‘ಡ್ರಗ್ ಮಾಫಿಯಾ ಕೆಡವಿ, ಇಲ್ಲವಾದರೆ ರಾಜೀನಾಮೆ ನೀಡಿ’; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತರಾಟೆ

ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಮಾದಕ ವಸ್ತುಗಳ ವ್ಯಾಪಾರದ ಕಾರ್ಖಾನೆಯಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ರಾಜ್ಯದ ಮಾದಕ ವಸ್ತುಗಳ ಜಾಲವನ್ನು ಕೆಡವಿ. ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ X ನಲ್ಲಿ ಬಿಜೆಪಿ ಹಾಕಿರುವ ಪೋಸ್ಟ್ ಭಾರೀ ಚರ್ಚೆಗೆ ಮುನ್ನುಡಿ ಬರೆದಂತಿದೆ. ‘ಕರ್ನಾಟಕ ರಾಜ್ಯವು ಈಗ ಮಾದಕ ವಸ್ತುಗಳ ವ್ಯಾಪಾರದ ಕಾರ್ಖಾನೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಮಾದಕ ವಸ್ತುಗಳ ಪ್ರವಾಹವು ಶಾಲಾ ಮತ್ತು ಕಾಲೇಜು ಆವರಣಗಳಿಗೆ ಹರಡಿದೆ’ ಎಂದು ಬಿಜೆಪಿ ಬೊಟ್ಟು ಮಾಡಿದೆ. ಒಂದು ಕಡೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ಅಭಿಯಾನಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತರಾಗಿದ್ದರೆ, ಮತ್ತೊಂದೆಡೆ, ಮಾದಕ ವಸ್ತುಗಳ ಮಾರಾಟಗಾರರು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿರ್ಲಜ್ಜವಾಗಿ ತಮ್ಮ ವ್ಯವಹಾರವನ್ನು ನಡೆಸುತ್ತಿದ್ದಾರೆ ಎಂದು ದೂರಿರುವ ಬಿಜೆಪಿ, ‘ಗೃಹ ಸಚಿವರೇ, ಅಧಿಕಾರವನ್ನು…

ಕೇಂದ್ರದಿಂದ ‘ಒಂದು ದೇಶ–ಒಂದು ಪಕ್ಷ’ ರಹಸ್ಯ ತಂತ್ರ; ಮೀನಾಕ್ಷಿ ನಟರಾಜನ್ ಆರೋಪ

ನವದೆಹಲಿ: ಮಧ್ಯಪ್ರದೇಶ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವ ಕುರಿತು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಪ್ರದೇಶ ವಿಧಾನಸಭೆಯ ಸಂಖ್ಯಾಬಲದ ಪ್ರಕಾರ ಕಾಂಗ್ರೆಸ್‌ಗೆ ಒಂದು ರಾಜ್ಯಸಭಾ ಸ್ಥಾನ ಗೆಲ್ಲುವ ಅವಕಾಶವಿದ್ದರೂ, ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯ ಕುತಂತ್ರ ನಡೆಸಿದೆ ಎಂದು ಆರೋಪಿಸಿದರು. ಬಿಜೆಪಿಗೆ ಅಗತ್ಯ ಸಂಖ್ಯಾಬಲ ಇರದಿದ್ದರೂ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕುದುರೆ ವ್ಯಾಪಾರ ನಡೆಸುವ ಉದ್ದೇಶವೇ ಇದಾಗಿತ್ತು ಎಂದು ಹೇಳಿದರು. ತಮ್ಮ ನಾಮಪತ್ರ ತಿರಸ್ಕಾರ ಪ್ರಕರಣವನ್ನು ಉಲ್ಲೇಖಿಸಿದ ಅವರು, 2023ರ ಚುನಾವಣಾ ಆಯೋಗದ ನಿಯಮಾವಳಿಯ ಪ್ರಕಾರ ಅಫಿಡವಿಟ್‌ನಲ್ಲಿನ ತಾಂತ್ರಿಕ ಲೋಪಗಳ ಆಧಾರದಲ್ಲಿ ನಾಮಪತ್ರ ತಿರಸ್ಕರಿಸಬಾರದು ಎಂದು ತಿಳಿಸಿದರು. ಆದರೆ ಮಧ್ಯಪ್ರದೇಶದಲ್ಲಿ ತಮ್ಮ ನಾಮಪತ್ರವನ್ನು ತಿರಸ್ಕರಿಸಲಾಗಿದ್ದು, ಇದೇ ರೀತಿಯ ಪ್ರಕರಣದಲ್ಲಿ ಜಾರ್ಖಂಡ್‌ನ ಅಭ್ಯರ್ಥಿಗೆ ತಿದ್ದುಪಡಿ ಮಾಡಲು ಅವಕಾಶ…

