ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ಪಿ. ಶಶಿಕುಮಾರ್ ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎನ್. ಸಂಜೀವ್ ರಾಜ್ ರವರ ಮಾರ್ಗದರ್ಶನದಲ್ಲಿ ಪಿ. ಶಶಿಕುಮಾರ್ ಮಂಡಿಸಿದ “ಸಿನೆಮ್ಯಾಟಿಕ್ ಕಾನ್ಟ್ರಿಬ್ಯೂಷನ್ಸ್ ಆಫ್ ಡಾ. ಗಿರೀಶ್ ಕಾರ್ನಾಡ್: ಅನ್ ಅನಾಲಿಟಿಕಲ್ ಸ್ಟಡಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
Day: April 2, 2026
ಸಿದ್ದರಾಮಯ್ಯ ಅವರ ‘ಬೀದಿ ಹೋರಿಗಳು’ ಎಂಬ ಹೇಳಿಕೆಗೆ ಬಿಜೆಪಿ ಆಕ್ರೋಶ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ‘ಬೀದಿ ಹೋರಿಗಳು’ ಎಂದು ಹೋಲಿಸಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು, “ಬಿಜೆಪಿ ನಾಯಕರು ಹೋರಿಗಳಾದರೆ, ಕಾಂಗ್ರೆಸ್ ನಾಯಕರು ಇಲಿಗಳಂತಿದ್ದಾರೆ” ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಸುತ್ತ ಜನರ ವಿಶ್ವಾಸ ಕಳೆದುಕೊಂಡವರೇ ಇದ್ದಾರೆ ಎಂದು ಅವರು ಆರೋಪಿಸಿದರು. ಉಪಚುನಾವಣೆಯ ಭಯದಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದರು. ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಶ್ರೀರಾಮುಲು, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಹೇಳಿದರು. ಸರ್ಕಾರದ ಸಚಿವರು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ದೂರಿದರು. ಖಾತರಿ ಯೋಜನೆಗಳ ಕುರಿತು…
ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆಗೆ ಸಚಿವರ ಸೂತ್ರ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ. ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ. ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ…
ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್
ಮುಂಬೈ: ಅಕ್ಷಯ್ ಕುಮಾರ್ ಅಭಿನಯದ ಹಾರರ್-ಹಾಸ್ಯ ಚಿತ್ರ ಭೂತ್ ಬಾಂಗ್ಲಾ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಬದಲಾಯಿಸಿದ್ದು, ಇದೀಗ ಏಪ್ರಿಲ್ 16ರಂದು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರದ ಸಹ-ನಿರ್ಮಾಪಕಿ ಏಕ್ತಾ ಕಪೂರ್ ಸಾಮಾಜಿಕ ಜಾಲತಾಣದ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ಅಭಿನಯದ ಧುರಂಧರ್: ದಿ ರಿವೆಂಜ್ ಚಿತ್ರ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಮೊದಲು ಏಪ್ರಿಲ್ 10ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರ, ಇದೀಗ ಏಪ್ರಿಲ್ 16, 2026ರಂದು ರಾತ್ರಿ 9 ಗಂಟೆಯಿಂದ ಪ್ರದರ್ಶನ ಆರಂಭವಾಗಲಿದೆ. ಈ ಚಿತ್ರದಲ್ಲಿ ವಾಮಿಕಾ ಗಬ್ಬಿ, ಪರೇಶ್ ರಾವಲ್, ಟಬು, ರಾಜ್ಪಾಲ್ ಯಾದವ್, ಜಿಶು ಸೇನ್ಗುಪ್ತಾ ಮತ್ತು ಮಿಥಿಲಾ ಪಾಲ್ಕರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರವು ಪ್ರಿಯದರ್ಶನ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಅವರ ಹಳೆಯ ಯಶಸ್ವಿ ಜೋಡಿ ಮತ್ತೆ ಒಂದಾಗಿರುವುದು ಅಭಿಮಾನಿಗಳಲ್ಲಿ…
ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಕರ್ನಾಟಕ ಪೊಲೀಸರು ಪ್ರಮುಖ ಪಾತ್ರವಹಿಸಿದ್ದು, ದೇಶದ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಕೆಎಸ್ಆರ್ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಸೇವೆಯನ್ನು ಶ್ಲಾಘಿಸಿದರು. 1965ರ ಏಪ್ರಿಲ್ 2ರಂದು ಪೊಲೀಸ್ ಕಾಯ್ದೆ ಜಾರಿಗೆ ಬಂದ ದಿನವನ್ನು ಸ್ಮರಿಸಲು ಈ ದಿನಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಅವಿರತವಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು. ಇಂಡಿಯಾ ಜಸ್ಟೀಸ್ ರಿಪೋರ್ಟ್ ಪ್ರಕಾರ, ನ್ಯಾಯವನ್ನು ನಾಗರಿಕರಿಗೆ ತಲುಪಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಇದರಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ತರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ…
