ನಟ ಲೆಜೆಂಡ್ ಸರವಣನ್ ಮೂವಿ ‘ಲೀಡರ್’ ಏಪ್ರಿಲ್ 9ರಂದು ತೆರೆಗೆ

ಚೆನ್ನೈ: ಉದ್ಯಮಿ-ನಟ ಲೆಜೆಂಡ್ ಸರವಣನ್ ನಾಯಕನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ತಮಿಳು ಚಿತ್ರ ಲೀಡರ್ ಏಪ್ರಿಲ್ 9ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಚಿತ್ರಕ್ಕೆ ಆರ್.ಎಸ್. ದುರೈ ಸೆಂಥಿಲ್‌ಕುಮಾರ್ ನಿರ್ದೇಶನ ನೀಡಿದ್ದು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಯು/ಎ ಪ್ರಮಾಣಪತ್ರ ನೀಡಿರುವುದರಿಂದ ಕುಟುಂಬ ಸಮೇತರಾಗಿ ವೀಕ್ಷಿಸಬಹುದಾಗಿದೆ. ನಿರ್ದೇಶಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ದಿನಾಂಕದ ಪೋಸ್ಟರ್ ಹಂಚಿಕೊಂಡು, ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈಗಾಗಲೇ ಬಿಡುಗಡೆಯಾದ ಟೀಸರ್ ಸಿನಿ ಪ್ರೇಮಿಗಳ ಗಮನ ಸೆಳೆದಿದ್ದು, ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್ ಅಂಶಗಳು ಚಿತ್ರದಲ್ಲಿ ಮೇಳೈಸಿರುವುದು ಕಂಡುಬರುತ್ತಿದೆ. ಸರವಣನ್ ಅವರು ‘ಶಕ್ತಿವೇಲ್’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತನ್ನ ಮಗಳನ್ನು ರಕ್ಷಿಸಲು ಯಾವ ಮಟ್ಟಕ್ಕೂ ಹೋಗುವ ತಂದೆಯ ಕಥೆಯನ್ನು ಚಿತ್ರ ಹೇಳಲಿದೆ. ಚಿತ್ರದಲ್ಲಿ ಬಾಲಿವುಡ್ ನಟಿ ಪಾಯಲ್…

ಕತಾರ್ ಮೇಲಿನ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಆಘಾತ, ಭಾರತಕ್ಕೂ ಪರಿಣಾಮ

ದೋಹಾ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷ ಹೊಸ ಹಂತ ತಲುಪಿದ್ದು, ಇರಾನ್ (Iran) ಇದೀಗ ಕತಾರ್ (Qatar)ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಈ ಬೆಳವಣಿಗೆ ಜಾಗತಿಕ ಇಂಧನ ಮಾರುಕಟ್ಟೆಗಳಲ್ಲಿ ಆತಂಕ ಸೃಷ್ಟಿಸಿದೆ. ಇಸ್ರೇಲ್ (Israel)-ಅಮೆರಿಕಾ (United States) ಮೈತ್ರಿ ಪಡೆಗಳ ದಾಳಿಗೆ ಪ್ರತೀಕಾರವಾಗಿ ಇರಾನ್ ಈ ಕ್ರಮ ಕೈಗೊಂಡಿದ್ದು, ಇದುವರೆಗೆ ಅಮೆರಿಕದ ಸೈನಿಕ ನೆಲೆಗಳನ್ನು ಗುರಿಯಾಗಿಸಿದ್ದ ಇರಾನ್ ಈಗ ಇಂಧನ ಕ್ಷೇತ್ರದತ್ತ ಗಮನ ಹರಿಸಿದೆ. ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರ (Ras Laffan Industrial City) ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಅನಿಲ ಸೌಲಭ್ಯಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಇದರಿಂದ ಅನಿಲ ಹಾಗೂ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ಸಂಭವಿಸುವ ಸಾಧ್ಯತೆ ಇದೆ. ಪರ್ಷಿಯನ್ ಕೊಲ್ಲಿಯಲ್ಲಿರುವ ಇರಾನ್‌ನ ಸೌತ್ ಪಾರ್ಸ್ ಅನಿಲ ಘಟಕ (South Pars Gas Field) ಮೇಲೆ ನಡೆದ ದಾಳಿಗೆ…

ಯುಗಾದಿ 2026: ರಾಶಿಗಳ ಮೇಲೆ ಗ್ರಹಗಳ ಪ್ರಭಾವ – ಯಾರಿಗೆ ಶುಭ, ಯಾರಿಗೆ ಮಿಶ್ರ ಫಲ? ಜ್ಯೋತಿಷಿಗಳ ವಿಶ್ಲೇಷಣೆ ಹೀಗಿದೆ..

ಯುಗಾದಿ ಹೊಸ ವರ್ಷದ ಆರಂಭ ಮಾತ್ರವಲ್ಲ, ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಹೊಸ ನಿರೀಕ್ಷೆಗಳಿಗೂ ದಾರಿಯಾಗುತ್ತದೆ. 2026ರ ಯುಗಾದಿ ‘ಪರಾಭವ’ ನಾಮ ಸಂವತ್ಸರದ ಆರಂಭವಾಗಿದ್ದು, ಈ ವರ್ಷದಲ್ಲಿ ಗ್ರಹಗಳ ಸಂಚಾರವು 12 ರಾಶಿಗಳ ಮೇಲೂ ವಿಭಿನ್ನ ಪರಿಣಾಮ ಬೀರುತ್ತದೆ. ಕೆಲ ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದರೆ, ಇನ್ನೂ ಕೆಲವರಿಗೆ ಎಚ್ಚರಿಕೆಯ ಅಗತ್ಯವಿರುವ ವರ್ಷವಾಗಲಿದೆ. ಈ ವರ್ಷ ಮೇಷ, ಸಿಂಹ ಮತ್ತು ಕುಂಭ ರಾಶಿಗಳಿಗೆ ವಿಶೇಷವಾಗಿ ಶುಭ ಫಲಗಳು ಕಾಣಿಸಿಕೊಳ್ಳಲಿವೆ. ಉದ್ಯೋಗ, ವ್ಯವಹಾರ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಬೆಳವಣಿಗೆ ಕಂಡುಬರುವ ಸಾಧ್ಯತೆ ಇದೆ. ಹೊಸ ಅವಕಾಶಗಳು ಎದುರಾಗುವ ಜೊತೆಗೆ, ಹೂಡಿಕೆಗಳಿಂದಲೂ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಕುಟುಂಬದಲ್ಲಿಯೂ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ವೃಷಭ ಮತ್ತು ಮಿಥುನ ರಾಶಿಯವರಿಗೆ 2026ರಲ್ಲಿ ಧನಲಾಭದ ಯೋಗ ಹೆಚ್ಚು. ವಿಶೇಷವಾಗಿ ಮಿಥುನ ರಾಶಿಯವರಿಗೆ ಮೇ ನಂತರ ಶುಭಫಲಗಳು ಹೆಚ್ಚಾಗಲಿದ್ದು, ವೃತ್ತಿ ಮತ್ತು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧ್ಯತೆ…

