ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ. ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ…
