ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ ತಿಳಿಸಿರುವ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ ನಡೆಯುವಂತಿಲ್ಲ ಎಂದಿದ್ದಾರೆ. ಎಲ್ಲ ರೀತಿಯ ಫ್ಯಾಕ್ಟರಿಗಳಿಗೆ ಆಯಾ ವ್ಯಾಪ್ತಿಯ ಸ್ಥಳೀಯ ಪೊಲೀಸರು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಫ್ಯಾಕ್ಟರಿಯಲ್ಲಿನ ಕಾರ್ಯಚಟುವಟಿಕೆ ಹಾಗೂ ಅಲ್ಲಿ ಬಳಸಲಾಗುವ ಕೆಮಿಕಲ್ಗಳು, ಯಂತ್ರಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ನೀಡಬೇಕು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಂಡು, ನೂರಾರು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದಾರೆ.. ರಾಜ್ಯದಲ್ಲಿ ಯಾವುದೇ ರೀತಿಯ ಕೆಮಿಕಲ್ ಫ್ಯಾಕ್ಟರಿ ಪೊಲೀಸರ ಕಣ್ತಪ್ಪಿಸಿ…
Day: February 8, 2026
ಬೆಂಗಳೂರು- ವಿಜಯಪುರ ವಂದೇ ಭಾರತ್, ದಿನವಹಿ ವಿಶೇಷ ರೈಲು; ಕೇಂದ್ರಕ್ಕೆ ಸಚಿವ ಎಂ.ಬಿ.ಪಾಟೀಲ್ ಮನವಿ
ಬೆಂಗಳೂರು: ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಚರ್ಚೆನಡೆಸಿದ ಸಚಿವ ಎಂ.ಬಿ.ಪಾಟೀಲ್, ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲು, ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಮತ್ತು ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮಾಡಬೇಕೆಂದು ಕೋರಿ ಮನವಿ ಸಲ್ಲಿಸಿದರು. ಬಾಗಲೂರಿನ ಹೈಟೆಕ್ ಹಾರ್ಡ್ ವೇರ್ ಪಾರ್ಕ್ ನಲ್ಲಿ ಜೆಟ್ ವೆರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅಲ್ಲೇ ಕೆಲಹೊತ್ತು ವೈಷ್ಣವ್ ಅವರನ್ನು ಭೇಟಿಮಾಡಿ, ಮನವಿ ಪತ್ರಗಳನ್ನು ನೀಡಿದೆ. ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.…
‘ಬ್ಯಾನರ್ ಹಗರಣದಲ್ಲಿ ನಿಮಗೂ ಪಾಲು ಬರುತ್ತಿದೆಯೇ?’; ಸಿಎಂಗೆ ಬಿಜೆಪಿ ಪ್ರಶ್ನೆ
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್ನಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಗೃಹಲಕ್ಷ್ಮಿಯ ಎರಡು ತಿಂಗಳ ಹಣ ಎಗರಿಸಿ ₹5000 ಕೋಟಿ ಅಕ್ರಮ ಎಸಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸಲು ಉದ್ದೇಶಿಸಿರುವ ಬ್ಯಾನರ್ನಲ್ಲೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಾರುಕಟ್ಟೆ ದರದಲ್ಲಿ ಕೇವಲ ರೂ. 350 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್ಗಳನ್ನು ಬರೋಬ್ಬರಿ ರೂ. 998 ನೀಡಿ ಮುದ್ರಿಸಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದಿರುವ ಬಿಜೆಪಿ, ಕನಿಷ್ಠ ಪಕ್ಷ ಒಂದು ಬ್ಯಾನರ್ನಲ್ಲಿ ಅದರ ನೈಜ ಮುದ್ರಣ ದರಕ್ಕಿಂತಲೂ ಹೆಚ್ಚಿನ ದರವನ್ನು ಲೂಟಿ ಮಾಡಲಾಗುತ್ತಿದೆ ಎಂದು ದೂರಿದೆ. ಸಚಿವ ಸಂಪುಟದಲ್ಲಿ ಭ್ರಷ್ಟರು ತುಂಬಿ ತುಳುಕಾಡುತ್ತಿದ್ದರೂ ನಿಮ್ಮ ಮೌನದ ಹಿಂದಿನ ಕಾರಣವೇನು? ನಿಮಗೂ ಪಾಲು ಬರುತ್ತಿದೆಯೇ?…
