ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವರು ಹೈಬಿಸ್ಕಸ್ ಟೀ (ದಾಸವಾಳ ಚಹಾ) ಮತ್ತು ಗ್ರೀನ್ ಟೀ ನಡುವೆ ಯಾವುದು ಉತ್ತಮ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಉತ್ಪನ್ನಗಳಲ್ಲಿ ಕಲಬೆರಕೆ ಅಥವಾ ಗುಣಮಟ್ಟದ ವ್ಯತ್ಯಾಸಗಳಿರುವ ಕಾರಣ, ಮನೆಯಲ್ಲೇ ಸ್ವಚ್ಛವಾಗಿ ತಯಾರಿಸಿದ ಪಾನೀಯಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. Hibiscus Tea: ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ? ದಾಸವಾಳ ಹೂವಿನಿಂದ ತಯಾರಿಸುವ ಹೈಬಿಸ್ಕಸ್ ಟೀ ನೈಸರ್ಗಿಕವಾಗಿ ಕೆಫೀನ್-ಮುಕ್ತವಾಗಿದೆ. ಕೆಲವು ಅಧ್ಯಯನಗಳ ಪ್ರಕಾರ, ಇದು ರಕ್ತನಾಳಗಳನ್ನು ವಿಶ್ರಾಂತಿ ಮಾಡಿಸಿ ರಕ್ತದ ಹರಿವನ್ನು ಸುಧಾರಿಸಲು ನೆರವಾಗಬಹುದು. ಇದರಿಂದ ಅಧಿಕ ರಕ್ತದೊತ್ತಡ ಹೊಂದಿರುವವರಿಗೆ ಪ್ರಯೋಜನವಾಗುವ ಸಾಧ್ಯತೆ ಇದೆ. ಜೊತೆಗೆ, ಇದರಲ್ಲಿ ಉತ್ಕರ್ಷಣ ನಿರೋಧಕಗಳು (Antioxidants) ಸಮೃದ್ಧವಾಗಿದ್ದು, ಹೃದಯದ ಆರೋಗ್ಯವನ್ನು ಬೆಂಬಲಿಸುತ್ತವೆ. Green Tea: ಹೃದಯ ಮತ್ತು ಚಯಾಪಚಯ ಕ್ರಿಯೆಗೆ ನೆರವು ಗ್ರೀನ್ ಟೀಯಲ್ಲಿ ಕ್ಯಾಟೆಚಿನ್ಗಳಂತಹ ಶಕ್ತಿಯುತ ಉತ್ಕರ್ಷಣ ನಿರೋಧಕಗಳು ಇರುತ್ತವೆ.…
Day: June 1, 2026
ಜೂನ್ 3ರರಂದು ಪ್ರಮಾಣವಚನ ಸ್ವೀಕರಿಸುವ ಸಚಿವರ ಪಟ್ಟಿಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದ ಡಿಕೆಶಿ
ಬೆಂಗಳೂರು: ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಮ್ಮೊಂದಿಗೆ ಸಚಿವರು ಪ್ರಮಾಣವಚನ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಸಮೀಪ ನಿರ್ಮಾಣವಾಗಲಿರುವ ಕಾಂಗ್ರೆಸ್ ಭವನಕ್ಕೆ ಮೀಸಲಾದ ಜಾಗವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮಾಣವಚನ ಸಮಾರಂಭದ ನಂತರ ಹೊಸ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಲಭ್ಯತೆ ಇನ್ನೂ ಖಚಿತವಾಗಿಲ್ಲ ಎಂದು ಹೇಳಿದರು. ಸಮಾರಂಭಕ್ಕೆ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿವಿಧ ಘಟಕಗಳ ಪದಾಧಿಕಾರಿಗಳು, ಸಂಸದರು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.…