‘ಕರುಪ್ಪು’: ಮೇ 14, 2026ರಂದು ವಿಶ್ವಾದ್ಯಂತ ತೆರೆಗೆ

ಚೆನ್ನೈ: ತಮಿಳು ಸಿನಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಥ್ರಿಲ್ಲರ್ ಕರುಪ್ಪು ಮೇ 14, 2026ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಚಿತ್ರದಲ್ಲಿ ನಟ ಸೂರ್ಯ ನಾಯಕನಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ನಿರ್ದೇಶನ ನೀಡಿರುವ ಆರ್ ಜೆ ಬಾಲಾಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ದಿನಾಂಕವನ್ನು ಪ್ರಕಟಿಸಿ, “#ಕರುಪ್ಪು – 14-05-2026. ಬ್ಲಾಕ್‌ಬಸ್ಟರ್ ಬೇಸಿಗೆ ಪ್ರಾರಂಭವಾಗುತ್ತದೆ!” ಎಂದು ಬರೆದು ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಈಗಾಗಲೇ ಬಿಡುಗಡೆಯಾದ ಟೀಸರ್ ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ಕರುಪ್ಪು ದೇವರ ಆರಾಧನೆಯ ಹಿನ್ನೆಲೆಯೊಂದಿಗೆ ಕಥೆ ಸಾಗುವುದರ ಸೂಚನೆ ನೀಡಿದೆ. ಟೀಸರ್‌ನಲ್ಲಿ ಸೂರ್ಯ ಅವರು ‘ಸರವಣನ್’ ಎಂಬ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, “ಕರುಪ್ಪು” ಎಂಬ ಇನ್ನೊಂದು ಗುರುತಿನೊಂದಿಗೆ ತೀವ್ರ ಆಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ. ಚಿತ್ರವು ಆಕ್ಷನ್, ಸಸ್ಪೆನ್ಸ್ ಮತ್ತು ವಾಣಿಜ್ಯ ಅಂಶಗಳ ಸಮನ್ವಯವಾಗಿದ್ದು, ಹಲವು ಪವರ್‌ಫುಲ್ ಡೈಲಾಗ್‌ಗಳು ಮತ್ತು ಭರ್ಜರಿ ಹೋರಾಟದ…

‘ಎಚ್ಚರಿಕೆಯು ಎಲ್ಲಾ ಕಾಯಿಲೆಗಳಿಗೂ ಪರಿಹಾರ’; ಡಾ.ಪದ್ಮಿನಿ ಪ್ರಸಾದ್

ಬೆಂಗಳೂರು (Bengaluru): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಸ್ತ್ರೀ ಆರೋಗ್ಯ ಕುರಿತ ಜಾಗೃತಿ ಕಾರ್ಯಕ್ರಮಗಳು ಜೋರಾಗಿದ್ದು, ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಅಭಿಯಾನ ಗಮನ ಸೆಳೆಯುತ್ತಿದೆ. ವರ್ಷಗಳಿಂದ ಮಹಿಳಾ ಆರೋಗ್ಯ ಕುರಿತಾಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸರಣಿಯನ್ನು ಕೈಗೊಂಡಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಐಐಐಟಿ ಬೆಂಗಳೂರು (IIIT Bangalore) ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ದೈಹಿಕ, ಮಾನಸಿಕ ಹಾಗೂ ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳದಿಂದ ರಕ್ಷಣೆ ಕುರಿತಾಗಿ ಅವರು ವಿವರಿಸಿದರು. ಇಂದಿನ ಜೀವನಶೈಲಿಯೇ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತಿದ್ದು, ಯುವಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. ದೀರ್ಘಕಾಲ ನಡೆದ…

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮೈಸೂರು (Mysuru), ಮಂಡ್ಯ (Mandya), ಚಾಮರಾಜನಗರ (Chamarajanagar), ಹಾಸನ (Hassan), ಕೊಡಗು (Kodagu) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಹಾವೇರಿ (Haveri), ಚಿತ್ರದುರ್ಗ (Chitradurga) ಹಾಗೂ ಹುಬ್ಬಳ್ಳಿ-ಧಾರವಾಡ (Hubballi-Dharwad) ಪ್ರದೇಶಗಳಲ್ಲಿಯೂ ಮಳೆಯ ಲಕ್ಷಣಗಳು ಗೋಚರಿಸಬಹುದು. ಉತ್ತರ ಒಳನಾಡಿನ ಬೀದರ್ (Bidar), ಕಲಬುರಗಿ (Kalaburagi), ರಾಯಚೂರು (Raichur) ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.…

