ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ,…

ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಕೇಂದ್ರದ ಈ ಹೇಳಿಕೆ ಮಹತ್ವ ಪಡೆದಿದೆ. ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದರು. ರಾಜ್ಯ ಸರ್ಕಾರದ ಮನವಿಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬೆಂಗಳೂರಿನ ಸುತ್ತಮುತ್ತ ಗುರುತಿಸಲಾದ ಮೂರು ಪ್ರಸ್ತಾವಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಅದರ ವರದಿಯನ್ನು ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಅಗತ್ಯವಿರುವ ಅಧಿಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಇದುವರೆಗೆ…

ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

ಹನೂರು: ಮಲೆ ಮಹದೇಶ್ವರ ಕ್ಷೇತ್ರವನ್ನು ಸ್ವಚ್ಛ, ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತ ಧಾರ್ಮಿಕ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಾಧಿಕಾರದ ಪ್ರಮುಖ ಆದ್ಯತೆಯಾಗಿದ್ದು, ಭಕ್ತರು, ಸ್ಥಳೀಯ ಸಂಘಟನೆಗಳು ಹಾಗೂ ವ್ಯಾಪಾರಸ್ಥರ ಸಹಭಾಗಿತ್ವದೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ಹಂತಹಂತವಾಗಿ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ಪುರುಷೋತ್ತಮ್ ತಿಳಿಸಿದರು. ಪರಿಸರ ವಾರಿಯರ್ಸ್ ಗ್ರೂಪ್ ಮೈಸೂರು ಹಾಗೂ ಭಾರತೀಯ ಕಿಸಾನ್ ಸಂಘ, ಚಾಮರಾಜನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಧಾರ್ಮಿಕ ಕ್ಷೇತ್ರಗಳಲ್ಲೂ ಅತ್ಯಂತ ಮಹತ್ವದ್ದಾಗಿದ್ದು, ಪರಿಸರ ವಾರಿಯರ್ಸ್ ಮತ್ತು ಭಾರತೀಯ ಕಿಸಾನ್ ಸಂಘದ ಮುಖಂಡರು ನೀಡಿರುವ ಸಲಹೆಗಳು ಉಪಯುಕ್ತವಾಗಿವೆ. ಭಕ್ತರು, ವ್ಯಾಪಾರಸ್ಥರು ಹಾಗೂ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಲೆ ಮಹದೇಶ್ವರ ಕ್ಷೇತ್ರವನ್ನು ರಾಜ್ಯಕ್ಕೇ ಮಾದರಿಯಾಗುವ ಪ್ಲಾಸ್ಟಿಕ್ ಮುಕ್ತ ಕ್ಷೇತ್ರವನ್ನಾಗಿ…

‘ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ’ ಎಂದು ಕೇಂದ್ರದ ಸ್ಪಷ್ಟನೆ ; ಪರಿಷ್ಕೃತ ಡಿಪಿಆರ್ ಸಲ್ಲಿಸಲು ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಈ ಮಾಹಿತಿ ನೀಡಿದ್ದಾರೆ. 2018ರ ಕಾವೇರಿ ನೀರು ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಉಲ್ಲೇಖ ಇಲ್ಲ ಎಂದು ಸಚಿವಾಲಯ ತಿಳಿಸಿದೆ. 2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶದ ಪ್ರಕಾರ, ನ್ಯಾಯಾಧಿಕರಣದ ತೀರ್ಪಿಗೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದೊಳಗಿನ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಹಕ್ಕು ಸಂಬಂಧಿತ ರಾಜ್ಯಗಳಿಗೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ. ಇದೇ ವೇಳೆ,…

