ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ; KPCC ಯಿಂದ ಅಧ್ಯಯನ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಸಮಿತಿ ಸಂಚಾಲಕರು, ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು ಎಂಬ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಈ ಸಮಿತಿ ರಚನೆ ಮಾಡಿದ್ದಾರೆ. ಈ ಸಮಿತಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಉಳಿದಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌…

ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ನಡುವೆ ಬುಲ್ಡೋಜರ್ ಬಡಿದಾಟ ನಡೆಯುತ್ತಿದೆ. ತನ್ನ ನಡೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಮರ್ತಿಸಿಕೊಂಡಿದ್ದು, ಕಾನೂನು ರೀತಿಯ ಕ್ರಮವನ್ನೇ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಬೆಂಗಳೂರು ಹೊರವಲಯದ ಕೋಗಿಲು ಬಳಿ ಸರ್ಕಾರಿ ಜಮೀನಿನಲ್ಲಿ ಮುಸ್ಲಿಂ ಸಮುದಾಯದವರು ಅಕ್ರಮವಾಗಿ ಕಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಒತ್ತುವರಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾಚರಣೆ ನಡೆಸಿದೆ. ಈ ಬುಲ್ಡೋಜರ್ ಕಾರ್ಯಚರಣೆ ಹಾಗೂ ಸಿದ್ದರಾಮಯ್ಯ ಸರ್ಕಾರದ ಸಮರ್ಥನೆಯನ್ನು ತನ್ನದೇ ಶೈಲಿಯಲ್ಲಿ ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಸಿದ್ದು ಸರ್ಕಾರದ ಕಾನೂನುಬದ್ಧ ಕ್ರಮ ಬಡವರ ಮೇಲಷ್ಟೇ ಯಾಕೆ? ಪ್ರಭಾವಿಗಳ ಮೇಲೆ ಕ್ರಮ ಯಾವಾಗ ಎಂದು ಪ್ರಶ್ನಿಸಿದೆ. ಈ ವಿಚಾರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಕೇಳಿಬಂದಿರುವ ಒತ್ತುವರಿ ಆರೋಪವನ್ನು ಪ್ರಸ್ತಾಪಿಸಿದೆ. ‘ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಂಚನೆಯ…