RSS ಹಿರಿಯ ನಾಯಕ ಕೃ.ನರಹರಿ ವಿಧಿವಶ

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕೃ. ನರಹರಿ ಅವರು ತಮ್ಮ 93 ವರ್ಷ ವಯಸ್ಸಿನಲ್ಲಿ ಗುರುವಾರ ಬೆಳಗ್ಗೆ 4.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ನರಹರಿ ಅವರ ನಿಧಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರೂ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಪ್ರಸಿದ್ಧ ಶಿಕ್ಷಣ ತಜ್ಞರೂ ಆಗಿದ್ದ ಕೃ. ನರಹರಿ ವಿಧಿವಶರಾಗಿದ್ದಾರೆ. ನಿಧನದಿಂದಾಗಿ ಒಂದು ಸಮಾಜಸಮರ್ಪಿತ ಜೀವನ ಅಂತ್ಯಗೊಂಡಿದೆ ಎಂದವರು ಸಂತಾಪ ಸೂಚಿಸಿದ್ದಾರೆ.

ತೆಲುಗು ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತ

ಹೈದರಾಬಾದ್: ಟಾಲಿವುಡ್​ ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತವಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸೋಮವಾರ ನಟ ವಿಜಯ್ ದೇವರಕೊಂಡ ಅವರ ಕಾರು, ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಮರಳುತ್ತಿದ್ದಾಗ ಅವರಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ ಎನ್ನಲಾಗಿದ್ದು, ನಟನಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ; ನವೆಂಬರ್ 6 ಮತ್ತು 11 ರಂದು ಮತದಾನ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. 243 ಕ್ಷೇತ್ರಗಳ ಪೈಕಿ, 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಹಾಗೂ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತಗಳ ಎಣಿಕೆ ನಡೆಯಲಿದೆ ಎಂದವರು ವಿವರಿಸಿದ್ದಾರೆ.

‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸೋಮಣ್ಣ ಮಾತಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ಮಂಗಳವಾರ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ…

GST ಪರಿಷ್ಕೃತ ಸ್ಲ್ಯಾಬ್ 5% & 18%: ಗ್ರಾಹಕರೂ ಖುಶ್, ವರ್ತಕರೂ ಜೋಶ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತಂದಿದೆ. ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಸಂಕೀರ್ಣ ತೆರಿಗೆ ಸ್ಲ್ಯಾಬ್‌ಗಳನ್ನು ಸರಳಗೊಳಿಸಿ ಈಗ ಕೇವಲ 5% ಮತ್ತು 18% ಎಂಬ ಎರಡು ಸ್ಲ್ಯಾಬ್‌ಗಳನ್ನು ಮಾತ್ರ ಜಾರಿಗೆ ತಂದಿದೆ. ಸರ್ಕಾರದ ಈ ಕ್ರಮವು ದೇಶದ ಅಭಿವೃದ್ಧಿಗೆ ಬರೆದ ಮುನ್ನುಡಿಯಾಗಿದೆ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ವ್ಯಾಪಾರಿಗಳಿಗೆ ಸೌಲಭ್ಯ, ಗ್ರಾಹಕರಿಗೆ ರಿಯಾಯಿತಿ, ಕೈಗಾರಿಕೆಗಳಿಗೆ ಉತ್ಸಾಹ ನೀಡುವುದು ಈ ನಿರ್ಧಾರದ ಉದ್ದೇಶ ಇದರಿಂದಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರಗತಿಯ ಶಕೆ ಆರಂಭವಾದಂತಾಗಿದೆ. ವ್ಯಾಪಾರ ವಲಯದಲ್ಲಂತೂ ಸಂತಸ ಮನೆಮಾಡಿದೆ. ಕರ್ನಾಟಕ: ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಹೊಸ ಚೈತನ್ಯ ಕರ್ನಾಟಕದ ಮೈಸೂರು ರೇಷ್ಮೆ, ಚನ್ನಪಟ್ಟಣ ಆಟಿಕೆಗಳು, ಧಾರವಾಡ ಪೇಡಾ, ಮೈಸೂರು ಪಾಕ್ ಮೊದಲಾದ ಉತ್ಪನ್ನಗಳು ಈಗ ಕಡಿಮೆ ತೆರಿಗೆ ದರಕ್ಕೆ ಒಳಪಟ್ಟಿವೆ. ಇದರಿಂದ ಸಾಂಪ್ರದಾಯಿಕ ಉದ್ಯಮಗಳು ಸ್ಪರ್ಧಾತ್ಮಕ ಬೆಲೆಗೆ ಉತ್ಪಾದನೆ ಮಾಡಬಹುದಾಗಿದೆ. ನಂಜನಗೂಡು…