‘ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ’ ; ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ನೈತಿಕತೆ, ಸತ್ಯ ಮತ್ತು ಬದ್ಧತೆಯ ವಿಚಾರದಲ್ಲಿ ಬಿಜೆಪಿ ನಾಯಕರನ್ನು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಸಿ.ಟಿ ರವಿ ಸೇರಿದಂತೆ ಬಿಜೆಪಿಗರ ಎದೆ ಸೀಳಿದರೆ ನಾಲ್ಕಕ್ಷರಗಳೂ ಸಿಗುವುದಿಲ್ಲ, ಜೊತೆಗೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ, ಆತ್ಮಸಾಕ್ಷಿಗಳೂ ಕಾಣುವುದಿಲ್ಲ ಎಂದಿದ್ದಾರೆ. “ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಒಂದು ಸುಳ್ಳಿಗೆ ಮತ್ತೊಂದು ಸುಳ್ಳನ್ನು ಪೋಣಿಸುವ ಸಿ.ಟಿ. ರವಿ ಅವರಂತಹವರು ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಳಂಕ” ಎಂದು ಆರೋಪಿಸಿದ್ದಾರೆ. “ಸಿ.ಟಿ. ರವಿ ಸೇರಿದಂತೆ ಬಿಜೆಪಿಯವರ ಎದೆ ಸೀಳಿದರೆ ನೈತಿಕತೆ, ಲಜ್ಜೆ, ಸತ್ಯ, ಬದ್ಧತೆ ಹಾಗೂ ಆತ್ಮಸಾಕ್ಷಿ ಕಾಣುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿ ಅಸಹನೀಯವಾಗಿ ವರ್ತಿಸುತ್ತಿದೆ” ಎಂದು ಅವರು…

ತ್ರಿಪುರಾ ಡಿಜಿಪಿ ಅನುರಾಗ್ ನಿಗೂಢ ಸಾವು: ವಿಶೇಷ ತಂಡದಲ್ಲಿ ಸದಸ್ಯರ ಸಂಖ್ಯೆ 10ಕ್ಕೆ ಏರಿಕೆ

ಅಗರ್ತಲ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಅವರ ನಿಗೂಢ ಸಾವಿನ ತನಿಖೆಯನ್ನು ರಾಜ್ಯ ಪೊಲೀಸರು ತೀವ್ರಗೊಳಿಸಿದ್ದು, ಪ್ರಕರಣದ ತನಿಖೆಗಾಗಿ ರಚಿಸಿದ್ದ ವಿಶೇಷ ತಂಡವನ್ನು ಮೂರು ಸದಸ್ಯರಿಂದ 10 ಸದಸ್ಯರಿಗೆ ವಿಸ್ತರಿಸಲಾಗಿದೆ. 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಅನುರಾಗ್ ಅವರ ಮೃತದೇಹ ಜುಲೈ 20ರಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಅವರ ಅಧಿಕೃತ ಕೊಠಡಿಗೆ ಹೊಂದಿಕೊಂಡ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜುಲೈ 24ರಂದು ಪಶ್ಚಿಮ ತ್ರಿಪುರಾ ಎಸ್‌ಪಿ ನಮಿತ್ ಪಾಠಕ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಈಗ ಎಸ್‌ಐಟಿಯನ್ನು ಪುನರ್‌ರಚಿಸಿ, ಸೈಬರ್ ಅಪರಾಧ ಘಟಕ, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಹಿರಿಯ ತನಿಖಾಧಿಕಾರಿಗಳನ್ನು ಒಳಗೊಂಡ 10 ಸದಸ್ಯರ ತಂಡವನ್ನಾಗಿ ವಿಸ್ತರಿಸಲಾಗಿದೆ. ತನಿಖೆಯ ಪ್ರಗತಿ ಪರಿಶೀಲನೆಗಾಗಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಭೆ ನಡೆಸಿ, ದೈನಂದಿನ ಪ್ರಗತಿ ವರದಿಯನ್ನು ಎಸ್‌ಪಿಗೆ ಸಲ್ಲಿಸುವಂತೆ ಆದೇಶಿಸಲಾಗಿದೆ.…

