ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

ಬೆಂಗಳೂರು: ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್ ಒಳಗಿನಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣ ಭಿನ್ನ ಚಿತ್ರಣವನ್ನೇ ನೀಡುತ್ತಿದೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವ ಬದಲಾವಣೆಯ ಕುರಿತು, ಜೊತೆಗೆ ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ನೀಡಿದ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ಹೇಳಿಕೆಗಳನ್ನು ರಾಜಣ್ಣ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ, ರಾಜಣ್ಣ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ..

ಬೆಂಗಳೂರು: ರಾಜ್ಯ ರಾಜಕಾರಣ ಇಂದು ಅಚ್ಚರಿಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸುತ್ತಾ ಬಂದಿರುವ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿ ಸಿದ್ದರಾಮಯ್ಯನವರ ಸಂಪುಟದಿಂದ ಹೊರ ನಡೆದಿದ್ದಾರೆ. ರಾಹುಲ್ ಗಾಂಧಿ ನೀಡಿದ್ದ ಮತಗಳ್ಳತನ ಆರೋಪ ಬಗ್ಗೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಸಹಕಾರ ಸಚಿವ ಕೆಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಈ ಬಗ್ಗೆ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಆ ವೇಳೆ ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ ಈ ಬಗ್ಗೆ ಮುಖ್ಯಮಂತ್ರಿಯವರು ಹೇಳಿಕೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಿಎಂ ಆಪ್ತ ಮೂಲಗಳ ಹೇಳಿಕೆ: ಕೆ.ಎನ್.ರಾಜಣ್ಣ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ…

ಹಲವು ಸಂಸದರಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಚೆನ್ನೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಸಂಸದರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಭಾನುವಾರ ಸಂಜೆ ತಾಂತ್ರಿಕ ದೋಷ ಉಂಟಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ AI 2455 ವಿಮಾನದಲ್ಲಿ ಹವಾಮಾನ ವೈಪರೀತ್ಯದ ಜೊತೆಗೆ ತಾಂತ್ರಿಕ ಸಮಸ್ಯೆಯೂ ಕಾಣಿಸಿಕೊಂಡ ಕಾರಣ, ಪೈಲಟ್ ತಕ್ಷಣ ತುರ್ತು ಲ್ಯಾಂಡಿಂಗ್ ನಿರ್ಧರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಕೆ.ಸಿ. ವೇಣುಗೋಪಾಲ್, “ನಾನು, ಅನೇಕ ಸಂಸದರು ಹಾಗೂ ನೂರಾರು ಪ್ರಯಾಣಿಕರನ್ನು ಒಳಗೊಂಡು ತಿರುವನಂತಪುರಂನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಇಂದು ದೊಡ್ಡ ದುರಂತದಿಂದ ತೀರಾ ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಹೇಳಿದ್ದಾರೆ.

ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ಅವ್ರಿಗೆ ಪಾತ್ರ ಬರೆದಿದ್ದಾರೆ. ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ.‌ ಎಲ್ಲರ‌ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ ಎಂದವರು ಪಾತ್ರದಲ್ಲಿ ಹೇಳಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ ಎಂದಿದ್ದಾರೆ. ಆ ನಿಟ್ಟಿನಲ್ಲಿ, ಡಾ. ವಿಷ್ಣುವರ್ಧನ್ ಅವರ…

ರಾಹುಲ್ ಗಾಂಧಿ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಯಾಗಿ, ಭಾರತೀಯ ಚುನಾವಣಾ ಆಯೋಗವು ಭಾನುವಾರ ಸ್ಪಷ್ಟನೆ ನೀಡಿದ್ದು, ಮತದಾರರ ಪಟ್ಟಿಯ ಡಿಜಿಟಲ್ ಪ್ರತಿಗಳನ್ನು ರಾಜಕೀಯ ಪಕ್ಷಗಳಿಗೆ ಒದಗಿಸಲಾಗಿಲ್ಲ ಎಂಬ ಅವರ ಹೇಳಿಕೆ “ಸಂಪೂರ್ಣವಾಗಿ ಸುಳ್ಳು ಮತ್ತು ಸಂಪೂರ್ಣವಾಗಿ ದಾರಿತಪ್ಪಿಸುವ” ಎಂದು ಹೇಳಿದೆ. ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿಯವರು “ವೋಟ್ ಚೋರಿ” (ಮತ ಕಳ್ಳತನ) ಆರೋಪವನ್ನು ಪುನರಾವರ್ತಿಸಿದ ಬೆನ್ನಲ್ಲೇ ಚುನಾವಣಾ ಆಯೋಗವು “ಯಾರಾದರೂ – ಯಾವುದೇ ಮತದಾರರು ಅಥವಾ ಯಾವುದೇ ರಾಜಕೀಯ ಪಕ್ಷ – https://voters.eci.gov.in/download-eroll ಲಿಂಕ್ ಮೂಲಕ 36 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಯಾವುದೇ ಮತದಾರರ ಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು ಮತ್ತು ಸ್ವತಃ ಪರಿಶೀಲಿಸಬಹುದು” ಎಂದು ಹೇಳುವ ಫ್ಯಾಕ್ಟ್‌ಚೆಕ್ ಅನ್ನು ಬಿಡುಗಡೆ ಮಾಡಿದೆ. ಮತದಾರರ ಪಟ್ಟಿಯ ಡಿಜಿಟಲ್ ಪ್ರತಿಗಳು ಲಭ್ಯವಿಲ್ಲದಿರುವ ಬಗ್ಗೆ ಗಾಂಧಿಯವರನ್ನು ಟೀಕಿಸಲು, ಚುನಾವಣಾ ಆಯೋಗವು “ಮತದಾರರ ನೋಂದಣಿ ನಿಯಮಗಳು 1960 ರ ಅಡಿಯಲ್ಲಿ, ಪ್ರತಿಯೊಂದು…

‘ಕೆ-ರ‍್ಯಾಂಪ್’ ಚಿತ್ರದ ಕುತೂಹಲ ಹೆಚ್ಚಿಸಿದ ‘ಓಣಂ ಸಾಂಗ್’

ಚೆನ್ನೈ: ನಿರ್ದೇಶಕ ಜೈನ್ಸ್ ನಾನಿ ಅವರ ಆಕ್ಷನ್ ಕಾಮಿಡಿ ಸಿನಿಮಾ ‘ಕೆ-ರ‍್ಯಾಂಪ್’ ಸಿನಿಮಾದ ನಿರ್ಮಾಪಕರು, ನಟರಾದ ಕಿರಣ್ ಅಬ್ಬಾವರಂ ಮತ್ತು ಯುಕ್ತಿ ತರೇಜಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ಶನಿವಾರ ಚಿತ್ರದ ‘ಓಣಂ ಸಾಂಗ್’ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಮತ್ತು ಚಲನಚಿತ್ರ ಪ್ರೇಮಿಗಳು ಸಂತೋಷಪಟ್ಟಿದ್ದಾರೆ. X ಟೈಮ್‌ಲೈನ್‌ಗೆ ಸಂಬಂಧಿಸಿದಂತೆ, ಚಿತ್ರವನ್ನು ನಿರ್ಮಿಸುವ ನಿರ್ಮಾಣ ಸಂಸ್ಥೆಯಾದ ಹಾಸ್ಯ ಮೂವೀಸ್, “KRamp ಸಂಗೀತ ಉತ್ಸವವನ್ನು ಮಾಸ್ ಮೆಲೋಡಿ ಬ್ಯಾಂಗರ್‌ನೊಂದಿಗೆ ಪ್ರಾರಂಭಿಸುತ್ತಿದೆ. ONAMSONG ಈಗ ಬಿಡುಗಡೆಯಾಗಿದೆ. ಈ ದೀಪಾವಳಿಗೆ ಚಿತ್ರಮಂದಿರಗಳಲ್ಲಿ ಅಕ್ಟೋಬರ್ 18ರಂದು ಇದು ತೆರೆಕಾಣಲಿದೆ ಎಂಬ ಸುಳಿವನ್ನು ನೀಡಿದೆ. ನಟ ಕಿರಣ್ ಅಬ್ಬಾವರಾಮ್ ಕೂಡ ತಮ್ಮ X ಟೈಮ್‌ಲೈನ್‌ನಲ್ಲಿ ಲಿರಿಕಲ್ ವೀಡಿಯೊದ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ಅವರು ಬರೆದಿದ್ದಾರೆ, “ನಿಜವಾದ ಆಚರಣೆಯಂತೆ ಭಾಸವಾಯಿತು. ನೀವೆಲ್ಲರೂ ಈ ಹಾಡನ್ನು ನಾವು ಆಚರಿಸಿದಂತೆಯೇ ಆಚರಿಸುತ್ತೇವೆ ಎಂದು ಭಾವಿಸುತ್ತೇನೆ ಎಂದಿದ್ದಾರೆ. ಚೈತನ್…

ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ದಕ್ಷಿಣ ಬೆಂಗಳೂರಿನ ಆರ್.ವಿ. ರಸ್ತೆಯಿಂದ ಪಶ್ಚಿಮದ ಬೊಮ್ಮಸಂದ್ರವರೆಗಿನ ಬಹುನಿರೀಕ್ಷಿತ ‘ಹಳದಿ ಮಾರ್ಗ’ ಮೆಟ್ರೋ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಒಟ್ಟು 19.15 ಕಿ.ಮೀ ಉದ್ದ, 16 ನಿಲ್ದಾಣಗಳನ್ನು ಒಳಗೊಂಡಿರುವ ಈ ಮಾರ್ಗವನ್ನು ₹7,160 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರತಿ ದಿನ ಸుమಾರು 8 ಲಕ್ಷ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದರು. ನಿಲ್ದಾಣಗಳ ಪಟ್ಟಿ: ಆರ್.ವಿ ರಸ್ತೆ (ಹಸಿರು ಮಾರ್ಗ ಸಂಪರ್ಕ), ರಾಗಿಗುಡ್ಡ, ಜಯದೇವ ಆಸ್ಪತ್ರೆ (ಭವಿಷ್ಯದಲ್ಲಿ ನೇರಳೆ ಮಾರ್ಗ ಸಂಪರ್ಕ), ಬಿಟಿಎಂ ಲೇಔಟ್, ಕೇಂದ್ರ ರೇಷ್ಮೆ ಮಂಡಳಿ, ಎಚ್‌ಎಸ್‌ಆರ್ ಲೇಔಟ್, ಆಕ್ಸ್‌ಫರ್ಡ್ ಕಾಲೇಜು, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸ ರೋಡ್, ಎಲೆಕ್ಟ್ರಾನಿಕ್ ಸಿಟಿ–1, ಕೋನಪ್ಪನ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ, ಬೊಮ್ಮಸಂದ್ರ. ಸಂಚಾರ ದಟ್ಟಣೆ ಕಡಿತದ ನಿರೀಕ್ಷೆ: ಹೊಸ ಮಾರ್ಗವು ಸಿಲ್ಕ್ ಬೋರ್ಡ್,…

ಚುನಾವಣಾ ವಂಚನೆ ಪ್ರತಿಪಕ್ಷಗಳ ಒಗ್ಗಟ್ಟು; ಮಿತ್ರಪಕ್ಷಗಳ ಸಂಸದರಿಗೆ ಖರ್ಗೆ ಭೋಜನ ಕೂಟ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ವಿರುದ್ಧ ಒಗ್ಗಟ್ಟಿನ ಸಂಕೇತ ನೀಡಲು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಭಾರತ ಬ್ಲಾಕ್ ಸಂಸದರಿಗೆ ಭೋಜನ ಕೂಟ ಆಯೋಜಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಈ ಕೂಟ ಚಾಣಕ್ಯಪುರಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿದ್ದು, ಹಲವಾರು ವಿರೋಧ ಪಕ್ಷಗಳ ಸಂಸದರು ಭಾಗವಹಿಸುವ ನಿರೀಕ್ಷೆಯಿದೆ. ಕೆಲವೇ ದಿನಗಳ ಹಿಂದೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದ ನಂತರ, ವಿರೋಧ ಪಕ್ಷಗಳ ಏಕತೆಯ ಪ್ರದರ್ಶನಕ್ಕೆ ಇದು ಮತ್ತೊಂದು ಹಂತವೆಂದು ವಲಯಗಳು ಹೇಳುತ್ತಿವೆ.

