ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಗೈರು ಹಾಜರಾಗಿದ್ದರಲ್ಲಿ ತಪ್ಪಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ..ಸರ್ಕಾರದ ಪರವಾಗಿ ನಮ್ಮ ಕಂದಾಯ ಸಚಿವರು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಈ ಹಿಂದೆ ನಡೆದ ನೀತಿ ಆಯೋಗದ ಎಷ್ಟೋ ಸಭೆಗಳಿಗೆ ಹೋಗಿಲ್ಲ. ಆಗ ಹಣಕಾಸು ಸಚಿವರು ನಡೆಸಿದ್ದಾರೆ. ಮತ್ತೆ ಸಭೆಗೆ ಹೋದರೂ ಅವರು ಹೇಳಿದ್ದನ್ನು ಮಾತ್ರ ಕೇಳಿಕೊಂಡು ಬರಬೇಕು. ನಮಗೆ ಕೇಳುವ ಹಕ್ಕು, ಸಮಯ ಎರಡನ್ನೂ ಕೊಡುವುದಿಲ್ಲ. ಒನ್ ವೇ ಸಭೆಗಳಿಗೆ ನಾವೇಕೆ ಹೋಗಬೇಕು ಎಂದು ಪತ್ರಕರ್ತರನ್ನೇ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.
Year: 2025
ಅಲ್ಪಸಂಖ್ಯಾತ ಐಎಎಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್ ಪ್ರಕಾಶ್ ಪಾಟೀಲ್ ಟೀಕೆ
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು ಕಿಡಿಕಾರಿದರು. ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು. ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ…
ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ
ಬೆಂಗಳೂರು: ಕನ್ನಡ ಕಿರುತೆರೆ, ಹಿರಿ ತೆರೆ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಮೂಲಗಳು ತಿಳಿಸಿವೆ. 47 ವರ್ಷ ವಯಸ್ಸಿನ ಅವರು ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದರು. ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲೂ ಶ್ರೀಧರ್ ನಾಯಕ್ ನಟಿಸಿದ್ದರು.
ತಮಿಳುನಾಡಿನಲ್ಲೂ ಮಳೆ ಅವಾಂತರ; ಮೇ 28 ರವರೆಗೆ ಕಟ್ಟೆಚ್ಚರ
ಚೆನ್ನೈ: ನೀಲಗಿರಿ ಮತ್ತು ಕೊಯಮತ್ತೂರಿನ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 28 ರವರೆಗೆ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಪಶ್ಚಿಮ ಘಟ್ಟಗಳ ಉದ್ದಕ್ಕೂ ದುರ್ಬಲ ಪ್ರದೇಶಗಳಲ್ಲಿ ಭೂಕುಸಿತ, ಹಠಾತ್ ಪ್ರವಾಹ ಮತ್ತು ನೀರಿನ ಅಡಚಣೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಭಾನುವಾರ, ಬಲವಾದ ಗಾಳಿಯೊಂದಿಗೆ ಸುರಿದ ಭಾರೀ ಮಳೆಯಿಂದಾಗಿ ನೀಲಗಿರಿ ಜಿಲ್ಲೆಯಲ್ಲಿ ಮರಗಳು ಬುಡಮೇಲಾಗಿ ಬೆಳೆಗಳು ಮತ್ತು ಮನೆಗಳಿಗೆ ಹಾನಿಯಾಗಿದೆ. ಜನಪ್ರಿಯ ಪ್ರವಾಸಿ ತಾಣವಾದ ಎಂಟನೇ ಮೈಲಿಯಲ್ಲಿ ಮರ ಬಿದ್ದು 15 ವರ್ಷದ ಬಾಲಕ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಲಯತಿಮುಂಡ್, ಅಲಗರಮಲೈ ಮತ್ತು ರಂಗನಾಥಪುರಂನಲ್ಲಿ ಸ್ಥಾಪಿಸಲಾದ ಆಶ್ರಯಗಳು ಸೇರಿದಂತೆ ತಗ್ಗು ಪ್ರದೇಶಗಳಿಂದ ಕನಿಷ್ಠ 70 ನಿವಾಸಿಗಳನ್ನು ಜಿಲ್ಲಾ…
ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!
