ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲು ಪಕ್ಷದೊಳಗಿನ ಅಡ್ಡಮತದಾನದಿಂದ ಸಂಭವಿಸಿದೆ ಎಂಬ ಚರ್ಚೆ ಜೋರಾಗಿದೆ. ಈ ಬೆಳವಣಿಗೆ ಪಕ್ಷದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಜೆಡಿಎಸ್ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅಡ್ಡಮತದಾನ ನಡೆಯುವ ಸಾಧ್ಯತೆ ಬಗ್ಗೆ ತಮಗೆ ಮೊದಲೇ ಮಾಹಿತಿ ಇತ್ತು ಎಂದು ತಿಳಿಸಿದ್ದಾರೆ. ಅತಿಯಾದ ನಂಬಿಕೆಯೇ ಪಕ್ಷಕ್ಕೆ ದೊಡ್ಡ ಆಘಾತ ತಂದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಭವಿಷ್ಯದ ಕುರಿತು ಮಾತನಾಡಿರುವ ಅವರು, ಇನ್ನು ಮುಂದೆ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದರು. ಜೊತೆಗೆ, ಪಕ್ಷದ ಪ್ರಮುಖ ನಿರ್ಧಾರಗಳನ್ನು ತಾವೇ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿನ ಸೋಲು ಜೆಡಿಎಸ್ನಲ್ಲಿ ಆತ್ಮಾವಲೋಕನಕ್ಕೆ ಕಾರಣವಾಗಿದ್ದು, ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ನಾಯಕತ್ವ ಮಹತ್ವದ ಹೆಜ್ಜೆ…
Month: June 2026
ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ
ಚೆನ್ನೈ: ನಿರ್ದೇಶಕ ರಾಜ್ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದಲ್ಲಿ ತಮಿಳು ನಟ ಧನುಷ್ ಹಾಗೂ ಮಲಯಾಳಂ ಸೂಪರ್ಸ್ಟಾರ್ ಮಮ್ಮೂಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರದ ಶೀರ್ಷಿಕೆಯನ್ನು ‘ಓಂ’ ಎಂದು ಘೋಷಿಸಲಾಗಿದೆ. ಚಿತ್ರವು ಇದೇ ವರ್ಷದ ಅಕ್ಟೋಬರ್ 16ರಂದು ಬಿಡುಗಡೆಯಾಗಲಿದ್ದು, ಶೀರ್ಷಿಕೆಯೊಂದಿಗೆ ‘Chapter 1’ ಎಂಬ ಟ್ಯಾಗ್ಲೈನ್ ನೀಡಿರುವುದು ಮುಂದಿನ ಭಾಗದ ಸುಳಿವನ್ನೂ ನೀಡಿದೆ. ಬಿಡುಗಡೆಯಾದ ಟೀಸರ್ನಲ್ಲಿ ಕೆಂಪು ಚಂದನ ಕಡಿಯುವ ಕಾರ್ಮಿಕರ ಬದುಕನ್ನು ಚಿತ್ರಿಸಲಾಗಿದೆ. ಧನುಷ್ ಮರ ಕಡಿಯುವ ಕಾರ್ಮಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ರಮವಾಗಿ ಚಂದನ ಕಡಿಯುವವರನ್ನು ಪೊಲೀಸರು ಸುತ್ತುವರಿಯುವ ಸಂದರ್ಭ ಅವರನ್ನು ರಕ್ಷಿಸುವ ದೃಶ್ಯಗಳು ಟೀಸರ್ನಲ್ಲಿವೆ. ಚಿತ್ರ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಶ್ರೇಯಸ್ ಮಾತನಾಡಿ, ಇದು ಧನುಷ್ ವೃತ್ತಿಜೀವನದ ಅತ್ಯಂತ ದೊಡ್ಡ ಬಜೆಟ್ ಚಿತ್ರಗಳಲ್ಲಿ ಒಂದಾಗಿದ್ದು, ಅಭಿಮಾನಿಗಳು ಬಯಸಿದ ‘ವಿಂಟೇಜ್ ಮಾಸ್ ಧನುಷ್’ ಅನ್ನು ಮತ್ತೆ ಕಾಣಬಹುದಾಗಿದೆ ಎಂದು ತಿಳಿಸಿದ್ದಾರೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಮತ್ತು ಶ್ರೀಲೀಲಾ…
ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ
ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ತಮ್ಮ ಬಹುನಿರೀಕ್ಷಿತ ಚಿತ್ರ ದೈರಾ ಸೆಪ್ಟೆಂಬರ್ 18ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಶೇಷ ವೀಡಿಯೊದಲ್ಲಿ ಚಿತ್ರದ ಆನ್-ಸ್ಕ್ರೀನ್ ಹಾಗೂ ತೆರೆಮರೆಯ ಕ್ಷಣಗಳ ಝಲಕ್ ನೀಡಲಾಗಿದೆ. ಒಂದು ದೃಶ್ಯದಲ್ಲಿ ಕರೀನಾ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮತ್ತೊಂದು ದೃಶ್ಯದಲ್ಲಿ ನಿರ್ದೇಶಕಿ ಮೇಘನಾ ಗುಲ್ಜಾರ್ ಕಲಾವಿದರಿಗೆ ನಿರ್ದೇಶನ ನೀಡುತ್ತಿರುವುದು ಕಂಡುಬರುತ್ತದೆ. ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅಪರಾಧ ಮತ್ತು ನ್ಯಾಯದ ಸಂಕೀರ್ಣ ಕಥಾಹಂದರದ ಸುತ್ತ ಸಿನಿಮಾ ಸಾಗಲಿದೆ. ವೀಡಿಯೊ ಹಂಚಿಕೊಂಡಿರುವ ಕರೀನಾ, “ಇದು ವಿಶೇಷ ಚಿತ್ರ. ಕಚ್ಚಾ ಮತ್ತು ಕಾಣದ ಕ್ಷಣಗಳ ಒಂದು ಸಣ್ಣ ನೋಟ. ‘ದೈರಾ’ ಸೆಪ್ಟೆಂಬರ್ 18ರಂದು ಚಿತ್ರಮಂದಿರಗಳಿಗೆ ಬರಲಿದೆ” ಎಂದು ಬರೆದುಕೊಂಡಿದ್ದಾರೆ. ಚಿತ್ರದ ಚಿತ್ರೀಕರಣ ಮುಂಬೈನ ವಿವಿಧ ಭಾಗಗಳಲ್ಲಿ ನಡೆದಿದ್ದು, ಚಿತ್ರೀಕರಣದ ವೇಳೆ ಕರೀನಾ ಮತ್ತು ನಿರ್ದೇಶಕಿ ಮೇಘನಾ ಗುಲ್ಜಾರ್…
ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ
ಬೆಂಗಳೂರು: ರಾಜ್ಯ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಮನಿವಣ್ಣನ್ ಪಿ. ಅವರಿಗೆ ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (ಡಲ್ಟ್) ಆಯುಕ್ತ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನವದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ…
‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಸರ್ಕಾರ ಹಾಗೂ ಅದರ ಜನಪರ ನೀತಿಗಳಿಗೆ ದೊರೆತ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಾಮಕನೂರ್ ಅವರನ್ನು ಅಭಿನಂದಿಸಿದರು. ಶಾಸಕರಿಂದ ದೊರೆತ ಬೆಂಬಲವು ಕೇವಲ ಕಾಂಗ್ರೆಸ್ ಸರ್ಕಾರಕ್ಕಷ್ಟೇ ಅಲ್ಲ, ರಾಜ್ಯದ ಅಭಿವೃದ್ಧಿ ಮತ್ತು ಜನಕಲ್ಯಾಣ ಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕವಾಗಿದೆ ಎಂದು ಅವರು ಹೇಳಿದರು. “ಪಕ್ಷಗಳ ಗಡಿಗಳನ್ನು ಮೀರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಿತಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಶಾಸಕರು ನಂಬಿಕೆ ಇಟ್ಟಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ,” ಎಂದು ಶಿವಕುಮಾರ್ ತಿಳಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಶಾಸಕರು, ಪಕ್ಷದ ಮುಖಂಡರು…
ಪರಿಷತ್ ಗೆಲುವು 2028ರ ಚುನಾವಣೆಗೆ ದಿಕ್ಸೂಚಿ: ಸುರ್ಜೇವಾಲ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾದ ಅಲೆ ಮುಂದುವರಿಯಲಿದೆ ಎಂದು ವಿಶ್ಲೇಷಿಸಿದ್ದಾರೆ. “ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಐತಿಹಾಸಿಕವಾಗಿದ್ದು, ಜನ ಕಲ್ಯಾಣ ಮತ್ತು ನ್ಯಾಯದ ರಾಜಕೀಯಕ್ಕೆ ಬೆಂಬಲ ಸಿಕ್ಕಿದೆ. ಇದು ಗ್ಯಾರಂಟಿ ಯೋಜನೆಗಳ ಪರವಾದ ಮತ, ಜನರ ಪರವಾದ ಮತ” ಎಂದು ಸುರ್ಜೇವಾಲ ತಿಳಿಸಿದ್ದಾರೆ. ಕಾಂಗ್ರೆಸ್ಗೆ 135 ಶಾಸಕರ ಬಲವಿದ್ದರೂ, ಪಕ್ಷದ ಅಭ್ಯರ್ಥಿಗಳಿಗೆ 151 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿವೆ. ಇದು ರಾಜ್ಯದ ಶಾಸಕರು ಪಕ್ಷದ ಗಡಿ ಮೀರಿ ಸರ್ಕಾರದ ನೀತಿಗಳಿಗೆ ಬೆಂಬಲ ನೀಡಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ರಾಜಕೀಯ ಎರಡು ಧ್ರುವಗಳ ನಡುವೆ…
ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ
ಹೈದರಾಬಾದ್: ತೆಲಂಗಾಣ ಸರ್ಕಾರ ಸಚಿವ ಸಂಪುಟ ಸಭೆಗಳನ್ನು ಸಂಪೂರ್ಣವಾಗಿ ಕಾಗದರಹಿತವಾಗಿ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ತೆಲಂಗಾಣ ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆ ಜಾರಿಗೆ ಸರ್ಕಾರ ಅನುಮೋದನೆ ನೀಡಿದ್ದು, ಸಚಿವರಿಗೆ ವಿಶೇಷ ಟ್ಯಾಬ್ಲೆಟ್ಗಳನ್ನು ವಿತರಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಡಿ. ಶ್ರೀಧರ್ ಬಾಬು ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಎಲ್ಲಾ ಸಚಿವರಿಗೆ ಟ್ಯಾಬ್ಲೆಟ್ಗಳನ್ನು ನೀಡುವ ಘೋಷಣೆ ಮಾಡಿದ್ದಾರೆ. ಹೊಸ ವ್ಯವಸ್ಥೆಯಲ್ಲಿ ಸಚಿವ ಸಂಪುಟದ ಕಾರ್ಯಸೂಚಿ, ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಡಿಜಿಟಲ್ ರೂಪದಲ್ಲಿ ಸಚಿವರಿಗೆ ತಲುಪಿಸಲಾಗುತ್ತದೆ. ಇದರಿಂದ ಆಡಳಿತದಲ್ಲಿ ವೇಗ, ಪಾರದರ್ಶಕತೆ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ಉತ್ತೇಜನ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ವಿವಿಧ…
ಪರಿಷತ್ ಫೈಟ್ನಲ್ಲಿ ಬಿಜೆಪಿಗೆ ಕ್ರಾಸ್ವೋಟ್ ಶಾಕ್; ಮೈತ್ರಿಗೆ ಹಿನ್ನಡೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಡ್ಡಮತದಾನದ ಶಾಕ್ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 7 ಸ್ಥಾನಗಳ ಪೈಕಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದರೆ, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ನ ಕೆಲ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ತಲಾ 30 ಮತ ಪಡೆದರೆ, ವಿನಯ್ ಕಾರ್ತಿಕ್ 32 ಮತಗಳೊಂದಿಗೆ ಗೆಲುವು ಸಾಧಿಸಿದರು. ಬಿಜೆಪಿಯ ಆರ್. ರಘು 29 ಮತ ಹಾಗೂ ಲಿಂಗರಾಜು ಪಾಟೀಲ್ 27 ಮತ ಪಡೆದರು. ಗೆಲುವಿನ ಕೋಟಾ 27.63 ಮತಗಳಾಗಿದ್ದರಿಂದ ಲಿಂಗರಾಜು ಪಾಟೀಲ್ ನೇರವಾಗಿ…
ಪರಿಷತ್ ಫೈಟ್’ನಲ್ಲಿ ಕಾಂಗ್ರೆಸ್ನ ಐವರ ದಿಗ್ವಿಜಯ, ಬಿಜೆಪಿಗೆ ಕ್ರಾಸ್ ವೋಟ್ ಶಾಕ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳು 5 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದ್ದು, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಿರೀಕ್ಷೆಗೂ ಮೀರಿ ಬೆಂಬಲ ದೊರೆತಿದ್ದು, ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ಶಾಸಕರ ಅಡ್ಡಮತದಾನದಿಂದ ಫಲಿತಾಂಶ ಬದಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ತಲಾ 30 ಮತ ಪಡೆದರೆ, ವಿನಯ್ ಕಾರ್ತಿಕ್ 32 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಆರ್. ರಘು 29 ಮತ ಹಾಗೂ ಲಿಂಗರಾಜು ಪಾಟೀಲ್ 27 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು 14 ಮತಗಳಿಗೆ ಸೀಮಿತರಾದರು. ಗೆಲುವಿನ ಕೋಟಾ 27.63 ಮತಗಳಾಗಿದ್ದರಿಂದ ಲಿಂಗರಾಜು ಪಾಟೀಲ್ ನೇರವಾಗಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಬಳಿಕ ನಡೆದ ಎಲಿಮಿನೇಷನ್ ಸುತ್ತಿನಲ್ಲಿ ಜೆಡಿಎಸ್…
ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ
ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3 ಕೆಜಿ 180 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 4ರಂದು ಹೆಬ್ಬಾಳ ಠಾಣೆಯ ಸಿಬ್ಬಂದಿಗೆ ಗುಡ್ಡದಹಳ್ಳಿ ಮುಖ್ಯ ರಸ್ತೆಯ ಪಿಳೇಕಮ್ಮ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬ ಕಾಲೇಜು ಬ್ಯಾಗ್ನಲ್ಲಿ ಹೈಡ್ರೋ ಗಾಂಜಾ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ 3.18 ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಬಂಧಿತನನ್ನು ವಿಚಾರಣೆ ನಡೆಸಿದಾಗ, ಮಹಾರಾಷ್ಟ್ರದ ನಾಸಿಕ್ನಿಂದ ಮಾದಕ ವಸ್ತುವನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಯನ್ನು ಇಮ್ರಾನ್ ಪಾಷಾ ಅಲಿಯಾಸ್ ಚೇಲಾ ಇಮ್ರಾನ್ (36)…