ಜಾತಿ ಗಣತಿ ದಿನೇ ದಿನೇ ಗೊಂದಲ; ವಿಜಯೇಂದ್ರ ಟೀಕೆ

ಮೈಸೂರು: “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ದಿನೇ ದಿನೇ ಗೊಂದಲ ಸೃಷ್ಟಿಸುತ್ತಿದೆ. ಇದು ಎಲ್ಲಾ ಸಮುದಾಯಗಳಲ್ಲಿಯೂ ಅಶಾಂತಿ ಉಂಟುಮಾಡಿದೆ,” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರವು ಯಾವುದೇ ಸೂಕ್ತ ಸಿದ್ಧತೆ ಇಲ್ಲದೆ ಆತುರದಲ್ಲಿ ಈ ಸಮೀಕ್ಷೆ ಪ್ರಾರಂಭಿಸಿರುವುದು ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಜನರಲ್ಲಿ ಗೊಂದಲ ಹೆಚ್ಚಾಗಿದೆ,” ಎಂದರು. “ಕಾಂಗ್ರೆಸ್ ಪಕ್ಷದೊಳಗೆ ಅಕ್ಟೋಬರ್ ಅಥವಾ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಸಂಭವನೀಯ ರಾಜಕೀಯ ಕ್ರಾಂತಿ ಮತ್ತು ಈ ಜಾತಿ ಗಣತಿಯ ನಡುವೆ ಯಾವುದೇ ಸಂಬಂಧವಿದೆಯೇ ಎಂಬ ಪ್ರಶ್ನೆ ಈಗ ಎಲ್ಲೆಡೆ ಕೇಳಿಬರುತ್ತಿದೆ,” ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. ಗಣತಿ ಕಾರ್ಯದಲ್ಲಿ ವಿಕಲಚೇತನರನ್ನು ಸೇರಿಸಿರುವ ಬಗ್ಗೆ ಟೀಕೆ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಏಕೆ ಇಷ್ಟೊಂದು ಆತುರದಲ್ಲಿದ್ದಾರೆ ಎಂಬುದು…

ಈ ಬಾರಿ ‘ಸ್ವದೇಶಿ ದೀಪಾವಳಿ’ ಆಚರಿಸಿ; ಚಾಣಕ್ಯ ಅಮಿತ್ ಶಾ ಕರೆ

ನವದೆಹಲಿ: “ಈ ದೀಪಾವಳಿಯಲ್ಲಿ ವಿದೇಶಿ ಸರಕುಗಳ ಬದಲು ಸ್ವದೇಶಿ ಉತ್ಪನ್ನಗಳನ್ನು ಖರೀದಿಸಿ ಬಳಸಿ” ಎಂದು ದೇಶದ ಜನತೆಗೆ ಕರೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “140 ಕೋಟಿ ಭಾರತೀಯರ ಸ್ವದೇಶಿ ಮನೋಭಾವ ದೇಶವನ್ನು ವಿಶ್ವದ ಸರ್ವೋನ್ನತ ರಾಷ್ಟ್ರವನ್ನಾಗಿ ಮಾಡಲಿದೆ” ಎಂದರು. ಗೋವದಲ್ಲಿ ಮಜೇ ಘರ್ ಯೋಜನೆ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನಂತರ ಪಣಜಿಯ ಸಮೀಪದ ಸಾರ್ವಜನಿಕ ಸಭೆಯಲ್ಲಿ ಶನಿವಾರ ಪಾಲ್ಗೊಂಡ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಸುಧಾರಣಾ ಕ್ರಮಗಳನ್ನು ಜಾಗರೂಕತೆಯಿಂದ ಜಾರಿಗೆ ತರುತ್ತಿದೆ. ಈ ಯೋಜನೆಯಿಂದ ಜನರಲ್ಲಿ ಹೆಮ್ಮೆಯ ಭಾವ ಮೂಡಲಿದೆ — ‘ಇದು ನನ್ನ ಮನೆ’ ಎಂದು ಹೇಳುವ ಗೌರವ ದೊರೆಯಲಿದೆ’ ಎಂದರು. Kharge Ji wants to falsify the equal rights among citizens enshrined in the…