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

ನವದೆಹಲಿ: ಹವಾಮಾನ ವೈಪರೀತ್ಯ ಮತ್ತು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಮಾವು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಕುರಿತು ಮಾಹಿತಿ ನೀಡಿರುವ ಕುಮಾರಸ್ವಾಮಿ, “ನನ್ನ ಮನವಿಗೆ ಕೇಂದ್ರ ಕೃಷಿ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾವು ಬೆಳೆಗಾರರಿಗೆ ಅನುಕೂಲವಾಗುವಂತೆ ಶೀಘ್ರದಲ್ಲೇ ಅಗತ್ಯ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ. ಪ್ರಸಕ್ತ ಹಂಗಾಮಿನಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ತೀವ್ರ ಬೆಲೆ ಕುಸಿತವನ್ನು ತಡೆಯಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ನೆರವು ನೀಡಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (PDPS) ಮೂಲಕ ಬೆಂಬಲ ಬೆಲೆ ಘೋಷಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ರೈತರು ಬೆಲೆ ಕುಸಿತ ಮತ್ತು ಹವಾಮಾನ…

‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

ಮುಂಬೈ: ಚಲನಚಿತ್ರ ನಿರ್ದೇಶಕ ಮಿಲಾಪ್ ಮಿಲನ್ ಜವೇರಿ ಅವರ ಮುಂಬರುವ ಪ್ರಣಯ-ಮನರಂಜನಾ ಚಿತ್ರ ತೇರಾ ಯಾರ್ ಹೂ ಮೈ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಚಿತ್ರವು ಜುಲೈ 24, 2026 ರಂದು ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ. ಮೊದಲಿಗೆ ಜುಲೈ 31ಕ್ಕೆ ಬಿಡುಗಡೆ ಮಾಡುವ ಯೋಜನೆ ಇದ್ದು, ಇದೀಗ ಒಂದು ವಾರ ಮುಂಚಿತವಾಗಿ ಪ್ರದರ್ಶನ ಕಾಣಲಿದೆ. ಹಿರಿಯ ನಿರ್ಮಾಪಕ ಇಂದ್ರ ಕುಮಾರ್ ಅವರ ಪುತ್ರ ಅಮನ್ ಇಂದ್ರ ಕುಮಾರ್ ಈ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಆಕಾಂಕ್ಷಾ ಶರ್ಮಾ ನಟಿಸಿದ್ದು, ಹಿರಿಯ ನಟ ಪರೇಶ್ ರಾವಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. A small glimpse. A lot of emotions. 🎶#TeraYaarHoonMain Title Track Teaser out now. Directed by #MilapZaveri. Full song releasing on 24th June.#TeraYaarHoonMain releasing in cinemas…

