ಶ್ರೀನಗರ: ಜಮ್ಮು–ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಪದ್ದಾರ್ ಉಪವಿಭಾಗದ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಜೆ ಸಂಭವಿಸಿದ ಭಾರೀ ಮೇಘಸ್ಫೋಟದಿಂದ ಕನಿಷ್ಠ 45 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಸಿಐಎಸ್ಎಫ್ ಸಿಬ್ಬಂದಿ ಹಾಗೂ ಮಚೈಲ್ ಮಾತಾ ಯಾತ್ರಿಕರು ಸೇರಿದ್ದಾರೆ. ಸುಮಾರು 120 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 35ಕ್ಕೂ ಹೆಚ್ಚು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅನೇಕರು ಕಾಣೆಯಾಗಿದ್ದಾರೆ. SDRF, NDRF, ಸೇನೆ, ಪೊಲೀಸರು ಹಾಗೂ ಸ್ಥಳೀಯ ಸ್ವಯಂಸೇವಕರು ಜಂಟಿಯಾಗಿ ಶೋಧ–ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಸೇನೆಯ 300ಕ್ಕೂ ಹೆಚ್ಚು ಸೈನಿಕರು ಸ್ಥಳಕ್ಕೆ ಧಾವಿಸಿದ್ದಾರೆ. ಮೇಘಸ್ಫೋಟದಿಂದ ಡಜನ್ಗಟ್ಟಲೆ ಮನೆಗಳು, ಸರ್ಕಾರಿ ಕಟ್ಟಡಗಳು, ದೇವಸ್ಥಾನಗಳು, ಗೋಶಾಲೆಗಳು ಮತ್ತು ಒಂದು ಸೇತುವೆ ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಭಕ್ತರಿಗಾಗಿ ಸ್ಥಾಪಿಸಿದ್ದ ‘ಲಂಗರ್’ ಹಾಗೂ ತಾತ್ಕಾಲಿಕ ಅಂಗಡಿಗಳು ಸಂಪೂರ್ಣ ನಾಶವಾಗಿವೆ. ದುರಂತದ ಹಿನ್ನೆಲೆಯಲ್ಲಿ ಮಚೈಲ್ ಮಾತಾ ಯಾತ್ರೆಯನ್ನು ತಕ್ಷಣದಿಂದ ಸ್ಥಗಿತಗೊಳಿಸಲಾಗಿದೆ. ಯಾತ್ರೆ ಜುಲೈ 25ರಂದು ಆರಂಭಗೊಂಡಿದ್ದು, ಸೆಪ್ಟೆಂಬರ್ 5ರಂದು…
Year: 2025
ಆಪ್ ಸಿಂಧೂರ್ ಪಾಕಿಸ್ತಾನ ನಿದ್ರೆ ಭಂಗ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಘರ್ಜನೆ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು. “ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್ಮೇಲ್ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು. ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು. “ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, 140 ಕೋಟಿ…
ಜಾಗತಿಕ ಶಿಕ್ಷಣ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ…
140 ಕೋಟಿ ಜನರ ಸಂಕಲ್ಪದ ಹಬ್ಬವಾಗಿ ಸ್ವಾತಂತ್ರ್ಯೋತ್ಸವ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪಾಕಿಸ್ತಾನದ ನಿದ್ರೆಯನ್ನು ಭಂಗಪಡಿಸಿದ್ದು, ಅಲ್ಲಿನ ವಿನಾಶದ ಪ್ರಮಾಣ ಅಗಾಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದರು. “ಭಾರತ ಇನ್ನು ಮುಂದೆ ಪರಮಾಣು ಬ್ಲ್ಯಾಕ್ಮೇಲ್ಗೆ ತಲೆಬಾಗುವುದಿಲ್ಲ. ಶತ್ರುಗಳು ದುಸ್ಸಾಹಸ ಮಾಡಿದರೆ, ನಮ್ಮ ಸಶಸ್ತ್ರ ಪಡೆಗಳು ಸೂಕ್ತ ಉತ್ತರ ನೀಡುತ್ತವೆ. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಭಾರತ ನಿರ್ಧರಿಸಿದೆ” ಎಂದು ಅವರು ಎಚ್ಚರಿಸಿದರು. ಪಹಲ್ಗಾಂಮ್ ಭಯೋತ್ಪಾದಕ ದಾಳಿಯ ನಂತರ ನಡೆದ ಆಪ್ ಸಿಂಧೂರ್ನಲ್ಲಿ, ಭಾರತೀಯ ಸೈನಿಕರು ಶತ್ರು ಪ್ರದೇಶದೊಳಗೆ ನೂರಾರು ಕಿಲೋಮೀಟರ್ ನುಗ್ಗಿ ಭಯೋತ್ಪಾದಕರ ಕೇಂದ್ರ ಕಚೇರಿಯನ್ನು ಧ್ವಂಸ ಮಾಡಿದ ಉದಾಹರಣೆ ನೀಡಿದ ಮೋದಿ, “ನಮ್ಮ ಧೈರ್ಯಶಾಲಿ ಸೈನಿಕರು ಶತ್ರುಗಳಿಗೆ ಕಲ್ಪನೆಗೂ ಮೀರಿದ ಶಿಕ್ಷೆ ನೀಡಿದ್ದಾರೆ” ಎಂದರು. “ಭಯೋತ್ಪಾದಕರು ಮತ್ತು ಅವರಿಗೆ ಆಶ್ರಯ ನೀಡುವವರಲ್ಲಿ ವ್ಯತ್ಯಾಸವಿಲ್ಲ. ಇಬ್ಬರೂ ಮಾನವೀಯತೆಗೆ ಸಮಾನ ಅಪಾಯ” ಎಂದು ಸ್ಪಷ್ಟಪಡಿಸಿದ ಪ್ರಧಾನಿ, 140 ಕೋಟಿ…
