ಮಂಗಳೂರು: ಕರಾವಳಿ ದಸರಾದ ಕೇಂದ್ರ ಸ್ಥಾನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಭಾನುವಾರ ಪುಟಾಣಿಗಳ ಜಗತ್ತಾಗಿ ಮಾರ್ಪಟ್ಟಿತ್ತು. ಚಿಣ್ಣರ ಕಲರವ ಮಂಗಳೂರು ದಸರಾದ ಆಕರ್ಷಣೆಯನ್ನು ನೂರ್ಮಡಿಗೊಳಿಸಿತು. ಹೌದು ಪುಟಾಣಿಗಳ ಸಂತೋಷ, ಕ್ರೀಡೆ, ನಗು, ಕಲಾ ಕೌಶಲಗಳಿಗೆ ವೇದಿಕೆ ಸೃಷ್ಟಿಸುವ ಉದ್ದೇಶದಿಂದ ಹಲವು ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಗುಚ್ಛ ಮಕ್ಕಳ ದಸರಾ-2025ರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಸ್ರಾರು ಪುಟಾಣಿಗಳು ಸಾಕ್ಷಿಯಾಗಿದರು. ಕುದ್ರೋಳಿ ಕ್ಷೇತ್ರದ ದ್ವಾರದಿಂದ ವೇದಿಕೆ ತನಕ ಪುಟಾಣಿಗಳ ಮೆರವಣಿಗೆ ಈ ಕಾರ್ಯಕ್ರಮಕ್ಕೆ ಆಕರ್ಷಣೆ ತುಂಬಿತು. ಪುಣಿಗಳಿಗಾಗಿ ಬಿರುವೆರ್ ಕುಡ್ಲ ಪ್ರಾಯೋಜಕತ್ವದಲ್ಲಿ ಕಿನ್ನಿಪಿಲಿ ಸ್ಪರ್ಧೆ, ಭವಾನಿ ಶಿಪ್ಪಿಂಗ್ಸ್ ಪ್ರಾಯೋಜಕತ್ವದಲ್ಲಿ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದ್ದು, ಸಹಸ್ರಾರು ಪುಟಾಣಿಗಳು ಪಾಲ್ಗೊಂಡರು. ಸಾಮಾಜಿಕ ಜಾಲತಾಣ ತಾರೆ, ಸ್ಮಾರ್ಟ್ ಕಿಡ್ ಖ್ಯಾತಿಯ ಅಗ್ನಿವ್ ಮಕ್ಕಳ ದಸರಾ ಉದ್ಘಾಟಿಸಿದರು. ಡಾ.ಸುಶ್ಮಾ ಅಕ್ಕರಾಜು, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.,…
Year: 2025
ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ಗಮನಸೆಳೆಯಿತು. ಮ್ಯಾರಥಾನ್ ನಲ್ಲಿ ಚಿಣ್ಣರಿಂದ ವೃದ್ಧರವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು. ಕೇರಳ, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21 ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ. 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ…
ಜಾತಿ ಸಮೀಕ್ಷೆಯಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ: ಬಿಜೆಪಿ ನಾಯಕರ ಸಲಹೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ…
“ಜಾತಿ ಗಣತಿ ಬಹಿಷ್ಕರಿಸಿ”; ರಾಜ್ಯದ ಜನತೆಗೆ ಬಿಜೆಪಿ ಕರೆ
ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. ಜಾತಿಗಣತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮ ಬಗ್ಗೆ ಕಾಟು ಟೀಕೆ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಕರೆ ನೀಡಿದರು. ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ ಎಂದಿರುವ ತೇಜಸ್ವಿ ಸೂರ್ಯ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ ಜೊತೆಗೆ, ಜಾತಿ ಜಾತಿ ಮಧ್ಯೆ ಗಲಾಟೆ ತರಲು ಇದನ್ನು ಮಾಡುತ್ತಿದ್ದಾರೆ. ಹಾಗಾಗಿ ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ. ಹಿಂದೆ ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ…
ಕರೂರ್ ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಪ್ರಕರಣ
ಕರೂರ್: ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕರೂರ್ ಪಟ್ಟಣ ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಮಥಿಯಜಗನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶನಿವಾರ ನಡೆದ ಈ ದುರಂತದಲ್ಲಿ 39 ಜನರು ಸಾವನ್ನಪ್ಪಿದ್ದು, 83 ಜನರು ಗಾಯಗೊಂಡಿದ್ದಾರೆ. ಜನಸಂದಣಿ ನಿಯಂತ್ರಣ ಮತ್ತು ಭದ್ರತಾ ಮಾನದಂಡಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ ನಾಲ್ಕು ವಿಭಾಗಗಳಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳು ಇನ್ನೂ ಇತರರ ಲೋಪಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. “ತನಿಖೆ ಮುಂದುವರಿಯುತ್ತಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಬೆಳಗ್ಗಿನಿಂದಲೇ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಿಸಿಲಿನಲ್ಲಿ ನಿಂತಿದ್ದವರಿಗೆ ಆಹಾರ–ನೀರು ಒದಗಿಸಲ್ಪಟ್ಟರೂ, ಸಂಜೆ ವಿಜಯ್ ಆಗಮಿಸುವ ಸುದ್ದಿ ಹರಿದಂತೆ ಜನದಟ್ಟಣೆ ಹೆಚ್ಚಿತು. ಅಬ್ಬರದ ಗುಂಪಿನಲ್ಲಿ…
ಮಂಗಳೂರು ದಸರಾ: ಅಕ್ಟೊಬರ್ 2ರಂದು ಅದ್ಧೂರಿ ಶೋಭಾಯಾತ್ರೆ;
ಮಂಗಳೂರು: ಕರಾವಳಿಯಲ್ಲಿ ಮಂಗಳೂರು ದಸರಾ ಮಹೋತ್ಸವದ ವೈಭವ ಗರಿಗೆದರಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಕೇಂದ್ರೀಕರಿಸಿ ನೆರವೇರುತ್ತಿರುವ ಅದ್ದೂರಿ ಮಂಗಳೂರು ದಸರಾದ ಆಕಷಣೆಯ ಕೇಂದ್ರಬಿಂದುವೆನಿಸಿರುವ ಶೋಭಾ ಯಾತ್ರೆಯು ಅಕ್ಟೊಬರ್ 2ರಂದು ನಡೆಯಲಿದೆ. ಮೈಸೂರು ದಸರಾ ಮಾದರಿಯಲ್ಲೇ ವಿಶ್ವವಿಖ್ಯಾತ ಉತ್ಸವವಾಗಿ ನೆರವೇರಿಸಲು ಕಸರತ್ತು ನಡೆಸಿರುವ ಕುದ್ರೋಳಿ ದೇವಾಲಯದ ಉತ್ಸವ ಸಮಿತಿ, ಅದ್ಧೂರಿ ಶೋಭಾಯಾತ್ರೆಗೆ ಬೇಕಾದ ವ್ಯವಸ್ಥೆಗಳಿಗೆ ಅಂತಿಮ ಸ್ಪರ್ಶ ನೀಡಿದೆ. ಈ ನಡುವೆ, ವರ್ಷಂಪ್ರತಿಯಂತೆ ಮೆರವಣಿಗೆ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಪ್ರತಿಪಾದಿಸಿದ್ದಾರೆ. ದಸರಾ ಮಹೋತ್ಸವ ಮೆರವಣಿಗೆ ಹಿನ್ನಲೆಯಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ಶುಕ್ರವಾರ ಟ್ಯಾಬ್ಲೋ ಮುಖ್ಯಸ್ಥರು ಮತ್ತು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶೋಭಾ ಯಾತ್ರೆಯನ್ನು ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ಸಾಕ್ಷೀಕರಿಸುವ ನಿರೀಕ್ಷೆಯಿದೆ. ರಾಜ್ಯದ ವಿವಿಧ ಕಡೆಯಿಂದ ಕಲಾತಂಡಗಳು, ವಾದ್ಯ ತಂಡಗಳು, ಭಜನಾ ತಂಡಗಳು,…
ನಿರ್ಮಿತಿ ಕೇಂದ್ರ, ಕೆಆರ್ಐಡಿಎಲ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ; ಗುತ್ತಿಗೆದಾರರ ಸಂಘ ಆರೋಪ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್ಸಿಎ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್ಸಿಎ) ಅಧ್ಯಕ್ಷ ಆರ್. ಮಂಜುನಾಥ್ ಮತ್ತು ಜಿ.ಎಂ. ರವೀಂದ್ರ ಅವರು ಸಹಿ ಮಾಡಿದ ಪತ್ರದಲ್ಲಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಯಾವುದೇ ಲಂಚ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದಾರೆ. ನಿರ್ಮಿತಿ ಕೇಂದ್ರಗಳು ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಆರ್ಐಡಿಎಲ್) ಅಡಿಯಲ್ಲಿರುವ ಯೋಜನೆಗಳನ್ನು ಶಾಸಕರು ಮತ್ತು ಸಚಿವರ ಅನುಯಾಯಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಅವರು ಯೋಜನೆಗಳನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸುತ್ತಾರೆ ಮತ್ತು ಲಂಚ ಪಡೆಯಬೇಕೆಂದು ಒತ್ತಾಯಿಸುತ್ತಾರೆ ಎಂದು ಪಾತ್ರದಲ್ಲಿ ಆರೋಪಿಸಲಾಗಿದೆ. “ಯೋಜನೆಗಳನ್ನು ನಮಗೆ ಉಪಗುತ್ತಿಗೆ ನೀಡಿದಾಗ…
ಸವಿತಾ ಜಾತಿಗಳನ್ನು ದಲಿತ ಸಮುದಾಯಕ್ಕೆ ಸೇರಿಸಲು ಹೆಚ್ಚಿದ ಒತ್ತಡ
ದಾವಣಗೆರೆ: ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ತಮ್ಮ ಸಮುದಾಯಗಳನ್ನು ದಲಿತ ಸಮುದಾಯವಾಗಿ ಗುರುತಿಸಬೇಕೆಂದು ಸವಿತಾ ಸಮುದಾಯದ ನಾಯಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದ್ದು, ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಸವಿತಾ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ಸವಿತಾ ಸಮುದಾಯದವರು ಸಾಮಾಜಿಕವಾಗಿ ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ತಮ್ಮ ಸಮುದಾಯಗಳನ್ನು ದಲಿತ ಸಮುದಾಯವಾಗಿ ಪರಿಗಣಿಸಿ ಮೀಸಲಾತಿಯ ಲಾಭ ದೊರಕಿಸಿಕೊಡಬೇಕೆಂದು ಹಲವು ವರ್ಷಗಳಿಂದಲೇ ಹೋರಾಟ ನಡೆಯುತ್ತಿದೆ. ಕನಿಷ್ಠ ಪಕ್ಷ ಒಳ ಮೀಸಲಾತಿಯನ್ನಾದರೂ ಸರ್ಕಾರ ಕಲ್ಪಿಸಬಹುದಾಗಿತ್ತು ಎಂದು ಸವಿತಾ ಸಮಾಜ ಸಂಘದ ಅಧ್ಯಕ್ಷರಾದ ಎನ್.ರಂಗಸ್ವಾಮಿ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಮಾಧ್ಯಮಗಳಿಗೆ ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎನ್.ರಂಗಸ್ವಾಮಿ, ಸವಿತಾ ಸಮಾಜಕ್ಕೆ ದಲಿತ ಸಮುದಾಯದ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಹಲವಾರು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಅನೇಕ ಬಾರಿ ಸರ್ಕಾರಕ್ಕೆ ಮನವಿಗಳನ್ನೂ ಸಲ್ಲಿಸಲಾಗಿದೆ ಎಂದು ತಿಳಿಸಿದರು. ವೀರಪ್ಪ ಮೊಯ್ಲಿ ಸಿಎಂ ಆಗಿದ್ದಾಗಲೂ,…
ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 36 ಸಾವು, ಪ್ರಧಾನಿ ಸಂತಾಪ
ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ಟಿವಿಕೆ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ–ರಾಜಕಾರಣಿ ವಿಜಯ್ ಭಾಷಣ ಕೇಳಲು ನೆರೆದ ದಟ್ಟವಾದ ಜನಸಮೂಹದಲ್ಲಿ ಕಾಲ್ತುಳಿತ ಸಂಭವಿಸಿ 36 ಜನರು ಮೃತಪಟ್ಟಿದ್ದು, 58ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಗಾಯಿತರಲ್ಲಿ ಮೂವರು ಮಕ್ಕಳು ತೀವ್ರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಶಕ್ತಿ ನೀಡಲಿ, ಗಾಯಿತರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ದುಃಖ ವ್ಯಕ್ತಪಡಿಸಿ ತಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಎಸ್ಟಿ ಸುಧಾರಣೆ, ಮೂಲಸೌಕರ್ಯ ವ್ಯವಸ್ಥೆ ಜನರಿಗೆ ಪ್ರಯೋಜನವಾಗಬೇಕೆಂಬುದೇ ಮೋದಿ ಆದ್ಯತೆ
ನವದೆಹಲಿ: ಜಿಎಸ್ಟಿ ಸರಳೀಕರಣ ಹಾಗೂ ನಾಗರಿಕರ ಮೊದಲ ಆದ್ಯತೆಯ ಮೂಲಸೌಕರ್ಯದಂತಹ ಕ್ರಮಗಳು ಸರ್ಕಾರದ ಬದ್ಧತೆಯನ್ನು ತೋರಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಬರೆದ ಲೇಖನವನ್ನು ಹಂಚಿಕೊಂಡ ಅವರು, “ವಿವರಗಳಿಗೆ ಗಮನ ಹಾಗೂ ಶಿಸ್ತಿನ ಯೋಜನೆಗಳಿಂದ ಪ್ರಯೋಜನ ಪ್ರತಿಯೊಬ್ಬ ನಾಗರಿಕರಿಗೆ ತಲುಪುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಪುರಿ ಅವರು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದು, ‘ನರೇಂದ್ರ ಮೋದಿಯವರ ವೃತ್ತಿಪರತೆ ಹಾಗೂ ನಿಷ್ಕಳಂಕ ಕೆಲಸದ ಶೈಲಿಯೇ ಪ್ರಧಾನಿಯನ್ನು ವಿಭಿನ್ನಗೊಳಿಸುತ್ತದೆ. ಅವರ ಶಿಸ್ತು ದೃಷ್ಟಿಯನ್ನು ಬಾಳಿಕೆ ಬರುವ ವ್ಯವಸ್ಥೆಗಳಾಗಿ ಪರಿವರ್ತಿಸುತ್ತದೆ” ಎಂದಿದ್ದಾರೆ. ಸಭೆಯ ಮೊದಲು ಪ್ರತಿಯೊಂದು ಕಡತವನ್ನು ತಾಳ್ಮೆಯಿಂದ ಪರಿಶೀಲಿಸುವ ಶೈಲಿಯೇ ಅವರಿಂದ ನಿರೀಕ್ಷಿಸುವ ನಿಖರತೆಯನ್ನು ತೋರಿಸುತ್ತದೆ ಎಂದು ಗಮನಸೆಳೆದಿದ್ದಾರೆ. “ಚರ್ಚೆಗಳು ನಾಗರಿಕವಾಗಿರುತ್ತವೆ ಆದರೆ ನಿರ್ದಾಕ್ಷಿಣ್ಯವಾಗಿಯೂ ಇರುತ್ತವೆ. ಬಲವಾದ ವಾದಗಳಿಗೆ ಸದಾ ಆದ್ಯತೆ ದೊರಕುತ್ತದೆ. ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಯೋಜಿಸುವುದು ಮತ್ತು ಯಶಸ್ಸಿನ ಮಾಪಕಗಳನ್ನು…
