ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ನವದೆಹಲಿ: ಬಲಿಷ್ಠ, ಸಮೃದ್ಧ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯದ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಶಿಕ್ಷಣ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ವಿದ್ಯಾರ್ಥಿವೇತನ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಪ್ರತಿಭಾವಂತ ಯುವಜನರಿಂದ ಸಮೃದ್ಧವಾಗಿದ್ದು, ಸೂಕ್ತ ಅವಕಾಶ, ಮಾರ್ಗದರ್ಶನ ಹಾಗೂ ಬೆಂಬಲ ದೊರೆತರೆ ಹಳ್ಳಿಗಳು, ದೂರದ ಪ್ರದೇಶಗಳು ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳು ಕೂಡ ಗಮನಾರ್ಹ ಸಾಧನೆ ಮಾಡಬಹುದು ಎಂದು ಹೇಳಿದರು. ವಿದ್ಯಾರ್ಥಿವೇತನ ಯೋಜನೆಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗಿಲ್ಲ. ಅವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪನ್ಮೂಲಗಳ ಕೊರತೆಯನ್ನು ಮೀರಿ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ನೆರವಾಗುವ ಮಹತ್ವದ ವೇದಿಕೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. “ಶಿಕ್ಷಣವು ವ್ಯಕ್ತಿಯನ್ನು ಸ್ವಾವಲಂಬಿ, ಜಾಗೃತ ಹಾಗೂ ಸಮರ್ಥನನ್ನಾಗಿ ರೂಪಿಸುವ ಅತ್ಯಂತ ಪರಿಣಾಮಕಾರಿ…