ಮುಂಬೈ: ತಮ್ಮ ಹೊಸ ಚಿತ್ರ ‘ಕಾಂತಾರ: ಅಧ್ಯಾಯ 1’ ವ್ಯಾಪಕ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತಿರುವ ಸಂದರ್ಭದಲ್ಲಿ ನಟ-ನಿರ್ಮಾಪಕ ರಿಷಬ್ ಶೆಟ್ಟಿ ಚಿತ್ರಕಥೆಯನ್ನು ಅಂತಿಮಗೊಳಿಸಲು ತೆಗೆದುಕೊಂಡ ಡ್ರಾಫ್ಟ್ಗಳ ಸಂಖ್ಯೆಯನ್ನು ಬಹಿರಂಗಪಡಿಸಿದ್ದಾರೆ. ಬಾಂದ್ರಾ ವೆಸ್ಟ್ನಲ್ಲಿ ಯಶಸ್ಸು ಆಚರಿಸುತ್ತಾ ರಿಷಬ್ ಶೆಟ್ಟಿ ಸುದ್ದಿಸಂಸ್ಥೆ ಜೊತೆ ಮಾತನಾಡಿ, ಚಿತ್ರದಲ್ಲಿ ಪ್ರತಿಯೊಂದು ಥೀಮ್ ಮತ್ತು ನಿರೂಪಣೆಯನ್ನು ನೇರವಾಗಿ ಚಿತ್ರಕಥೆಯಲ್ಲಿ ಸಾಧಿಸಲು 15-16 ಡ್ರಾಫ್ಟ್ಗಳು ಬೇಕಾಗಿದ್ದವು ಎಂದು ತಿಳಿಸಿದ್ದಾರೆ. “ಮೊದಲ ಭಾಗದಲ್ಲಿ ನಾವು 3-4 ಡ್ರಾಫ್ಟ್ಗಳನ್ನು ಮಾತ್ರ ಬರೆದಿದ್ದೆವು ಮತ್ತು 3-4 ತಿಂಗಳಲ್ಲಿ ಶೂಟಿಂಗ್ಗೆ ಹೋಗಿದ್ದೆವು. ಆದರೆ ಹಿಂದಿನ ಭಾಗದ ಹಿನ್ನೆಲೆ ಕಥೆಯನ್ನು ಸೇರಿಸಲು ನಂತರ 15-16 ಡ್ರಾಫ್ಟ್ಗಳಿಗೆ ಅಗತ್ಯವಾಯಿತು. ಹೀಗಾಗಿ ಸಂಪೂರ್ಣ ಕಥೆಯನ್ನು ರೂಪಿಸಿಕೊಂಡು ಶೂಟಿಂಗ್ ಆರಂಭಿಸಲಾಯಿತು” ಎಂದವರು ವಿವರಿಸಿದ್ದಾರೆ.
Year: 2025
ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಅಂಕುಶ ಹಾಕಿ; ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಈ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ. ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ…
ಬಿಜೆಪಿ ಶಾಸಕನನ್ನು ಕರಿಟೋಪಿ ಎಂದ ಡಿಕೆಶಿ; RSS ಗಣವೇಶಕ್ಕೆ ಅಪಮಾನ
ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನರನ್ನೇ ಆಹ್ವಾನಿಸದೆ, ಶಾಸಕರೊಂದಿಗೆ ಉಡಾಫೆಯಿಂದ ವರ್ತಿಸಿರುವುದು ಹಾಗೂ ಅವರು ಧರಿಸಿದ್ದ RSS ಗಣವೇಶವನ್ನು ಅಪಮಾನಿಸಿರುವುದು ಉದ್ಧಟತನದ ಪರಮಾವಧಿಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ನಡೆ ಸರ್ವಾಧಿಕಾರಿತನವನ್ನು ಪ್ರತಿಬಿಂಬಿಸಿದೆ ಎಂದು ಪ್ರತಿಕ್ರಿಯಿಸಿರುವ ವಿಜಯೇಂದ್ರ ಅಧಿಕಾರ ಶಾಶ್ವತವಲ್ಲ, ಅದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನೀಡುವ ಭಿಕ್ಷೆ ಎಂಬ ಪರಿಜ್ಞಾನವಿಲ್ಲದೆ ನಡೆದುಕೊಳ್ಳುತ್ತಿರುವ ಅವರ ವರ್ತನೆ ಅತ್ಯಂತ ಖಂಡನೀಯ. ಅವರ ನಡೆ, ನುಡಿ, ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ, ತಕ್ಕ ಉತ್ತರದ ಪಾಠವನ್ನು ಇಷ್ಟರಲ್ಲೇ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ…
ಸಿಎಂ ಆಗುವ ಕಾಲ ಸನ್ನಿಹಿತ..?’; ಈ ಬಗ್ಗೆ ಡಿಕೆಶಿ ಸ್ಪಷ್ಟನೆ
ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ, ‘ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ‘ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ’ ಎಂದವರು ಹೇಳಿದ್ದಾರೆ. ‘ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ’…
ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ ‘ಡೆವಿಲ್’ ಚಿತ್ರದ ಹೊಸ ಹಾಡು
ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡ ಇದೀಗ ಹಾಡುಗಳ ಮೂಲಕ ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿದ್ದು, ಹೊಸ ಹಾಡೊಂದು ಬಿಡುಗಡೆಯಾದ ಕ್ಷಣದಿಂದಲೇ ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ. ‘ಒಂದೆ ಒಂದು ಸಲ’ ಎಂಬ ಶೀರ್ಷಿಕೆಯ ಸುಮಧುರ ಹಾಡು ಸರಿಗಮಪ ಸಂಸ್ಥೆಯ ಮೂಲಕ ಬಿಡುಗಡೆಯಾಗಿದ್ದು, ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಸಂಪಾದಿಸಿದೆ. ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದು, ಕಪಿಲ್ ಕಪಿಲನ್ ಮತ್ತು ಚಿನ್ಮಯಿ ಶ್ರೀಪಾದ ಕಂಠ ನೀಡಿದ್ದು, ಸಂಗೀತ ಸಂಯೋಜನೆಗೆ ಅಜನೀಶ್ ಲೋಕನಾಥ್ ಸಹಕರಿಸಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದು, ದರ್ಶನ್ ಮತ್ತು ರಚನಾ ರೈ ಹಾಡಿಗೆ ನೃತ್ಯ ಪ್ರದರ್ಶನ ನೀಡಿದ್ದಾರೆ. ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸುತ್ತಿದ್ದು, ವಿಜಯಲಕ್ಷ್ಮಿ ದರ್ಶನ್ ಸೇರಿದಂತೆ ತಂಡದವರು ಪ್ರಚಾರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಚಿತ್ರದಲ್ಲಿನ ಪ್ರತಿ ಹಾಡು ಕ್ರಮವಾಗಿ ಬಿಡುಗಡೆಯಾಗುವ…
RSS ಶತಮಾನೋತ್ಸವ ನಾಣ್ಯಗಳು, ಅಂಚೆಚೀಟಿಗಳು ಆನ್ಲೈನ್ನಲ್ಲಿ ಲಭ್ಯ
ನವದೆಹಲಿ: ಕೋಲ್ಕತ್ತಾ ಟಂಕಸಾಲೆ ಹೊರಡಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ) 100 ನೇ ವಾರ್ಷಿಕೋತ್ಸವವನ್ನು ಗುರುತಿಸಲು ‘ಸ್ಮರಣಾರ್ಥ ನಾಣ್ಯ’ಗಳನ್ನು ಬಿಡುಗಡೆ ಮಾಡಲಾಗಿದೆ. ಅಧಿಕೃತ ವೆಬ್ಸೈಟ್ https://indiagovtmint.in/hi/product-category/kolkata-mint/ ಮೂಲಕ ಆನ್ಲೈನ್ನಲ್ಲಿ ಇವುಗಳನ್ನು ಖರೀದಿಸಬಹುದು. ರಾಷ್ಟ್ರೀಯ ಏಕತೆ ಮತ್ತು ಸೇವೆಗೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾದ ಪ್ರಮುಖ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಯಾದ ಆರ್ಎಸ್ಎಸ್ನ 100ನೇ ವಾರ್ಷಿಕೋತ್ಸವವನ್ನು ಗುರುತಿಸಲು ಭಾರತ ಸರ್ಕಾರ ವಿಶೇಷ ‘ಸ್ಮರಣಾರ್ಥ ನಾಣ್ಯ’ ಮತ್ತು ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದೆ. ಆರ್ಎಸ್ಎಸ್ನ ಶತಮಾನಗಳ ಸಮರ್ಪಣೆ ಮತ್ತು ಸಾಮಾಜಿಕ ಪ್ರಭಾವದ ಪ್ರಯಾಣದ ಮಹತ್ವವನ್ನು ಎತ್ತಿ ತೋರಿಸುವ ಪ್ರಯತ್ನ ಇದಾಗಿದೆ. ಆರ್ಎಸ್ಎಸ್ನ ಪರಂಪರೆಯನ್ನು ಗೌರವಿಸಲು ವಿನ್ಯಾಸಗೊಳಿಸಲಾದ ಈ ನಾಣ್ಯಗಳು ಉತ್ಸಾಹಿಗಳು ಮತ್ತು ಬೆಂಬಲಿಗರಿಗೆ ಅಮೂಲ್ಯವಾದ ಸಂಗ್ರಹಯೋಗ್ಯ ವಸ್ತುಗಳಾಗುವ ನಿರೀಕ್ಷೆಯಿದೆ. ನಾಣ್ಯಗಳ ಜೊತೆಗೆ ಬಿಡುಗಡೆಯಾದ ವಿಶೇಷ ಅಂಚೆಚೀಟಿಗಳನ್ನು ದೇಶಾದ್ಯಂತದ ಅಂಚೆಚೀಟಿ ಸಂಗ್ರಹಣಾ ಬ್ಯೂರೋಗಳಲ್ಲಿ ಪಡೆಯಬಹುದು, ಇದು ಅಂಚೆಚೀಟಿ ಸಂಗ್ರಹಿಸುವವರು ಮತ್ತು ಸಾರ್ವಜನಿಕರಿಗೆ ಈ ಐತಿಹಾಸಿಕ ಮೈಲಿಗಲ್ಲಿನ…
ಒಳನುಸುಳುವಿಕೆ ತಡೆಯಲು ‘3D ನೀತಿ’ ಪರಿಣಾಮಕಾರಿ ಅಸ್ತ್ರ; ಅಮಿತ್ ಶಾ
ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಪೌರತ್ವ ನೀಡುವುದು ಭಾರತದ ನಾಯಕರು ನೀಡಿದ ಐತಿಹಾಸಿಕ ಭರವಸೆಯನ್ನು ಈಡೇರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮೂಲಕ ಸಾಕಾರಗೊಂಡ ಬದ್ಧತೆಯಾಗಿದೆ ಎಂದವರು ಹೇಳಿದ್ದಾರೆ. ವಿರೋಧ ಪಕ್ಷಗಳು ಸಿಎಎ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ಆರೋಪಿಸಿದ ಅಮಿತ್ ಶಾ, ಸ್ವಾತಂತ್ರ್ಯದ ನಂತರ ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವವರಿಗೆ ಆಶ್ರಯ ನೀಡುವ ಮೂಲಕ ದಶಕಗಳ ಆಡಳಿತ ವೈಫಲ್ಯಗಳನ್ನು ಇದು ಸರಿಪಡಿಸುತ್ತದೆ ಎಂದು ಪ್ರತಿಪಾದಿಸಿದರು. ಅಂತಹ ದಬ್ಬಾಳಿಕೆಗೆ ಒಳಗಾದ ಪ್ರತಿಯೊಬ್ಬ ಅಲ್ಪಸಂಖ್ಯಾತ ಕೂಡಾ ಭಾರತದಲ್ಲಿ ಆಶ್ರಯ ಪಡೆಯಲು ಸರಿಯಾದ ಹಕ್ಕನ್ನು ಹೊಂದಿದ್ದಾರೆ, ಆರ್ಥಿಕ ಅಥವಾ ಇತರ ಕಾರಣಗಳಿಗಾಗಿ ಅಕ್ರಮವಾಗಿ ಪ್ರವೇಶಿಸುವವರು,…
ಬಿಹಾರ ಅಖಾಡಕ್ಕೆ ಕರ್ನಾಟಕದ ಹಣ; ಬಿಜೆಪಿ ಆರೋಪ
ಬೆಂಗಳೂರು: ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ ಇನ್ನು ಸಿಎಂ, ಡಿಸಿಎಂ, ಮಂತ್ರಿಗಳು ತಮ್ಮ ಇರುವ ಕುರ್ಚಿ ಉಳಿಸಿಕೊಳ್ಳಲು ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡ ನೀವೇ ಊಹಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಒಂದು ಕಡೆ ಜನರಿಗೆ ಕ್ಯಾಸಿನೋ, ಜೂಜು, ಬೆಟ್ಟಿಂಗ್ ಆಡಿಸಿ ಬಡವರ ಮನೆಹಾಳು ಮಾಡಿ ಅಡ್ಡದಾರಿಯಲ್ಲಿ ದುಡ್ಡು ಮಾಡುವುದು. ಆ ಪಾಪದ ಹಣದಲ್ಲಿ ಟಿಕೆಟ್ ಪಡೆದು, ಚುನಾವಣೆ ಎದುರಿಸಿ, ಹೈಕಮಾಂಡ್ ಗೆ ಕಪ್ಪ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವುದು. ಆಮೇಲೆ ಮಂತ್ರಿಗಿರಿ ಬಳಸಿಕೊಂಡು ಇನ್ನಷ್ಟು ಲೂಟಿ ಮಾಡುವುದು. ಇದು ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಹೆಣೆದಿರುವ ವಿಷ ವರ್ತುಲ ಎಂದವರು ಟ್ವೀಟ್ ಮಾಡಿದ್ದಾರೆ. ತೆಲಂಗಾಣ ಚುನಾವಣೆಗೆ, ಲೋಕಸಭೆ ಚುವಾವಣೆಗೆ…
ಸಿಜೆಐ ಮೇಲಿನ ದಾಳಿಯ ಹಿಂದೆ ಭಾರೀ ಸಂಚು ಸಾಧ್ಯತೆ; ಮನೋರಾಜ್ ಅನುಮಾನ
ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಗಳ ಮೇಲೆ ವಕೀಲ ರಾಕೇಶ್ ಕಿಶೋರ್ ನಡೆಸಿರುವ ದಾಳಿಯನ್ನು ಇಡೀ ದೇಶವೇ ಖಂಡಿಸಬೇಕಿದೆ. ಕೃತ್ಯ ಎಸಗಿದ ವ್ಯಕ್ತಿಯ ವಿರುದ್ಧ ಮೊಕದ್ದಮೆ ದಾಖಲಿಸಿ, ಅಪರಾಧಿಗೆ ಶಿಕ್ಷೆ ಆಗಲೇಬೇಕಿದೆ ಎಂದಿದ್ದಾರೆ. ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಿರುವ ಘಟನೆಯನ್ನು ಸಹಿಸಲಾಗದು. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮಾತ್ರವಲ್ಲ, ಸಂವಿಧಾನಕ್ಕೂ ಮಾಡಿರುವ ಅಪಚಾರವಾಗಿದೆ. ತಮ್ಮ ಮೇಲೆ ಶೂ ಎಸಗಿದವನನ್ನು ಕ್ಷಮಿಸಿರುವುದು ಮುಖ್ಯ ನ್ಯಾಯಮೂರ್ತಿಗಳ ಒಳ್ಳೆಯ ಗುಣವೇ ಆಗಿರಬಹುದು. ಆದರೆ, ಇದು ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಆಘಾತ ಎಂದು…
ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ
ಬೆಂಗಳೂರು: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಚಿಂತಿಸಬೇಕಾಗಿಲ್ಲ. ಇನ್ನೂ ಮೂರರಿಂದ ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ,” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಚಿಂತಿಸಬೇಕಾಗಿಲ್ಲ. ತಂದೆಯವರಿಗೆ ಯಾವುದೇ ತೀವ್ರವಾದ ಆರೋಗ್ಯ ಸಮಸ್ಯೆಗಳಿಲ್ಲ. ಕಳೆದ ಮೂರು ದಿನಗಳಿಂದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ದೇವರ ಕೃಪೆ ಮತ್ತು ಜನರ ಆಶೀರ್ವಾದದಿಂದ ಅವರು ಉತ್ತಮ ಸ್ಥಿತಿಯಲ್ಲಿದ್ದಾರೆ” ಎಂದು ಹೇಳಿದರು. ಈ ನಡುವೆ ಜೆಡಿ(ಎಸ್) ಪಕ್ಷವು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, “ಪಕ್ಷದ ಆತ್ಮೀಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಚಿಂತಿಸಬೇಕಾಗಿಲ್ಲ. ಮಾಜಿ ಪ್ರಧಾನಿ ಮತ್ತು ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಚೇತರಿಸಿಕೊಂಡಿದ್ದಾರೆ, ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ,” ಎಂದು ತಿಳಿಸಿದೆ.…
