ಬೆಂಗಳೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಇತರ ನಾಯಕರ ಬಂಧನ ಹಾಗೂ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ಗೆ ಉತ್ತರವಾಗಿ ಕೇಂದ್ರ ಸರ್ಕಾರ ಇದೀಗ ಚುನಾಯಿತ ಪ್ರತಿನಿಧಿಗಳ ವಿರುದ್ಧವೂ ಪೊಲೀಸ್ ಬಲ ಬಳಸುತ್ತಿದೆ. ಇದು ಆತ್ಮವಿಶ್ವಾಸದ ಸರ್ಕಾರದ ನಡೆ ಅಲ್ಲ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಹೆದರುವ ಸರ್ಕಾರದ ಪ್ರತಿಕ್ರಿಯೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪರೀಕ್ಷಾ ಅಕ್ರಮ, ನಿರುದ್ಯೋಗ ಹಾಗೂ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ನಿರಂತರವಾಗಿ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದಾರೆ.…
Month: July 2026
ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ
ಬೆಂಗಳೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನಿವಾಸದ ಮುಂದೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿಯನ್ನು ಹತ್ತಿಕ್ಕಿ, ರಾಹುಲ್ ಗಾಂಧಿ ಅವರನ್ನು ಅಕ್ರಮವಾಗಿ ಬಂಧಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ದೇಶದ ಜನರ ಸಮಸ್ಯೆಗಳ ಪರ ಧ್ವನಿ ಎತ್ತಿದರೆ, ಭ್ರಷ್ಟಾಚಾರದ ವಿರುದ್ಧ ಪ್ರಶ್ನೆ ಮಾಡಿದರೆ ಬಂಧನವೇ? ಇದು ಯಾವ ನ್ಯಾಯ? ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪೊಲೀಸ್ ಬಲವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. “ರಾಹುಲ್ ಗಾಂಧಿ ಅವರು ಈ ದೇಶದ ಬಡವರು, ರೈತರು, ನಿರುದ್ಯೋಗಿ ಯುವಕರ ಪರ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ಈ ರೀತಿ ದಮನಕಾರಿ ನೀತಿ ಅನುಸರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಅವರು ಜೈಲು,…
‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ
ಬೆಂಗಳೂರು: ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಅಧಿಕಾರದಲ್ಲಿದ್ದಾಗ ವಿದ್ಯಾರ್ಥಿಗಳು ಮತ್ತು ಯುವಕರ ಸಮಸ್ಯೆಗಳನ್ನು ನಿರ್ಲಕ್ಷಿಸಿದ್ದ ಕಾಂಗ್ರೆಸ್, ಈಗ ಅವರ ಬಗ್ಗೆ ಕಾಳಜಿ ತೋರಿಸುತ್ತಿರುವುದು ಕಪಟ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ವಿದೇಶ ಪ್ರವಾಸದಲ್ಲಿದ್ದು, ಹಿಂಸಾಚಾರ ಭುಗಿಲೆದ್ದ ಬಳಿಕವೇ ಮರಳಿ ಪ್ರತಿಭಟನೆಗೆ ಮುಂದಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ. ನಿರುದ್ಯೋಗದ ಬಗ್ಗೆ ಕಾಂಗ್ರೆಸ್ ಟೀಕಿಸುವುದು ಸೂಕ್ತವಲ್ಲ. ಯುಪಿಎ ಆಡಳಿತದ ಅವಧಿಯಲ್ಲೂ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿತ್ತು. ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿಯೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗಳ ದುರುಪಯೋಗಕ್ಕೆ ಕೆಲವು ವಿದೇಶಿ ಶಕ್ತಿಗಳು ಪ್ರಯತ್ನಿಸುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ರಾಹುಲ್…
ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಹಲ್ಲೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ದಾಳಿ ನಡೆಯುತ್ತಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಘಟನೆಯ ವಿಡಿಯೊ ಹಂಚಿಕೊಂಡಿರುವ ಅಶೋಕ್, ಇತರ ಪ್ರದೇಶಗಳಲ್ಲಿ ಒತ್ತುವರಿ ತೆರವು ವೇಳೆ ಸಕ್ರಿಯರಾಗಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಘಟನೆಯ ಬಗ್ಗೆ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ಬೆನ್ನಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಉಲ್ಲೇಖಿಸಿರುವ ಅಶೋಕ್, ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದರೂ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ. ಶಿವಾಜಿನಗರದಲ್ಲಿ ಒತ್ತುವರಿ ತೆರವು ಮಾಡಲು…
ನೀಟ್ ಹಗರಣ ವಿರೋಧಿಸಿ ಪ್ರಧಾನಿ ನಿವಾಸ ಬಳಿ ಧರಣಿ; ರಾಹುಲ್ ಸೇರಿ ಪ್ರತಿಪಕ್ಷಗಳ ನಾಯಕರು ಪೊಲೀಸ್ ವಶಕ್ಕೆ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಸಮೀಪ ನಡೆದ ವಿರೋಧ ಪಕ್ಷಗಳ ಧರಣಿಯನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ತೆರವುಗೊಳಿಸಿದ್ದಾರೆ. ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆಡಿದ್ದಾರೆ. ಕಾಂಗ್ರೆಸ್ ಹಾಗೂ ‘ಇಂಡಿಯಾ’ ಮೈತ್ರಿಕೂಟದ ನಾಯಕರು ರಾತ್ರಿಯಿಡೀ ಧರಣಿ ಮುಂದುವರಿಸುವುದಾಗಿ ಘೋಷಿಸಿದ್ದರು. ಆದರೆ ಸಂಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದರು. ಈ ವೇಳೆ ರಸ್ತೆಯಲ್ಲೇ ಕುಳಿತ ರಾಹುಲ್ ಗಾಂಧಿ, ತಮ್ಮ ಬೇಡಿಕೆಗಳು ಈಡೇರುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಪೊಲೀಸರು ಅವರನ್ನು ಬಲವಂತವಾಗಿ ಬಸ್ಗೆ ಕರೆದೊಯ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು…
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಲಾಠಿಚಾರ್ಜ್ನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಾಂತಿಯುತ ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಪೊಲೀಸರ ಲಾಠಿಚಾರ್ಜ್ನಿಂದ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಹಾಗೂ ಯುವಜನ ವಿರೋಧಿ ನೀತಿಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನೀಟ್ ಪರೀಕ್ಷೆ ಹಗರಣ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಶಿಕ್ಷಣ ಸಚಿವ…
ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಗ್ಯಾಂಗ್ಟಾಕ್: ಸಿಕ್ಕಿಂನ ನಾಮ್ಚಿ ಜಿಲ್ಲೆಯ ಎನ್ಎಚ್ಪಿಸಿ ಟೀಸ್ತಾ ಹಂತ-6 ಜಲವಿದ್ಯುತ್ ಯೋಜನೆಯ ನಿರ್ಮಾಣ ಹಂತದ ಸಮರ್ದುಂಗ್ ಸುರಂಗದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆ ಮಂಗಳವಾರವೂ ಮುಂದುವರಿದಿದೆ. ಅಧಿಕಾರಿಗಳ ಪ್ರಕಾರ, ಸುರಂಗದೊಳಗೆ ವಿಷಕಾರಿ ಅನಿಲಗಳು ಹರಡಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸಂಕೀರ್ಣಗೊಂಡಿದೆ. ಅನಿಲದ ಪರಿಣಾಮ ಕೆಲ ರಕ್ಷಣಾ ಸಿಬ್ಬಂದಿ ಅಸ್ವಸ್ಥಗೊಂಡಿದ್ದು, ಗ್ಯಾಸ್ ಮಾಸ್ಕ್ ಸೇರಿದಂತೆ ವಿಶೇಷ ಸುರಕ್ಷತಾ ಸಾಧನಗಳೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ 16 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆದರೆ ಮಂಗಳವಾರದ ವೇಳೆಗೆ ಮೃತರ ಸಂಖ್ಯೆ ಎಂಟಕ್ಕೇರಿದೆ. ಮೃತದೇಹಗಳನ್ನು ಸಿಂಗ್ಟಮ್ ಜಿಲ್ಲಾ ಆಸ್ಪತ್ರೆ, ಗ್ಯಾಂಗ್ಟಾಕ್ನ ಎಸ್ಟಿಎನ್ಎಂ ಆಸ್ಪತ್ರೆ ಹಾಗೂ ನಾಮ್ಚಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಕ್ಕಿಂ ಪೊಲೀಸ್, ಅಗ್ನಿಶಾಮಕ ದಳ, ಜಿಲ್ಲಾಡಳಿತ ಹಾಗೂ ಇತರ ತುರ್ತು ಸೇವಾ ಸಿಬ್ಬಂದಿ ಜಂಟಿಯಾಗಿ ಶೋಧ ಮತ್ತು…
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ
ಬೆಂಗಳೂರು: ದೆಹಲಿಯ ಜಂತರ್ ಮಂತರ್ ನಿಂದ ‘ಚಲೋ ಸಂಸದ್’ ಮೆರವಣಿಗೆ ನಡೆಸುತ್ತಿದ್ದಾಗ ಶಾಂತಿಯುತ ಪ್ರತಿಭಟನೆ ಮತ್ತು ಆಮರಣಾಂತ ಸತ್ಯಾಗ್ರಹದಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಮೇಲೆ ನಡೆಸಿದ ಅಮಾನವೀಯ ಪೊಲೀಸ್ ದಾಳಿ ಸಂಪೂರ್ಣವಾಗಿ ಖಂಡನೀಯ ಎಂದು ಕಾಂಗ್ರೆಸ್ ಹೇಳಿದೆ. ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ರಕ್ಷಿಸಲು ಸಾಧ್ಯವಾಗದ ಸರ್ಕಾರವು ನ್ಯಾಯಕ್ಕಾಗಿ ಒತ್ತಾಯಿಸುವ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದೆ, ತನ್ನ ಸರ್ವಾಧಿಕಾರಿ ಕ್ರೌರ್ಯವನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂದು ಕಾಂಗೇಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವ ನೀಡಿರುವ ಸಂವಿಧಾನಬದ್ಧ ಹಕ್ಕು. ತಮ್ಮ ಭವಿಷ್ಯವನ್ನು ನಾಶಮಾಡುತ್ತಿರುವ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತುವುದು ಅಪರಾಧವೇ? ಅವರ ಕೈಯಲ್ಲಿ ಪುಸ್ತಕ, ಫಲಕ ಮತ್ತು ನ್ಯಾಯದ ಬೇಡಿಕೆಗಳಿದ್ದವು; ಸರ್ಕಾರದ ಕೈಯಲ್ಲಿ ಲಾಠಿ, ಬೂಟು, ಬ್ಯಾರಿಕೇಡ್ ಮತ್ತು ಬಂಧನಗಳಿದ್ದವು. ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಾಗದ ಹೇಡಿ ಸರ್ಕಾರವೇ ಪೊಲೀಸ್ ಬಲದಿಂದ ಅವರ ಧ್ವನಿಯನ್ನು…
‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?