ಮೂರು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಅವರು ನೇರವಾಗಿ ಚಾಲನೆ ನೀಡಿದರೆ, ಅಮೃತಸರ–ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ಅಜ್ನಿ (ನಾಗ್ಪುರ)–ಪುಣೆ ನಡುವೆ ಸಂಚರಿಸಲಿರುವ ಇನ್ನೆರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. VIDEO | PM Narendra Modi (@narendramodi) flags off Vande Bharat Express train from Bengaluru to Belagavi from KSR Railway Station in Bengaluru. (Source: Third Party) pic.twitter.com/nG7issWdDV — Press Trust of India (@PTI_News) August 10, 2025

‘ಆಪರೇಷನ್ ಸಿಂಧೂರ್’: ಅಪರೂಪದ ಒಳನೋಟ ಹಂಚಿಕೊಂಡ ಸೇನಾ ಮುಖ್ಯಸ್ಥ

ಚೆನ್ನೈ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ಆಪರೇಷನ್ ಸಿಂಧೂರ್’ ಹೇಗೆ ರೂಪುಗೊಂಡಿತು ಎಂಬುದರ ಕುರಿತು ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಅಪರೂಪದ ಒಳನೋಟ ಹಂಚಿಕೊಂಡಿದ್ದಾರೆ. ಮಿಲಿಟರಿ ನಿಖರತೆ ಮತ್ತು ರಾಜಕೀಯ ಸ್ಪಷ್ಟತೆ ಸಂಗಮಗೊಂಡ ಉನ್ನತ ಮಟ್ಟದ ಕಾರ್ಯಾಚರಣೆ ಎಂದು ಅವರು ಬಣ್ಣಿಸಿದರು. ಐಐಟಿ ಮದ್ರಾಸ್‌ನಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕರು ನಡೆಸಿದ ದಾಳಿ ಇಡೀ ದೇಶವನ್ನು ಬೆಚ್ಚಿಬೀಳಿಸಿತೆಂದರು. “ಮರುದಿನವೇ ನಾವು ಚರ್ಚೆಗೆ ಕುಳಿತೆವು. ರಕ್ಷಣಾ ಸಚಿವರು ‘ಸಾಕು ಸಾಕು’ ಎಂದರು. ಮೂವರು ಸೇನಾ ಮುಖ್ಯಸ್ಥರೂ ನಿರ್ಣಾಯಕ ಕ್ರಮಕ್ಕೆ ಒಪ್ಪಿಕೊಂಡು ನಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಇಷ್ಟು ಸ್ಪಷ್ಟ ರಾಜಕೀಯ ನಿರ್ದೇಶನವನ್ನು ಮೊತ್ತಮೊದಲು ನೋಡಿದೆವು,” ಎಂದರು. ಏಪ್ರಿಲ್ 25ರಂದು ಉತ್ತರ ಕಮಾಂಡ್ ಕೇಂದ್ರದಲ್ಲಿ ಕಾರ್ಯಯೋಜನೆ ರೂಪಿಸಿ ತಕ್ಷಣವೇ ಕಾರ್ಯಗತಗೊಳಿಸಲಾಯಿತು. ಒಂಬತ್ತು ಗುರಿಗಳಲ್ಲಿ ಏಳು ನಾಶವಾಗಿದ್ದು,…