ್ಕಾಗಿ ಮೂರು ಪ್ರಮುಖ ರಾಜಕೀಯ ಮೈತ್ರಿಗಳ ನಡುವೆ ಕಠಿಣ ಸ್ಪರ್ಧೆ ನಡೆಯುತ್ತಿರುವ ಸಂದರ್ಭದಲ್ಲೇ ಶ್ರೀಲೇಖಾ ಅವರ ಜಯ ಲಭಿಸಿದೆ. ರಾಜಧಾನಿಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಅಧಿಕಾರದಿಂದ ದೂರ ಸರಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಕ್ಕೆ ಈ ಗೆಲುವು ಸಾಂಕೇತಿಕ ಹಾಗೂ ರಾಜಕೀಯ ಉತ್ತೇಜನವಾಗಿದೆ ಎಂದು ಪಕ್ಷ ವಿಶ್ಲೇಷಿಸಿದೆ. ಪ್ರಸ್ತುತ ಲಭ್ಯ ಮಾಹಿತಿಯಂತೆ, 101 ಸದಸ್ಯರ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ 34 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಡಪಕ್ಷಗಳು 20 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ವರ್ಷದ ಆರಂಭದಲ್ಲೇ ಶ್ರೀಲೇಖಾ…

ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ…