ಬೆಂಗಳೂರು: ಕೆಲವು ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘ ನಿಷೇಧ ಚರ್ಚೆಗೆ ಮುನ್ನುಡಿ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ RSS ನಾಯಕರಿಗೆ ಒದಗಿಸುವ ಭದ್ರತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ. ಆರೆಸ್ಸೆಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ ಮಾಡಿಸಿಕೊಂಡಿವೆ, ಪ್ರತಿ ವರ್ಷ ಐಟಿ ಫೈಲ್ ಮಾಡುತ್ತವೆ, ತಮ್ಮ ಆದಾಯ ಅಥವಾ ದೇಣಿಗೆಯ ಮಾಹಿತಿಗಳನ್ನು ಸರ್ಕಾರಕ್ಕೆ ತಿಳಿಸುತ್ತವೆ.ಆರ್ಎಸ್ಎಸ್ NGO ಆಗಿದ್ದರೆ ಈ ಪ್ರಕ್ರಿಯೆ ನಡೆಸದೆ ಇರುವುದೇಕೆ? ಒಂದು NGO ಮುಖ್ಯಸ್ಥರಿಗೆ ಅತಿ ಭದ್ರತೆಯ ಲಿಐಸನ್ ಪ್ರೊಟೊಕಾಲ್ ಸೆಕ್ಯೂರಿಟಿ… pic.twitter.com/aUJvaiDYjo — Priyank Kharge / ಪ್ರಿಯಾಂಕ್…
Year: 2025
‘ಗ್ರೇಟರ್ ಮೈಸೂರು’ ಯೋಜನೆ ಪರಿಪೂರ್ಣ ಅನುಷ್ಠಾನಕ್ಕೆ ಸಿಎಂ ಸೂಚನೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಗ್ರೇಟರ್ ಮೈಸೂರು ಕುರಿತ ಪ್ರಥಮ ಸಭೆಯಲ್ಲಿ ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು ಎಂದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕಿದೆ ಎಂದ ಸಿಎಂ, ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಮಾಡುವ…
ಆಲಿಯಾ ಭಟ್–ಶಾರ್ವರಿ ಅಭಿನಯದ ‘ಆಲ್ಫಾ’ ಬಿಡುಗಡೆ ಮುಂದೂಡಿಕೆ: ಏಪ್ರಿಲ್ 17ರಂದು ತೆರೆಗೆ
ಮುಂಬೈ: ನಟಿ ಆಲಿಯಾ ಭಟ್ ಮತ್ತು ಶಾರ್ವರಿ ವಾಘ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಚಿತ್ರ ‘ಆಲ್ಫಾ’ ಹೊಸ ಬಿಡುಗಡೆ ದಿನಾಂಕವನ್ನು ಪಡೆದುಕೊಂಡಿದೆ. ಮೂಲತಃ 2025ರ ಡಿಸೆಂಬರ್ 25ರಂದು ಪ್ರದರ್ಶನಗೊಳ್ಳಬೇಕಿದ್ದ ಈ ಚಿತ್ರ 2026ರ ಏಪ್ರಿಲ್ 17ರಂದು ತೆರೆಕಾಣಲಿದೆ. ವಿಎಫ್ಎಕ್ಸ್ (VFX) ಕೆಲಸದ ವಿಳಂಬವೇ ಬಿಡುಗಡೆ ಮುಂದೂಡಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಯಶ್ ರಾಜ್ ಫಿಲ್ಮ್ಸ್ (YRF) ಸ್ಪಷ್ಟಪಡಿಸಿದೆ. ಚಿತ್ರದ ದೃಶ್ಯಮಟ್ಟವನ್ನು ಉನ್ನತ ಗುಣಮಟ್ಟದಲ್ಲಿ ತೋರಿಸಲು ತಂಡಕ್ಕೆ ಹೆಚ್ಚಿನ ಸಮಯ ಅಗತ್ಯವಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. “‘ಆಲ್ಫಾ’ ನಮ್ಮಿಗೆ ಅತ್ಯಂತ ವಿಶೇಷವಾದ ಚಿತ್ರ. ಅದನ್ನು ಅತ್ಯಂತ ಸಿನಿಮೀಯವಾಗಿ ಪ್ರೇಕ್ಷಕರ ಮುಂದೆ ತರಲು ಬಯಸುತ್ತೇವೆ. ವಿಎಫ್ಎಕ್ಸ್ ಕೆಲಸಕ್ಕೆ ನಿರೀಕ್ಷೆಗಿಂತ ಹೆಚ್ಚು ಸಮಯ ಬೇಕಾಗುತ್ತಿದೆ. ಚಿತ್ರವನ್ನು ನಾಟಕೀಯ ಹಾಗೂ ಅದ್ಭುತ ಅನುಭವವನ್ನಾಗಿಸಲು ಯಾವುದೇ ಅಡಚಣೆ ಬಾರದಂತೆ ನೋಡಿಕೊಳ್ಳುತ್ತಿದ್ದೇವೆ. ಆದ್ದರಿಂದ ಏಪ್ರಿಲ್ 17, 2026ರಂದು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ” ಎಂದು YRF ಮುಖ್ಯಸ್ಥರು…
ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳು: ಎನ್ ಚಲುವರಾಯಸ್ವಾಮಿ
ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದ್ದು ಇದು ರಾಹುಲ್ ಗಾಂಧಿಯವರ ಕನಸು ಆಗಿದೆ. ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದು ಎಂದು ಹೇಳಿದರು. ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ…
ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ ಬಿಸಿಸಿಐಯಿಂದ ₹51 ಕೋಟಿ ಬಹುಮಾನ
ನವಿಮುಂಬೈ: ಭಾರತದ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ. ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಈ ಸಾಧನೆ ಸಾಧಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರೀ ನಗದು ಬಹುಮಾನ ಘೋಷಿಸಿದೆ. ಟೀಮ್ ಇಂಡಿಯಾ ಪ್ರದರ್ಶನದಿಂದ ಸಂತೋಷಗೊಂಡ ಬಿಸಿಸಿಐ, ಒಟ್ಟು ₹51 ಕೋಟಿ ರೂಪಾಯಿಗಳನ್ನು ನಗದು ಬಹುಮಾನವಾಗಿ ನೀಡಲಿದೆ ಎಂದು ಮಂಡಳಿಯ ಕಾರ್ಯದರ್ಶಿ ದೇವಜಿತ್ ಸೈಕಿಯಾ ಘೋಷಿಸಿದ್ದಾರೆ. ಸೈಕಿಯಾ ಅವರು, “ಈ ಐತಿಹಾಸಿಕ ಗೆಲುವು ದೇಶದ ಕ್ರಿಕೆಟ್ ಇತಿಹಾಸದಲ್ಲೊಂದು ಸುವರ್ಣ ಅಧ್ಯಾಯ. ಟೀಮ್ ಇಂಡಿಯಾದ ಸಾಹಸ, ಶ್ರಮ ಮತ್ತು ತಂಡದ ಒಗ್ಗಟ್ಟಿಗೆ ಅಭಿನಂದನೆ ಸಲ್ಲಿಸಲು ಬಿಸಿಸಿಐ ಈ ನಗದು ಬಹುಮಾನ ನೀಡುತ್ತಿದೆ,” ಎಂದು ತಿಳಿಸಿದ್ದಾರೆ. ಈ ಬಹುಮಾನ ಮೊತ್ತವನ್ನು ಟೀಮ್ ಇಂಡಿಯಾ ಆಟಗಾರರು, ಆಯ್ಕೆದಾರರು ಹಾಗೂ ಕೋಚ್ ಅಮೋಲ್…
ತಂತ್ರಜ್ಞಾನ ಮೂಲಕ ಅಕ್ರಮ ತಡೆಯಬೇಕು; ಪರೀಕ್ಷೆ ವೇಳೆ ಮೂಗುತಿ, ಕಿವಿಯೋಲೆ ಬಿಚ್ಚಿಸಿದ KEA ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು: ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಅತಾರ್ಕಿಕ, ಅಮಾನವೀಯ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಧಿಕಾರಿಗಳ ಕ್ರಮವು ಹಿಂದೂ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ. ಮೂಗುತಿ ಹಾಗೂ ಕಿವಿಯೋಲೆ ಬಿಚ್ಚಿಸಿವುದರಿಂದ ನಕಲು ತಡೆಯಬಹುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿದಿದ್ದರೆ, ಅದು ಮೂರ್ಖತನದ ಪರಮಾವಾಧಿಯಷ್ಟೇ ಎಂದವರು ಹೇಳಿದ್ದಾರೆ. ತಂತ್ರಜ್ಞಾನ, ಸಿ.