ಸೆಪ್ಟೆಂಬರ್ನಲ್ಲಿ ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಲೋಕಾರ್ಪಣೆ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದರು. 433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂದರು. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸಚಿವರು ತಿಳಿಸಿದರು. ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ…
ಕರ್ನಾಟಕ ಆಶಾ ಕಾರ್ಯಕರ್ತೆಯರ ಹೋರಾಟ.. 3 ದಿನವೂ ಶಕ್ತಿ ಪ್ರದರ್ಶನ
ಬೆಂಗಳೂರು: ಮುಖ್ಯಮಂತ್ರಿಗಳ ಜನವರಿ ಜಾರಿಗಾಗಿ ಒತ್ತಾಯಿಸಿ ಕರ್ನಾಟಕದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14 ರವರೆಗೆ ಮೂರು ದಿನಗಳ, ಅಹೋರಾತ್ರಿ, ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರದ ಪ್ರೋತ್ಸಾಹ ಧನ ಸೇರಿದಂತೆ ಕನಿಷ್ಠ ₹10,000 ಮಾಸಿಕ ಗೌರವಧನ ಮತ್ತು ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಅನುಗುಣವಾಗಿ ₹1,000 ವೇತನ ಹೆಚ್ಚಳ ಮಾಡಬೇಕೆಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಗ್ರಾಮೀಣ ಮತ್ತು ಕೊಳೆಗೇರಿ ಆರೋಗ್ಯ ಸೇವೆಗೆ ಮೊದಲ ಸಂಪರ್ಕ ಬಿಂದುವಾಗಿದ್ದ ಆಶಾ ಕಾರ್ಯಕರ್ತರು, ಭರವಸೆಗಳ ಹೊರತಾಗಿಯೂ ನಿರಾಶೆಗೊಂಡಿದ್ದಾರೆ ಎಂದು ಹೇಳುತ್ತಾರೆ. ಜನವರಿಯಲ್ಲಿ ಬೆಂಗಳೂರಿನಲ್ಲಿ 40,000 ಸದಸ್ಯರು ಪ್ರತಿಭಟನೆ ನಡೆಸಿದರು, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 2025 ರಿಂದ ಪರಿಷ್ಕೃತ ಗೌರವಧನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹ ಧನ ಮತ್ತು ಕೊರತೆಗಳ ಪಾವತಿಗೆ ಭರವಸೆ ನೀಡಿದ್ದರು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ನೆನಪಿಸಿಕೊಂಡಿದೆ. ಆದಾಗ್ಯೂ,…
ಸಿನಿ ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿ ಮತ್ತೆ ಜೈಲುಪಾಲು. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಪೀಠವು, “ಆರೋಪಿ ಎಷ್ಟೇ ಪ್ರಭಾವಿ ಇದ್ದರೂ ಕಾನೂನಿಗಿಂತ ಮೇಲಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದೆ. 2023ರ ಜೂನ್ 9ರಂದು ಚರಂಡಿಯಲ್ಲಿ ಪತ್ತೆಯಾದ 33 ವರ್ಷದ ರೇಣುಕಸ್ವಾಮಿ ಶವಪತ್ತೆಯಾಗಿತ್ತು. ಈ ಪ್ರಕರಣದಲ್ಲಿ, ನಟ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಲಾಗಿತ್ತು. ಪವಿತ್ರಾ ಗೌಡರನ್ನು ಮೊದಲ ಹಾಗೂ ದರ್ಶನ್ ಅವರನ್ನು ಎರಡನೇ ಆರೋಪಿಗಳೆಂದು ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದರು. ಮೊದಲು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದರೂ, ಹೈಕೋರ್ಟ್ ಅನುಮೋದಿಸಿತ್ತು. ಸರ್ಕಾರ ಆ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿತ್ತು. ಅದೇ ವೇಳೆ,…
