ನವದೆಹಲಿ: ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲವನ್ನು ಪತ್ತೆಹಚ್ಚಿದ ದೆಹಲಿ ಪೊಲೀಸ್ ಹೂಡಿಕೆ ವಂಚನೆ ಸಿಂಡಿಕೇಟ್ ಅನ್ನು ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದೆ. ನೈಋತ್ಯ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ತಂಡವು ಶ್ರೀಧರ್ ದಿಲೀಪ್ ಇಂಗಲ್ (25), ಅರ್ಚಿರಿಯನ್ ಗೋರಕ್ಷ್ ಕಾಂಬ್ಳೆ (21), ಅಜಿಜ್ ಮಿರಾನ್ ಶೇಖ್ (25), ಪ್ರಣವ್ ಜಲಿಂದರ್ ಗುಲ್ದಗಡ್ (24) ಮತ್ತು ವಿಶಾಲ್ ದುರ್ಗಾದಾಸ್ ಬಚಲ್ (25) ಅವರನ್ನು ಬಂಧಿಸಿದೆ. ಬಂಧಿತರಿಂದ ಆರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಂಚನೆಗೆ ಸಂಬಂಧಿಸಿದ 35 ಬ್ಯಾಂಕ್ ಖಾತೆಗಳ ವಿವರಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣವು 2025ರ ಸೆಪ್ಟೆಂಬರ್ 4ರಂದು NCRP ಪೋರ್ಟಲ್ನಲ್ಲಿ ಸಲ್ಲಿಸಲಾದ ದೂರಿನ ಆಧಾರದ ಮೇಲೆ ಬೆಳಕಿಗೆ ಬಂದಿದೆ. ಅರುಣಾಚಲ ಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ‘ನೆಕ್ಸ್ಟ್ ಬಿಲಿಯನ್ ಟೆಕ್ನಾಲಜಿ ಪ್ರೈ. ಲಿ.’ ಎಂಬ ಹೆಸರಿನಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಮಾಡುವ ನೆಪದಲ್ಲಿ ವಂಚಿಸಲಾಗಿದೆ…
Day: March 28, 2026
ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ
ಲಂಡನ್ (ಯುನೈಟೆಡ್ ಕಿಂಗ್ಡಮ್): ಯುನೈಟೆಡ್ ಕಿಂಗ್ಡಮ್ಗೆ ಭಾರತದ ಹೊಸ ಹೈಕಮಿಷನರ್ ಆಗಿ ನೇಮಕಗೊಂಡಿರುವ ಪೆರಿಯಸಾಮಿ ಕುಮಾರನ್ ಅವರಿಗೆ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಆತ್ಮೀಯ ಸ್ವಾಗತ ಕೋರಿದೆ. ಫೌಂಡೇಶನ್ ಮುಖ್ಯಸ್ಥರೂ, ಲಂಡನ್ನ ಮಾಜಿ ಮೇಯರ್ ಆಗಿರುವ ಡಾ. ನೀರಜ್ ಪಾಟೀಲ್ ಅವರು ಮಾತನಾಡಿ, 2005ರಿಂದ 2007ರವರೆಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕುಮಾರನ್ ಅವರ ಕರ್ನಾಟಕದೊಂದಿಗಿನ ಸಂಪರ್ಕವನ್ನು ವಿಶೇಷವಾಗಿ ಉಲ್ಲೇಖಿಸಿದರು. ಈ ಪ್ರದೇಶದ ಬಗ್ಗೆ ಅವರ ಅನುಭವ ಮತ್ತು ತಿಳುವಳಿಕೆ ಭಾರತ–ಯುನೈಟೆಡ್ ಕಿಂಗ್ಡಮ್ ನಡುವಿನ ಸಾಂಸ್ಕೃತಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದೇ ವೇಳೆ, ನಿರ್ಗಮಿತ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರು ಏಪ್ರಿಲ್ 30, 2025ರಂದು ಭಗವಾನ್ ಬಸವೇಶ್ವರರಿಗೆ ಸಲ್ಲಿಸಿದ ಗೌರವವನ್ನು ಸ್ಮರಿಸಿ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಯಿತು. ಬ್ರಿಟಿಷ್ ಹಿಂದೂ ಸಮುದಾಯದೊಂದಿಗೆ ಅವರು ಬೆಳೆಸಿದ ಬಾಂಧವ್ಯವನ್ನು ಫೌಂಡೇಶನ್…
ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು
ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ. ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನೇಪಾಳದಲ್ಲಿ ರಾಜಕೀಯ ಸುನಾಮಿ: ಮಾಜಿ ಪ್ರಧಾನಿ ಓಲಿ ಬಂಧನ
ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಹೊಸ ಸರ್ಕಾರವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಾಕ್ ಅವರನ್ನು ಜನರಲ್ ಝಡ್ ಪ್ರತಿಭಟನೆಗಳ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದೆ. ಹೊಸ ಪ್ರಧಾನಿ ಬಾಲೇಂದ್ರ ಶಾ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈ ಪ್ರಕರಣದ ತನಿಖೆಗೆ ರಚಿಸಲಾದ ಉನ್ನತ ಮಟ್ಟದ ಆಯೋಗದ ವರದಿಯನ್ನು ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗವು ಓಲಿ, ಲೇಖಾಕ್ ಹಾಗೂ ಮಾಜಿ ಪೊಲೀಸ್ ಮುಖ್ಯಸ್ಥ ಚಂದ್ರ ಕುಬೇರ್ ಖಪುಂಗ್ ವಿರುದ್ಧ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲು ಶಿಫಾರಸು ಮಾಡಿತ್ತು. ಈ ಹಿನ್ನೆಲೆ, ನ್ಯಾಯಾಲಯದ ಬಂಧನ ವಾರಂಟ್ ಆಧಾರದ ಮೇಲೆ ಶನಿವಾರ ಮುಂಜಾನೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಲಿಯನ್ನು ಭಕ್ತಪುರದ ಗುಂಡುವಿನ…
ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ; ಸಿದ್ದರಾಮಯ್ಯ
ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು. ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ…