ಸಿ. ಕ್ಯಾಮೆರಾ ಗಳನ್ನೂ ಉಪಯೋಗಿಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ಆಗದಂತೆ ನೋಡಿಕೊಳ್ಳಬೇಕೇ ಹೊರತು ಈ ರೀತಿಯಾದ ಅವೈಜ್ಞಾನಿಕ ಕ್ರಮಗಳಿಂದ ಸಾಧ್ಯವಿಲ್ಲ. ಅಷ್ಟಕ್ಕೂ, ಕಿವಿಯೋಲೆ ಹಾಗೂ ಮೂಗುತಿಯಲ್ಲಿ ಏನನ್ನು ಅಡಗಿಸಿಕೊಳ್ಳಬಹುದು ಎಂಬುದನ್ನು ಪ್ರಾಧಿಕಾರ ಸ್ಪಷ್ಟೀಕರಿಸಬೇಕು ಎಂದಿದ್ದಾರೆ. ಈ ರೀತಿಯಾದ ಅವೈಜ್ಞಾನಿಕ, ಅತಾರ್ಕಿಕ ನಿರ್ಧಾರಗಳನ್ನು ಪರೀಕ್ಷಾ ಪ್ರಾಧಿಕಾರ ಕೈಗೊಂಡರೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಯತ್ನಾಳ್ ನೀಡಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯೋ ಭರದಲ್ಲಿ ಹೆಣ್ಣು ಮಕ್ಕಳ ಕಿವಿಯೋಲೆ,…
EDಯಿಂದ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ನ ₹3,000 ಕೋಟಿ ಆಸ್ತಿ ಮುಟ್ಟುಗೋಲು
ಮುಂಬೈ: ಸಾರ್ವಜನಿಕ ನಿಧಿಯ ಹಣ ವರ್ಗಾವಣೆ ಹಾಗೂ ಅಕ್ರಮ ವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ನ ಹಲವು ಸಂಸ್ಥೆಗಳಿಗೆ ಸೇರಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಮುಂಬೈನ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ನಿವಾಸ, ನವದೆಹಲಿಯ ರಿಲಯನ್ಸ್ ಸೆಂಟರ್ ಆಸ್ತಿ, ಹಾಗೂ ದೆಹಲಿ, ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ (ಕಾಂಚಿಪುರಂ ಸೇರಿ) ಮತ್ತು ಪೂರ್ವ ಗೋದಾವರಿಯಲ್ಲಿನ ಆಸ್ತಿಗಳು ಇದರಡಿ ಸೇರಿವೆ. ಮುಟ್ಟುಗೋಲು ಹಾಕಿಕೊಳ್ಳಲಾದವುಗಳಲ್ಲಿ ಕಚೇರಿ ಆವರಣಗಳು, ವಸತಿ ಘಟಕಗಳು ಮತ್ತು ಭೂಮಿಯ ಭಾಗಗಳು ಸೇರಿವೆ ಎನ್ನಲಾಗಿದೆ. ಈ ಆಸ್ತಿಗಳ ಮೇಲೆ ಅಕ್ಟೋಬರ್ 31ರಂದು ಹಣ ವರ್ಗಾವಣೆ ತಡೆ ಕಾಯ್ದೆ (PMLA) ಸೆಕ್ಷನ್ 5(1) ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ. ತನಿಖೆ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ಮತ್ತು ರಿಲಯನ್ಸ್…
ತೆಲಂಗಾಣದಲ್ಲಿ ಭೀಕರ ಅಪಘಾತ; 16 ಮಂದಿ ದುರ್ಮರಣ
ವಿಕಾರಾಬಾದ್: ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಚೆವೆಲ್ಲಾ ಸಮೀಪದ ಮಿರ್ಜಗುಡದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ಒಂದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ದಶಕಗಳ ಕನಸು ಕೊನೆಗೂ ನಿಜವಾಯಿತು; ಭಾರತ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಚಾಂಪಿಯನ್
ನವಿಮುಂಬೈ: ದಶಕಗಳ ಕನಸು ಕೊನೆಗೂ ನಿಜವಾಯಿತು. ಆತಿಥೇಯ ಭಾರತ ಮಹಿಳಾ ಕ್ರಿಕೆಟ್ ತಂಡವು 2025ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್ಗಳಿಂದ ಸೋಲಿಸಿ, ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡು ಇತಿಹಾಸ ನಿರ್ಮಿಸಿದೆ. ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ಗಳ ಭರ್ಜರಿ ಮೊತ್ತವನ್ನು ಕಲೆಹಾಕಿತು. ಗೆಲುವಿಗಾಗಿ 299 ರನ್ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಈ ಜಯದೊಂದಿಗೆ ಭಾರತ ಮಹಿಳಾ ತಂಡ ಮೂರನೇ ಬಾರಿಗೆ ವಿಶ್ವಕಪ್ ಫೈನಲ್ಗೆ ತಲುಪಿ ಕೊನೆಗೂ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 2005 ಮತ್ತು 2017ರ ಫೈನಲ್ಗಳಲ್ಲಿ ಕೈಚೆಲ್ಲಿದ್ದ ಭಾರತ, ಈ ಬಾರಿ ಅದೇ ಮೈದಾನದಲ್ಲಿ ತನ್ನ ಅಪೂರ್ಣ…
‘ಜೇನು ಕ್ರಾಂತಿ’: ವಿಶ್ವದ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಭಾರತ
ನವದೆಹಲಿ: ಭಾರತವು ಜೇನು ಉತ್ಪಾದನೆ ಮತ್ತು ರಫ್ತು ಕ್ಷೇತ್ರದಲ್ಲಿ ಮಹತ್ವದ ಮೆಟ್ಟಿಲೇರಿದೆ. 2023–24ರ ಹಣಕಾಸು ವರ್ಷದಲ್ಲಿ ಸುಮಾರು 1.07 ಲಕ್ಷ ಮೆಟ್ರಿಕ್ ಟನ್ ನೈಸರ್ಗಿಕ ಜೇನುತುಪ್ಪವನ್ನು ವಿದೇಶಗಳಿಗೆ ಸಾಗಿಸುವ ಮೂಲಕ ಭಾರತವು ಜಾಗತಿಕವಾಗಿ ಎರಡನೇ ಅತಿದೊಡ್ಡ ಜೇನು ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. 2020ರಲ್ಲಿ 9ನೇ ಸ್ಥಾನದಲ್ಲಿದ್ದ ಭಾರತವು ಕೇವಲ ನಾಲ್ಕು ವರ್ಷಗಳಲ್ಲಿ ಏಳು ಸ್ಥಾನಗಳ ಏರಿಕೆ ಕಂಡಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ಭಾನುವಾರ ತಿಳಿಸಿದೆ. ರಾಷ್ಟ್ರೀಯ ಜೇನುಸಾಕಣೆ ಮತ್ತು ಜೇನು ಮಿಷನ್ (NBHM) ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ವೈಜ್ಞಾನಿಕ ಜೇನುಸಾಕಣೆ, ಗುಣಮಟ್ಟದ ಜೇನುತುಪ್ಪ ಮತ್ತು ಇತರ ಜೇನುಗೂಡು ಉತ್ಪನ್ನಗಳ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಈ ಯೋಜನೆ ರಾಷ್ಟ್ರೀಯ ಜೇನುಸಾಕಣೆ ಮಂಡಳಿ (NBB) ಮೂಲಕ ಜಾರಿಗೆ ತರಲಾಗುತ್ತಿದ್ದು, ‘ಆತ್ಮನಿರ್ಭರ ಭಾರತ’ ಅಭಿಯಾನದ ಭಾಗವಾಗಿ 2020–21 ರಿಂದ 2022–23ರ ವರೆಗೆ ₹500 ಕೋಟಿ ಬಜೆಟ್ನೊಂದಿಗೆ ಆರಂಭಿಸಲಾಯಿತು. ನಂತರ…