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಬಗ್ಗೆ ಸಿಬಿಐ ತನಿಖೆ ನಡೆಯಲಿ, ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿಜೆಪಿ
ಬೆಂಗಳೂರು: ಇತ್ತೀಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ಭಾಗಿಯಾಗಿರುವುದಕ್ಕೆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅಶೋಕ, ಘಟನೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಸೂಕ್ಷ್ಮತೆ ಇದ್ದರೆ, ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದರು. “ಕಾಲ್ತುಳಿತ ಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತೆಗೆದುಕೊಳ್ಳಬೇಕು. ಅದರೊಂದಿಗೆ, ಅವರು ರಾಜೀನಾಮೆ ನೀಡಬೇಕು ಮತ್ತು ಈ ವಿಷಯದಲ್ಲಿ ಸಿಬಿಐ ತನಿಖೆ ನಡೆಸಬೇಕು” ಎಂದು ಅವರು ಆಗ್ರಹಿಸಿದರು. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಬೇಕು ಮತ್ತು ಸದನ ಸಮಿತಿಯನ್ನು ನೇಮಿಸಬೇಕು. ದುಃಖಿತ ಪೋಷಕರಿಗೆ…
ಬಿಹಾರ ಪ್ರವಾಹ: 12.58 ಲಕ್ಷ ಜನ ಅತಂತ್ರ, 12 ಮಂದಿ ಸಾವು
ಪಾಟ್ನಾ: ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಿಹಾರ ಮತ್ತೆ ತೀವ್ರ ಪ್ರವಾಹದ ಕಾಟ ಅನುಭವಿಸುತ್ತಿದೆ. ಭಾಗಲ್ಪುರದಿಂದ ಬೇಗುಸರಾಯ್, ಖಗಾರಿಯಾ, ಮಾಧೇಪುರದವರೆಗೆ ತಗ್ಗು ಪ್ರದೇಶಗಳ ನಿವಾಸಿಗಳು ಮನೆ ಬಿಟ್ಟು ಎತ್ತರ ಪ್ರದೇಶಗಳಿಗೆ ತೆರಳಿದ್ದಾರೆ. ಕೆಲವರು ದೋಣಿಗಳಲ್ಲೇ ವಾಸಿಸುತ್ತಿದ್ದಾರೆ. ಬೇಗುಸರಾಯ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ತಾಯಿ–ಮಗಳು ಸೇರಿ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗಂಗಾ ನದಿ, ಕೊಳಗಳು ಹಾಗೂ ಪ್ರವಾಹಪೀಡಿತ ಪ್ರದೇಶಗಳಲ್ಲಿ ಈ ಘಟನೆಗಳು ಸಂಭವಿಸಿದೆ. ಭಾಗಲ್ಪುರದ ಧನಹಾ ಟೋಲಾದಲ್ಲಿ ವಂದನಾ ದೇವಿ (26) ತಮ್ಮ 7 ವರ್ಷದ ಮಗಳು ಅನನ್ಯಾಳನ್ನು ಉಳಿಸಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಿಜ್ವಿಯನ್ ಗ್ರಾಮದ ರೈತ ಧೀರಜ್ ಕುಮಾರ್ ಸಿಂಗ್ (32) ಮೇವು ತರಲು ಹೋಗಿ ಕೊಚ್ಚಿಹೋದರು. ಪೂರ್ವ ಚಂಪಾರಣ್ನ ಚಾಕಿಯಾದಲ್ಲಿ ಗೌತಮ್ ಕುಮಾರ್ (21) ಸ್ನಾನ ಮಾಡುವಾಗ ಸಾವನ್ನಪ್ಪಿದರು. ಬೇಗುಸರಾಯ್ನ…
ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ, ತಮ್ಮ ವಜಾ ಹಿಂದೆ “ಅತಿದೊಡ್ಡ ಷಡ್ಯಂತ್ರ” ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ವಜಾ ಹಿಂದೆ ಪಿತೂರಿ ಇದೆ. ಯಾರು, ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಶೀಘ್ರವೇ ಬಯಲು ಮಾಡುತ್ತೇನೆ,” ಎಂದು ರಾಜಣ್ಣ ಎಚ್ಚರಿಕೆ ನೀಡಿದರು. “ಇದು ಹೈಕಮಾಂಡ್ ನಿರ್ಧಾರ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ,” ಎಂದೂ ಅವರು ಸ್ಪಷ್ಟಪಡಿಸಿದರು.