ಪಂಜಾಬ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಆರೋಪಿಗಳಿಗಾಗಿ ಖಾಕಿ ಶೋಧ

ಅಮೃತಸರ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ತಡರಾತ್ರಿ ಪೆಟ್ರೋಲ್ ಬಾಂಬ್ ಎಸೆದು ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದರೂ, ಭದ್ರತಾ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ದಾಳಿ ನಡೆಸಿದವರನ್ನು ಗುರುತಿಸಲು ಹಾಗೂ ದಾಳಿಯ ಹಿಂದಿನ ಉದ್ದೇಶ ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ಬಿಜೆಪಿ ಕಚೇರಿ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.…

ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಮುಟ್ಟಿ ನೋಡಲಿ: ಬಿಜೆಪಿ ಸವಾಲು

ಬೆಂಗಳೂರು: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ವಿರೋಧ ಪಕ್ಷಗಳನ್ನು ಬೆದರಿಸಿ ಹಿಡಿತಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಕಿಡಿಕಾರಿದರು. ಸಿ.ಟಿ. ರವಿ ಅವರು ಯಾವುದೇ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಸಿ.ಟಿ. ರವಿ ಅವರನ್ನು ಪೊಲೀಸರು ಮುಟ್ಟಿ ನೋಡಲಿ ಎಂದು ಅಶೋಕ್ ಸವಾಲು ಹಾಕಿದರು. ಸದ್ಯದಲ್ಲೇ ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಪರವಾಗಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಾಗುವುದು ಎಂದು ಅವರು ತಿಳಿಸಿದರು. ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ…

ರಾಜ್ಯವೇ ಬರ ಬಗ್ಗೆ ಘೋಷಣೆ ಮಾಡದಿದ್ದರೆ ಕೇಂದ್ರ ತಂಡ ಹೇಗೆ ಬರುತ್ತದೆ?: ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಸರ್ಕಾರ ಇನ್ನೂ ಅಧಿಕೃತವಾಗಿ ಬರ ಘೋಷಣೆ ಮಾಡಿಲ್ಲ. ಹೀಗಿರುವಾಗ ಬರ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ತಂಡ ಹೇಗೆ ಬರಲು ಸಾಧ್ಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರೂ ಎಷ್ಟು ಪರಿಹಾರ ಘೋಷಿಸಿದ್ದಾರೆ ಎಂದು ಪ್ರಶ್ನಿಸಿದರು. ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಕೇವಲ ಕಾಟಾಚಾರಕ್ಕೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ದೆಹಲಿಗೆ ತೆರಳುತ್ತಿದ್ದಾರೆ ಎಂದು ಟೀಕಿಸಿದರು. ತಾವು ಈಗಾಗಲೇ ಮಂಡ್ಯ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮುಂದಿನ ವಾರ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ಭೇಟಿ ನೀಡುವುದಾಗಿ ಅಶೋಕ್ ತಿಳಿಸಿದರು. ಬರ ಘೋಷಣೆ ಮಾಡಿದರೆ ಮೊದಲ ಹಂತದ ಪರಿಹಾರವನ್ನು ರಾಜ್ಯ ಸರ್ಕಾರವೇ ಬಿಡುಗಡೆ ಮಾಡಬೇಕಾಗುತ್ತದೆ.…

ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು ₹800 ಕೋಟಿ ಮೊತ್ತದ ಡೀಲ್ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲು ವಿಫಲವಾಗಿದ್ದು, ಹಣ ನೀಡಿ ಅಕ್ರಮವಾಗಿ ಹುದ್ದೆ ಪಡೆದಿರುವ ಆರೋಪಗಳಿವೆ ಎಂದು ಹೇಳಿದರು. ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 350ಕ್ಕೂ ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿಲ್ಲ. ಆದರೆ ವಿಶ್ವವಿದ್ಯಾಲಯದಲ್ಲಿ ಸಾಧಾರಣ ಅಂಕ ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಹುದ್ದೆಗಳ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ಇಲಾಖಾ…