‘ಕೆಡಿ ದಿ ಡೆವಿಲ್’ ಹಾಡು ವಿವಾದ: ಮಹಿಳಾ ಆಯೋಗ ಕೆಂಡ

ಬೆಂಗಳೂರು : ‘ಕೆಡಿ ದಿ ಡೆವಿಲ್’ (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ (Dhruva Sarja) ಅಭಿನಯದ ಈ ಚಿತ್ರಕ್ಕೆ ಆರಂಭದಲ್ಲೇ ಅಡೆತಡೆ ಎದುರಾಗಿದ್ದು, ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ (YouTube) ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ. ಹಾಡಿನ ಸಾಹಿತ್ಯ ಮಾತ್ರವಲ್ಲದೆ ನೃತ್ಯ ಸಂಯೋಜನೆಯ ಮೇಲೂ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೃಶ್ಯಗಳು ಅಸಭ್ಯವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ವಿವಾದ ತೀವ್ರಗೊಳ್ಳುತ್ತಿದ್ದಂತೆಯೇ ಕರ್ನಾಟಕ ರಾಜ್ಯ ಮಹಿಳಾ ಆಯೋಗ (Karnataka State Women Commission) ಚಿತ್ರರಂಗದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣಪತ್ರ ಮಂಡಳಿ (Central Board of Film Certification)ಗೆ ಪತ್ರ…

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ವ್ಯಾಜ್ಯಗಳು ಅಥವಾ ದೂರುಗಳೊಂದಿಗೆ ಠಾಣೆಗೆ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮೂವರು ಮಹಿಳೆಯರು ಬೆಂಗಳೂರು (Bengaluru)ನಲ್ಲಿ ದೂರು ಸಲ್ಲಿಸಿದ್ದು, ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರ ಕಚೇರಿ (Director General of Police), ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗ (State Women Commission)ಕ್ಕೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ…

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ ಮತದಾನ, ಮೇ 4ರಂದು ಫಲಿತಾಂಶ

ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತ ಚುನಾವಣಾ ಆಯೋಗ (Election Commission of India) ಪ್ರಕಟಿಸಿದೆ. ಜ್ಞಾನೇಶ್ ಕುಮಾರ್ (Gyanesh Kumar) ನೇತೃತ್ವದ ಆಯೋಗ ಪತ್ರಿಕಾಗೋಷ್ಠಿಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 9ರಿಂದ 29ರವರೆಗೆ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. ತಮಿಳುನಾಡು (Tamil Nadu), ಪಶ್ಚಿಮ ಬಂಗಾಳ (West Bengal), ಕೇರಳ (Kerala), ಅಸ್ಸಾಂ (Assam) ರಾಜ್ಯಗಳು ಹಾಗೂ ಪುದುಚೆರಿ (Puducherry) ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ನಡೆಯಲಿವೆ. ಅಸ್ಸಾಂ, ಕೇರಳ ಹಾಗೂ ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಕೆಲವು ಪ್ರದೇಶಗಳು ಹಿಂಸಾಚಾರಕ್ಕೆ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ…

ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಭವಿಸಿರುವ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿರುವುದರಿಂದ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ (Department of Tourism, Government of Karnataka) ವಿದೇಶಿ ಪ್ರವಾಸಿಗರ ನೆರವಿಗೆ ಮುಂದಾಗಿದೆ. ಪ್ರಸ್ತುತ ಕರ್ನಾಟಕ (Karnataka)ದಲ್ಲಿ ಇರುವ ಹಾಗೂ ಪ್ರಯಾಣದ ಅಡಚಣೆಗಳನ್ನು ಎದುರಿಸುತ್ತಿರುವ ವಿದೇಶಿ ಪ್ರವಾಸಿಗರು ಯಾವುದೇ ಸಹಾಯಕ್ಕಾಗಿ ಅಥವಾ ವೀಸಾ ಸಂಬಂಧಿತ ಸಮಸ್ಯೆಗಳಿಗಾಗಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (H. K. Patil) ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ವಿದೇಶಿ ಅತಿಥಿಗಳಿಗೆ ವೀಸಾ ನಿರ್ವಹಣೆ ಸೇರಿದಂತೆ ಅಗತ್ಯ ನೆರವು ಒದಗಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಿಸಲು ಮಾಹಿತಿ: ಕಾರ್ಯನಿರ್ವಹಿಸುವ ಸಮಯ: ಬೆಳಿಗ್ಗೆ 5.30 ರಿಂದ ರಾತ್ರಿ 10.00 ಗಂಟೆಯವರೆಗೆದೂರವಾಣಿ ಸಂಖ್ಯೆ: 89706 50021 ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಚ್.ಪಿ. ಜನಾರ್ಧನ (H.…