ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ. ಪುರಸ್ಕೃತರಲ್ಲಿ ರೈಲ್ವೇಸ್ ಬೆಂಗಳೂರು ಎಸ್ಪಿ ಸಾರಾ ಫಾತಿಮಾ, ಕೆಎಸ್ಆರ್ಪಿ ಕಮಾಂಡೆಂಟ್ ಥಾಮಸ್ ಮ್ಯಾಥ್ಯೂ, ಆಗ್ನೇಯ ಸಂಚಾರ ವಿಭಾಗದ ಎಸಿಪಿ ಮಹಾದೇವ್, ರಾಯಚೂರು ಡಿಎಆರ್ನ ಡಿವೈಎಸ್ಪಿ ಪರಮಾನಂದ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ. ಪೊಲೀಸ್ ತರಬೇತಿ ಶಾಲೆ ಮೈಸೂರು, ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ, ಸಿಐಡಿ, ರಾಜಭವನ, ಕೆಪಿ ಅಗ್ರಹಾರ ಪೊಲೀಸ್ ಠಾಣೆ, ಕೆಎಸ್ಆರ್ಪಿ, ವಿಧಾನಸೌಧ ಭದ್ರತೆ, ಡಿಸಿಆರ್ಇ ಕೆಜಿಎಫ್, ತರೀಕೆರೆ ಹಾಗೂ ಹುಣಸೂರು ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪದಕ ಘೋಷಿಸಲಾಗಿದೆ. ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿ…
Day: August 14, 2026
ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ
ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ, ವೈಭವದಿಂದ ನೆರವೇರಿತು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪಟ್ಟದ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ನೇತೃತ್ವದಲ್ಲಿ ಹಾಗೂ ಬೇಡಗಂಪಣ ಅರ್ಚಕರ ವತಿಯಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿವಿಧ ಧಾರ್ಮಿಕ ಪೂಜೆಗಳು ಜರುಗಿದವು. ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ಮುಂಜಾನೆ 3.30ರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ಗಣಪತಿ ಪೂಜೆ, ಪುಣ್ಯಾಹ, ನವಗ್ರಹ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ಮಹಾಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. 108 ಕುಂಭಗಳ ಮಹಾ ಕುಂಭಾಭಿಷೇಕ ನೆರವೇರಿತು. ಉಪವಾಸವಿದ್ದ ಬೇಡಗಂಪಣ ಸಮುದಾಯದ ಅರ್ಚಕರು ಶಿವ-ಪಾರ್ವತಿಯ ಉತ್ಸವ ಮೂರ್ತಿಯೊಂದಿಗೆ ಸತ್ತಿಗೆ, ಸೂರಿಪಾಸಿ, ಛತ್ರಿ, ಚಾಮರ, ನಂದಿಕಂಬ ಹಾಗೂ ಮಂಗಳವಾದ್ಯಗಳೊಂದಿಗೆ ದೇಗುಲದ ಸಮೀಪದ ಮಜ್ಜನ ಬಾವಿಗೆ…
