ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸರ್ಕಾರ; ಸಿಎಂ ನಿರ್ಧಾರಕ್ಕೆ ಶಾಜಿ ಸ್ವಾಗತ

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊಮ್ಮುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಜಾಣ್ಮೆಯ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಮನವಿ ಸಲ್ಲಿಸಿದ ಬೆನ್ನಲ್ಲೇ, ಕ್ರಿಶ್ಚಿಯನ್ ಜಾತಿಗಳ ಮುಂದಿದ್ದ ಹಿಂದೂ ಹೆಸರುಗಳನ್ನೂ ಕೈಬಿಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸಿಎಂ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೂಕ್ತ ತಿದ್ದುಪಡಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸಿಎಂ ನಿರ್ಧಾರವನ್ನು ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಸ್ವಾಗತಿಸಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ…

ಬೆಳಗಾವಿಯಲ್ಲೂ ತಿರುಪತಿ ದೇವಸ್ಥಾನ ನಿರ್ಮಿಸಲು ಟಿಟಿಡಿ ನಿರ್ಧಾರ

ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದರು. 16.09.2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು. ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ…

ತಿರುಪತಿ: ಅಭೂತಪೂರ್ವ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ಸಕಲ ತಯಾರಿ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಪತಿಯಲ್ಲಿ ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2 ರವರೆಗೆ ವೈಭವದಿಂದ ನಡೆಯಲಿದೆ. ಈ ಸಂಬಂಧ ಸಕಲ ತಯಾರಿ ನಡೆದಿದೆ. ಪ್ರಮುಖ ಧಾರ್ಮಿಕ ವಿಧಿಗಳು: ಬ್ರಹ್ಮೋತ್ಸವವು ಸೆಪ್ಟೆಂಬರ್ 23 ರಂದು ಅಂಕುರಾರ್ಪಣಂ (ಬೀಜ ಬಿತ್ತುವುದು) ಎಂಬ ಪವಿತ್ರ ಕಾರ್ಯಕ್ರಮದೊಂದಿಗೆ ಆರಂಭವಾಗಲಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸದಸ್ಯ ಎಸ್‌.ನರೇಶ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಟಿಟಿಡಿ ದೇವಸ್ಥಾನದ ಸುಪರಿಂಟೆಂಡೆಂಟ್ ಜಯಂತಿ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವ ಕುರಿತು ವಿವರ ಒದಗಿಸಿದರು. ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2, 2025 ನಡೆಯಲಿದೆ. ಬ್ರಹ್ಮೋತ್ಸವವು ಸೆಪ್ಟೆಂಬರ್ 23 ರಂದು ಅಂಕುರಾರ್ಪಣಂ (ಬೀಜ ಬಿತ್ತುವುದು) ಎಂಬ ಪವಿತ್ರ ಕಾರ್ಯಕ್ರಮದೊಂದಿಗೆ…

ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಚಲುವರಾಯಸ್ವಾಮಿ

ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ,NABL ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು, ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ ಎಂದು ಸಚಿವರು ತಿಳಿಸಿದರು. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, ಕೃಷಿ ವಿಶ್ವವಿದ್ಯಾಲಯಗಳ 3 ಮತ್ತು ಕೃಷಿ ವಿಜ್ಞಾನ ಕೇಂದ್ರಗಳ 5 ಮಣ್ಣು ಪರೀಕ್ಷಾ ಪ್ರಯೋಗಾಲಗಳು ಸೇರಿ ಒಟ್ಟು 44 ಮಣ್ಣು ಪರೀಕ್ಷಾ ಪ್ರಯೋಗಾಲಯಗಳು NABL Recognition ಪಡೆದಿರುವುದಕ್ಕೆ ಸಚಿವರು ಅಭಿನಂದನೆ ತಿಳಿಸಿದರು.‌ ಅಲ್ಲದೆ, ಕೃಷಿ ಇಲಾಖೆಯ 6 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳು, 2 ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಗಳು ಮತ್ತು…

‘ಸಮುದ್ರ ಸೆ ಸಮೃದ್ಧಿ’ ಕಾರ್ಯಕ್ರಮ ಭಾರತದಾದ್ಯಂತ ಜನರಿಗೆ ಲಾಭ: ಪ್ರಧಾನಿ ಮೋದಿ

ಭಾವನಗರ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಗುಜರಾತ್‌ನ ಭಾವನಗರದಲ್ಲಿ ನಡೆದ ‘ಸಮುದ್ರ ಸೆ ಸಮೃದ್ಧಿ’ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು. ದೇಶಾದ್ಯಂತ ಜನರಿಗೆ ಪ್ರಯೋಜನವಾಗುವಂತೆ 34,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಿರುವುದು ವಿಶೇಷ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆದ ಉನ್ನತ ಮಟ್ಟದ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು, ಕಡಲ ವಲಯಕ್ಕೆ ಸಂಬಂಧಿಸಿದ ಅನೇಕ ಪರಿವರ್ತನಾತ್ಮಕ ಯೋಜನೆಗಳನ್ನು ಪ್ರಾರಂಭಿಸಿದರು. “ಇವು ಕಡಲ ವಲಯವಷ್ಟೇ ಅಲ್ಲ, ಭಾರತದ ಸ್ವಾವಲಂಬನೆಗೆ ದಾರಿತೋರಿಸುತ್ತವೆ,” ಎಂದು ಮೋದಿ ಹೇಳಿದರು. ಮುಖ್ಯ ಘಟ್ಟಗಳು 7,870 ಕೋಟಿ ರೂ. ಮೌಲ್ಯದ ಬಂದರು ಆಧುನೀಕರಣ ಯೋಜನೆಗಳಿಗೆ ಚಾಲನೆ. ಮುಂಬೈ ಇಂದಿರಾ ಡಾಕ್‌ನಲ್ಲಿ ಅಂತರರಾಷ್ಟ್ರೀಯ ಕ್ರೂಸ್ ಟರ್ಮಿನಲ್ ಉದ್ಘಾಟನೆ. ಕೋಲ್ಕತ್ತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ಹೊಸ ಕಂಟೇನರ್ ಟರ್ಮಿನಲ್ ಅಭಿವೃದ್ಧಿ. ಪಾರಾದೀಪ್ (ಒಡಿಶಾ) ನಲ್ಲಿ ಹೊಸ ಸರಕು ನಿಲ್ದಾಣ, ಟ್ಯೂನ ಟೆಕ್ರಾ (ಗುಜರಾತ್) ಮಲ್ಟಿ-ಕಾರ್ಗೋ ಟರ್ಮಿನಲ್ ನಿರ್ಮಾಣ.…

ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ

ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಗಣೇಶ ಚತುರ್ಥಿಯನ್ನು ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ ಈಗ ನವರಾತ್ರಿ, ದೀಪಾವಳಿಯ ಸಂಭ್ರಮವನ್ನೂ ಹಾಳು ಮಾಡಲು ಮುಂದಾಗಿದೆ. ʼಎʼ ದರ್ಜೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯ ದರವನ್ನು ಏರಿಸುವ ಮೂಲಕ ಹಿಂದೂ ಧರ್ಮೀಯರ ಮೇಲೆ ತನ್ನ ಅಸಹನೆಯನ್ನು ತೋರಿಸಿದೆ ಎಂದು ಬಿಜೆಪಿ ದೂರಿದೆ. ಹಿಂದೂಗಳು ಸುಮ್ಮನಿದ್ದಾರೆ, ಏನು ಮಾಡಿದರೂ ನಡೆಯುತ್ತದೆ ಎಂದು ಸಿದ್ದರಾಮಯ್ಯ ಸರ್ಕಾರ ಅಹಂಭಾವ ಪ್ರದರ್ಶಿಸುತ್ತಿದೆ. ಕಟೀಲು ದೇವಸ್ಥಾನವೊಂದರಲ್ಲೇ ಅತಿಹೆಚ್ಚು ಜನರು ಭಕ್ತಿಯಿಂದ ಸಮರ್ಪಿಸುವ ಹೂವಿನ ಪೂಜೆಯ ದರವನ್ನು ಬರೋಬ್ಬರಿ 184% ಹೆಚ್ಚಳ ಮಾಡಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ ಸೇವೆಗಳ ಸೇವಾ ದರವನ್ನೂ ಹೆಚ್ಚಿಸಿರುವುದು ಸರ್ಕಾರದ ಹಿಂದೂ…

ಬೆಂಗಳೂರಿನಲ್ಲಿ ನವೆಂಬರ್‌ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. “ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ…

ಅಮೆರಿಕಾದಿಂದ ವೀಸಾ ಕತ್ತರಿ; ಭಾರತೀಯ ಉದ್ಯೋಗಿಗಳಿಗೆ ಹೊರೆ

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಭಾರತವನ್ನು ಒತ್ತಡಕ್ಕೆ ಒಳಪಡಿಸಲು ಅಮೆರಿಕಾ ಹೊಸ ತಂತ್ರ ಆರಂಭಿಸಿದೆ. ಸುಂಕ ಅಸ್ತ್ರ ಬಳಸಿದ ನಂತರ, ಈಗ ವೀಸಾ ವಿಚಾರದಲ್ಲೂ ಕಿರಿಕ್ ಮಾಡಲು ಮುಂದಾಗಿದೆ. ಇರಾನ್‌ನ ಚಬಹಾರ್ ಬಂದರು ಯೋಜನೆಗೆ ನೀಡಿದ್ದ ‘ನಿರ್ಬಂಧ ವಿನಾಯಿತಿ’ ರದ್ದುಗೊಳಿಸುವ ಮೂಲಕ ಭಾರತಕ್ಕೆ ಅಡ್ಡಿಪಡಿಸಿರುವ ಅಮೆರಿಕಾ, ಇದೀಗ ಉದ್ಯೋಗ ವಲಸೆ ವೀಸಾಗಳನ್ನೇ ದುಬಾರಿಯಾಗಿಸುವ ಯೋಜನೆ ಹಾಕಿಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾರ್ಷಿಕ 100,000 ಡಾಲರ್ ವೀಸಾ ಶುಲ್ಕ ವಿಧಿಸುವ ಮಸೂದೆಗೆ ಸಹಿ ಹಾಕಿದ್ದಾರೆ. ತಜ್ಞ ವಿದೇಶಿ ಉದ್ಯೋಗಿಗಳಿಗೆ ಇದು ಭಾರೀ ಹೊರೆ ಎನಿಸಲಿದೆ. ಕಾಂಗ್ರೆಸ್‌ನ ವ್ಯಾಪಕ ಟೀಕೆಯ ನಡುವೆಯೂ, ಅಮೆರಿಕಾ ಪೌರತ್ವದ ಮಾರ್ಗವಾಗಿ 1 ಮಿಲಿಯನ್ ಡಾಲರ್ ಮೌಲ್ಯದ “ಗೋಲ್ಡ್ ಕಾರ್ಡ್” ವೀಸಾ ಯೋಜನೆಯನ್ನೂ ಪ್ರಕಟಿಸಲಾಗಿದೆ. ಕಾನೂನಾಗಿ ಜಾರಿಯಾದರೆ, ಉದ್ಯೋಗ ವೀಸಾ ಬೆಲೆ ಗಗನಕ್ಕೇರುವುದಲ್ಲದೆ, ಭಾರತೀಯರ ಉದ್ಯೋಗದ ಕನಸುಗಳಿಗೆ ದೊಡ್ಡ ಅಡೆತಡೆ ಉಂಟಾಗಲಿದೆ.

ಅಮೆರಿಕಾದಲ್ಲಿ ಪೊಲೀಸ್ ಗುಂಡಿಗೆ ತೆಲಂಗಾಣದ ಟೆಕ್ಕಿ ಬಲಿ: ಜನಾಂಗೀಯ ದ್ವೇಷದ ಶಂಕೆ

ಹೈದರಾಬಾದ್: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆದಲ್ಲಿ ತೆಲಂಗಾಣದ ಮೂಲದ ಯುವ ಐಟಿ ತಜ್ಞನೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕುಟುಂಬದವರು ಇದನ್ನು ಜನಾಂಗೀಯ ತಾರತಮ್ಯದ ಕಣ್ಣಿನಿಂದ ನೋಡುತ್ತಿದ್ದು, ಮೃತದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ಸಚಿವಾಲಯದ ಸಹಾಯವನ್ನು ಕೋರಿದ್ದಾರೆ. ಮಹಬೂಬ್‌ನಗರದ ನಿವಾಸಿ ಮೊಹಮ್ಮದ್ ನಿಜಾಮುದ್ದೀನ್ (32) ಸಾಂಟಾ ಕ್ಲಾರಾದಲ್ಲಿನ ತಮ್ಮ ನಿವಾಸದಲ್ಲಿ ಸೆಪ್ಟೆಂಬರ್ 3ರಂದು ರೂಮ್‌ಮೇಟ್ ಜಗಳದಲ್ಲಿ ಚಾಕುವಿನಿಂದ ಇರಿತ ಮಾಡಿದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ ಗುಂಡು ಹಾರಿಸಿದ್ದಾರೆ ಎಂದು ಹೇಳಿಕೆ ನೀಡಲಾಗಿದೆ. ನಿಜಾಮುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅಲ್ಲಿ ಅವರು ಮೃತಪಟ್ಟರು. ರೂಮ್‌ಮೇಟ್ ಚಿಕಿತ್ಸೆ ಪಡೆಯುತ್ತಿದ್ದಾರೆ. “ಇದು ಪೊಲೀಸ್ ಗುಂಡಿನ ದಾಳಿ ಪ್ರಕರಣವಾಗಿದ್ದು, ಸಾಂಟಾ ಕ್ಲಾರಾ ಕೌಂಟಿ ಜಿಲ್ಲಾ ವಕೀಲರ ಕಚೇರಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿವೆ. ತನಿಖೆ ಇನ್ನೂ ಮುಂದುವರಿದಿದ್ದು, ಶೀಘ್ರದಲ್ಲೇ ನವೀಕರಣ ನೀಡಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ,…

ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ; ಸರ್ಕಾರದ ನಡೆಗೆ CSS ಆಕ್ಷೇಪ

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು ‘ಸರ್ವ ಜನಾಂಗಗಳ ಶಾಂತಿಯ ತೋಟ’ವನ್ನಾಗಿ…