ಮುಂಬೈ: ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ವಾಯುಪಡೆಯ ಸಾಹಸಮಯ ಕಾರ್ಯಾಚರಣೆಯಿಂದ ಪ್ರೇರಿತವಾದ ವೆಬ್ ಸರಣಿ ‘ಆಪರೇಷನ್ ಸಫೇದ್ ಸಾಗರ್’ ಟ್ರೇಲರ್ ಸೋಮವಾರ ಬಿಡುಗಡೆಯಾಗಿದೆ. ಓನಿ ಸೇನ್ ನಿರ್ದೇಶನದ ಈ ಸರಣಿ ಯುದ್ಧದ ಹಿಂದಿನ ವಾಯುಪಡೆಯ ಸಿಬ್ಬಂದಿಯ ಧೈರ್ಯ, ತ್ಯಾಗ ಮತ್ತು ಕರ್ತವ್ಯನಿಷ್ಠೆಯನ್ನು ಚಿತ್ರಿಸುತ್ತದೆ. ಸರಣಿಯಲ್ಲಿ ಜಿಮ್ಮಿ ಶೆರ್ಗಿಲ್, ಅಭಯ್ ವರ್ಮಾ, ದಿಯಾ ಮಿರ್ಜಾ, ಪ್ರಜಕ್ತಾ ಕೋಲಿ, ಆದಿಲ್ ಹುಸೇನ್, ಮಿಹಿರ್ ಅಹುಜಾ, ತಾರುಕ್ ರೈನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ನೆಟ್ಫ್ಲಿಕ್ಸ್ ಇಂಡಿಯಾದ ಸರಣಿ ವಿಭಾಗದ ಮುಖ್ಯಸ್ಥೆ ತಾನ್ಯಾ ಬಾಮಿ, ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ವಾಯುಪಡೆಯ ಪಾತ್ರದಿಂದ ಪ್ರೇರಿತವಾದ ಮೊದಲ ಸರಣಿಯಿದು ಎಂದು ಹೇಳಿದ್ದಾರೆ. ‘ಗೋಲ್ಡನ್ ಆರೋಸ್’ ಸ್ಕ್ವಾಡ್ರನ್ನ ಧೈರ್ಯ ಮತ್ತು ತ್ಯಾಗಕ್ಕೆ ಈ ಸರಣಿ ಗೌರವ ಸಲ್ಲಿಸುತ್ತದೆ ಎಂದರು. ಮ್ಯಾಚ್ಬಾಕ್ಸ್ ಶಾಟ್ಸ್ ಹಾಗೂ ಫೀಲ್ ಗುಡ್ ಫಿಲ್ಮ್ಸ್ ನಿರ್ಮಿಸಿರುವ ‘ಆಪರೇಷನ್ ಸಫೇದ್ ಸಾಗರ್’ ಆಗಸ್ಟ್ 7ರಿಂದ…
ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ
ವಾಷಿಂಗ್ಟನ್: ಇರಾನ್ನೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಮತ್ತೊಂದು ಸುತ್ತಿನ ವೈಮಾನಿಕ ದಾಳಿಗಳನ್ನು ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳಿಗೆ ಬೆದರಿಕೆ ಉಂಟುಮಾಡುವ ಇರಾನ್ನ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. CENTCOM ಪ್ರಕಾರ, ಅರೇಬಿಯನ್ ಸಮುದ್ರದಲ್ಲಿ ಅಮೆರಿಕದ ನೌಕಾ ಹಾಗೂ ವಾಯುಪಡೆ ಕಾರ್ಯಾಚರಣೆ ಮುಂದುವರಿದಿದ್ದು, ಏಳು ವಾಣಿಜ್ಯ ಹಡಗುಗಳನ್ನು ಮರುನಿರ್ದೇಶಿಸಲಾಗಿದೆ. ಸತತ ಒಂಬತ್ತನೇ ದಿನವೂ ಇರಾನ್ನ ಮಿಲಿಟರಿ ತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ. ಇದರ ನಡುವೆ, ದಕ್ಷಿಣ ಮತ್ತು ಮಧ್ಯ ಇರಾನ್ನ ಹಲವು ನಗರಗಳಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಬುಶೆಹರ್ನಲ್ಲಿ ವಾಯು ರಕ್ಷಣಾ ವ್ಯವಸ್ಥೆ ಸಕ್ರಿಯಗೊಳಿಸಲಾಗಿದ್ದು, ಶಿರಾಜ್ ಮತ್ತು ಇಸ್ಫಹಾನ್ನಲ್ಲೂ ಸ್ಫೋಟಗಳು ಕೇಳಿಬಂದಿವೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಜೋರ್ಡಾನ್ ಮತ್ತು ಕುವೈತ್ನಲ್ಲಿರುವ ಅಮೆರಿಕದ…