EDಯಿಂದ ಓಜೋನ್ ಅರ್ಬಾನಾ ಕಂಪನಿಯ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ಅಡಿಯಲ್ಲಿ ತಾತ್ಕಾಲಿಕ ಜಪ್ತಿ ಆದೇಶ ಹೊರಡಿಸಿದ್ದು, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರ 423.38 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ. ಇಡಿ ಶನಿವಾರ ಅಧಿಕೃತ ಹೇಳಿಕೆಯ ಪ್ರಕಾರ, ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧದ ಪ್ರಮುಖ ಆರೋಪವೆಂದರೆ ಅದು ಸಮಯಕ್ಕೆ ಸರಿಯಾಗಿ ಪ್ರೊಜೆಕ್ಷನ್ ನಿರ್ಮಾಣವನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದೆ ಮತ್ತು ಗ್ರಾಹಕರಿಗೆ ಸ್ವಾಧೀನವನ್ನು ಹಸ್ತಾಂತರಿಸುವಲ್ಲಿ ವಿಫಲವಾಗಿದೆ. ಫ್ಲಾಟ್ ಅನ್ನು ಮನೆ ಖರೀದಿದಾರರಿಗೆ ಹಸ್ತಾಂತರಿಸುವವರೆಗೆ ನಿರ್ಮಾಣ ಪೂರ್ವ ಇಎಂಐಗಳನ್ನು ಪಾವತಿಸಲು ಆಫರ್ ನೀಡುವ ಮೂಲಕ ಕಂಪನಿಯು ವಂಚಿಸಿದೆ ಎಂದು ಆರೋಪಿಸಲಾಗಿದೆ ಎಂದು ಇಡಿ ತಿಳಿಸಿದೆ. ಆದಾಗ್ಯೂ, ಅದು ತನ್ನ ಬದ್ಧತೆಗಳನ್ನು ಪೂರೈಸಲು ವಿಫಲವಾಗಿದೆ ಮತ್ತು ಯೋಜನೆ/ಫ್ಲಾಟ್‌ಗಳನ್ನು ಪೂರ್ಣಗೊಳಿಸಲಿಲ್ಲ. ಬಿಲ್ಡರ್ ವಸತಿ…

ಭಾರತೀಯ ಸೇನೆಯ ಭವಿಷ್ಯದ ಯುದ್ಧಭೂಮಿಗೆ ಹೊಸ ‘ರುದ್ರ ಬ್ರಿಗೇಡ್’

ದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ‘ರುದ್ರ ಬ್ರಿಗೇಡ್’ ಎಂಬ ಹೊಸ ಸಂಯೋಜಿತ ಬ್ರಿಗೇಡ್ ರಚನೆಯ ಘೋಷಣೆ ಮಾಡುವ ಮೂಲಕ ಸೇನೆಯ ಭವಿಷ್ಯದ ಯುದ್ಧ ತಂತ್ರತಂತ್ರಗಳಿಗೆ ತಕ್ಕಂತೆ ತನ್ನ ಸಿದ್ಧತೆಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಉತ್ತರ ಕಮಾಂಡ್ ಪ್ರಕಟಣೆಯಲ್ಲಿ ಹೇಳಿರುವಂತೆ, “ರುದ್ರ – ಸಂಯೋಜಿತ ಯುದ್ಧ ಅಪ್ಲಿಕೇಶನ್ ಮತ್ತು ಅಂತರ-ಶಸ್ತ್ರ ಏಕೀಕರಣದ ವಿಶಿಷ್ಟ ಮಿಶ್ರಣ. ವಿಕಸಿಸುತ್ತಿರುವ ತಂತ್ರಜ್ಞಾನಗಳು ಮತ್ತು ಕ್ರಿಯಾತ್ಮಕ ಸವಾಲುಗಳೊಂದಿಗೆ ನಿರಂತರವಾಗಿ ರೂಪಾಂತರಗೊಳ್ಳುತ್ತಿರುವ ಯುದ್ಧಭೂಮಿಗಳನ್ನು ಎದುರಿಸುವುದರಲ್ಲಿ ಈ ಬ್ರಿಗೇಡ್ ಪ್ರಮುಖ ಪಾತ್ರ ವಹಿಸುತ್ತದೆ. ಭಾರತೀಯ ಸೇನೆಯು ಭವಿಷ್ಯದ ಯುದ್ಧಗಳಿಗೆ ಸಿದ್ಧತೆ ಮತ್ತು ಸಾಮರ್ಥ್ಯ ಅಭಿವೃದ್ಧಿಯ ಮೇಲೆ ನಿರಂತರ ಗಮನ ನೀಡುತ್ತಿದೆ” ಎಂದು ತಿಳಿಸಲಾಗಿದೆ. Indian Army @NorthernComd_IA released a video of Rudra Brigade.#Rudra #ColdStart #India #IndianArmy #Delhi pic.twitter.com/jtk7UdHfw1 — South Asia IntelWire (@SouthAsiaIntel) October 4,…

ಉಚಿತ ವೇದಾಂತ ವಿದ್ಯಾರ್ಥಿವೇತನ ಪರೀಕ್ಷೆ; ಮಂಗಳೂರಿನಲ್ಲಿ ಪಿಯುಸಿ ಓದುವವರಿಗೆ ಸುವರ್ಣಾವಕಾಶ

ಮಂಗಳೂರಿನಲ್ಲಿ IITIANS ಮತ್ತು Doctors ನಡೆಸುತ್ತಿರುವ ಮೊದಲ ಪಿಯು ಕಾಲೇಜು ಎಂಬ ಖ್ಯಾತಿ ಪಡೆದ ವೇದಾಂತ ಪಿ ಯು ಕಾಲೇಜು ವತಿಯಿಂದ 5th ಅಕ್ಟೋಬರ್ 2025 ರಂದು (ಭಾನುವಾರ) ಬೆಳಿಗ್ಗೆ 10:00 ರಿಂದ ಉಚಿತ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಉಚಿತ ಪ್ರವೇಶ ಹಾಗೂ ವಿಶೇಷ ವಿದ್ಯಾರ್ಥಿವೇತನ ಮೂಲಕ ಪ್ರವೇಶ ಬಯಸುವ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಕೆಲವು ದಿನಗಳ ಹಿಂದೆ ಬೆಳಗಾವಿ ಜೆಲ್ಲೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಅಕ್ಟೋಬರ್ 2025 ರಂದು (ಭಾನುವಾರ) ಮಂಗಳೂರಿನ ಫ಼ೆರ್ಮಾಯಿ- ಕುಟಿನೋಪದವು ಬಳಿಯ ‘ವೇದಾಂತ ಪದವಿಪೂರ್ವ ಕಾಲೇಜ್’ನಲ್ಲಿ ಈ ಪ್ರವೇಶ ಪರೀಕ್ಷೆ ನಡೆಯಲಿದೆ. State/CBSE/ICSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇದೆ ಎಂದು ‘ವೇದಾಂತ ಪದವಿಪೂರ್ವ ಕಾಲೇಜ್’ ಪ್ರಕಟಣೆ ತಿಳಿಸಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಸೀಟು ವಿಜ್ಞಾನ ವಿಭಾಗಗಳಿಗೆ ಮಾತ್ರ…