ನವದೆಹಲಿ: ಸೆಮಾಗ್ಲುಟೈಡ್ನಂತಹ ತೂಕ ಇಳಿಸುವ ಔಷಧಿಗಳಿಂದ ನರ ಕೋಶಗಳು ಹೇಗೆ ಸಕ್ರಿಯಗೊಳ್ಳುತ್ತವೆ ಮತ್ತು ಅದು ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸ್ವೀಡಿಷ್ ಸಂಶೋಧಕರು ಪತ್ತೆಹಚ್ಚಿದ್ದಾರೆ. ಸೆಮಾಗ್ಲುಟೈಡ್ GLP-1R ಅಗೋನಿಸ್ಟ್ಗಳು ಎಂಬ ಔಷಧಿಗಳ ಗುಂಪಿಗೆ ಸೇರಿದ್ದು ಮತ್ತು ಆಹಾರ ಸೇವನೆ ಮತ್ತು ದೇಹದ ತೂಕವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ ಎಂದು ತೋರಿಸಲಾಗಿದೆ. ಬೊಜ್ಜು ಮತ್ತು ಟೈಪ್ 2 ಮಧುಮೇಹದ ಚಿಕಿತ್ಸೆಯ ಭಾಗವಾಗಿ ಈ ಔಷಧವು ಈಗಾಗಲೇ ಉತ್ತಮವಾಗಿ ಸ್ಥಾಪಿತವಾಗಿದೆ ಆದರೆ ವಾಕರಿಕೆ ಮತ್ತು ಸ್ನಾಯು ನಷ್ಟದಂತಹ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ಅಧ್ಯಯನದಲ್ಲಿ, ಗೋಥೆನ್ಬರ್ಗ್ ವಿಶ್ವವಿದ್ಯಾಲಯದ ಸಾಹ್ಲ್ಗ್ರೆನ್ಸ್ಕಾ ಅಕಾಡೆಮಿಯ ಸಂಶೋಧಕರು ಮೆದುಳಿನಲ್ಲಿರುವ ನರ ಕೋಶಗಳನ್ನು ಅಡ್ಡಪರಿಣಾಮಗಳಿಗೆ ಕಾರಣವಾಗುವವುಗಳಿಂದ ಪ್ರತ್ಯೇಕಿಸಲು ಸಾಧ್ಯವಿದೆ ಎಂದು ತೋರಿಸಿದ್ದಾರೆ. ಸೆಮಾಗ್ಲುಟೈಡ್ ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತನಿಖೆ ಮಾಡಲು, ಸಂಶೋಧಕರು ಇಲಿಗಳೊಂದಿಗೆ ಕೆಲಸ ಮಾಡಿದರು. ಔಷಧದಿಂದ ಯಾವ ನರ ಕೋಶಗಳನ್ನು ಸಕ್ರಿಯಗೊಳಿಸಲಾಗಿದೆ…
ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ
ನವದೆಹಲಿ: ಇತ್ತೀಚಿನ ಉಪಗ್ರಹ ಚಿತ್ರಗಳು ಭಾರತದ ‘ಆಪರೇಷನ್ ಸಿಂದೂರ್’ ಸಮಯದಲ್ಲಿ ಪಾಕಿಸ್ತಾನದ ಕಾರ್ಯತಂತ್ರದ ಪ್ರಮುಖವಾದ ನೂರ್ ಖಾನ್ ವಾಯುನೆಲೆಯು ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಹಾನಿಯನ್ನು ಅನುಭವಿಸಿದೆ ಎಂದು ಅನಾವರಣ ಮಾಡಿವೆ. ಪಾಕಿಸ್ತಾನದ ಡ್ರೋನ್ ಮತ್ತು ವಿಐಪಿ ವಾಯುಪಡೆಯ ಪ್ರಮುಖ ಕೇಂದ್ರವಾದ ನೂರ್ ಖಾನ್, ಇಸ್ಲಾಮಾಬಾದ್ನಿಂದ 25 ಕಿಲೋ ಮೀಟರ್ಗಿಂತಲೂ ಕಡಿಮೆ ದೂರದಲ್ಲಿರುವ ರಾವಲ್ಪಿಂಡಿಯಲ್ಲಿದೆ. ಈ ನೆಲೆಯು ಹೆಚ್ಚಿನ ಮೌಲ್ಯದ ಗುರಿಯಾಗಿದ್ದು, ಪಾಕಿಸ್ತಾನ ವಾಯುಪಡೆಯ ಪ್ರಮುಖ ಸ್ವತ್ತುಗಳನ್ನು ಹೊಂದಿದೆ. This report spotlights damage at Pakistan’s Murid Airbase – the Indian Air Force strike has caused structural damage to a Command & Control building, a section of the roof has collapsed as well, likely causing internal damage @TheIntelLab #Skyfi pic.twitter.com/k7O4FO0tKS — Damien…
ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್, ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದೆ. ಬೆಳಗಾವಿ ಮತ್ತು ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಭಾರೀ ಮಳೆಯಾಗುವ…
ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ. ಕಳೆದೆರಡು ದಿನಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಭಾರೀ ಮಳೆಯೂ ಸರಣಿ ಅವಘಡಗಳಿಗೂ ಕಾರಣವಾಗಿವೆ. ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿವೆ. ಕುಂದಾಪುರ, ಕಾರ್ಕಳ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. #ಭಾಗಮಂಡಲ_ತ್ರಿವೇಣಿ_ಸಂಗಮ_ಭರ್ತಿ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಗಾಳಿ ಮಳೆ ಜೋರಾಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. pic.twitter.com/Np5pTX5RrN — Coorg The Kashmir of Karnataka (@Coorgthekashmir) May 25, 2025 ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆ ಸರಣಿ ಅನಾಹುತಗಳಿಗೆ ಕಾರಣವಾಗಿವೆ. ಇನ್ನೊಂದೆಡೆ ಹಾಸನ ಜಿಲ್ಲೆಯಲ್ಲೂ ಮಳೆ ಸಂಬಂಧಿ ಘಟನೆ ಸಂಭವಿಸಿದೆ. ಶಿರಾಡಿ ಘಾಟಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ…
ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು
ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ವರದಿಯಾಗಿದೆ. ಶನಿವಾರ ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆದಾಗಿಯೂ ಕಳೆದೆರಡು ದಿನಗಳಲ್ಲಿ 108 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಐವರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು38 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ತಿಳಿಸಿದೆ. ಒಟ್ಟು 38 ಸಕ್ರಿಯ ಪ್ರಕರಣಗಳಲ್ಲಿ 32 ಬೆಂಗಳೂರಿನಿಂದ ವರದಿಯಾಗಿದೆ. ನಗರದಲ್ಲಿ ಒಟ್ಟು 92 ಜನರು ಪರೀಕ್ಷೆಗೆ ಒಳಗಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಇಬ್ಬರು ವ್ಯಕ್ತಿಗಳು ಪಾಸಿಟಿವ್ ಆಗಿದ್ದಾರೆ ಎಂದು ವರದಿ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮಂಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತಲಾ ಒಂದು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಮತ್ತು ಮೈಸೂರು ಜಿಲ್ಲೆಯಲ್ಲಿ ಎರಡು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ವರದಿ ತಿಳಿಸಿದೆ. ಮುಂಬೈನಿಂದ ಹಿಂದಿರುಗಿದ ಮಹಿಳೆಯೊಬ್ಬರಿಗೆ ಕೊರೊನಾ ಸೋಂಕು…
ಭಾರತದಲ್ಲಿ NB.1.8.1, LF.7 ಕೋವಿಡ್ ರೂಪಾಂತರಿ ವೈರಸ್ ಸಕ್ರಿಯ!
ನವದೆಹಲಿ: ಭಾರತದಲ್ಲಿ SARS-CoV-2 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ದತ್ತಾಂಶವು ದೇಶದಲ್ಲಿ JN.1 ಕೋವಿಡ್ ರೂಪಾಂತರದ ವಂಶಸ್ಥರಾದ NB.1.8.1, LF.7 ಉಪಸ್ಥಿತಿಯನ್ನು ತೋರಿಸಿದೆ. ಕೋವಿಡ್ ವೈರಸ್ನ ಜೀನೋಮಿಕ್ ವ್ಯತ್ಯಾಸಗಳನ್ನು ಮೇಲ್ವಿಚಾರಣೆ ಮಾಡಲು 64 ಪ್ರಯೋಗಾಲಯಗಳ ಒಕ್ಕೂಟವಾದ INSACOG ದತ್ತಾಂಶವು NB.1.8.1 ನ ಒಂದು ಪ್ರಕರಣ ಮತ್ತು LF.7 ಪ್ರಕಾರದ ನಾಲ್ಕು ಪ್ರಕರಣಗಳನ್ನು ತೋರಿಸಿದೆ. ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ NB.1.8.1 ಅನ್ನು ಗುರುತಿಸಲಾಗಿದ್ದರೆ, ಮೇ ತಿಂಗಳಲ್ಲಿ ಗುಜರಾತ್ನಲ್ಲಿ LF.7 ನ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಪ್ರಸ್ತುತ, LF.7 ಮತ್ತು NB.1.8 ಎರಡನ್ನೂ ವಿಶ್ವ ಆರೋಗ್ಯ ಸಂಸ್ಥೆ (WHO) ಮೇಲ್ವಿಚಾರಣೆಯಲ್ಲಿರುವ ರೂಪಾಂತರಗಳು (VUM) ಎಂದು ವರ್ಗೀಕರಿಸಿದೆ. SARS-CoV-2 ರೂಪಾಂತರಕ್ಕೆ ಆದ್ಯತೆಯ ಗಮನ ಮತ್ತು ಮೇಲ್ವಿಚಾರಣೆಯ ಅಗತ್ಯವಿರಬಹುದು ಎಂದು ಸಾರ್ವಜನಿಕ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲು…