ಬೆಂಗಳೂರು: ‘ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ಡಿಕೆಶಿ ಹೇಳಿದರು. ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, “ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ…
Year: 2025
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. “ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ…
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ಜಮಾಯಿಸಿದ್ದರು. ವಿಶೇಷ ರೈಲಿನ್ನು ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎನ್ನಲಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ
ಭಾರತ ಸರ್ಕಾರವು ‘PAN 2.0’ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ ‘PAN 2.0’, ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. ‘PAN 2.0’ ಯೋಜನೆ ಎಂದರೇನು? ‘PAN 2.0’ ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು…
ಕಾಂಗ್ರೆಸ್ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುವ ಭಾಗ್ಯವನ್ನು ಕಾಂಗ್ರೆಸ್ ನೀಡಿದೆ. ಕಿಸಾನ್ ಸಮ್ಮಾನ್, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿಎಂ ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಇವರ ಚಿಂತನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೇರೆ ರಾಜ್ಯ, ದೇಶಗಳ ವಿದ್ಯಾರ್ಥಿಗಳು ನಮ್ಮ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬರುತ್ತಿದ್ದಾರೆ. ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಜಲಕ್ರೀಡೆಗೆ ವ್ಯವಸ್ಥೆ…
‘ಐಫೋನ್ ಎಸ್ಇ 4’ ಬಗ್ಗೆ ಎಲ್ಲರಿಗೂ ಕುತೂಹಲ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ‘ಐಫೋನ್ ಎಸ್ಇ 4’ ದಿನಾಂಕವನ್ನು ದೃಢಪಡಿಸಿದ್ದಾರೆ. ‘ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ’ ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್ಸೆಟ್ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್ಇ 4 ಮೇಲೆ ಸ್ಪಾಟ್ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ ‘iPhone SE 4’ ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ…
ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ; ಸಿಎಂ ತಾಕೀತು
ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಮ್, ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದವರು ಪ್ರತಿಪಾದಿಸಿದ್ದಾರೆ. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು…
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮಹಾಕುಂಭ ಮೇಳಕ್ಕೆ ತೆರಳಿದ್ದವಾರ ವಾಹನ ಅಪಘಾತ; 10 ಮಂದಿ ಸಾವು
ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬಸ್ ಮತ್ತು ಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೊಲೆರೊ ಕಾರಿನಲ್ಲಿ ಮಹಾಕುಂಭ ಮೇಳಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಛತ್ತೀಸ್ಗಢ ರಾಜ್ಯದ ಕೊರ್ಬಾ ಜಿಲ್ಲೆಯವರೆಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ 19 ಮಂದಿಗೆ ಗಾಯಗಳಾಗಿದ್ದು ಆಸ್ರತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.