ಇರಾನ್ ವಿರುದ್ಧದ ಸಂಘರ್ಷ: ಟ್ರಂಪ್ ಆಡಳಿತಕ್ಕೆ ಸೆನೆಟ್‌ನಿಂದಲೇ ಆಘಾತ

ವಾಷಿಂಗ್ಟನ್: ಇರಾನ್ ವಿರುದ್ಧದ ಸಂಘರ್ಷವನ್ನು ಮುಂದುವರೆಸದಂತೆ ತಡೆಯುವ ಮಹತ್ವದ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಈ ನಿರ್ಣಯವು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಭಾರಿ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದೆ. ಟ್ರಂಪ್ ಅವರ ಪಕ್ಷವಾದ ರಿಪಬ್ಲಿಕನ್ ಪಕ್ಷವೇ ಸೆನೆಟ್‌ನಲ್ಲಿ ಬಹುಮತ ಹೊಂದಿದ್ದರೂ, ಅವರದೇ ಪಕ್ಷದ ನಾಲ್ವರು ಸೆನೆಟರ್‌ಗಳು ನಿರ್ಣಯಕ್ಕೆ ಬೆಂಬಲ ನೀಡಿ ಟ್ರಂಪ್ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದ ಇರಾನ್ ಜತೆಗಿನ ಯುದ್ಧದ ವಿಚಾರದಲ್ಲಿ ಟ್ರಂಪ್‌ಗೆ ಅಸಹಜ ರಾಜಕೀಯ ಆಘಾತ ಎದುರಾಗಿದೆ. ಸೆನೆಟ್‌ನಲ್ಲಿ ಈ ನಿರ್ಣಯವು 50–48 ಮತಗಳ ಅಲ್ಪ ಅಂತರದಿಂದ ಅಂಗೀಕಾರಗೊಂಡಿದೆ. ಇದಕ್ಕೂ ಮೊದಲು ಅಮೆರಿಕದ ಕೆಳಮನೆಯಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ಇದು 215–208 ಮತಗಳಿಂದ ಪಾಸಾಗಿತ್ತು. ಆದರೆ, ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರವಾದರೂ, ಇದು ಕಾನೂನಾತ್ಮಕವಾಗಿ ಅಧ್ಯಕ್ಷರ ಯುದ್ಧಾಧಿಕಾರವನ್ನು ತಕ್ಷಣಕ್ಕೆ ನಿರ್ಬಂಧಿಸುವುದಿಲ್ಲ. ಪ್ರಸ್ತುತ ಇದು ಟ್ರಂಪ್ ಆಡಳಿತಕ್ಕೆ ರಾಜಕೀಯ ಮುಜುಗರ ಉಂಟುಮಾಡುವ ಕ್ರಮವಾಗಿಯೇ ಉಳಿಯಲಿದೆ…

‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜೂನ್ 25ರಂದು ‘ಛತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಪ್ರತಿಧ್ವನಿ) ಹೆಸರಿನ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ. ಇದರ ಭಾಗವಾಗಿ ದೇಶದ 28 ಪ್ರಮುಖ ನಗರಗಳಲ್ಲಿ ಪತ್ರಿಕಾಗೋಷ್ಠಿಗಳು ನಡೆಯಲಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಶಿಕ್ಷಣ ನೀತಿಯಲ್ಲಿ ದೂರದೃಷ್ಟಿಯ ಕೊರತೆ ಹಾಗೂ ಸೈದ್ಧಾಂತಿಕ ಹಸ್ತಕ್ಷೇಪವಿದೆ ಎಂದು ಆರೋಪಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣ, ಕೇಂದ್ರೀಕರಣ ಮತ್ತು ಸೈದ್ಧಾಂತಿಕ ನಿಯಂತ್ರಣ ಹೆಚ್ಚಾಗಿದ್ದು, ಯುವಜನರನ್ನು ಭವಿಷ್ಯದ ಸವಾಲುಗಳಿಗೆ ಸಿದ್ಧಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಲಾಗಿದೆ. ದೇಶವು ಕೇವಲ ನಿರುದ್ಯೋಗವಷ್ಟೇ ಅಲ್ಲ, ಉದ್ಯೋಗಾರ್ಹತೆಯ ಬಿಕ್ಕಟ್ಟನ್ನೂ ಎದುರಿಸುತ್ತಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಆಧುನಿಕ ಅಗತ್ಯಗಳಿಗೆ…

ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

ನವದೆಹಲಿ: ನೈಋತ್ಯ ಮಾನ್ಸೂನ್ ದುರ್ಬಲಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಾಗೂ ಎಲ್ ನಿನೋ ಪರಿಣಾಮದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾರಿಫ್ ಹಂಗಾಮಿಯನ್ನು ರಕ್ಷಿಸಲು ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ತುರ್ತು ಯೋಜನೆಯನ್ನು ಸಕ್ರಿಯಗೊಳಿಸಿದೆ. ಸಂಭಾವ್ಯ ಬೆಳೆ ನಷ್ಟದಿಂದ ರೈತರನ್ನು ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಪರಿಸ್ಥಿತಿ ಗಂಭೀರವಾಗುವವರೆಗೆ ಕಾಯದೆ ಮುಂಚಿತ ತುರ್ತು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಲಾಯಿತು. ಸಭೆಯಲ್ಲಿ ರಾಜ್ಯಗಳ ಕೃಷಿ ಸಚಿವರು, ಜಿಲ್ಲಾಧಿಕಾರಿಗಳು, ಭಾರತೀಯ ಹವಾಮಾನ ಇಲಾಖೆ (IMD), ಐಸಿಎಆರ್ ಹಾಗೂ ಇತರ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು. ದೇಶದಾದ್ಯಂತ 315 ಜಿಲ್ಲೆಗಳು ಕಡಿಮೆ ಮಳೆಯ ಅಪಾಯದಲ್ಲಿವೆ ಎಂದು ಗುರುತಿಸಲಾಗಿದ್ದು, ಅವುಗಳಲ್ಲಿ 111 ಜಿಲ್ಲೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ವರ್ಗೀಕರಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಬಿಹಾರ, ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ ಮತ್ತು…

ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟ ಆರ್. ಮಾಧವನ್ ಅವರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಉಪಸ್ಥಿತರಿದ್ದು ಸಂಭ್ರಮಿಸಿದರು. ಮಾಧವನ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ತೆರಳುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಅವರ ಪತ್ನಿ ಮತ್ತು ಪುತ್ರ ಹೆಮ್ಮೆಯಿಂದ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಈ ಭಾವನಾತ್ಮಕ ಕ್ಷಣ ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು. ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯದ ಮೂಲಕ ವಿಶೇಷ ಗುರುತಿಸಿಕೊಂಡಿರುವ ಮಾಧವನ್, ಇತ್ತೀಚೆಗೆ ಬಿಡುಗಡೆಯಾದ ಧುರಂಧರ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ತಮ್ಮ ಅಭಿನಯದ ಛಾಪು ಮೂಡಿಸಿದ್ದಾರೆ. ಪದ್ಮಶ್ರೀ ಗೌರವಕ್ಕೆ ಭಾವನಾತ್ಮಕ ಪ್ರತಿಕ್ರಿಯೆ ಪದ್ಮಶ್ರೀ…

ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಪ್ರಸ್ತುತ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆ, ಹೈಕಮಾಂಡ್‌ನ ತೀರ್ಮಾನದಂತೆ ಮುಂದುವರಿಯಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೂನ್ 28ರಂದು ವಿದೇಶ ಪ್ರವಾಸದಿಂದ ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ಅವರ ಆಗಮನದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಶಾಸಕರು ಮತ್ತು…

ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ವರಿಷ್ಠರಿಗೆ ವರದಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ಹೈಕಮಾಂಡ್ ತೀವ್ರ ತರಾಟೆ ತೆಗೆದುಕೊಂಡಿದೆ ಎನ್ನಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲೇ ಚುನಾವಣಾ ಸಿದ್ಧತೆ ಮತ್ತು ಮತದಾನ ನಿರ್ವಹಣೆ ಕುರಿತು ರಾಜ್ಯ ನಾಯಕರಿಂದ ವಿವರವಾದ ಮಾಹಿತಿ ಪಡೆಯಲಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು, ಚುನಾವಣೆ ಘೋಷಣೆಯಾದ ಬಳಿಕ ಎಷ್ಟು ಸಭೆಗಳನ್ನು ನಡೆಸಿದ್ದೀರಿ, ಶಾಸಕಾಂಗ ಪಕ್ಷದ ಸಭೆ ಯಾವಾಗ ಆಯೋಜಿಸಿದ್ದೀರಿ, ಮತಗಳ ಹಂಚಿಕೆ ಹೇಗೆ ಮಾಡಿದ್ದೀರಿ, ಶಾಸಕರಿಗೆ ವಿಪ್ ಯಾವಾಗ ನೀಡಿದ್ದೀರಿ ಹಾಗೂ ಜೆಡಿಎಸ್ ಜತೆ ಎಷ್ಟು ಬಾರಿ ಸಮನ್ವಯ ಸಭೆ ನಡೆಸಿದ್ದೀರಿ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಅಡ್ಡ ಮತದಾನದ ಸಾಧ್ಯತೆ ಬಗ್ಗೆ…