ಮತದಾರರ ಪಟ್ಟಿಯ ಪರಿಷ್ಕರಣೆಗೆ ಮತ್ತಷ್ಟು ಕಾಲಾವಕಾಶ; ಆ.24ರಂದು ಕರಡು ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಗಡುವನ್ನು ಚುನಾವಣಾ ಆಯೋಗ ಮತ್ತೆ ವಿಸ್ತರಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಮನವಿ ಹಿನ್ನೆಲೆಯಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ಆಗಸ್ಟ್ 17ರವರೆಗೆ ಮುಂದುವರಿಯಲಿದೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ತರ್ಕಬದ್ಧೀಕರಣ ಮತ್ತು ಮರುಹೊಂದಿಕೆ ಕಾರ್ಯವೂ ನಡೆಯಲಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅದೇ ದಿನದಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆ ಸೆಪ್ಟೆಂಬರ್ 23ರವರೆಗೆ ಮುಂದುವರಿಯಲಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ ಪ್ರಕ್ರಿಯೆ ಅಕ್ಟೋಬರ್ 22ರವರೆಗೆ ನಡೆಯಲಿದೆ. ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ನಡುವೆ, SIR ಪ್ರಕ್ರಿಯೆಯಲ್ಲಿ…

‘ಓಬಿಸಿ, ಜಾತಿ ಜನಗಣತಿ ವರದಿ ಜಾರಿಗೆ ಹೋರಾಟ ಅಗತ್ಯ’; ರಾಷ್ಟ್ರೀಯ ಸಮಾವೇಶದಲ್ಲಿ ಹರಿಪ್ರಸಾದ್ ಕರೆ

ಬೆಂಗಳೂರು: ಮೀಸಲಾತಿ ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ, ಉದ್ಯೋಗ ನೀಡುವ ದಯಾಧರ್ಮವೂ ಅಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತಂದು, ಅಧಿಕಾರದಲ್ಲಿ ಪಾಲು ನೀಡುವ ಸಾಂವಿಧಾನಿಕ ಸಾಧನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ರಾಷ್ಟ್ರೀಯ ಓಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಮೀಸಲಾತಿ ಪರಂಪರೆಗೆ ಐತಿಹಾಸಿಕ ಹಿನ್ನೆಲೆಯಿರುವ ಕರ್ನಾಟಕದಲ್ಲಿ ಓಬಿಸಿ ರಾಷ್ಟ್ರೀಯ ಸಮಾವೇಶ ನಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು. 12ನೇ ಶತಮಾನದಲ್ಲೇ ಬಸವಣ್ಣ ಅವರು ಕಾಯಕಕ್ಕೆ ಘನತೆ ನೀಡಿ, ಜಾತಿ-ಲಿಂಗ-ವೃತ್ತಿಯ ಭೇದಗಳನ್ನು ಮೀರಿ ಸಮಾನತೆಯ ಸಂದೇಶ ಸಾರಿದ್ದರು. ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ 1918ರಲ್ಲಿ ಮಿಲ್ಲರ್ ಆಯೋಗ ರಚಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಬುನಾದಿ ಹಾಕಿದರು. ಕೊಲ್ಹಾಪುರದಲ್ಲಿ ಛತ್ರಪತಿ ಶಾಹು ಮಹಾರಾಜರೂ ಹಿಂದುಳಿದ ಬಹುಜನರಿಗೆ ಪ್ರಾತಿನಿಧ್ಯ ಕಲ್ಪಿಸಿದ್ದರು ಎಂದು…

ಖಾಲಿ ಹುದ್ದೆ ಭರ್ತಿ, ಡಿಜಿಟಲ್ ಮೂಲಸೌಕರ್ಯಕ್ಕೆ ಒತ್ತು; ನ್ಯಾಯಮಂಡಳಿಗಳ ಸುಧಾರಣೆಗೆ ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ದೇಶಾದ್ಯಂತ ನ್ಯಾಯಮಂಡಳಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಸಿಬ್ಬಂದಿ ಕೊರತೆ ನೀಗಿಸುವುದು, ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವುದು, ಡಿಜಿಟಲ್ ಮೂಲಸೌಕರ್ಯ ಬಲಪಡಿಸುವುದು ಹಾಗೂ ಪ್ರಕರಣಗಳ ಬಾಕಿ ಇರುವಿಕೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುವಂತೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ. ರಾಜ್ಯಸಭಾ ಸಂಸದ ಬ್ರಿಜ್ ಲಾಲ್ ನೇತೃತ್ವದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ, ‘ದೇಶದಲ್ಲಿ ನ್ಯಾಯಮಂಡಳಿ ವ್ಯವಸ್ಥೆಯ ಕಾರ್ಯನಿರ್ವಹಣೆಯ ವಿಮರ್ಶೆ’ ಕುರಿತ 166ನೇ ವರದಿಯನ್ನು ಆಗಸ್ಟ್ 7ರಂದು ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT)ಯಲ್ಲಿ ಸದಸ್ಯರು ಹಾಗೂ ಪ್ರಮುಖ ನೋಂದಣಿ ಅಧಿಕಾರಿಗಳ ಖಾಲಿ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡುವಂತೆ ಸಮಿತಿ ಸೂಚಿಸಿದೆ. ಬಾಕಿ ಪ್ರಕರಣಗಳ ಹೆಚ್ಚಳ ತಡೆಯಲು ನಿಯಮಿತ ಮಾನವ ಸಂಪನ್ಮೂಲ ಮೌಲ್ಯಮಾಪನ ಹಾಗೂ ವಿಲೇವಾರಿ ಅವಧಿಯ ಮೇಲ್ವಿಚಾರಣೆಗೆ ಒತ್ತು ನೀಡಿದೆ.…