ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ ಸಿಇಒ ಮಲ್ಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಬಿಎನ್ಎಸ್ 152 ಹಾಗೂ ಅಧಿಕೃತ ರಹಸ್ಯ ಕಾಯ್ದೆ (ಒಎಸ್ಎ) 3 ಮತ್ತು 5ನೇ ಕಲಮಗಳಡಿ ಕೇಸ್ ದಾಖಲಾಗಿದೆ. ಬಂಧಿತರನ್ನು ಉತ್ತರ ಪ್ರದೇಶದ ಸುಲ್ತಾನ್ಪುರ ಮೂಲದ 20 ವರ್ಷದ ರೋಹಿತ್ ಮತ್ತು 37 ವರ್ಷದ ಸಾಂತ್ರಿ ಎಂದು ಗುರುತಿಸಲಾಗಿದೆ. ಸ್ಥಳೀಯ ನ್ಯಾಯಾಲಯ ಆರೋಪಿಗಳಿಗೆ ಡಿಸೆಂಬರ್ 3ರವರೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಎಸ್ಪಿ ಹರಿರಾಮ್ ಶಂಕರ್ “ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗೆ ಸಂಬಂಧಿಸಿದ ಗಂಭೀರ ಪ್ರಕರಣವಾದ್ದರಿಂದ ತನಿಖೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. ನವೆಂಬರ್ 22ರಂದು ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆಯಲಾಗುವುದು” ಎಂದರು. ಮಲ್ಪೆಯಲ್ಲಿದ್ದ ವಸತಿಗೃಹದ ಕೋಣೆಯಲ್ಲಿ ಸುಳಿವಿನ ಆಧಾರದ ಮೇಲೆ…
Year: 2025
ತೇಜಸ್ ಯುದ್ಧವಿಮಾನ ಪತನ; ದುಬೈ ಏರೋ ಶೋ ವೇಳೆ ದುರಂತ
ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರದರ್ಶನ ಹಾರಾಟ ನಡೆಸುತ್ತಿದ್ದ ತೇಜಸ್, ತಕ್ಷಣವೇ ಬೆಂಕಿಗಾಹುತಿಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಫೋಟದ ನಂತರ ಸ್ಥಳದೆಲ್ಲೆ ದಟ್ಟವಾದ ಕಪ್ಪು ಹೊಗೆ ಆವರಿಸಿತು. आज एक दर्दनाक क्षण हमारे बहादुर पायलट की शहादत के साथ हमारे सामने आया, जब दुबई एयर शो के दौरान हमारी अपनी तकनीक, हमारी उड़ान संभावना, यानी #Tejas विमान जो देश की शक्ति व समर्पण का प्रतीक है जो #DubaiAirShow में इस प्रकार धराशाही हो गया जैसे ये हकीकत नहीं किसी फ़िल्म का scene……
ರಾಜಕಾರಣಕ್ಕೆ ಸಚಿವ ಚೆಲುವರಾಯಸ್ವಾಮಿ ಪುತ್ರನ ಗ್ರಾಂಡ್ ಎಂಟ್ರಿ.. ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ
ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸಚಿನ್ ಸಿ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚಲುವರಾಜ್ ಅವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ 5 ವರ್ಷದ ಅವಧಿ ಅಧ್ಯಕ್ಷರಾಗಿ ಸಚಿನ್ ಮತ್ತು ಉಪಾಧ್ಯಕ್ಷರಾಗಿ ಚೆಲುವರಾಜ್ ಆಯ್ಕೆಯಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಪ್ರಕಟಿಸಿದ್ದಾರೆ.. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಸಚಿನ್ ಚಲುವರಾಯಸ್ವಾಮಿ, ತಮ್ಮ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ ಧನ್ಯವಾದ ಮುಖ್ಯ 12 ಜನ ನಿರ್ದೇಶಕರಿಗೂ ಧನ್ಯವಾದ ತಿಳಿಸಿದರು. ಶಂಕರೇಗೌಡರು ಹಾಗೂ ಚೌಡೇಗೌಡರು ಸ್ಥಾಪಿಸಿದ ಸಂಸ್ಥೆ ಡಿ.ಸಿ.ಸಿ ಬ್ಯಾಂಕ್ ಅಲ್ಲಿಂದಲೂ ಉತ್ತಮ ಕೆಲಸ ಮಾಡಿಕೊಂಡು ಬರುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಜೋಗಿಗೌಡರು…
‘ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲ ಇಲ್ಲ’; ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಕುರಿತಾಗಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ‘ಕರ್ನಾಟಕ ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲವೇ ಇಲ್ಲ. ಎಲ್ಲವೂ ಸುಗಮವಾಗಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಪಕ್ಷದೊಳಗೆ ಗೊಂದಲ ಇದ್ದಿದ್ದರೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುವುದು. ಅಗತ್ಯವಿಲ್ಲದ ಕಾರಣ ಇದುವರೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿಲ್ಲ” ಎಂದರು. ಹಲವಾರು ಸಚಿವರು ಮತ್ತು ಶಾಸಕರು ದೆಹಲಿಗೆ ಭೇಟಿ ನೀಡಿ ನಡೆಸಿದ “ಭೋಜನ ಸಭೆ” ರಾಜಕೀಯ ಚರ್ಚೆಗೆ ಕಾರಣವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಯಾರೇ ದೆಹಲಿಗೆ ಹೋದರೂ ತಮ್ಮ ವೈಯಕ್ತಿಕ ಅಥವಾ ಆಡಳಿತಾತ್ಮಕ ಕೆಲಸಗಳಿಗಾಗಿ ಹೋಗಿದ್ದಾರೆ. ರಾಜಕೀಯ ಕಾರಣವೇನೂ ಇಲ್ಲ ಎಂಬುದನ್ನು ಅವರು ಈಗಾಗಲೇ ವಿವರಿಸಿದ್ದಾರೆ” ಎಂದರು. ದೆಹಲಿಯಲ್ಲಿ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವರದಿಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ದೆಹಲಿಗೆ ಹೋದಾಗ ಪಕ್ಷದ…
ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಹಾರಧಾನ್ಯ ಉತ್ಪಾದನೆಯಲ್ಲಿ ಹೆಚ್ಚಳ
ನವದೆಹಲಿ: ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಹಾರಧಾನ್ಯ ಉತ್ಪಾದನೆ ಗಣನೀಯವಾಗಿ ಹೆಚ್ಚಿದ್ದು, 2015–16ರ 251.54 ಮಿಲಿಯನ್ ಟನ್ನಿಂದ 2024–25ರಲ್ಲಿ 357.73 ಮಿಲಿಯನ್ ಟನ್ ಗಳನ್ನು ತಲುಪಲಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಅಕ್ಕಿ ಉತ್ಪಾದನೆ 1,501.84 ಲಕ್ಷ ಟನ್ ಆಗಿ ದಾಖಲೆ ಮಟ್ಟ ತಲುಪಿದೆ ಎಂದು ತಿಳಿಸಿದರು. ಇದು ಕಳೆದ ಸಾಲಿನ 1,378.25 ಲಕ್ಷ ಟನ್ಗಿಂತ 123.59 ಲಕ್ಷ ಟನ್ ಹೆಚ್ಚಳ. ಗೋಧಿ ಉತ್ಪಾದನೆಯು 46.53 ಲಕ್ಷ ಟನ್ಗಳ ಏರಿಕೆ ಕಾಣಿಸಿ, ಹೆಸರುಕಾಳು 42.44 ಲಕ್ಷ ಟನ್, ಸೋಯಾಬೀನ್ 152.68 ಲಕ್ಷ ಟನ್, ನೆಲಗಡಲೆ 119.42 ಲಕ್ಷ ಟನ್ ಮಟ್ಟ ತಲುಪಿದೆಯೆಂದು ಹೇಳಿದರು. ಮೆಕ್ಕೆಜೋಳ ಉತ್ಪಾದನೆ 434.09 ಲಕ್ಷ ಟನ್ ಮತ್ತು ‘ಶ್ರೀಅನ್ನ’ (ರಾಗಿ) 185.92 ಲಕ್ಷ ಟನ್ ಅಂದಾಜಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಎರಡೂ ಹಬ್ಬಿನ…
ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ ಸಭೆ ನಡೆಸಿ ಆಯಕತ್ವ ಬದಲಾವಣೆಗೆ ರಂಗ ಸಜ್ಜುಗೊಳಿಸುತ್ತಿದ್ದಾರೆ. ಸರ್ಕಾರ ರಚನೆಯಾದ ಆರಂಭದಲ್ಲಿ ಚರ್ಚೆಗೆ ಬಂದಂತೆಯೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಬೆಂಬಲಿಗ ಶಾಸಕರು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಡಿಕೆಶಿ ಬೆಂಬಲಿಗರು ರಹಸ್ಯ ಸಭೆ ನಡೆಸಿದ ಸಂದರ್ಭದಲ್ಲಿ, ಇನ್ನೊಂದೆಡೆ ಕುತೂಹಲಕಾರಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ಶಾಸಕ ಎಚ್.ಸಿ. ಬಾಲಕೃಷ್ಣ, ಹೈಕಮಾಂಡ್ಗೆ ತಕ್ಷಣ ಮಧ್ಯಪ್ರವೇಶಿಸಿ ನಾಯಕತ್ವ ಬದಲಾವಣೆಯ ಒಟ್ಟಾರೆ ಬೆಳವಣಿಗೆ ಬಗ್ಗೆ ಶಾಸಕರಿಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಲಕೃಷ್ಣ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು. ‘ಕಾಂಗ್ರೆಸ್…
ಪೊಲೀಸ್’ಗೂ ದರೋಡೆಗೂ ನಂಟು? ಪೇದೆ ಸೇರಿ ಇಬ್ಬರ ವಶ
ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನಿಖೆಗೆ ರಚಿಸಲಾದ ವಿಶೇಷ ತಂಡಗಳು ದರೋಡೆ ಕೃತ್ಯಕ್ಕೆ ಸಂಬಂಧಿಸಿದ ಸುಳಿವುಗಳನ್ನು ಪತ್ತೆಹಚ್ಚಿ ಶಂಕಿತರನ್ನು ವಶಕ್ಕೆ ಪಡೆದಿವೆ. ನವೆಂಬರ್ 20ರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕಾನ್ಸ್ಟೆಬಲ್ನ್ನು ಬೆಳ್ಳಂಬೆಳಗ್ಗೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿಯು ಕೇರಳ ಮೂಲದವನು ಎನ್ನಲಾಗಿದೆ. ಆತ ಇತ್ತೀಚೆಗೆ CMS ಇನ್ಫೋ ಸಿಸ್ಟಮ್ಸ್ ಲಿಮಿಟೆಡ್ ಸಂಸ್ಥೆಗೆ ರಾಜೀನಾಮೆ ನೀಡಿರುವ ಮಾಜಿ ಉದ್ಯೋಗಿ ಎಂಬುದು ತಿಳಿದು ಬಂದಿದೆ. ದರೋಡೆಗೆ ಗುರಿಯಾದ ವಾಹನ ಇದೇ ಕಂಪನಿಗೆ ಸೇರಿದ್ದೇ ಎಂಬ ಬಗ್ಗೆ ತನಿಖೆ ಬಿರುಸುಗೊಂಡಿದೆ. ಮೂಲಗಳ ಪ್ರಕಾರ, ಬಂಧಿತ ಇಬ್ಬರೂ ಕಳೆದ ಆರು ತಿಂಗಳುಗಳಿಂದ ಪರಸ್ಪರ ಸಂಪರ್ಕದಲ್ಲಿದ್ದು, ದರೋಡೆ ಯೋಜನೆಯನ್ನು ಸೂಕ್ಷ್ಮವಾಗಿ ರೂಪಿಸಿದ್ದರು. ಘಟನೆಯ ಸುಮಾರು…
ಭಾರತದ ಹಲವೆಡೆ 200 ಸ್ಫೋಟಗಳ ಸಂಚು : ಜೆಇಎಂ ಸಂಚು ಬಹಿರಂಗ
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನವೆಂಬರ್ 10ರಂದು ನಡೆದ ಸ್ಫೋಟ ಪ್ರಕರಣವು ದೊಡ್ಡ ಉಗ್ರಸಂಚಿನ ಸುಳಿವನ್ನೂ ನೀಡಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆ ನಂಟು ತನಿಖೆಯಿಂದ ದೃಢಪಟ್ಟಿದೆ. ಬಂಧಿತರಿಗೆ ಬಾಂಬ್ ತಯಾರಿಕೆ ಬಗ್ಗೆ ಮಾರ್ಗದರ್ಶನ ನೀಡಿದ್ದು, ಜೆಇಎಂ ಕಾರ್ಯಕರ್ತ ಹಂಜುಲ್ಲಾ ಎನ್ನುವುದು ತನಿಖಾಧಿಕಾರಿಗಳ ನಿರ್ಧಾರ. ತನಿಖೆಯಿಂದ ಹೊರಬಂದಿರುವ ಮತ್ತೊಂದು ಗಂಭೀರ ಮಾಹಿತಿ ಎಂದರೆ — ಆರೋಪಿಗಳು ದೆಹಲಿ, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಏಕಕಾಲದಲ್ಲಿ 200 ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು. ಈ ಉದ್ದೇಶಕ್ಕಾಗಿ, ಫರಿದಾಬಾದ್ ಉಗ್ರಮಾಡ್ಯೂಲ್ಗೆ ಪಾಕಿಸ್ತಾನ ಮೂಲದ ಐಎಸ್ಐ ಸಂಪರ್ಕ ಹೊಂದಿರುವ ಜೆಇಎಂ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದನೆಂದು ತಿಳಿದುಬಂದಿದೆ. ಮುಖ್ಯ ಆರೋಪಿ ಮೌಲ್ವಿ ಇರಾನ್ ಅಹ್ಮದ್ ಗೆ ಹಂಜುಲ್ಲಾ ನೇರ ಸಂಪರ್ಕ ಹೊಂದಿದ್ದನು. ಜಮ್ಮು-ಕಾಶ್ಮೀರದಲ್ಲಿ ಕಂಡುಬಂದಿದ್ದ ಜೆಇಎಂ ಪೋಸ್ಟರ್ಗಳಲ್ಲಿ “ಕಮಾಂಡರ್ ಹಂಜುಲ್ಲಾ ಭಾಯಿ” ಎಂಬ ಹೆಸರು ಗಮನಸೆಳೆದಿದ್ದು, ಅದರಿಂದಲೇ ತನಿಖೆ ವಿಸ್ತರಿಸಿ,…
ಬಿಹಾರ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ
ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar:জেডি (ইউ) প্রধান নীতীশ কুমার আজ পাটনার গান্ধী ময়দানে দশমবারের মতো বিহারের মুখ্যমন্ত্রী হিসেবে শপথ নিলেন; অনুষ্ঠানে উপস্থিত ছিলেন প্রধানমন্ত্রী @narendramodiসহ এনডিএ নেতারা। #BiharElections2025 @DDNewslive pic.twitter.com/ZVGtLNoECS — DD News Tripura (@ddnewsagartala) November 20, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ…
ಬೆದರಿಕೆ ಬ್ಲ್ಯಾಕ್ಮೇಲ್ ಆರೋಪ: ಐವರ ವಿರುದ್ಧ ಯಶ್ ಅವರ ತಾಯಿ ದೂರು
ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪಿಆರ್ಒ ಹರೀಶ್ ಅರಸ್, ಮನು, ನಿತಿನ್, ಮಹೇಶ್ ಗುರು ಮತ್ತು ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುಷ್ಪಾ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರದ ಪ್ರಚಾರಕ್ಕಾಗಿ ಆರೋಪಿಗಳು ಒಟ್ಟು 64 ಲಕ್ಷ ರೂ. ಪಡೆದಿದ್ದರೂ, ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದೆ, ಬದಲಿಗೆ ಬೆದರಿಕೆ ಮತ್ತು ಬ್ಲ್ಯಾಕ್ಮೇಲ್ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪುಷ್ಪಾ, “ಚಿತ್ರದ ಪ್ರಚಾರಕ್ಕಾಗಿ ಆರಂಭದಲ್ಲಿ 23 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ ಹರೀಶ್ ಅರಸ್, ನಂತರ ಚಿತ್ರ ಚಿತ್ರೀಕರಣದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಹಣ ಪಡೆದಿದ್ದರು. ಚಿತ್ರ ಬಿಡುಗಡೆ ಹಂತಕ್ಕೆ ಬಂದಾಗ, ಲೆಕ್ಕಪತ್ರಗಳನ್ನು ಕೇಳಿದ ನಿರ್ದೇಶಕರಿಗೆ ‘ಪ್ರಚಾರ ನಿಲ್ಲಿಸುತ್ತೇವೆ’ ಎಂದು ಬೆದರಿಕೆ…
