ಬೆಂಗಳೂರು: ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಹಾಗೂ ರಮೇಶ್ ಇಂದಿರ ನಟನೆಯ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಚಿತ್ರದ ಟ್ರೇಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಜುಲೈ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಗುರುದತ್ ಗಾಣಿಗ ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್ನಲ್ಲಿ ಕರಾವಳಿ ಸಂಸ್ಕೃತಿ, ಸಂಪ್ರದಾಯ ಹಾಗೂ ಕಂಬಳ ಕ್ರೀಡೆಯ ವೈಭವವನ್ನು ಪ್ರಮುಖವಾಗಿ ಅನಾವರಣಗೊಳಿಸಲಾಗಿದೆ. ಕರಾವಳಿಯ ಜೀವನಶೈಲಿ ಮತ್ತು ಜನಪದ ಸಂಸ್ಕೃತಿಯನ್ನು ಅದ್ಧೂರಿಯಾಗಿ ತೆರೆ ಮೇಲೆ ಕಟ್ಟಿಕೊಡುವ ಪ್ರಯತ್ನ ಟ್ರೇಲರ್ನಲ್ಲಿ ಗೋಚರಿಸುತ್ತದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಗುರುದತ್ ಗಾಣಿಗ, ನಟ ರಾಜ್ ಬಿ. ಶೆಟ್ಟಿ, ನಟಿಯರಾದ ಸಂಪದಾ ಮತ್ತು ಸುಷ್ಮಿತಾ, ನಟರಾದ ಮಿತ್ರ, ಶ್ರೀಧರ್ ಸೇರಿದಂತೆ ಚಿತ್ರತಂಡದ ಸದಸ್ಯರು ಭಾಗವಹಿಸಿದ್ದರು. ಆದರೆ ಚಿತ್ರದ ನಾಯಕ ಪ್ರಜ್ವಲ್ ದೇವರಾಜ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿಲ್ಲ. ಚಿತ್ರದ ಕುರಿತು ಮತ್ತೊಂದು ವಿಶೇಷವೆಂದರೆ,…
Day: July 8, 2026
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ
ಇಸ್ಲಾಮಾಬಾದ್: ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನದ ಕೆ2 ಏರ್ವೇಸ್ ಸರಕು ವಿಮಾನವು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ರಾಡಾರ್ ಸಂಪರ್ಕ ಕಳೆದುಕೊಂಡಿದ್ದು, ವಿಮಾನದಲ್ಲಿದ್ದ ಐವರು ಸಿಬ್ಬಂದಿಗಾಗಿ ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಹಿತಿ ಪ್ರಕಾರ, ಕಾರ್ಗೋ ವಿಮಾನದಲ್ಲಿ ಮಾರ್ಗಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿರುವುದಾಗಿ ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದರು. ಬಳಿಕ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ದರು. ರಾತ್ರಿ 9.18ಕ್ಕೆ ವಿಮಾನದೊಂದಿಗೆ ಕೊನೆಯ ಸಂಪರ್ಕ ದಾಖಲಾಗಿತ್ತು. ಆದರೆ, ಕೆಲವೇ ನಿಮಿಷಗಳಲ್ಲಿ ವಿಮಾನ ದಿಕ್ಕು ಬದಲಾಯಿಸಿ ವೇಗವಾಗಿ ಕೆಳಮುಖವಾಗಿ ಇಳಿಯುತ್ತಿರುವುದು ರಾಡಾರ್ನಲ್ಲಿ ಗೋಚರಿಸಿತು. ರಾತ್ರಿ 9.22ರ ಸುಮಾರಿಗೆ, ಕರಾಚಿಯಿಂದ ಸುಮಾರು 155 ನಾಟಿಕಲ್ ಮೈಲಿ ಪಶ್ಚಿಮಕ್ಕೆ ವಿಮಾನದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿತು. ವಿಮಾನವು ಅರಬ್ಬಿ…
ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ
ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂಬ ತಮ್ಮ ನಿಲುವನ್ನು ಸಚಿವ ಎಂ.ಬಿ. ಪಾಟೀಲ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಪಪಂಗಡಗಳಿಂದ ವಿಭಜನೆಯಾಗಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಆರಂಭವಾದ ಎರಡು ದಿನಗಳ 14ನೇ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅವರು ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ವೀರಶೈವ-ಲಿಂಗಾಯತ ಧರ್ಮದ ತತ್ವಗಳು ಸಮಾಜದಲ್ಲಿ ವ್ಯಾಪಕವಾಗಿ ಹರಡದಿರುವುದಕ್ಕೆ ಆಂತರಿಕ ಭಿನ್ನಾಭಿಪ್ರಾಯಗಳೇ ಪ್ರಮುಖ ಕಾರಣವಾಗಿವೆ ಎಂದು ಅಭಿಪ್ರಾಯಪಟ್ಟರು. ಭಾರತದಲ್ಲಿ ಜನಿಸಿದ ಜೈನ, ಸಿಖ್ ಹಾಗೂ ಬೌದ್ಧ ಧರ್ಮಗಳಿಗೆ ಪ್ರತ್ಯೇಕ ಮಾನ್ಯತೆ ನೀಡಿರುವಂತೆ ಲಿಂಗಾಯತ ಧರ್ಮಕ್ಕೂ ಪ್ರತ್ಯೇಕ ಮಾನ್ಯತೆ ನೀಡಿದರೆ…
ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ, ರಾಜಕೀಯ ಬೆಳವಣಿಗೆಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭೆಯ ನಿರ್ಣಯಗಳನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದ್ದಾರೆ. ಸಭೆಯಲ್ಲಿ ರಾಜ್ಯದ ಬರ ನಿರ್ವಹಣೆಗೆ ಕೇಂದ್ರ ಸರ್ಕಾರವು ₹10,000 ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು. ಅಲ್ಲದೆ, ರಾಮ ಮಂದಿರ ಲೂಟಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬ ನಿರ್ಣಯವನ್ನೂ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಇದೇ ವೇಳೆ, ರಾಜ್ಯಸಭೆಗೆ ಆಯ್ಕೆಯಾಗಿದ್ದು ವಿರೋಧ ಪಕ್ಷದ ನಾಯಕನ ಜವಾಬ್ದಾರಿ ವಹಿಸಿಕೊಂಡಿರುವ…
ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು 2025–26ನೇ ಶೈಕ್ಷಣಿಕ ವರ್ಷದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆ ಶ್ರೇಣೀಕರಣ ಸೂಚ್ಯಂಕ (PGI-S 2.0) ಹಾಗೂ ಜಿಲ್ಲೆಗಳ ಕಾರ್ಯಕ್ಷಮತೆ ಶ್ರೇಣೀಕರಣ ಸೂಚ್ಯಂಕ (PGI-D) ವರದಿಗಳನ್ನು ಬಿಡುಗಡೆ ಮಾಡಿದೆ. ಈ ವರದಿಗಳು ದೇಶಾದ್ಯಂತ ಶಾಲಾ ಶಿಕ್ಷಣದ ಗುಣಮಟ್ಟ ಮತ್ತು ಆಡಳಿತದ ಸಮಗ್ರ ಮೌಲ್ಯಮಾಪನವನ್ನು ಒದಗಿಸುತ್ತವೆ. ಭಾರತದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ 14.67 ಲಕ್ಷಕ್ಕೂ ಅಧಿಕ ಶಾಲೆಗಳು, 1.03 ಕೋಟಿ ಶಿಕ್ಷಕರು ಮತ್ತು ಸುಮಾರು 24.72 ಕೋಟಿ ವಿದ್ಯಾರ್ಥಿಗಳಿದ್ದು, ಇದು ವಿಶ್ವದ ಅತಿದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಸಚಿವಾಲಯ ತಿಳಿಸಿದೆ. PGI-S ಚೌಕಟ್ಟಿನಲ್ಲಿ ಒಟ್ಟು 1,000 ಅಂಕಗಳ ತೂಕ ಹೊಂದಿರುವ 70 ಸೂಚಕಗಳ ಆಧಾರದ ಮೇಲೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲಾಗಿದೆ. ಕಲಿಕೆಯ ಫಲಿತಾಂಶ, ಶಿಕ್ಷಣದ ಗುಣಮಟ್ಟ, ಪ್ರವೇಶ, ಮೂಲಸೌಕರ್ಯ, ಸಮಾನತೆ, ಆಡಳಿತ ಹಾಗೂ ಶಿಕ್ಷಕರ ಶಿಕ್ಷಣ…
